“ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ..”ಪೊಲೀಸ್ ಮೂಡಿಸಿದ ಶಿಕ್ಷಣ ಜಾಗೃತಿಗೆ ಸಿಎಂ ಶ್ಲಾಘನೆ


Team Udayavani, Apr 18, 2023, 3:21 PM IST

tdy-16

ಚೆನ್ನೈ: ಖಾಕಿ ತೊಟ್ಟು ಕಾನೂನು ಕಾಯಕವನ್ನು ಮಾಡುವ ಪೊಲೀಸರು, ಆರೋಪಿ, ಅಪರಾಧಿಗಳನ್ನು ಸೆರೆ ಹಿಡಿಯುವುದು ಮಾತ್ರವಲ್ಲದೆ ಸಮಾಜ ಮೆಚ್ಚುವ ಕಾಯಕವನ್ನೂ ಮಾಡುತ್ತಾರೆ.

ಈ ಮೇಲಿನ ಮಾತಿಗೆ ಉದಾಹರಣೆಯಾಗಿ ನಿಲ್ಲುತ್ತಾರೆ ಮಧುರೈ ಮೂಲದ ಪೆನ್ನಲೂರ್‌ಪೆಟ್ಟೈ ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪರಮಶಿವಂ.

ಪರಮಶಿವಂ ಅವರು ಇತ್ತೀಚೆಗೆ ತಿದೀರ್ ನಗರ ಪ್ರದೇಶದಲ್ಲಿ ಕೃಷಿಯನ್ನು ಆವಲಂಬಿಸಿ ಜೀವಿಸುತ್ತಿರುವ ಬುಡಕಟ್ಟು ಕುಟುಂಬದ ಜನರನ್ನು ಭೇಟಿಯಾಗಿ, ಅವರ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಹೇಳಿದ್ದಾರೆ.

ಕೃಷಿ ಕಾರ್ಮಿಕರ ಕುಟುಂಬದ ಮಕ್ಕಳನ್ನು ಉದ್ದೇಶಿಸಿ, ಅವರ ಪೋಷಕರ ಬಳಿ “ನಿಮಗೆ ಯಾವುದೇ ರೀತಿಯ ಸಹಾಯ ಬೇಕಾದರೆ ಅಥವಾ ಆಹಾರಕ್ಕಾಗಿ ಹಣ ಬೇಕಾದರೆ ಪೊಲೀಸ್ ಠಾಣೆಗೆ ಬನ್ನಿ. ನಾನು ಸಹಾಯ ಮಾಡಲು ಸಿದ್ಧ. ಈಗ, ಅವರಿಗೆ ಐದು ದಿನವೂ ಮೊಟ್ಟೆ ಮತ್ತು ಆಹಾರವನ್ನು ನೀಡಲಾಗುತ್ತದೆ. ದಯವಿಟ್ಟು ಮಕ್ಕಳನ್ನು ಶಾಲೆಗೆ ಕಳುಹಿಸಿ. 14 ವರ್ಷದವರೆಗೆ ಮಕ್ಕಳನ್ನು ಕಡ್ಡಾಯವಾಗಿ ಕಳುಹಿಸಿ. ನಿಮ್ಮ ಮಕ್ಕಳು ಶಾಲೆಗೆ ಹೋಗದಿದ್ದರೆ ನೀವು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಮಕ್ಕಳ ವಿಚಾರದಲ್ಲಿ ನಾನು ಸುಮ್ಮನಿರುವುದಿಲ್ಲ. ಇಂದು ಅಲ್ಲದಿದ್ದರೂ ನಾಳೆ ನಾನು ಅಪರಾಧಿಯನ್ನು ಹಿಡಿಯಬಹುದು ಬಳಿಕ ಬಿಡಬಹುದು ಆದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೆ, ನೀವೇ ಅವರ ಭವಿಷ್ಯಕ್ಕೆ ವಿಷ ಹಾಕಿದಂತೆ. ಮಕ್ಕಳನ್ನು ಶಾಲೆಗೆ ಕಳುಹಿಸಿ, ಮೂಡನಂಬಿಕೆಗ ಜೋತು ಬೀಳಬೇಡಿ ಎಂದಿದ್ದಾರೆ.

ಅವರು ಹೇಳಿರುವ ಮಾತುಗಳು ವೈರಲ್‌ ಆಗಿದ್ದು, ಸ್ಥಳೀಯ ಪತ್ರಿಕೆಯೊಂದರಲ್ಲಿ ವರದಿಯಾಗಿ ಬಂದಿದೆ.

ಸಬ್‌ಇನ್ಸ್‌ಪೆಕ್ಟರ್ ಪರಮಶಿವಂ ಅವರ ಶಿಕ್ಷಣ ಜಾಗೃತಿಗೆ ಸ್ವತಃ ತಮಿಳುನಾಡು ಸಿಎಂ ಎಂ.ಕೆ.ಸ್ಟ್ಯಾಲಿನ್‌ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. “ಬೆಳಗಿನ ಪತ್ರಿಕೆಯಲ್ಲಿ ಸಂತೋಷದ ಸುದ್ದಿಯನ್ನು ಓದಿದ್ದೇನೆ! ಅದನ್ನು ಇಲ್ಲಿ ನಾನು ಹಂಚಿಕೊಳ್ಳುತ್ತೇನೆ. ಪೊಲೀಸರ ಕೆಲಸ ಅಪರಾಧ ತಡೆಗಟ್ಟುವುದಷ್ಟೇ ಅಲ್ಲ, ಉತ್ತಮ ಸಮಾಜವನ್ನು ರೂಪಿಸುವಲ್ಲಿ ಅವರ ಪಾತ್ರವೂ ಇದೆ. ಬೆನ್ನಲೂರುಪೇಟೆಯ ಎಸ್.ಐ. ಪರಮಶಿವಂ ಅವರು ಶಿಕ್ಷಣದ ಪರವಾಗಿ ಮಾತನಾಡಿದ್ದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಶಿಕ್ಷಣ ಮಕ್ಕಳ ಹಕ್ಕು” ಎಂದು ಸಿಎಂ ಸ್ಟ್ಯಾಲಿನ್‌ ಟ್ವೀಟ್ ಮಾಡಿದ್ದಾರೆ.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.