ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

ಶಂಕು ಸ್ಥಾಪನೆಗೆ ಮೆರವಣಿಗೆಯಲ್ಲಿ ಬಂದು, ಅನ್ನದಾನಕ್ಕೆ ಹಣ ನೀಡಿದ ಮುಸ್ಲಿಮರು

Team Udayavani, May 29, 2024, 12:53 PM IST

11

ತಮಿಳುನಾಡು: ನಮ್ಮದು ಶಾಂತಿ ಸಹಬಾಳ್ವೆಯ ಭಾರತ. ಆದರೆ ಇತ್ತೀಚಿನ ವರ್ಷಗಳಲ್ಲಿ ಸೌಹಾರ್ದತೆ ಎನ್ನುವುದು ಮರೆಯಾಗುತ್ತಾ ಬರುತ್ತಿದೆ. ಚುನಾವಣೆ, ರಾಜಕೀಯ ನಡುವೆ ಧರ್ಮ ಧರ್ಮಗಳ ನಡುವಿನ ಸಾಮರಸ್ಯ ಮರೀಚಿಕೆ ಆಗುತ್ತಾ ಬರುತ್ತಿದೆ ಎನ್ನುವುದು ಬೇಸರದ ಸಂಗತಿ.

ಹಿಂದೂವಾಗಲಿ ಅಥವಾ ಮುಸ್ಲಿಂ ಆಗಲಿ ನಾವೆಲ್ಲ ಸಹೋದರರಂತೆ ಬಾಳಿದರೆ ಸಾಮರಸ್ಯ, ಶಾಂತಿಯಿಂದ ಬದುಕಬಹುದು. ಎಲ್ಲೋ ಒಂದು ಕಡೆ ಯಾವುದೋ ಒಂದು ಕೋಮಿನ ಜನ ಮಾಡುವ ತಪ್ಪಿಗೆ ಇಡೀ ಸಮುದಾಯವನ್ನೇ ದ್ವೇಷದ ದೃಷ್ಟಿಯಿಂದ ನೋಡುವ ಇಂದಿನ ಸಮಾಜದಲ್ಲಿ ಸಹೋದರತ್ವ ಎನ್ನುವುದು ಮಾತಿಗಷ್ಟೇ ಸೀಮಿತವಾಗಿ ಬಿಟ್ಟಿದೆ.

ಆದರೆ ತಮಿಳುನಾಡಿನಲ್ಲಾದ ಈ ಹಿಂದೂ – ಮುಸ್ಲಿಂ ಬಾಂಧವ್ಯದ ಈ ಘಟನೆ ಇಂದಿನ ಸಮಾಜಕ್ಕೆ ಉದಾಹರಣೆಯಾಗಿ ನಿಲ್ಲುವಂಥದ್ದು.

ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಪಡಿಯೂರು ಬಳಿಯ ಒಟ್ಟಪಾಳ್ಯಂ ಪ್ರದೇಶದಲ್ಲಿ ಸುಮಾರು 300 ಕುಟುಂಬಗಳಿವೆ. ಹಿಂದೂ – ಮುಸ್ಲಿಂ ಜೊತೆಯಾಗಿದ್ದರೂ ಈ ಪ್ರದೇಶದಲ್ಲಿ ಒಂದು ಮಸೀದಿಯಿದೆ. ಆದರೆ ದೇವಸ್ಥಾನವಿಲ್ಲ.

ರೋಸ್ ಗಾರ್ಡನ್ ಪ್ರದೇಶದಲ್ಲಿ ಹೆಚ್ಚು ಮುಸ್ಲಿಮರೇ ವಾಸವಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಇಲ್ಲಿ ಕೆಲ ಹಿಂದೂ ಕುಟುಂಬಗಳು ಬಂದು ನೆಲೆಕಂಡಿದೆ. ಈ ಕುಟುಂಬಗಳ ಮನೆಯಲ್ಲಿ ದೇವರ ಫೋಟೋವಿದೆ ಹೊರತು, ಪೂಜಿಸಲು ದೇವಾಲಯ ಈ ಪ್ರದೇಶದಲ್ಲಿರಲಿಲ್ಲ. ಈ ಕಾರಣದಿಂದ ಹಿಂದೂ ಕುಟುಂಬಗಳು ಜೊತೆಯಾಗಿ ದೇವಸ್ಥಾನವನ್ನು ನಿರ್ಮಿಸಲು ಯೋಜನೆಯೊಂದನ್ನು ಹಾಕಿಕೊಂಡು ಸೂಕ್ತ ಜಾಗವನ್ನು ಹುಡುಕಲು ಪ್ರಾರಂಭಿಸುತ್ತಾರೆ.

ಆದರೆ ಹಿಂದೂ ಕುಟುಂಬಗಳಿಗೆ ಗಣೇಶ ದೇವಸ್ಥಾನವನ್ನು ಕಟ್ಟಲು ಸೂಕ್ತವಾದ ಜಾಗ ಸಿಕ್ಕಿರಲಿಲ್ಲ. 20 ವರ್ಷಗಳ ಹಿಂದೆ ಮುಸ್ಲಿಂ ಕುಟುಂಬವೊಂದು ಜಾಗವನ್ನು ಖರೀದಿ ಮಾಡಿತ್ತು. ಆ ಜಾಗದಲ್ಲಿ ಲೇಔಟ್‌ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಖಾಲಿಯಾಗಿತ್ತು. 10 ಹಿಂದೂ ನಿವಾಸಿಗಳು ರೋಸ್ ಗಾರ್ಡನ್ ಮುಸ್ಲಿಂ ಜಮಾತ್ ಬಳಿ ತಮಗೆ ಆ ಲೇಔಟ್‌ ಜಾಗದಲ್ಲಿ ಒಂದು ಭೂಮಿ ದೇವಸ್ಥಾನ ನಿರ್ಮಾಣಕ್ಕೆ ನೀಡಿಯೆಂದು ಮನವಿಯನ್ನು ಮಾಡಿದ್ದಾರೆ.

ಹಿಂದೂಗಳ ಮನವಿಯನ್ನು ಜಮಾತ್‌ ನಲ್ಲಿ ಒಪ್ಪಿ, ಊರಿನ ಮುಸ್ಲಿಮರು ಗಣೇಶ ದೇವಸ್ಥಾನ ನಿರ್ಮಿಸಲು 6 ಲಕ್ಷ ಮೌಲ್ಯದ 3 ಸೆಂಟ್ಸ್ ಭೂಮಿಯನ್ನು ಹಿಂದೂಗಳಿಗೆ ದಾನವಾಗಿ ನೀಡಿದ್ದಾರೆ.

ಭಾನುವಾರ(ಮೇ.26 ರಂದು) ದೇವಸ್ಥಾನದ ಶಂಕು ಸ್ಥಾಪನೆ ನೆರವೇರಿದೆ. ಈ ಸಮಾರಂಭಕ್ಕೆ ಮುಸ್ಲಿಮರು ಮೆರವಣಿಗೆ ಮೂಲಕ ಹಣ್ಣು ಹಂಪಲು ಹಾಗೂ ಇತರೆ ಅಗತ್ಯ ಸಾಮಾಗ್ರಿಗಳನ್ನು ಹಿಂದೂಗಳ ಗಣೇಶ ದೇವಸ್ಥಾನಕ್ಕೆ ನೀಡಿದ್ದಾರೆ. ಹಿಂದೂಗಳು ಶಂಕುಸ್ಥಾಪನೆಗೆ ಬಂದ ಮುಸ್ಲಿಮರನ್ನು ಹೂ ಹಾರ ಹಾಕಿ ಸ್ವಾಗತಿಸಿದ್ದಾರೆ. ಇದಲ್ಲದೆ ಶಂಕು ಸ್ಥಾಪನೆಯ ಅನ್ನ ಪ್ರಸಾದವನ್ನು ಮುಸ್ಲಿಂಮರು ಜೊತೆಯಾಗಿ ಸವಿದಿದ್ದಾರೆ.

ಸ್ಥಳೀಯರು ಮತ್ತು ಪಂಚಾಯತ್ ಅಧ್ಯಕ್ಷರು ದೇಣಿಗೆ ಮೂಲಕ 10 ಲಕ್ಷ ರೂ. ನೀಡಿದ್ದಾರೆ. ಕುಂಭಾಭಿಷೇಕ ಸಮಾರಂಭದಲ್ಲಿ ಮುಸ್ಲಿಂ ಬಾಂಧವರು ಅನ್ನದಾನಕ್ಕೆ 30,000 ರೂಪಾಯಿಗಳನ್ನು ನೀಡಿದ್ದಾರೆ.

ಹಿಂದೂ – ಮುಸ್ಲಿಮರ ನಡುವಿನ ಸಹೋದರತ್ವದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Ad

ಟಾಪ್ ನ್ಯೂಸ್

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ

8-web

Heart Health: ಹೃದಯ ಆರೋಗ್ಯಕ್ಕೆ ಸೇವಿಸಬಹುದಾದ ಹಣ್ಣು-ತರಕಾರಿಗಳಿವು

Dr-Parameshwar

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್ 

Yadagiri: Bhoyal Harshal appointed as new DC

Yadagiri: ನೂತನ ಡಿಸಿಯಾಗಿ ಭೋಯಲ್ ಹರ್ಷಲ್ ನಿಯೋಜನೆ

BJP: Arvind Limbavali expresses displeasure against Yediyurappa

BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

23

Belthangady: ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿದ ದುಷ್ಕರ್ಮಿಗಳು

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

5

Kasaragod:ಜನರಲ್‌ ಆಸ್ಪತ್ರೆಗೆ ಮೆರವಣಿಗೆ: 85 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

1

Kasaragod: ಸಹೋದರಿ ಪತಿಯ ವಿರುದ್ಧ ಅತ್ಯಾ*ಚಾರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.