Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Team Udayavani, Apr 18, 2024, 12:40 PM IST
ಹೈದರಾಬಾದ್: ಮಹಿಳೆಯೊಬ್ಬರು ತನಗೆ ಕಚ್ಚಿದ ಹಾವನ್ನೇ ಕೊಂದು ಬಳಿಕ ಅದನ್ನು ಆಸ್ಪತ್ರೆಗೆ ತೆಗೆದುಕೊಂಡು ಬಂದು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಜಿಲ್ಲೆಯ ವೆಂಕಟಾಪುರಂ ನೂಗೂರು ಮಂಡಲದ ಮುಕುನೂರುಪಾಲೆಂ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಏನಿದು ಘಟನೆ:
ಮುಳುಗು -ವೆಂಕಟಾಪುರ ಮಂಡಲದ ಮುಕುನೂರುಪಾಲೆಂ ಗ್ರಾಮದ ನಿವಾಸಿ ಶಾಂತಮ್ಮ ಅವರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ, ಅದರಂತೆ ಹಳ್ಳಿಯೊಂದರಲ್ಲಿ ಕೆಲಸಕ್ಕೆ ಹೋಗಿದ್ದ ಶಾಂತಮ್ಮ ಅವರಿಗೆ ಹಾವೊಂದು ಕಚ್ಚಿದೆ ಕೂಡಲೇ ಎಚ್ಚೆತ್ತ ಅವರು ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ ಆದರೆ ಇದರ ನಡುವೆ ಶಾಂತಮ್ಮ ಅವರಿಗೆ ಒಂದು ಪ್ರಶ್ನೆ ಮೂಡಿದೆ ಆಸ್ಪತ್ರೆಯಲ್ಲಿ ವೈದ್ಯರು ಯಾವ ಹಾವು ಕಚ್ಚಿರುವುದು ಎಂದು ಕೇಳಿದರೆ ಯಾವ ಹಾವು ಎಂದು ಹೇಳುವುದು ಎಂದು ತಿಳಿದ ಅವರು ಕೂಡಲೇ ತನ್ನ ಜೊತೆಗಿದ್ದ ಸಹೋದ್ಯೋಗಿಗಳ ಸಹಾಯದಿಂದ ಹಾವನ್ನು ಕೊಂದು ಅದನ್ನು ಹಿಡಿದುಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ.
ಆಸ್ಪತ್ರೆಗೆ ಬಂದ ಮಹಿಳೆಯನ್ನು ಕಂಡ ವೈದ್ಯರು ಒಮ್ಮೆ ಬೆಚ್ಚಿ ಬಿದ್ದಿದ್ದಾರೆ, ಯಾಕೆಂದರೆ ಮಹಿಳೆಯ ಕೈಯಲ್ಲಿ ಹಾವು ಇರುವುದನ್ನು ಕಂಡು ಗಾಬರಿಗೊಂಡ ಆಸ್ಪತ್ರೆ ಸಿಬಂದಿ ಕೂಡಲೇ ಮಹಿಳೆಯ ಚಿಕಿತ್ಸೆಗೆ ಮುಂದಾಗಿದ್ದಾರೆ. ಮಹಿಳೆಯ ಸಮಯಪ್ರಜ್ಞೆ, ವೈದ್ಯರು ನೀಡಿದ ಸೂಕ್ತ ಚಿಕಿತ್ಸೆಯಿಂದ ಶಾಂತಮ್ಮ ಬದುಕುಳಿದಿದ್ದಾರೆ.
ಮಹಿಳೆಯ ಕೈಯಲ್ಲಿ ಹಾವು ಕಂಡು ಹೆದರಿದ ವೈದ್ಯರು ಬಳಿಕ ಮಹಿಳೆಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ, ಹಾವು ಕಡಿತಕ್ಕೊಳಗಾದರು ದೃತಿಗೆಡದೆ ಧೈರ್ಯವಾಗಿ ಚಿಕಿತ್ಸೆಗೆ ಒಳಗಾಗಿದ್ದರಿಂದ ಮಹಿಳೆ ಬದುಕುಳಿದಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಇದನ್ನೂ ಓದಿ: IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
పాము కరిచిందని దాన్ని చంపి ఆస్పత్రికి తీసుకెళ్లిన మహిళ
ములుగు – వెంకటాపురం మండలం ముకునూరుపాలెం గ్రామానికి చెందిన శాంతమ్మ ఉపాధి హామీ పనులు చేస్తుండగా పాము కరిచింది.. పాము గురించి తెలియకుండా డాక్టర్లు ఇంజక్షన్ ఇవ్వరని శాంతమ్మ పామును చంపి ఆస్పత్రికి తీసుకెళ్లింది.
పామును… pic.twitter.com/7vKruOsG4Z
— Telugu Scribe (@TeluguScribe) April 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ