Viral: ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್, ವಿದ್ಯಾರ್ಥಿಗಳು ಶೇರ್ ಮಾಡಬೇಕಂತೆ, ಇಲ್ಲದಿದ್ದರೆ…


Team Udayavani, Sep 30, 2023, 10:03 AM IST

Viral: ಈ ಶಿಕ್ಷಕಿಯರು ಮಾಡಿದ ರೀಲ್ಸ್ ಗಳನ್ನು ವಿದ್ಯಾರ್ಥಿಗಳು ಶೇರ್ ಮಾಡಬೇಕಂತೆ, ಮಾಡದಿದ್ದರೆ

ಉತ್ತರ ಪ್ರದೇಶದ ಯೋಗಿ ಸರ್ಕಾರವು ಶಿಕ್ಷಣವನ್ನು ಸುಧಾರಿಸಲು ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತಿದ್ದರೆ, ಇನ್ನೊಂದೆಡೆ ಅಮ್ರೋಹಾದಲ್ಲಿ, ಕೆಲವು ಮಹಿಳಾ ಶಿಕ್ಷಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದಿ ಪಡೆಯಲು ಇಲ್ಲಸಲ್ಲದ ಕಸರತ್ತನ್ನು ಮಾಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಶಾಲೆಗೆ ಬಂದು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಶಾಲೆಗಳಲ್ಲೂ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಚಾನೆಲ್ ಗೆ ಚಂದಾದಾರರಾಗುವಂತೆ ಜೊತೆಗೆ ತಮ್ಮ ವಿಡಿಯೋಗಳನ್ನು ಇತರರಿಗೆ ಶೇರ್ ಮಾಡುವಂತೆ ಒತ್ತಾಯ ಮಾಡುತ್ತಾರೆಂಬ ಅಂಶ ಬೆಳಕಿಗೆ ಬಂದಿದೆ.

ಈ ಪ್ರಕರಣ ನಡೆದಿರುವುದು ಅಮ್ರೋಹಾದ ಹಸನ್‌ಪುರ ತಹಸಿಲ್ ಪ್ರದೇಶದ ಖುಂಗವಾಲಿ ಗ್ರಾಮದ್ದು.

ಇಲ್ಲಿನ ಸರ್ಕಾರಿ ಶಾಲೆಯಲ್ಲಿ ನಿಯೋಜನೆಗೊಂಡಿರುವ ಒಬ್ಬರಲ್ಲ ನಾಲ್ವರು ಮಹಿಳಾ ಶಿಕ್ಷಕಿಯರ ಅವ್ಯವಹಾರ ಬೆಳಕಿಗೆ ಬಂದಿದೆ. ಮಕ್ಕಳ ಪಾಲಕರು ಹಾಗೂ ಗ್ರಾಮಸ್ಥರು ನೀಡಿರುವ ದೂರಿನನ್ವಯ, ಈ ನಾಲ್ವರು ಮಹಿಳಾ ಶಿಕ್ಷಕಿಯರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವ ಬದಲು ರೀಲ್ಸ್ ಮಾಡುವುದರಲ್ಲೇ ಬ್ಯುಸಿಯಂತೆ.

ಕೆಲ ಶಿಕ್ಷಕಿಯರು ಸೇರಿ ರೀಲ್ಸ್ ಮಾಡುತ್ತಾರಂತೆ ಅಷ್ಟು ಮಾತ್ರವಲ್ಲದೆ ಶಿಕ್ಷಕಿಯರು ಮಾಡಿರುವ ರೀಲ್ಸ್ ಗಳು ಹೆಚ್ಚು ಹೆಚ್ಚು ಪ್ರಚಾರ ಪಡೆಯಬೇಕೆಂದು ಶಾಲೆಯ ವಿದ್ಯಾರ್ಥಿಗಳಿಗೆ ತಾವು ಮನೆಗೆ ಹೋದಾಗ ಪೋಷಕರ ಮೊಬೈಲ್ ನಲ್ಲಿ ತಮ್ಮ ಚಾನೆಲ್ ನಲ್ಲಿರುವ ವಿಡಿಯೋಗಳಿಗೆ ಲೈಕ್ ಕೊಟ್ಟು ಶೇರ್ ಮಾಡುವಂತೆ ಹೇಳುತ್ತಾರಂತೆ ಒಂದು ವೇಳೆ ವಿದ್ಯಾರ್ಥಿಗಳು ಆ ಕೆಲಸವನ್ನು ಮಾಡದಿದ್ದರೆ ತರಗತಿಯಲ್ಲಿ ಫೇಲ್ ಮಾಡುವ ಬೆದರಿಕೆಯನ್ನು, ಇಲ್ಲದಿದ್ದರೆ ಬೇರೆ ಯಾವುದೇ ಶಿಕ್ಷೆ ನೀಡುವ ಬೆದರಿಕೆಯನ್ನು ಹಾಕುತ್ತಾರಂತೆ, ಇದರಿಂದ ಕೆಲ ವಿದ್ಯಾರ್ಥಿಗಳು ಮನೆಗೆ ಬಂದಾಗ ಪೋಷಕರ ಮೊಬೈಲ್ ತೆಗೆದುಕೊಂಡು ಶಿಕ್ಷಕಿಯರು ಮಾಡಿರುವ ರೀಲ್ಸ್ ಗಳಿಗೆ ಲೈಕ್ ಕೊಟ್ಟೆ ಶೇರ್ ಮಾಡುತ್ತಾರಂತೆ ಈ ವಿಚಾರ ಮಕ್ಕಳ ಪೋಷಕರಿಗೆ ಗೊತ್ತಾಗಿ ಇದೀಗ ಶಿಕ್ಷಕಿಯರ ವಿರುದ್ಧ ಪೋಷಕರು ದೂರು ನೀಡಿದ್ದಾರೆ

ಶೇರ್ ಮಾಡದಿದ್ದರೆ ಮಕ್ಕಳಿಗೆ ಹೊಡೆಯುತ್ತಾರೆ
ಈ ನಾಲ್ವರು ಶಿಕ್ಷಕಿಯರು ಶಾಲೆಯಲ್ಲಿ ಡ್ಯಾನ್ಸ್ ವಿಡಿಯೋ ರೆಕಾರ್ಡ್ ಮಾಡಿ ಮೊದಲು ಫೇಸ್ ಬುಕ್, ಇನ್ ಸ್ಟಾಗ್ರಾಂ, ಯೂಟ್ಯೂಬ್ ನಲ್ಲಿ ವೈರಲ್ ಮಾಡಿ ನಂತರ ಶಾಲಾ ಮಕ್ಕಳಿಗೆ ಲೈಕ್ ಮಾಡಿ ಸಬ್ ಸ್ಕ್ರೈಬ್ ಮಾಡುವಂತೆ ಹೇಳುತ್ತಾರಂತೆ ಒಂದು ವೇಳೆ ಯಾವುದೇ ವಿದ್ಯಾರ್ಥಿ ವಿಡಿಯೋ ಅನ್ನು ಶೇರ್ ಮಾಡದಿದ್ದರೆ ಆತನಿಗೆ ಹೊಡೆದು ಶಿಕ್ಷೆ ನೀಡುತ್ತಾರಂತೆ.

ಶಿಕ್ಷೆ ನೀಡುವ ಭರವಸೆ
ಮತ್ತೊಂದೆಡೆ, ಗ್ರಾಮಸ್ಥರ ದೂರು ಮತ್ತು ವೀಡಿಯೊ ವೈರಲ್ ಆದ ನಂತರ, ಬ್ಲಾಕ್ ಶಿಕ್ಷಣಾಧಿಕಾರಿ ಭರತ್ ಭೂಷಣ್ ಸಿಂಗ್ ಹೇಳಿಕೆ ನೀಡಿದ್ದು, ಶಿಕ್ಷಕಿಯರ ವಿಷಯ ಗಮನಕ್ಕೆ ಬಂದಿದ್ದು, ವೀಡಿಯೊದ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಒಂದು ವೇಳೆ ತಪ್ಪು ನಡೆದಿರುವುದು ಕಂಡುಬಂದಲ್ಲಿ ಮಹಿಳಾ ಶಿಕ್ಷಕಿಯರ ವಿರುದ್ಧ ಇಲಾಖೆಯಿಂದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Mine Collapses: ಜಿಂಬಾಬ್ವೆಯಲ್ಲಿ ಚಿನ್ನದ ಗಣಿ ಕುಸಿತ: 6 ಮಂದಿ ಮೃತ್ಯು, 15 ಮಂದಿ ನಾಪತ್ತೆ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.