Video: ಅವಸರ ಅವಸರದಲ್ಲಿ ಕೋರ್ಟ್ ಪ್ರವೇಶಿಸಿದ ಕಾಡಾನೆ… ಅದೇನ್ ಕೆಲಸ ಇತ್ತೋ…
Team Udayavani, Dec 28, 2023, 2:58 PM IST
ಹರಿದ್ವಾರದಲ್ಲಿ ನಗರ ಪ್ರದೇಶಗಳಿಗೆ ಕಾಡಾನೆಗಳು ನುಗ್ಗುವ ಪ್ರಯತ್ನ ಇನ್ನೂ ಕಡಿಮೆಯಾಗಿಲ್ಲ, ಬುಧವಾರ ರೋಶನಾಬಾದ್ನ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಕಾಡಾನೆಯೊಂದು ಏಕಾಏಕಿ ನುಗ್ಗಿ ಆತಂಕ ಸೃಷ್ಟಿಯಾಯಿತು.
ಸಮೀಪದ ರಾಜಾಜಿ ಹುಲಿ ಸಂರಕ್ಷಿತ ಪ್ರದೇಶದಿಂದ ಹರಿದ್ವಾರ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಕಾಡಾನೆ ಅಲ್ಲಿದ್ದ ಜನರಲ್ಲಿ ಸಂಚಲನ ಮೂಡಿಸಿತ್ತು. ಹರಿದ್ವಾರದ ಜಿಲ್ಲಾಧಿಕಾರಿ ಕಚೇರಿ ಆವರಣವನ್ನು ತಲುಪಿದ ಕಾಡಾನೆ. ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯ ಮೂಲಕ ಹಾದು ಹೋಗಿ ನ್ಯಾಯಾಲಯದ ಮುಖ್ಯ ದ್ವಾರದವರೆಗೆ ಸಾಗಿ ಕೋರ್ಟ್ ಸಂಕೀರ್ಣ ಪ್ರವೇಶಿಸಿದೆ.
ಕೂಡಲೇ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಪಟಾಕಿ ಸಿಡಿಸಿ ಹೇಗೋ ಕಾಡಿನತ್ತ ಓಡಿಸಿದ್ದಾರೆ. ಹಗಲಿನಲ್ಲಿ ನ್ಯಾಯಾಲಯ ಹಾಗೂ ಕಲೆಕ್ಟರೇಟ್ ಆವರಣದಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿರುವ ಕಾರಣ ಹೆಚ್ಚಿನ ಜನರು ಈ ಪ್ರದೇಶದಲ್ಲಿ ತಿರುಗಾಡುತ್ತಿರುತ್ತಾರೆ. ಆದರೂ ಆನೆ ಯಾರಿಗೂ ಹಾನಿ ಮಾಡದಿರುವುದು ಅದೃಷ್ಟವೇ ಸರಿ.
In areas adjacent to jungles, there have been many occurrences where an Elephant made its way into Haridwar, in this instance it was the District Collector’s office, the Elephant advanced towards the main gate of the District Court Judiciary and forcefully opened the closed gate.… pic.twitter.com/zuy8OhL7og
— Dr. PM Dhakate (@paragenetics) December 27, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ