Miracle: ಬೋರ್ ವೆಲ್ ನಲ್ಲಿ ನೀರಿನ ಬದಲು ಹಾಲು… ಪಾತ್ರೆ ಜೊತೆಗೆ ಮುಗಿಬಿದ್ದ ಜನ
Team Udayavani, Nov 28, 2023, 9:33 AM IST
ಉತ್ತರಪ್ರದೇಶ: ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ವಿಚಿತ್ರ ಸಂಗತಿಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಬೋರ್ ವೆಲ್ ನಲ್ಲಿ ನೀರಿನ ಬದಲು ಹಾಲಿನ ಬಣ್ಣವನ್ನೇ ಹೋಲುವ ಬಿಳಿ ಬಣ್ಣದ ನೀರು ಬರಲು ಆರಂಭಿಸಿದೆ.
ಹೌದು ಉತ್ತರ ಪ್ರದೇಶದ ಮೊರಾಬಾದ್ ನಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಇರುವಂತಹ ಬೋರ್ ವೆಲ್ ನಲ್ಲಿ ನೀರಿನ ಬದಲು ಬಿಳಿ ಬಣ್ಣದ ನೀರು ಬರಲು ಆರಂಭಿಸಿದೆ. ಅಲ್ಲದೆ ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹೀಗೆ ವೈರಲ್ ಆಗುತ್ತಿದ್ದಂತೆ ಬೋರ್ ವೆಲ್ ಬಳಿ ಸಾಕಷ್ಟು ಮಂದಿ ಜಮಾಯಿಸಿದ್ದು ಈ ನಡುವೆ ಇಲ್ಲಿ ಸೇರಿದ ಜನ ಇದು ನೀರಲ್ಲ ಹಾಲು ಎಂದು ಭಾವಿಸಿ ಮನೆಯಿಂದ ಬಾಟಲಿ, ಪಾತ್ರೆ, ಕ್ಯಾನ್ ಸೇರಿದಂತೆ ಕೈಗೆ ಸಿಕ್ಕಿದ ವಸ್ತುಗಳನ್ನು ತಂದು ಸರತಿ ಸಾಲಿನಲ್ಲಿ ನಿಂತು ಪಾತ್ರೆಗಳಿಗೆ ತುಂಬಿಸಿ ಮನೆಗೆ ಒಯ್ಯುತ್ತಿದ್ದಾರೆ.
ಬೋರ್ ವೆಲ್ ನಲ್ಲಿ ಹಾಲು ಬರುತ್ತಿರುವ ವಿಚಾರ ಇಲ್ಲಿನ ಪುರಸಭೆ ಅಧಿಕಾರಿಗಳ ಗಮನಕ್ಕೆ ಬಂದಿದೆ ಆ ಬಳಿಕ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಬೋರಿಂಗ್ ಪರಿಶೀಲನೆ ನಡೆಸಿದರು. ಈ ವೇಳೆ ಬೋರ್ ವೆಲ್ ನಲ್ಲಿ ಬರುತ್ತಿರುವುದು ಹಾಲಲ್ಲ ಬದಲಾಗಿ ಕಲುಷಿತ ನೀರು ಎಂದು ಮನವರಿಕೆ ಮಾಡಿದ್ದಾರೆ.
ಹ್ಯಾಂಡ್ ಪಂಪ್ನ ಕೆಳಭಾಗವು ಹಾನಿಗೊಳಗಾಗಿದ್ದು, ಅದನ್ನು ಪ್ಲಗ್ ಮಾಡಿದಾಗ ಬಿಳಿ ಬಣ್ಣದ ಕಲುಷಿತ ನೀರು ಸೋರಿಕೆಯಾಗುತ್ತಿದೆ ಎಂದು ಅವರು ಹೇಳಿದರು. ಈ ಬಗ್ಗೆ ತನಿಖೆ ನಡೆಸುವಂತೆ ಬಿಲಾರಿಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪುರಸಭೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಬೋರಿಂಗ್ ಅನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ನೀರು ಸೇವನೆಗೆ ಅವಕಾಶ ನೀಡಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
जैसे हर चमकती चीज सोना नहीं होती, वैसे सफ़ेद रंग केवल दूध का ही नहीं होता। मगर लोगों को कैसे समझाया जाए? मुरादाबाद की बिलारी तहसील में सरकारी हैंड पंप से सफेद पानी को लोगो ने दूध मान कर न केवल पिया बल्कि भर-भरकर साथ भी ले गए। pic.twitter.com/CSUPdezWNV
— SANJAY TRIPATHI (@sanjayjourno) November 27, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್