75 ನೇ ಸ್ವಾತಂತ್ರ್ಯ : ಎಲ್ಲಾ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರವೇಶ: ಮೋದಿ ಉವಾಚ..!
75 ನೇ ಸ್ವಾತಂತ್ರ್ಯ ದಿನಾಚರಣೆ : ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಉವಾಚ..!
Team Udayavani, Aug 15, 2021, 10:55 AM IST
ನವ ದೆಹಲಿ : ಕೆಂಪು ಕೋಟೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ 75ನೇ ಸ್ವಾತಂತ್ರ್ಯ ದಿನಾಚಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.
ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿ ಮಾತನಾಡಿದ್ದು, ಕೋವಿಡ್ ಸಂದರ್ಭದಲ್ಲಿ ದೇಶಕ್ಕಾಗಿ ಮತ್ತು ಜನರಿಗಾಗಿ ಹೋರಾಡಿದ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ದೊಡ್ಡ ಲಸಿಕಾ ಅಭಿಯಾನ ಹಾಗೂ ಒಲಂಪಿಕ್ಸ್ ನಲ್ಲಿ ಯುವ ಕ್ರೀಡಾಪಟುಗಳು ಮಾಡಿದ ಸಾಧನೆಯ ಕುರಿತು ಪ್ರಸ್ತಾಪ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ.
- ಶೇ 100ರಷ್ಟು ಮಂದಿಗೆ ದೇಶದ ಎಲ್ಲಾ ಯೋಜನೆಗಳು ಸಂಪೂರ್ಣ ತಲುಪುವಂತೆ ಮಾಡುವುದು.
- ಕಠಿಣ ಸಂದರ್ಭದಲ್ಲಿ ದೇಶ ಅಸಾಮಾನ್ಯ ಹೋರಾಟವನ್ನು ನಡೆಸಿಸದೆ.
- ಕೋವಿಡ ಸೋಂಕು ಎಂಬ ಮಹಾಮಾರಿಯ ವಿರುದ್ಧ ವೈದ್ಯಕೀಯ ಸಿಬ್ಬಂದಿಗಳನ್ನೊಳಗೊಂಡು ದೇಶಕ್ಕೆ ದೇಶವೇ ಸಮರೋಪಾದಿಯಲ್ಲಿ ಸೋಂಕಿನ ವಿರುದ್ಧ ಹೋರಾಡಿದೆ.
- ತಾಳ್ಮೆಯಿಂದ ಕೋವಿಡ್ ಸೋಂಕಿನ ವಿರುದ್ಧ ಹೋರಾಡುವುದರ ಮೂಲಕ ಸೋಂಕಿನ ಮೊದಲನೇ ಅಲೆ ಹಾಗೂ ಎರಡನೇ ಸೋಂಕಿನ ವಿರುದ್ಧ ಹೋರಾಡಿ ಗೆದ್ದಿದೆ.
- ಈವರೆಗೂ ದೇಶದ 54 ಕೋಟಿಗೂ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ತಲುಪಿದೆ.–’ಸಬ್ಕಾ ಸಾತ್ ಸಬ್ಕಾ ವಿಕಾಸ್– ಸಬ್ಕಾ ವಿಶ್ವಾಸ್’ನಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿದ್ದೇವೆ.
- ನಮ್ಮ ಎಲ್ಲರ ಗುರಿಯನ್ನು ಸಾಧಿಸಲು ‘ಸಬ್ ಕಾ ಸಾತ್ ಸಬ್ ಕಾ ವಿಕಾಸ್–ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ – ಎಲ್ಲರ ಜೊತೆ, ಎಲ್ಲರ ಏಳ್ಗೆ– ಎಲ್ಲರ ಪ್ರಯತ್ನ’ ಅತ್ಯಗತ್ಯವಾಗಿದೆ ಎಂದು ನಾನು ಈಗ ಘೋಷಣೆ ಮಾಡುತ್ತಿದ್ದೇನೆ.
- ಲಡಾಖ್ ನಲ್ಲಿ ಆಧುನಿಕ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
- ಲಡಾಖ್ನ ‘ಇಂಡಸ್ ಸೆಂಟ್ರಲ್ ಯೂನಿವರ್ಸಿಟಿ’ ದೇಶದ ಉನ್ನತ ಶಿಕ್ಷಣ ಕೇಂದ್ರವಾಗಲಿದೆ.
- ಆಧುನಿಕ ಜಗತ್ತಿನಲ್ಲಿ ಎಲ್ಲಾ ರೀತಿಯ ತಂತ್ರಜ್ಞಾನ, ಮೂಲಸೌಕರ್ಯಗಳ ಅಭಿವೃದ್ಧಿಗೆ, ಅಳವಡಿಕೆಗೆ ಎಲ್ಲರೂ ಜೊತೆಗೂಡಿ ಕೆಲಸ ಮಾಡಬೇಕಿದೆ.
- ಭಾರತ ಸರ್ಕಾರವು ಇ–ಕಾಮರ್ಸ್ ವೇದಿಕೆ ಶುರು ಮಾಡಲಿದ್ದು, ಹಳ್ಳಿಯ ಕರಕುಶಲಕರ್ಮಿಗಳಿಗೆ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ.
- ಹಳ್ಳಿಯ ಅಭಿವೃದ್ಧಿ ಪಥವು ಹೊಸ ಆಯಾಮವನ್ನು ಪಡೆಯುತ್ತಿದೆ.
- ಹಳ್ಳಿಗಳಲ್ಲಿ ಡಿಜಿಟಲ್ ಉದ್ಯಮಿಗಳೂ ರೂಪುಗೊಳ್ಳುತ್ತಿದ್ದಾರೆ.
- ಸ್ವಾಮಿತ್ವ ಯೋಜನೆಯು ಗ್ರಾಮೀಣ ಭಾರತದ ಬದುಕನ್ನು ಬದಲಿಸುತ್ತಿದೆ.
- ಗ್ರಾಮೀಣ ಜನರ ಭೂಮಿ ನಕ್ಷೆ ರೂಪಿಸಲು ಡ್ರೋನ್ ಗಳು ಸಹಕಾರಿಯಾಗಿವೆ .
- ‘ಸಣ್ಣ ಇಳುವರಿದಾರರ ಮೇಲೆ ಸರ್ಕಾರ ಗಮನಹರಿಸಿದೆ.
- 10 ಕೋಟಿ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ5 ಲಕ್ಷ ಕೋಟಿ ರೂ ಸಂದಾಯವಾಗಿದೆ’.
- ದೇಶದ 75ನೇ ಸ್ವಾತಂತ್ರೋತ್ಸವದ 75 ವಾರಗಳ ಆಚರಣೆಗೆ ಸರ್ಕಾರ ಪಣತೊಟ್ಟಿದೆ.
- 2021ರ ಮಾರ್ಚ್ 12 ರಿಂದ 2023ರ ಆಗಸ್ಟ್ 15ರವರೆಗೂ ‘ಅಮೃತ ಮಹೋತ್ಸವ’ ಆಚರಣೆ.
- ಭಾರತೀಯ ರೈಲ್ವೆ ಸಹ ದೇಶದ ಜೊತೆಗೆ ಮಹತ್ತರ ಪರಿವರ್ತನೆ
- ಭಾರತದಲ್ಲಿರುವ ಎಲ್ಲಾ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರವೇಶ ಸಿಗಲಿದ್ದು, ಅಲ್ಲಿ ಶಿಕ್ಷಣ ಪಡೆಯಬಹುದಾಗಿದೆ.
- ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಘೋಷಣೆ.
- ಭಾರತವನ್ನು ಹಸಿರು ಜಲಜನಕದ ಉತ್ಪಾದನೆ ಮತ್ತು ರಫ್ತು ಮಾಡುವ ಕೇಂದ್ರವನ್ನಾಗಿಸಬೇಕು.
- ಜನ ಔಷಧಿ ಯೋಜನೆಯಿಂದಾಗಿ ಬಡವರು, ಅಗತ್ಯವಿರುವವರಿಗೆ ಕೈಗೆಟುಕುವ ದರದಲ್ಲಿ ಔಷಧಗಳು ಸಿಗುತ್ತಿವೆ.
- 75,000 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಬ್ಲಾಕ್ ಮಟ್ಟದಲ್ಲಿ ಆಸ್ಪತ್ರೆಗಳ ಸಂಪರ್ಕದ ಕುರಿತು ಕಾರ್ಯಾಚರಣೆ.
- ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್ ಇಪಿ) ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣಕ್ಕೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುತ್ತದೆ ಎಂದು ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದ್ದಾರೆ.
- ಇದನ್ನೂ ಓದಿ : ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ