1998-99ರಲ್ಲಿಯೂ ಕಾಂಗ್ರೆಸ್ ಇದೇ ಸ್ಥಿತಿ ಅನುಭವಿಸಿತ್ತು…ಅಂದು ಘಟಾನುಘಟಿ ನಾಯಕರ ರಾಜೀನಾಮೆ!

ಸೋನಿಯಾ ಗಾಂಧಿ 1997ರವರೆಗೂ ಸಕ್ರಿಯವಾಗಿ ರಾಜಕೀಯಕ್ಕೆ ಬಂದಿರಲಿಲ್ಲವಾಗಿತ್ತು.

Team Udayavani, Aug 24, 2020, 1:29 PM IST

1998-99ರಲ್ಲಿಯೂ ಕಾಂಗ್ರೆಸ್ ಇದೇ ಸ್ಥಿತಿ ಅನುಭವಿಸಿತ್ತು…ಅಂದು ಘಟಾನುಘಟಿ ನಾಯಕರ ರಾಜೀನಾಮೆ

ನವದೆಹಲಿ:ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕಾಗಿ ಆಮೂಲಾಗ್ರ ಬದಲಾವಣೆ ಆಗಬೇಕೆಂದು ಹಿರಿಯ ನಾಯಕರ ಗುಂಪೊಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ಸೋಮವಾರ (ಆಗಸ್ಟ್ 24, 2020) ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಯುತ್ತಿದೆ. ಆದರೆ ಪಕ್ಷದಲ್ಲಿ ಕಾಂಗ್ರೆಸ್ ನ ಮತ್ತೊಂದು ಗುಂಪು ರಾಹುಲ್, ಸೋನಿಯಾ ಪರ ಧ್ವನಿ ಎತ್ತಿದ್ದು ಕಾಂಗ್ರೆಸ್ ಪಕ್ಷದ ಸಾರಥ್ಯ ಯಾರು ವಹಿಸಬೇಕೆಂಬ ಚರ್ಚೆ ಮುಂದುವರಿದಿದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕತ್ವ ಹೊಣೆ ಯಾರು ಹೊರಬೇಕೆಂಬ ಜಿಜ್ಞಾಸೆ 1998-1999ರಲ್ಲಿಯೂ ತಲೆದೋರಿತ್ತು. ಪ್ರಸ್ತುತ ನಡೆಯುತ್ತಿರುವ ನಾಯಕತ್ವ ಕುರಿತ ಬಿಕ್ಕಟ್ಟು ಅಂದು ಕೂಡಾ ದೊಡ್ಡ ಮಟ್ಟದಲ್ಲಿಯೇ ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಿತ್ತು.

ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜಕೀಯದಿಂದ ದೂರವಿದ್ದ ಸೋನಿಯಾ ಗಾಂಧಿ 1991ರ ಮೇ 21ರಂದು ರಾಜೀವ್ ಗಾಂಧಿ ಹತ್ಯೆಯಾದ ನಂತರ ಹಿರಿಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡ ಪರಿಣಾಮ ಸೋನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಆದರೂ ಸೋನಿಯಾ ಗಾಂಧಿ 1997ರವರೆಗೂ ಸಕ್ರಿಯವಾಗಿ ರಾಜಕೀಯಕ್ಕೆ ಬಂದಿರಲಿಲ್ಲವಾಗಿತ್ತು. ಸೋನಿಯಾ ಗಾಂಧಿ ರಾಜಕೀಯ ಪ್ರವೇಶಿಸುವ ಮುನ್ನ ಪ್ರಧಾನಿ ಪಿವಿ ನರಸಿಂಹ ರಾವ್ ಹಾಗೂ ಸೀತಾರಾಮ್ ಕೇಸರಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದರು. ಅಲ್ಲದೇ ಪಕ್ಷದೊಳಗಿನ ಆಂತರಿಕ ಕಚ್ಚಾಟ, ಬಂಡಾಯವನ್ನು ಎದುರಿಸಿದ್ದರು.

1996ರ ಲೋಕಸಭಾ ಚುನಾವಣೆಯಲ್ಲಿ ಪಿವಿ ನರಸಿಂಹ ರಾವ್ ನೇತೃತ್ವದ ಕಾಂಗ್ರೆಸ್ ಪಕ್ಷ ಹೇಳಿಕೊಳ್ಳುವಂತಹ ದೊಡ್ಡ ಸಾಧನೆ ಮಾಡಲಿಲ್ಲ. ಈ ಸಂದರ್ಭದಲ್ಲಿ ಸೋನಿಯಾ ಗಾಂಧಿ ಬೆಂಬಲಿಗರು ಪಿವಿ ನರಸಿಂಹ ರಾವ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಒತ್ತಡ ಹೇರತೊಡಗಿದ್ದರು. ನಂತರ ಪಿವಿ ರಾಜೀನಾಮೆ ಕೊಟ್ಟಾಗ ಆ ಸ್ಥಾನಕ್ಕೆ ಸೀತಾರಾಮ ಕೇಸರಿ ಅವರನ್ನು ತಂದು ಕೂರಿಸಲಾಗಿತ್ತು.

ಈ ಮಧ್ಯೆ ಎಚ್ .ಡಿ.ದೇವೇಗೌಡ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಕೇಸರಿ ವಾಪಸ್ ಪಡೆಯುವ ಮೂಲಕ ವಿವಾದಕ್ಕೀಡಾಗಿದ್ದರು. 1997ರಲ್ಲಿ ಐಕೆ ಗುಜ್ರಾಲ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನೂ ಕಾಂಗ್ರೆಸ್ ವಾಪಸ್ ಪಡೆದಿತ್ತು. ಹೀಗೆ ಮಧ್ಯಂತರ ಲೋಕಸಭಾ ಚುನಾವಣೆ ವಾತಾವರಣ ನಿರ್ಮಾಣವಾದಾಗ ಮತ್ತೆ ಹಿರಿಯ ಕಾಂಗ್ರೆಸ್ ನಾಯಕರು ಸೀತಾರಾಮ್ ಕೇಸರಿ ನಾಯಕತ್ವ ಸರಿಯಿಲ್ಲ, ಅಲ್ಲದೇ ಮಧ್ಯಂತರ ಚುನಾವಣೆ ಎದುರಿಸಲು ಯಾವ ತಯಾರಿಯೂ ಮಾಡಿಕೊಂಡಿಲ್ಲ ಎಂದು ದೂರಿದ್ದರು. ಕೇಸರಿ ಅವರ ವಿರುದ್ಧ ಅಸಮಾಧಾನಗೊಂಡಿದ್ದ ಆರ್.ಕುಮಾರಮಂಗಲಂ ಮತ್ತು ಅಸ್ಲಾಂ ಶೇರ್ ಖಾನ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು.

1998ರಲ್ಲಿ ದಿಢೀರ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆದು ಸೀತಾರಾಮ್ ಕೇಸರಿ ಅವರನ್ನು ಪಕ್ಷದ ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಬಳಿಕ 1998ರ ಮಾರ್ಚ್ 14ರಂದು ಸೋನಿಯಾ ಗಾಂಧಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಸೋನಿಯಾ ಮುಂದೆ ಪಕ್ಷದೊಳಗಿನ ಮುಸುಕಿನ ಗುದ್ದಾಟ, ಬಣ ರಾಜಕೀಯ ಸಮಸ್ಯೆ ಬಗೆಹರಿಸಬೇಕಾದ ದೊಡ್ಡ ಸವಾಲು ಇದ್ದಿತ್ತು.

1999ರ ಮೇ 15ರಂದು ಲೋಕಸಭಾ ಚುನಾವಣೆಗೂ ಸ್ವಲ್ಪ ಸಮಯದ ಮುನ್ನ ಕಾಂಗ್ರೆಸ್ ನಾಯಕರಾಗಿದ್ದ ಶರದ್ ಪವಾರ್, ಪಿಎ ಸಂಗ್ಮಾ ಮತ್ತು ತಾರೀಖ್ ಅನ್ವರ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದರು. ಸೋನಿಯಾ ಗಾಂಧಿ ವಿದೇಶಿ ಮೂಲದವರು ಆಕೆಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಿರುವುದು ಸರಿಯಲ್ಲ ಎಂದು ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದರು. ಈ ವಿವಾದದ ಬೆನ್ನಲ್ಲೇ ಸೋನಿಯಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಸಿಡಬ್ಲ್ಯುಸಿಗೆ ಬರೆದ ಪತ್ರದಲ್ಲಿ ಸೋನಿಯಾ ಗಾಂಧಿ, ನಾನು ವಿದೇಶಿ ನೆಲದಲ್ಲಿ ಹುಟ್ಟಿದ್ದೇನೆ, ಆದರೆ ನಾನು ಭಾರತವನ್ನು ನನ್ನ ದೇಶವನ್ನಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಅಷ್ಟೇ ಅಲ್ಲ ನನ್ನ ಕೊನೆಯ ಉಸಿರು ಇರುವವರೆಗೂ ಭಾರತೀಯಳಾಗಿಯೇ ಇರುತ್ತೇನೆ. ಭಾರತ ನನ್ನ ತಾಯಿ ನೆಲ. ನನ್ನ ವೈಯಕ್ತಿಕ ಜೀವನಕ್ಕಿಂತ ಮಿಗಿಲಾದದ್ದು ಎಂದು ಉಲ್ಲೇಖಿಸಿದ್ದರು.

ರಾಜೀನಾಮೆ ಜಟಾಪಟಿ ನಂತರ ಪಕ್ಷದ ಹಲವು ಮುಖಂಡರು ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತಿದ್ದರು. ಅದರಲ್ಲಿ ಅಂದಿನ ಮಧ್ಯಪ್ರದೇಶ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ದೆಹಲಿ ಸಿಎಂ ಶೀಲಾ ದೀಕ್ಷಿತ್, ರಾಜಸ್ಥಾನ ಸಿಂಎ ಅಶೋಕ್ ಗೆಹ್ಲೋಟ್ ಮತ್ತು ಒಡಿಶಾ ಸಿಎಂ ಗಿರಿಧರ್ ಗಮಾಂಗ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೋನಿಯಾ ರಾಜೀನಾಮೆ ವಾಪಸ್ ಪಡೆಯಬೇಕೆಂದು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಕೊನೆಗೂ ಸೋನಿಯಾ ಗಾಂಧಿ ಪಕ್ಷದ ಹಿರಿಯ ನಾಯಕರ ಒತ್ತಡಕ್ಕೆ ಮಣಿದು ರಾಜೀನಾಮೆ ವಾಪಸ್ ಪಡೆದಿದ್ದರು. ಅದೂ ಶರತ್ ಪವಾರ್, ಸಂಗ್ಮಾ ಮತ್ತು ಅನ್ವರ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ವಜಾ ಮಾಡುವ ಷರತ್ತಿಗೆ ಒಪ್ಪಿದ ಬಳಿಕ ರಾಜೀನಾಮೆ ಹಿಂಪಡೆದಿದ್ದರು. ಹೀಗೆ ನೂರಕ್ಕೂ ಅಧಿಕ ವರ್ಷದ ಇತಿಹಾಸ ಹೊಂದಿದ್ದ ಕಾಂಗ್ರೆಸ್ ಪಕ್ಷದಲ್ಲೀಗ ಇದೀಗ ಮತ್ತೆ ನಾಯಕತ್ವದ ಪ್ರಶ್ನೆ ಎದ್ದಿದ್ದು ಹಿರಿಯ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ನಡುವೆ ದೊಡ್ಡ ಕಂದಕ ಏರ್ಪಟ್ಟಿದೆ. ಅಲ್ಲದೇ ಹಿರಿಯ ಕಾಂಗ್ರೆಸ್ ನಾಯಕರು ರಾಜೀನಾಮೆ ಕೊಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.