ಹಸಿರುಗಳ ನಡುವೆ ಬಗೆದ ದಾರಿಯಲ್ಲಿ ಶೃಂಗೇರಿಗೆ ಏಕಾಂಗಿ ಪಯಣ..!


Team Udayavani, Mar 7, 2021, 2:27 PM IST

Agumbe to Shringeri Travel Experience

ಅಮ್ಮ.. ನಾನು ಶೃಂಗೇರಿಗೆ ಹೋಗಿ ಬರ್ತೇನೆ, ಬೆಳಗ್ಗೆ ಸುಮಾರು 9:00 ಗಂಟೆಯ ಹೊತ್ತದು, ನನ್ನ ಪಾಲಿಗೆ ಹೊತ್ತಿನ ಹೊತ್ತಿಗೆ ಒತ್ತು ಪಡೆದ ಹೊತ್ತು.

ನನ್ಮ ಅಂಬಾರಿ ಸುಜ್ಹುಕಿ‌ ಜ್ಹ್ಯೂಸ್ ಬೈಕಿನಲ್ಲಿ ಹೊರಟೆ… ಪೂರ್ವ ತಪ್ಪಲಿನಲ್ಲಿ ಹಸಿರನ್ನುಂಡ ಬೆಟ್ಟ ಸಾಲುಗಳ ದಾಟಿ ಇದ್ದ ಶಾರದೆಯ ಮಡಿಲ ಊರು ಶೃಂಗ ಗಿರಿಗೆ‌‌(ಶೃಂಗೇರಿ).

ಬೈಕಿನ ಚಕ್ರಗಳು ಸವೆಯುತ್ತಿದ್ದವು, ಓಡುತ್ತಿದ್ದವು ಮನದಲ್ಲಿ ಶಾರದೆಯ ಗಾನವೊಂದೆ ಅನುರಣಿಸುತ್ತಿತ್ತು. ಮನೆಯಿಂದ ಹೊರಟವ ಅರ್ಧ ವಿರಾಮ ಕೊಟ್ಟಿದ್ದು, ಆಗುಂಬೆ ಘಾಟಿಯ ಪಾದದ ತುದಿ ಸೋಮೇಶ್ಬರದ ಗಣೇಶನ ದೇಗುಲದ ಮುಂದೆ. ಗಣೇಶನಿಗೆ ಸಲಾಂ ಹೊಡೆದು ಮತ್ತೆ ಶಾರದೆಯ ಪಾದ ಸ್ಪರ್ಶದ  ನೆಲ ಭೂಮಿಗೆ.

ವಾವ್ಹ್ ಅದೆಂತಹ ಅದ್ಭುತ…ಅದೆಂತಹ ಸೋಜಿಗ, ಅದೆಂತಹ ವಿಸ್ಮಯ.. ರಾಶಿ ರಾಶಿ ಹಸಿರು ಮರ ಸಾಲುಗಳ ನಡುವೆ ಬಗೆದ ದಾರಿಯಲ್ಲಿ ಏಕಾಂಗಿ ಪಯಣ ಒಂದಿನಿತೂ ಶುಷ್ಕವೆನ್ನಿಸಲಿಲ್ಲ. ಹಿತ ಗಾಳಿಯ ಉಸಿರನ್ನು ಸೇವಿಸುತ್ತಾ, ಘಾಟಿಯ ಹೇರ್ ಪಿನ್ ತಿರುವುಗಳನ್ನು ಏರುತ್ತಾ ಏರುತ್ತಾ ಭವ್ಯ ದಿವ್ಯ ರಮ್ಯಛಾಯೆಗಳು ನನ್ನೊಳಗೆ ಮೂರ್ತಿಭವಿಸುತ್ತಿತ್ತು‌. ಅದು ನಿಜಕ್ಕೂ ಹಿತಾನುಭವ ಸಂಕಲನ.

ಆಧುನೀಕತೆಯ ಭರಾಟೆಯಲ್ಲಿ ನಮ್ಮ ಮೂಲ ನೆಲೆಯ ಸೊಗಡನ್ನೆ ಕಳೆದುಕೊಂಡ ನಮಗೆ ತೀರಾ ನಮ್ಮದೇ ಎನ್ನಿಸುವ ಆಪ್ತತೆ ನೀಡುವುದು ಆಗುಂಬೆಯ ಏರಿದ ಮೇಲೆ ಆಗುಂಬೆಗೂ, ಶೃಂಗೇರಿಗೂ ಇರುವ ಅಂತರದಲ್ಲಿನ ಹಳ್ಳಿ ಸೊಗಡು, ಮಲೆನಾಡಿನ ಚಿತ್ರವನ್ನು ದರ್ಶಿಸುವ ಕನ್ನಡಿಯದು. ರಾಶಿ ಸಾಲು ಗೋವುಗಳನ್ನು ಮೇವಿಗೆ ಕರೆದುಕೊಂಡು ಹೋಗುತ್ತಿದ್ದ ಅಜ್ಜ, ಹಾಲುಣ್ಣುತ್ತಿದ್ದ ಅಂಬೆ ಹಸು, ತೋಟಗಳು, ಅಲ್ಲಲ್ಲಿ ಕಾಣಸಿಗುವ ಕಲ್ಬಂಡೆಗಳನ್ನೇರಿಳಿದು ಮುಂದಕ್ಕೆ ಸಾಗುವ ತೊರೆಗಳು, ಧೂಳಿನ ಮುಸುಕಿಲ್ಲದ ದಾರಿ, ತಂಗಾಳಿಯೊಂದಿಗೆ ಮೈಗೆ ಚುಚ್ಚುವ ಸೂಜಿ ಬಿಸಿಲು…ವಾವ್ಹ್ ಎದೆಗೆ ಹತ್ತಿರವಾಗುವ ಭಾವಗಳಿಗೆ  ಏನೆಂದು ಹೆಸರಿಡಲಿ…?

ಓದಿ :  ಟಿ ಎಮ್ ಸಿ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳ ಕಾಶ್ಮೀರದಂತಾಗುತ್ತದೆ : ಸುವೇಂದು ಅಧಿಕಾರಿ

ಇದೇ ಮೊದಲಲ್ಲ ಶೃಂಗೇರಿಗೆ ಈ ಏಕಾಂಗಿ ಪಯಣ, ಈ ಹಿಂದೆಯೂ ಒಂದೆರಡು ಬಾರಿ ಹೋಗಿದ್ದಿದೆ… ಆದರೇ, ಅವುಗಳು ಈ ಪಯಣದಷ್ಟು ಖುಷಿ ಕೊಟ್ಟಿರಲಿಲ್ಲ. ನನ್ನ ಅಂಬಾರಿ ವಿದ್ಯಾದಿದೇವತೆ ಶಾರದೆಯ ಮಂದಿರದ ಭವ್ಯ ನಭಚುಂಬಿ ಮನೋಹರ ಗೋಪುರದೆದುರಿಗೆ ಹೋಗಿ ನಿಂತಿದ್ದೇ, ನಿಂತಿದ್ದು… ಅದೆಷ್ಟು ಆನಂದ. ಅನುಭವಿಸಿದ ನನಗಷ್ಟೇ ಗೊತ್ತದು.

ತುಂಗೆಯ ಮೆಲು ಹರಿವು, ಅಲ್ಲಿ ಜುಮು ಜುಮು ಮೈ ಬಳುಕಿಸುವ ಮತ್ಸ್ಯಗಳು ಅದೆಂತಹ ಭವ್ಯ ದರ್ಶನ, ವಿದ್ಯಾಶಂಕರನ ಶಿಲ್ಪ ಗುಡಿಯ ಅದೆಂತಹ ಕಲಾ ದರ್ಶನ, ಅಭಯ ಹಸ್ತೆ ತಾಯಿ ಶಾರದೆಯ ಪುಣ್ಯ ದರ್ಶನವನ್ನು ಹೇಗೆ ಪದಗಳಲ್ಲಿ ಕಟ್ಟಲಿ…? ಹಿತಾನುಭವೆಂದಷ್ಟೇ ಹೇಳಬಲ್ಲೆ.

ಇದಲ್ಲವೇ ದೇವ ಸ್ವರೂಪ, ಇದಲ್ಲವೇ ದೇವ ಶಕ್ತಿ…? ಹಿತ, ಸಂತೋಷ, ಆನಂದವನ್ನು ಹೊರತಾಗಿ ಮತ್ತೇನು ಬೇಕು ಬದುಕಿಗೆ…?

ನೀವೊಮ್ಮೆ ಆಗುಂಬೆಯಾಗಿ ಶೃಂಗೇರಿಗೆ ಏಕಾಂಗಿಯಾಗಿ ಹೋಗಿ ಬನ್ನಿ‌. ಹಿತಾನುಭವ ನಿಮ್ಮದಾಗಲಿ‌. ಹ್ಯಾಪಿ ಜರ್ನಿ..

 ಬರಹ : ಶ್ರೀರಾಜ್ ವಕ್ವಾಡಿ

ಫೋಟೋ ಕೃಪೆ : ಇಂಟರ್ ನೆಟ್ 

ಓದಿ : ಮೋದಿ ಕೊಲ್ಕತ್ತಾ ಭೇಟಿ ಹಿನ್ನೆಲೆಯಲ್ಲೇ ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ

 

 

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.