ಪಶ್ಚಿಮಘಟ್ಟದ ರಮಣೀಯ ತಾಣ ಕ್ಯಾತನಮಕ್ಕಿ


Team Udayavani, Aug 29, 2021, 2:41 PM IST

ಪಶ್ಚಿಮಘಟ್ಟದ ರಮಣೀಯ ತಾಣ ಕ್ಯಾತನಮಕ್ಕಿ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ ಕ್ಯಾತನಮಕ್ಕಿ. ಮೂಡಿಗೆರೆಯಿಂದ ಕ್ಯಾತನಮಕ್ಕಿ 72 ಕಿ.ಮೀ ದೂರದಲ್ಲಿದ್ದು ಮೊದಲು ಮೂಡಿಗೆರೆ ತಾಲೂಕಿನಲ್ಲಿದ್ದ ಈ ಸ್ಥಳ ಈಗ ನೂತನವಾಗಿ ಘೋಷಣೆಯಾದ ಕಳಸ ತಾಲೂಕಿಗೆ ಬರುತ್ತದೆ.

ಹೊರನಾಡು ಶ್ರೀ ಕ್ಷೇತ್ರ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಮೀಪವಿರುವ ಈ ತಾಣಕ್ಕೆ ಶ್ರಂಗೇರಿಗೆ ಸಂಪರ್ಕಿಸುವ ರಸ್ತೆಯಲ್ಲಿ ಸಾಗಬೇಕು. ಕಳಸದಿಂದ ಈ ಸುಂದರ ತಾಣ ತಲುಪಲು 20 ಕಿ.ಮೀ ಕ್ರಮಿಸಬೇಕು. ಬಲಿಗೆ ಜೈನ ಬಸದಿಯ ಸಮಿಪದಲ್ಲಿ ಈ ಕ್ಯಾತನಮಕ್ಕಿ ಸುಂದರ ಪ್ರಕ್ರತಿ ತಾಣ ಸಿಗುತ್ತದೆ.

ಇದನ್ನೂ ಓದಿ:ಅನ್ನ-ಅರಿವು ನೀಡುವುದೇ ನಿಜ ಧರ್ಮ

ಮೊದಲಿಗೆ ಅರಣ್ಯ ಇಲಾಖೆಯ ತಪಾಸಣಾ ಕೇಂದ್ರ ಸಿಗುತ್ತದೆ. ಅಲ್ಲಿ ಪ್ರತಿಯೊಬ್ಬರಿಗೂ 50 ರೂ ಟಿಕೇಟ್ ನಿಗದಿ ಮಾಡಲಾಗಿದೆ. ವಾಹನದ ನಂ ಮತ್ತು ಪ್ರವಾಸಿಗರ ಬಗ್ಗೆ ದಾಖಲೆ ಪುಸ್ತಕದಲ್ಲಿ ನಮೂದಿಸಿ ನಂತರ ನಮ್ಮನ್ನು ಮುಂದೆ ಬಿಡಲಾಗುತ್ತದೆ. ನಂತರ ಆರಂಭವಾಗುವುದೇ ಬಹಳ ಕಡಿದಾದ ರಸ್ತೆಯ ಯಾತ್ರೆ. ಮಳೆ ಬಂದರಂತೂ ಸಾಗಲು ಅಸಾಧ್ಯವಾದ ರಸ್ತೆ, ಕಲ್ಲು ಕೆಸರಿನಿಂದ ಮತ್ತು ಇಳಿಜಾರಿನಿಂದ ಕೂಡಿದ್ದು, ಮುಂದೆ ವಾಹನ ಬಂದರೆ ಜಾಗ ಕೊಡಲು ಅಸಾಧ್ಯವಾದ ರಸ್ತೆಯಲ್ಲಿ ಬಹಳಷ್ಟು ಜಾಗ್ರತೆಯಿಂದ ಸಾಗಬೇಕು. ಇಲ್ಲಿ ಸಾಗಲು ಫೋರ್ ವೀಲ್ ವಾಹನಗಳಷ್ಟೆ ಸಾಧ್ಯ. ಚಾಲನೆಯಲ್ಲಿ ಎಷ್ಟೇ ಹುಷಾರುಗಿದ್ದರೂ ಸಾಲದು, ಚಾಲಕ ಸ್ವಲ್ಪ ಮೈಮರೆತರೂ ದೊಡ್ಡ ಪ್ರಪಾತಕ್ಕೆ ಬೀಳುವ ಸಾಧ್ಯತೆಯೇ ಹೆಚ್ಚು.

ಗುಡ್ಡದ ತುದಿಯಲ್ಲಿ ಸಿಗುವುದು ಮಲೆನಾಡಿನ ಸ್ವರ್ಗ ಕ್ಯಾತನಮಕ್ಕಿ ಸಿಗುತ್ತದೆ ಮೊದಲು ಪ್ರವಾಸಿಗರು ವಾಹನವನ್ನು ವೀವ್ ಪಾಯಿಂಟ್ ಬಳಿ ತೆಗೆದುಕೊಂಡು ಹೋಗಿ ಅಲ್ಲಿನ ರಸ್ತೆ ಹಾಳು ಮಾಡುತ್ತಿದ್ದುರಿಂದ ಅರಣ್ಯ ಇಲಾಖೆ ಸಂಪೂರ್ಣ ಬೇಲಿ ಹಾಕಿದ್ದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ನಡೆದು ಸಾಗಬೇಕು, ಮುಖ್ಯರಸ್ತೆಯಿಂದ ಬಾಡಿಗೆಗೆ ಪಿಕಪ್, ಜೀಪ್ ಗಳಿದ್ದು ಇವರಿಗೆ ಇಲ್ಲಿಗೆ ಪ್ರವಾಸಿಗರನ್ನು ಕರೆತಂದು ಅವರನ್ನು ಪುನಃ ಬಿಡುವುದು ಕೆಲಸ.  ಬೆಂಗಳೂರು ಬಾಗದ ಪ್ರವಾಸಿಗರಂತು ಬೈಕಿನಲ್ಲಿ ಬಂದು ಎದ್ದು ಬಿದ್ದು ನಿಸರ್ಗದ ಸೌಂದರ್ಯ ಸವಿಯಲು ಬರುತ್ತಿದ್ದಾರೆ. ಕಳಸದ ಸುತ್ತಮುತ್ತಲಿನ ಹೋಂ ಸ್ಟೇಗೆ ಬಂದ ಅತಿಥಿಗಳು ಇಲ್ಲಿಗೆ ಸಂದರ್ಶಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಇದು ರಾಜ್ಯಾದ್ಯಂತ ಪ್ರಖ್ಯಾತಿ ಪಡೆದಿದ್ದು ಹೆಚ್ಚಿನ ಯಾತ್ರಿಕರು ಭೇಟಿ ನೀಡುತ್ತಿದ್ದಾರೆ.

ಇದು ಕುದುರೆಮುಖ ಅರಣ್ಯಕ್ಕೆ ಅಂಟಿಕೊಂಡಿದ್ದು ಪಕ್ಕದ ಶ್ರಂಗೇರಿ, ಕೊಪ್ಪ ತಾಲೂಕಿಗೆ ಸಮೀಪದಲ್ಲಿದೆ, ಇದು ಪ್ರವಾಸಿಗರ ಸ್ವರ್ಗ ಇದನ್ನು ಹಾಗೆ ಕಾಪಾಡಿಕೊಳ್ಳುವುದು ಸಹ ನಮ್ಮ ಕರ್ತವ್ಯ. ಇಲ್ಲಿಗೆ ಬಂದಾಗ ಮೋಜು ಮಸ್ತಿಯಲ್ಲಿ ತೊಡಗದೆ ಬಾಟಲಿ ಪ್ಲಾಸ್ಟಿಕ್ ಬಿಸಡದೆ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕಿರುವುದು ಪ್ರವಾಸಿಗರ ಕರ್ತವ್ಯವಾಗಬೇಕಿದೆ.

-ಸಂತೋಷ್

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.