Beauty Tips: ತ್ವಚೆಯ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಲು ಕಾಫಿಪುಡಿ ಬಳಸಿ…


Team Udayavani, Oct 3, 2023, 5:15 PM IST

web-coffe-face-mask

ಕಾಫಿ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಹಲವರಿಗೆ ಕಾಫಿ ಇಲ್ಲದೆ ಒಂದು ದಿನ ಕಳೆಯಲು ಸಾಧ್ಯವಿಲ್ಲ ಎಂಬಂತೆ ಇರುತ್ತಾರೆ. ಕಾಫಿ ಅಥವಾ ಟೀ ನಮ್ಮ ಎನರ್ಜಿ ಬೂಸ್ಟರ್‌ ನಂತೆ ಕಾರ್ಯನಿರ್ವಹಿಸುತ್ತದೆ. ತುಂಬಾ ಜನರಿಗೆ ದಿನದ ಆರಂಭದಲ್ಲಿ ಕಾಫಿ ಅಥವಾ ಟೀ ಕುಡಿಯದೇ ದಿನ ಪ್ರಾರಂಭವಾಗುವುದೇ ಇಲ್ಲ.

ಕಾಫಿ ನಮಗೆ ಕುಡಿಯಲು ಮಾತ್ರವಲ್ಲದೇ, ತ್ವಚೆಗೂ ಹಲವು ರೀತಿಯ ಉಪಯೋಗಗಳು ಇವೆ. ಕಾಫಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ ಆಂಶ ಚರ್ಮಕ್ಕೆ ಬಹಳ ಉಪಯುಕ್ತವಾಗಿದ್ದು, ಕಾಂತಿಯುತ ಚರ್ಮ ಪಡೆಯಲು ಸಹಾಯಕಾರಿಯಾಗಿದೆ.

ಸೂರ್ಯನ ಕಿರಣಗಳಿಗೆ ಹೆಚ್ಚಾಗಿ ಮೈ ಒಡ್ಡಿಕೊಳ್ಳುವುದರಿಂದ ಚರ್ಮಕ್ಕೆ ಅನೇಕ ರೀತಿಯ ಅಪಾಯಗಳು ಇರುತ್ತದೆ. ಕಾಫಿ ಪುಡಿಯಲ್ಲಿರುವ ಕೆಫೀನ್‌, ಯುವಿ ಕಿರಣಗಳಿಂದ ನಮ್ಮ ಚರ್ಮವನ್ನು ರಕ್ಷಿಸುತ್ತದೆ. ಚರ್ಮದ ಕೋಶಗಳ ಬೆಳವಣಿಗೆ ಉತ್ತಮವಾಗಿಡುವುದರೊಂದಿಗೆ ತ್ವಚೆಗೆ ಹೊಳಪು ನೀಡುತ್ತದೆ.

ಕಾಫಿಪುಡಿಯನ್ನು ಫೇಸ್ ಪ್ಯಾಕ್, ಫೇಸ್ ಮಾಸ್ಕ್ ಅಥವಾ ಸ್ಕ್ರಬ್ ರೂಪದಲ್ಲಿ ಬಳಸಬಹುದು. ಇದು ಚರ್ಮದ ಅಂದ ಹೆಚ್ಚಿಸಲು ಸಹಾಯ ಮಾಡುತ್ತದೆ. ಕಾಫಿ ಸ್ಕ್ರಬ್ ತ್ವಚೆಗೆ ತುಂಬಾನೇ ಒಳ್ಳೆಯದು ಎಂದು ಹೇಳುವುದು ಏಕೆಂದರೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್, ವಿಟಮಿನ್ ಬಿ3, ಕ್ಲೋರೋಜೆನಿಕ್ ಆಮ್ಲ ಇರುವುದರಿಂದ ಇದು ಮುಖದಲ್ಲಿರುವ ಕಪ್ಪು ಕಲೆ, ಮೊಡವೆ ಇವುಗಳನ್ನು ಹೋಗಲಾಡಿಸಿ, ತ್ವಚೆಯಲ್ಲಿ ಕೊಲೆಜಿನ್ ಉತ್ಪತ್ತಿ ಮಾಡುತ್ತದೆ. ಇದರಿಂದ ತ್ವಚೆಯ ಹೊಳಪು ಹೆಚ್ಚಾಗುತ್ತದೆ.

  1. ಎಕ್ಸ್‌ಫೋಲಿಯೇಟಿಂಗ್ ಸ್ಕ್ರಬ್ :

ಕಾಫಿಯು ನೈಸರ್ಗಿಕ ಎಕ್ಸ್‌ಫೋಲಿಯೇಟಿಂಗ್ ಸ್ಕ್ರಬ್ ಆಗಿದೆ. ಇದು ಚರ್ಮಕ್ಕೆ ತುಂಬಾ ಪರಿಣಾಮಕಾರಿಯಾಗಿದೆ. ಸ್ವಲ್ಪ ಕಾಫಿಪುಡಿ ತೆಗೆದುಕೊಂಡು ಅದಕ್ಕೆ ಸ್ವಲ್ಪ ತೆಂಗಿನ ಎಣ್ಣೆ ಅಥವಾ ಆಲಿವ್ ಎಣ್ಣೆಯನ್ನು ಸೇರಿಸಿ. ನಂತರ ಅದನ್ನು ಮುಖಕ್ಕೆ ಹಚ್ಚಿ ಕೆಲ ಹೊತ್ತು ಮಸಾಜ್  ಮಾಡಿ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.

  1. ಫೇಸ್ ಸ್ಕ್ರಬ್

ಕಾಫಿ ಪುಡಿಯನ್ನು ಫೇಸ್‌ ಸ್ಕ್ರಬ್‌ ಆಗಿಯೂ ಬಳಸಬಹುದು. ಸ್ವಲ್ಪ ಕಾಫಿ ಪುಡಿ, ಸ್ವಲ್ಪ ಬ್ರೌನ್‌ ಶುಗರ್‌, ಮತ್ತು ಆಲಿವ್ ಎಣ್ಣೆ ಸೇರಿಸಿ ಎಲ್ಲವೂ ಚೆನ್ನಾಗಿ ಮಿಕ್ಸ್‌ ಮಾಡಿ ಮುಖಕ್ಕೆ ಹಚ್ಚಿ ವೃತ್ತಕಾರವಾಗಿ ಮಸಾಜ್‌ ಮಾಡಿ. ಹೀಗೆ ಮಾಡುವುದರಿಂದ ಚರ್ಮದ ಮೇಲಿನ ಡೆಡ್‌ ಸ್ಕಿನ್‌ ನಿವಾರಣೆಯಾಗುತ್ತದೆ.

  1. ಕಾಫಿ ಪುಡಿಯ ಸ್ಕ್ರಬ್

2 ಚಮಚ ಕಾಫಿ ಪುಡಿಯನ್ನು ಹಾಲು ಹಾಗೂ ಕೆನೆ ಜೊತೆ ಮಿಶ್ರಣ ಮಾಡಿ ಗಟ್ಟಿಯಾದ ಪೇಸ್ಟ್ ತಯಾರಿಸಿ. ಈ ಸ್ಕ್ರಬ್ ಅನ್ನು ಮುಖಕ್ಕೆ ಹಚ್ಚಿದರೆ ಮುಖದಲ್ಲಿರುವ ರಂಧ್ರಗಳು ಮರೆ ಮಾಚುತ್ತದೆ.

  1. ಬಾಡಿ ಸ್ಕ್ರಬ್‌

ಕಾಫಿಪುಡಿ ಚರ್ಮವನ್ನು ಬಿಗಿಗೊಳಿಸುತ್ತದೆ. ಕಾಫಿ, ಬ್ರೌನ್ ಶುಗರ್ ಮತ್ತು ಆಲಿವ್ ಎಣ್ಣೆಯಿಂದ ಪೇಸ್ಟ್ ತಯಾರಿಸಿ ಮೈ-ಕೈಗಳಿಗೆ ಮಸಾಜ್ ಮಾಡಿ. ಪ್ರತಿ ದಿನ ಕೂಡಾ ಸ್ಕ್ರಬ್‌ ಮಾಡುವುದು ಚರ್ಮಕ್ಕೆ ಉತ್ತಮ.

  1. ಕಾಫಿ ಫೇಸ್ ಮಾಸ್ಕ್

ಮುಖದ ಸುತ್ತ ಇರುವ ಡೆಡ್ ಸೆಲ್ ತೆಗೆದು ಹಾಕಲು ಕಾಫಿ ಫೇಸ್ ಮಾಸ್ಕ್ ಉತ್ತಮ ಪರಿಹಾರ. ಕಾಫಿ ಪುಡಿಯನ್ನು ಜೇನುತುಪ್ಪ ಅಥವಾ ಮೊಸರಿನೊಂದಿಗೆ ಬೆರೆಸಿ ಫೇಸ್ ಮಾಸ್ಕ್ ನಂತೆ ಮಾಡಿ. ಈಗ ಇದನ್ನು ಮುಖಕ್ಕೆ ಹಚ್ಚಿ ಸುಮಾರು 15 ನಿಮಿಷಗಳ ನಂತರ ಮುಖ ತೊಳೆಯಿರಿ. ಇದರೊಂದಿಗೆ, ಚರ್ಮವನ್ನು ಬಿಗಿಗೊಳಿಸಲು ಮತ್ತು ಅದರ ವಿನ್ಯಾಸವನ್ನು ಸುಧಾರಿಸಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

  1. ಕಾಫಿ ಮಾಸ್ಕ್

ಕಾಫಿ ತ್ವಚೆಗೆ ಹೊಳಪು ನೀಡುತ್ತದೆ. ಚರ್ಮ ಹೊಳೆಯುವಂತೆ ಮಾಡಲು ಕಾಫಿ ಮಾಸ್ಕ್ ಟ್ರೈ ಬಳಸುವುದು ಉತ್ತಮ. ಅರ್ಧ ಕಪ್ ಕಾಫಿ ಪುಡಿಗೆ ಹಾಲು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷಗಳ ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ.

*ಕಾವ್ಯಶ್ರೀ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.