ಕೆಂಪು ಅಣಬೆಯ ನೆನಪು…ಪ್ರಕೃತಿ ಸೌಂದರ್ಯದ ಬೊಳ್ಳೆ ಜಲಪಾತದ ಪಯಣ

ದೂರದಲ್ಲಿ ಒಂದು ಮನೆ ಕಾಣಿಸುತ್ತಿದೆ. ಮನೆ ಎದುರೆಲ್ಲಾ ಹಣ್ಣಡಿಕೆಗಳು ಹಾಸಿಕೊಂಡಿವೆ.

Team Udayavani, Nov 25, 2021, 12:31 PM IST

ಕೆಂಪು ಅಣಬೆಯ ನೆನಪು…ಪ್ರಕೃತಿ ಸೌಂದರ್ಯದ ಬೊಳ್ಳೆ ಜಲಪಾತದ ಪಯಣ

ಯಾವುದೋ ಅನಾಮಿಕ ಜಲಪಾತ ಒಂದರ ಬುಡದಲ್ಲಿ ನಿಂತು ನಾನಿದನ್ನು ನಿಮಗೆ ವಿವರಿಸುತ್ತಿದ್ದೇನೆ ಎಂದು ಊಹಿಸಿಕೊಳ್ಳಿ. ನೀವೂ ನನ್ನೊಟ್ಟಿಗೆ ಈ ಪಯಣದಲ್ಲಿ ಸಾತ್ ನೀಡಿದ್ದೀರಿ ಎಂದು ನಾನು ಊಹಿಸಿಕೊಳ್ಳುತ್ತೇನೆ.‌ ಆಗ ಈ ಬರಹ ನಿಮಗೆ ನಾನು ನಡೆದುಹೋದ ದಾರಿಯ ಪ್ರತಿಯೊಂದು ಚಿತ್ರಣವನ್ನು ಬಿಂಬಿಸುತ್ತಾ ಹೋಗುತ್ತದೆ.

ತೀರಾ ಕಡಿದಾದ ಮಣ್ಣು ರಸ್ತೆಯಲ್ಲಿ ನಾವು ಒಂದಷ್ಟು ಜನ ಸಾಹಸ ಮಾಡಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದೇವೆ. ದಾರಿಯ ಉದ್ದಕ್ಕೂ ಆಗಾಗ ಮಳೆ ಮತ್ತು ರಸ್ತೆಯ ಅಕ್ಕಪಕ್ಕದಲ್ಲಿ ರಬ್ಬರ್ ಮರಗಳೇ ಹಾಸಿಕೊಂಡಿವೆ. ಇಷ್ಟರ ನಡುವೆ ಕೆಲವರಿಗೆ ರೇನ್ ಕೋಟ್ ಇದೆ ಇನ್ನು ಕೆಲವರಿಗಿಲ್ಲ.  ರಸ್ತೆ ಕಳೆದು ಇನ್ನೇನು ಜಲಪಾತ ಬರುತ್ತದೆ ಎನ್ನುವಷ್ಟರಲ್ಲಿ ಆ ಜಲಪಾತಕ್ಕೆ ಹೋಗುವ ಮಾರ್ಗವನ್ನೇ ಬಂದ್ ಮಾಡಲಾಗಿದೆ ಎಂಬ ಸುದ್ದಿ ಸಿಕ್ಕಿತು. ಪ್ರವಾಸಿಗರಿಗೆ ಅಲ್ಲಿ ನಿಷೇಧವಿದೆ ಎಂದು ತಿಳಿದಾಗ ಕೊಂಚ ಬೇಸರವೆನಿಸಿದರೂ ಜೊತೆಯಲ್ಲಿ ಇದ್ದ ಘಟಾನುಘಟಿಗಳು ಯಾರದೋ ಪರವಾನಿಗೆ ಪಡೆದು ಅಂತು ಮುಂದೆ ಸಾಗಿದೆವು.

ತಲುಪುವ ಸ್ಥಳಕ್ಕಿಂತ ಹೊರಟಿದ್ದ ಹಾದಿಯ ಫಜೀತಿಯೇ ಬೇರೆ ಅನುಭವ ನೀಡುತ್ತಿದೆ. ಅಷ್ಟು ಕಲ್ಲು ಗುಡ್ಡೆಯಂತ ದಾರಿ, ಮೂಗಿನ ನೇರಕ್ಕೆ ಘಟ್ಟಗಳು, ಅಲ್ಲಲ್ಲಿ ಒಬ್ಬರೇ ದಾಟುವಷ್ಟು ಚಿಕ್ಕ ಸೇತುವೆ, ನೀರಿನ ಚಿಕ್ಕ ಚಿಕ್ಕ ಝರಿಗಳು, ಇಷ್ಟರ ನಡುವೆ ಅದ್ಭುತದಲ್ಲಿ ಅದ್ಬುತ ಅನುಭವ ನೀಡಿದ್ದು ಅಚ್ಚರಿಯ ಜೀವಿ ಇಂಬಳ ( ಜಿಗಣೆ, ಲೀಚ್ ) ರಕ್ತ ಬೀಜಾಸುರನ ವಂಶಸ್ಥರಾದ ಇವರು ಹಾದಿಯ ತುಂಬೆಲ್ಲ ಪೂರ್ಣ ಕುಂಭ ಸ್ವಾಗತಕ್ಕೆ ನಿಂತಹಾಗೆ ಕಾದುನಿಂತಿವೆ. ಬಿಸಿ ನೆತ್ತರದ ಹಸಿವಾಸನೆಗೆ ಕಚ್ಚಿದ ಜಾಗದಲ್ಲೇ ಮತ್ತೆ ಮತ್ತೆ ಕಚ್ಚುತ್ತಿವೆ. ದಾರಿಯೇ ಇಲ್ಲದ ಮಾರ್ಗದಲ್ಲಿ ಸೊಂಪಾಗಿ ಬೆಳೆದಿದ್ದ ಹಸಿರು ಸೊಪ್ಪಿನ ಗಿಡಗಳು, ಮೈತುಂಬಾ ಮುಳ್ಳು ತುಂಬಿರುವ ಬಿದಿರಿನ ಎಳೆಗಳು ಮೈಸೀಳುತ್ತಿವೆ. ನಾವು ತೊಟ್ಟ ಬಟ್ಟೆಗಳನ್ನು ಮುಳ್ಳಿನ ಹಾರ ಅಪ್ಪಿಕೊಂಡು ಅಲ್ಲಲ್ಲಿ ತೂತಾಗಿಸಿತ್ತು.

ಇವುಗಳ ಅಪ್ಪುಗೆಯನ್ನು ತಪ್ಪಿಸಿಕೊಂಡು ಮುಂದೆ ಸಾಗಿದ್ದೇವು.‌ ದೂರದಲ್ಲಿ ಒಂದು ಮನೆ ಕಾಣಿಸುತ್ತಿದೆ. ಮನೆ ಎದುರೆಲ್ಲಾ ಹಣ್ಣಡಿಕೆಗಳು ಹಾಸಿಕೊಂಡಿವೆ. ನೀರು ಬೇಕು ಎಂದು ಕೂಗಿದೆವು. ಒಳಗಿನಿಂದ ಒಬ್ಬ ಹೆಂಗಸು ಬಂದಳು. “ಏನು ಬಂದಿದ್ದು”? ಜಲಪಾತಕ್ಕಾ ಎಂದು ಕೇಳಿದಾಗ ಎಲ್ಲರೂ ಒಟ್ಟೊಟ್ಟಿಗೆ ಹೂಂ ಗುಟ್ಟೆವು. “ಹಾಗಾದರೆ ಈ ಕಲ್ಲುಪ್ಪಿನ ಕೋಲು ಹಿಡಿದುಕೊಳ್ಳಿ ದಾರಿಯಲ್ಲಿ ಉಪಯೋಗವಾಗುತ್ತದೆ” ಎಂದರು. ಅದನ್ನು ನಾನು ಮತ್ತು ನನ್ನ ಸ್ನೇಹತರಿಬ್ಬರು ಕೈಯಲ್ಲಿ ಹಿಡಿಕೊಂಡು ಮತ್ತೆ ನಡೆಯಲು ಪ್ರಾರಂಭಿಸಿದ್ದೇವೆ.

ಒಬ್ಬೊಬ್ಬರಿಗೆ ಸರಾಸರಿ ಐವತ್ತು ಇಂಬಳ ಹತ್ತಿ ರಕ್ತ ಹೀರಿದ್ದವು. ಮುಂದೆ ಸಾಗುವ ಹಾಗೂ ಇಲ್ಲ ಹಿಂದೆ ಬರುವ ಹಾಗೂ ಇಲ್ಲ ಅದು ಇಂದು ಅಮಾವಾಸ್ಯೆ ಮನೆಗೆ ತಲುಪುವುದು ಅನುಮಾನ ಎಂದು ಅಂದುಕೊಂಡಿದ್ದೇವು. ಹಿಂದಿರುಗಿ ಬರುವಾಗ  ದಾರಿ ತಪ್ಪುವುದಂತು ಖಚಿತಾಂತ ಗೊತ್ತಾಗಿದೆ. ದಾರಿಯಲ್ಲಿ ಸಿಕ್ಕ ಕೆಂಪು ಅಣಬೆಗಳನ್ನೇ ಗುರುತಾಗಿಸಿಕೊಳ್ಳೋಣ ನೆನಪಿಡಿ.‌ ಅಷ್ಟರಲ್ಲಿ ನೀರು ರಭಸವಾಗಿ ಬೀಳು ಸದ್ದು ಕೇಳುತ್ತಿದೆ. ನಿಮಗು ಕೇಳಿಸಿತಾ! ಹಾಗಾದರೆ ಏಕೆ ತಡ ಎಂದು ಕಾಲಿನ ವೇಗ ಹೆಚ್ಚಿಸಿ ಓಡಿ ಓಡಿ ಹೋಗುತ್ತಿದ್ದೇವೆ. ಆಹಾ ನೀರು ಕಂಡಿತು ಇದೇ ನಮ್ಮ ಜಲಪಾತ ಎಂದು ಖುಷಿಯಲ್ಲಿ ಹುಡುಗಿಯರೆಲ್ಲ ನೀರಿಗಿಳಿದೆವು. ಆದರೆ ರಾಮ, ಮತ್ತು ಹರಿ ಗೆ ಇನ್ನು ಚಂದದ ದೃಶ್ಯದ ಪೂರ್ವ ಕಲ್ಪನೆಯು ನೆನಪಾಗಿದೆ. ಇದಲ್ಲಾ ಬನ್ನಿ ಮುಂದೆ ಜಲಪಾತವಿದೆ ಎಂದಾಗ ಇಷ್ಟು ದೂರ ನಡೆದದ್ದೇ ಸಾಕು ಎಂಬ ಉದಾಸೀನ ನನಗೆ. ಆದರು ಅವರು ಹೇಳುವ ಮಾತು ಕೇಳಿ ಮತ್ತೆ ಎದ್ದು ಹೊರಟಿದ್ದೇವೆ.‌

ಏನೋ ಮಳೆ ಬಂದಂತ ಅನುಭವ ನೀರಿನ ತುಂತುರು ಮೈ ಸೋಕುತ್ತಿದೆ. ತಂಪು ತಂಪು ಗಾಳಿ ಅಲೆ ತಬ್ಬುತ್ತಿದೆ. ಕಣ್ ಅರಳಿಸಿ ಬೆರಗಿನಿಂದ ನೋಡುತ್ತಿದ್ದೇವೆ. ಎಷ್ಟೆತ್ತರ ನೋಡಿದರೂ ಬೀಳುವ ನೀರಿನ ಮೂಲ ಸ್ಥಾನ ಕಾಣುತ್ತಿಲ್ಲ. ಪೂರ್ತಿ ತಲೆ ಎತ್ತಿ ನೋಡಿದರೆ ಮೈಮೇಲೆ ನೀರು ಹಾರಿ ಬರುತ್ತಿದ್ದ ಅನುಭವವಾಗುತ್ತಿದೆ. ಕಲ್ಲು ಗೋಡೆಯ ಮಧ್ಯದಿಂದ ನೀರು ಮೆಟ್ಟಿಲಿಳಿಯುತ್ತಿದೆ. ಇಷ್ಟರ ‌ನಡುವೆ ನಾವೆಲ್ಲಾ ಒಮ್ಮೆ ಮೂಖರಾಗಿ ಪೃಕ್ರತಿ ಸೌಂದರ್ಯ ಸವಿದೆವು. ಮತ್ತದೇ ಕೆಂಪು ಅಣಬೆಗಳ ಜಾಡು ಹಿಡಿದು ನಮ್ಮ ಗೂಡು ಸೇರಿದೆವು…ಬೆಳ್ತಂಗಡಿಯ ಬೊಳ್ಳೆ ಜಲಪಾತದ ಪಯಣದ ಅನುಭವ…ಅಂದ ಹಾಗೆ ನೀವೇನಾದರೂ ಈ ಜಲಪಾತಕ್ಕೆ ಹೋಗುವ ಮನಸ್ಸು ಮಾಡಿದ್ರೆ..ಮೊದಲು ಪರವಾನಿಗೆ ಅಗತ್ಯ ಎಂಬುದನ್ನು ನೆನಪಿಟ್ಟುಕೊಳ್ಳಿ.

ಸುಮಾ.ಕಂಚೀಪಾಲ್

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ, ಉಜಿರೆ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.