ಇಲ್ಲಿದೆ ಪುರಾತನ ಶಿವ ದೇವಾಲಯ: 12 ವರ್ಷಕೊಮ್ಮೆ ಇಲ್ಲಿನ ಶಿವಲಿಂಗಕ್ಕೆ ಸಿಡಿಲು ಬಡಿಯುತ್ತೆ!

2460 ಅಡಿ ಎತ್ತರದಲ್ಲಿ ನೆಲೆಸಿದ್ದಾನೆ 'ಬಿಜಿಲಿ ಮಹಾದೇವ'

ಸುಧೀರ್, Sep 24, 2022, 5:40 PM IST

Webexclusive

ಹಿಮಾಚಲ ಪ್ರದೇಶ ಎಂದ ಕೂಡಲೇ ನಮ್ಮ ಕಣ್ಣ ಮುಂದೆ ಬರುವುದು ಹಿಮದಿಂದ ಆವೃತವಾಗಿರುವ ಅಲ್ಲಿನ ಗುಡ್ಡಗಾಡು ಪ್ರದೇಶಗಳು… ತಣ್ಣನೆಯ ವಾತಾವರಣ.. ಅಲ್ಲಿನ ಜನರ ಜೀವನ ಕ್ರಮ ಹೀಗೆ ಹಲವು… ಆದರೆ ಇಲ್ಲಿ ಅದನ್ನೆಲ್ಲಾ ಮೀರಿದ ಒಂದು ಸಂಗತಿ ಇದೆ, ಅದು ಇಲ್ಲಿನ ಬೆಟ್ಟದ ಮೇಲಿರುವ ಪುರಾತನ ಶಿವ ದೇವಾಲಯ, ಇದನ್ನು ‘ಬಿಜಿಲಿ ಮಹದೇವ್’ ದೇವಸ್ಥಾನವೆಂದೂ ಕರೆಯುತ್ತಾರೆ. ಅರೆ ಇದೇನಿದು ಬಿಜಿಲಿ ಮಹಾದೇವ ದೇವಸ್ಥಾನ, ಏನಿದರ ವಿಶೇಷತೆ, ಈ ಹೆಸರು ಬಂದಿದ್ದಾದರೂ ಯಾಕಾಗಿ ಈ ಎಲ್ಲಾ ವಿಚಾರಗಳನ್ನು ತಿಳಿದುಕೊಳ್ಳೋಣ…

ಹಿಮಾಚಲ ಪ್ರದೇಶದ ಕುಲು ಎಂಬ ಸುಂದರ ಪ್ರದೇಶದಲ್ಲಿ ಸುಮಾರು 2,460 ಅಡಿ ಎತ್ತರದಲ್ಲಿ ಈ ನಿಗೂಢ ಶಿವನ ದೇವಾಲಯವಿದೆ, ಈ ದೇವಸ್ಥಾನದಲ್ಲಿ ಕೆಲವೊಂದು ಪವಾಡಗಳು ನಡೆಯುತ್ತವೆಯಂತೆ ಅಲ್ಲದೆ ಈ ದೇವಸ್ಥಾನದಲ್ಲಿ ದೊಡ್ಡ ಶಿವನ ಲಿಂಗವಿದೆ ಆ ಲಿಂಗಕ್ಕೆ ಪ್ರತಿ ಹನ್ನೆರಡು ವರ್ಷಕೊಮ್ಮೆ ಮಳೆ ಬರುವ ಸಂದರ್ಭದಲ್ಲಿ ಸಿಡಿಲು ಬಯುತ್ತಂತೆ, ಸಿಡಿಲಿನ ಹೊಡೆತಕ್ಕೆ ಶಿವಲಿಂಗವೇ ತುಂಡಾಗುತ್ತದೆಯಂತೆ ಆದರೆ ಈ ದೇವಸ್ಥಾನದ ಅರ್ಚಕರು ಲಿಂಗದ ತುಂಡುಗಳನ್ನು ಬೆಳೆ ಕಾಳು ಮತ್ತು ಬೆಣ್ಣೆ ಸೇರಿಸಿ ಮತ್ತೆ ತುಂಡಾದ ಲಿಂಗವನ್ನು ಜೋಡಿಸುತ್ತಾರಂತೆ ಇದು ನಡೆದು ಒಂದೆರಡು ತಿಂಗಳಲ್ಲಿ ಶಿವಲಿಂಗ ಮತ್ತೆ ಮೊದಲಿನ ರೂಪವೇ ಪಡೆಯುತ್ತದೆಯಂತೆ ಎಂದು ಇಲ್ಲಿನ ಭಕ್ತರು ಹಾಗೂ ಊರಿನ ಜನರು ಹೇಳಿಕೊಂಡಿದ್ದಾರೆ.

ಹೀಗೆ ಆಗುತ್ತೆ ಎಂದರೆ ನೀವು ನಾವು ನಂಬಲು ಸಾಧ್ಯವಿಲ್ಲ ಆದರೆ ಇದು ನಂಬಲೇಬೇಕೆನ್ನುತ್ತದೆ ಇಲ್ಲಿ ಅಳವಡಿಸಿದ ಕ್ಯಾಮೆರಾ, ಈ ಕ್ಯಾಮೆರಾದಲ್ಲಿ ಇಲ್ಲಿನ ಘಟನಾವಳಿಗಳು ಸ್ಪಷ್ಟವಾಗಿ ಗೋಚರಿಸುತ್ತವೆಯಂತೆ. ಆದರೆ ಇಲ್ಲಿ ನಡೆಯುತ್ತಿರುವ ನಿಗೂಢತೆ ಮಾತ್ರ ಇಂದಿಗೂ  ಊರಿನವರಿಗೂ ಬಗೆಹರಿದಿಲ್ಲ.

ಇಲ್ಲಿ ಗಮನಿಸಬೇಕಾದ ಮತ್ತೊಂದು ವಿಚಾರ ಏನೆಂದರೆ ಸಿಡಿಲು ಬಡಿದ ವೇಳೆ ಇಲ್ಲಿನ ಶಿವಲಿಂಗಕ್ಕೆ ಮಾತ್ರ ಹಾನಿಯಾಗುತ್ತದೆ ಬಿಟ್ಟರೆ ದೇವಾಲಯದ ಕಟ್ಟಡ ಹಾಗೂ ಸುತ್ತ ಮುತ್ತ ಯಾವುದೇ ವಸ್ತುಗಳಿಗೂ ಹಾನಿಯಾಗುವುದಿಲ್ಲ. ಇದರ ಹಿಂದಿನ ರಹಸ್ಯವನ್ನು ಜನರು ಇಲ್ಲಿಯವರೆಗೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಇಲ್ಲಿ ದೇವಸ್ಥಾನದ ಕುರಿತು ನೀಡಿರುವ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಜಾನಪದ ನಂಬಿಕೆಗಳನ್ನು ಆಧರಿಸಿದೆ, ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳು ಇದುವರೆಗೂ ಸಿಕ್ಕಿಲ್ಲ.

ಸ್ಥಳ ಪುರಾಣ :
ಕುಲಂತ್ ಎಂಬ ದೈತ್ಯ ರಾಕ್ಷಸ ಈ ಪ್ರದೇಶದಲ್ಲಿ ವಾಸಿಸುತ್ತಿದ್ದನೆಂದು ಪುರಾಣಗಳು ಹೇಳುತ್ತವೆ. ಒಮ್ಮೆ ಆತ ಇಲ್ಲಿನ ಎಲ್ಲಾ ಜೀವಿಗಳನ್ನು ಕೊಲ್ಲುವ ಉದ್ದೇಶದಿಂದ ಇಲ್ಲಿ ಹರಿಯುವ ವ್ಯಾಸ ನದಿಯ ನೀರನ್ನೇ ಆವಿ ಮಾಡಿದ್ದನಂತೆ ಇದರಿಂದ ಕೋಪಗೊಂಡ ಮಹಾದೇವ ತನ್ನ ತ್ರಿಶೂಲದಿಂದ ರಾಕ್ಷಸನ ತಲೆಗೆ ಹೊಡೆದಿದ್ದನಂತೆ ಈ ವೇಳೆ ನೆಲಕ್ಕೆ ಬಿದ್ದ ರಾಕ್ಷಸನ ದೇಹ ಪರ್ವತವಾಗಿ ಮಾರ್ಪಟ್ಟಿದೆಯಂತೆ ರಾಕ್ಷಸನ ಸಂಹಾರದ ಬಳಿಕ ಭಗವಾನ್ ಶಿವನು ಇಂದ್ರ ದೇವನಿಗೆ ಪ್ರತಿ 12 ವರ್ಷಗಳಿಗೊಮ್ಮೆ ರಾಕ್ಷಸ-ಸದೃಶ ಪರ್ವತದ ಮೇಲೆ ಮಿಂಚು ಹರಿಸಲು ಆದೇಶಿಸಿದ್ದನಂತೆ ಅದರಂತೆ ಅಂದಿನಿಂದ ಇಂದಿನವರೆಗೆ ಪ್ರತಿ 12 ವರ್ಷಗಳಿಗೊಮ್ಮೆ ಈ ಅದ್ಭುತಗಳು ನಡೆಯುತ್ತವೆ ಎಂದು ಹೇಳಲಾಗಿದೆ.

ಜನರಿಗೆ ಯಾವುದೇ ಅಪಾಯವಿಲ್ಲ :

ಅಚ್ಚರಿಯೆಂದರೆ, ಪ್ರತಿ 12 ವರ್ಷಗಳಿಗೊಮ್ಮೆ ಇಲ್ಲಿರುವ ಶಿವಲಿಂಗವು ಸಿಡಿಲಿನ ಹೊಡೆತಕ್ಕೆ ಸಿಲುಕಿ ಹಾನಿಯಾಗುತ್ತದೆ ಆದರೆ ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ ಮಾತ್ರ ಇದುವರೆಗೂ ಯಾವುದೇ ಹಾನಿಯಾಗಿಲ್ಲ ತಮಗೆ ಬಂದ ಅಪಾಯವನ್ನೆಲ್ಲಾ ಶಿವನೇ ತಡೆಯುತ್ತಾನೆ ಎಂಬುದು ಇಲ್ಲಿನ ಜನರ ನಂಬಿಕೆ.

ದೇವಸ್ಥಾನಕ್ಕೆ ಹೋಗುವುದು ಹೇಗೆ?
ಶಿವ ದೇವಾಲಯ ಕುಲುವಿನಿಂದ ಸುಮಾರು 20 ಕಿಮೀ ದೂರದಲ್ಲಿದ್ದು, 3 ಕಿಮೀ ಟ್ರಕ್ಕಿಂಗ್ ಮೂಲಕ ದೇವಸ್ಥಾನವನ್ನು ತಲುಪಬಹುದಾಗಿದೆ. ಟ್ರಕ್ಕಿಂಗ್ ಹೋಗುವವರಿಗೆ ಈ ಸ್ಥಳ ತುಂಬಾ ಖುಷಿ ಕೊಡುತ್ತದೆ. ನದಿ, ಕಣಿವೆಗಳು ಹೆಚ್ಚು ಆನಂದಿಸುವವರಿಗೆ ಈ ಸ್ಥಳವು ಉತ್ತಮವಾಗಿದೆ.

ಪವಿತ್ರ ಬಿಜಿಲಿ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಲು ಮಾರ್ಚ್ ನಿಂದ ಸೆಪ್ಟೆಂಬರ್ ಸೂಕ್ತ ಸಮಯ. ಹವಾಮಾನ ಉತ್ತಮವಾಗಿರುವ ಕಾರಣವೊಂದಾದರೆ, ಮಹಾಶಿವರಾತ್ರಿಯ ಕಾಲವಾಗಿರುವುದರಿಂದ ದೇವಸ್ಥಾನಕ್ಕೆ ಹೆಚ್ಚಿನ ಪ್ರವಾಸಿಗಳು, ಭಕ್ತರು ಬರುತ್ತಾರೆ, ಅಲ್ಲದೆ ಚಳಿಗಾಲದಲ್ಲಿ ಇಲ್ಲಿಗೆ ಭೇಟಿ ನೀಡಿದರೆ ಎಲ್ಲಾ ಪ್ರದೇಶ ಹಿಮದಿಂದ ಆವೃತವಾಗಿರುತ್ತವೆ ಜೊತೆಗೆ ಮಳೆಯೂ ಜೋರಾಗಿರುವುದರಿಂದ ಪ್ರವಾಸಿಗರಿಗೆ ತೊಂದರೆಯಾಗುವುದು ಸಾಮಾನ್ಯ. ಸಾಧ್ಯವಾದರೆ ನೀವೂ ಒಮ್ಮೆ ಭೇಟಿ ನೀಡಿ…

– ಸುಧೀರ್ ಆಚಾರ್ಯ

 

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.