ಗುಜರಾತ್: ರೂಪಾನಿ ರಾಜೀನಾಮೆ ಹಿಂದೆ ಹೈಕಮಾಂಡ್ ಲೆಕ್ಕಾಚಾರವೇನು? ಮೋದಿ ಹೆಸರಲ್ಲಿ ಮತಯಾಚನೆ

ಹಾಲಿ ಸಂಪುಟದಲ್ಲಿರುವ ಕೆಲವು ಸಚಿವರುಗಳಿಗೂ ಕೊಖ್ ನೀಡಿ, ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

Team Udayavani, Sep 11, 2021, 4:38 PM IST

ಗುಜರಾತ್: ರೂಪಾನಿ ರಾಜೀನಾಮೆ ಹಿಂದೆ ಹೈಕಮಾಂಡ್ ಲೆಕ್ಕಾಚಾರವೇನು? ಮೋದಿ ಹೆಸರಲ್ಲಿ ಮತಯಾಚನೆ

ಗುಜರಾತ್ ವಿಧಾನಸಭಾ ಚುನಾವಣೆಗೆ 15 ತಿಂಗಳು ಬಾಕಿ ಇರುವಾಗಲೇ ವಿಜಯ್ ರೂಪಾನಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಶನಿವಾರ (ಸೆಪ್ಟೆಂಬರ್ 11) ದಿಢೀರ್ ಅಂತ ರಾಜೀನಾಮೆ ನೀಡಿದ್ದಾರೆ. ಏತನ್ಮಧ್ಯೆ ಗುಜರಾತ್ ನಲ್ಲಿನ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ವಿವಿಧ ಲೆಕ್ಕಾಚಾರದ ಊಹಾಪೋಹ ಹರಿದಾಡುತ್ತಿದೆ.

ಈಗಾಗಲೇ ಕರ್ನಾಟಕದಲ್ಲಿಯೂ ಮುಂಬರುವ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಕಳೆದ ಜುಲೈ ತಿಂಗಳಿನಲ್ಲಿ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿದ್ದರು. ನಂತರ ಬಸವರಾಜ್ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಇದೀಗ ಗುಜರಾತ್ ನಲ್ಲಿಯೂ ಮುಂಬರುವ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಬಿಜೆಪಿ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ.

ಭಾರತೀಯ ಜನತಾ ಪಕ್ಷದಲ್ಲಿ ಬದಲಾವಣೆ ಸಹಜ ಎಂದು ರೂಪಾನಿ ಅವರು ಅಭಿಪ್ರಾಯವ್ಯಕ್ತಪಡಿಸಿದ್ದು. ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತ ಯಾಚಿಸುವುದಾಗಿ ತಿಳಿಸಿದ್ದಾರೆ.

ಇಂದು ರಾತ್ರಿ ಶಾಸಕಾಂಗ ಪಕ್ಷದ ಸಭೆ:

ಇಂದು ರಾತ್ರಿಯೇ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಎಲ್ಲಾ ಶಾಸಕರಿಗೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆಯಂತೆ. ಅಷ್ಟೇ ಅಲ್ಲ ಹಾಲಿ ಸಂಪುಟದಲ್ಲಿರುವ ಕೆಲವು ಸಚಿವರುಗಳಿಗೂ ಕೊಖ್ ನೀಡಿ, ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಬಹುಸಂಖ್ಯಾತ ಪಾಟೀದಾರ್ ಸಮುದಾಯದ ಮೇಲೆ ಬಿಜೆಪಿ ಕಣ್ಣು:

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ 112 ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸ್ 65 ಸ್ಥಾನ, ಭಾರತೀಯ ಬುಡಕಟ್ಟು ಪಕ್ಷ 02, ಎಸ್ ಸಿಪಿ 01 ಹಾಗೂ ಪಕ್ಷೇತರ 01 ಸ್ಥಾನ ಇದೆ. ಮುಂಬರುವ ಚುನಾವಣೆಯನ್ನು ಎದುರಿಸಲು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ರಣತಂತ್ರ ರೂಪಿಸುತ್ತಿದೆ. ಈಗಾಗಲೇ ಕರ್ನಾಟಕ, ಉತ್ತರಾಖಂಡ್ ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದಾರೆ.

ರಾಜ್ಯದಲ್ಲಿರುವ ಪಾಟೀದಾರ್ ಸಮುದಾಯದ ಮೇಲೆ ಭಾರತೀಯ ಜನತಾ ಪಕ್ಷ ಒಂದು ಕಣ್ಣಿಟ್ಟಿದ್ದು, ಅದೇ ಸಮುದಯದ ವ್ಯಕ್ತಿಗೆ ಮುಖ್ಯಮಂತ್ರ ಹುದ್ದೆಗೆ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡುವ ಸಾಧ್ಯತೆ ಇದೆ.. ಸಿಎಂ ರೇಸ್ ನಲ್ಲಿ ಸದ್ಯದ ಮಾಹಿತಿ ಪ್ರಕಾರ, ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್, ಮಸ್ಸುಖ್ ಮಾಂಡವೀಯಾ ಹೆಸರು ಮುಂಚೂಣಿಯಲ್ಲಿದೆ. ಇಬ್ಬರೂ ಪಾಟೀದಾರ್ ಸಮುದಾಯಕ್ಕೆ ಸೇರಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತೊಂದು ವರದಿಯ ಪ್ರಕಾರ, ಬಿಜೆಪಿಯ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್, ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೆಸರು ಕೂಡಾ ಮುಖ್ಯಮಂತ್ರಿ ಹುದ್ದೆಯ ಪಟ್ಟಿಯಲ್ಲಿದೆ ಎಂದು ತಿಳಿಸಿದೆ. ಮೂಲಗಳ ಪ್ರಕಾರ, ಮುಂದಿನ ಚುನಾವಣೆ ವಿಜಯ್ ರೂಪಾನಿ ಅವರ ನಾಯಕತ್ವದಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ.

ಕಳೆದ ಬಾರಿಯ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷದ ಕೈ ಹಿಡಿದದ್ದು ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ. ಗುಜರಾತ್ ನಲ್ಲಿ ಭಾರತೀಯ ಜನತಾ ಪಕ್ಷ ಸುಮಾರು ಎರಡು ದಶಕಗಳ ಕಾಲ ಅಧಿಕಾರದ ಗದ್ದುಗೆಯಲ್ಲಿದ್ದರೂ ಕೂಡಾ ವಿಜಯ್ ರೂಪಾನಿ ಹೆಚ್ಚು ಜನಪ್ರಿಯತೆ ಗಳಿಸಿಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಹಾಲಿ ಶಾಸಕರಿಗೂ ಕೂಡಾ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಲಿದೆ ಎಂದು ಮೂಲಗಳು ಹೇಳಿವೆ.

ಗುಜರಾತ್ ನಲ್ಲಿ ಭಾರತೀಯ ಜನತಾ ಪಕ್ಷದ ಸ್ಥಿತಿಗತಿ ಕುರಿತು ಬಿಜೆಪಿ ಹಿರಿಯ ಮುಖಂಡ, ಗುಜರಾತ್ ನ ಉಸ್ತುವಾರಿ ಹೊಣೆ ಹೊತ್ತಿರುವ ಭೂಪೇಂದ್ರ ಯಾದವ್ ಹಾಗೂ ಪಕ್ಷದ ಪ್ರಧಾನ (ಸಂಘಟನಾ) ಕಾರ್ಯದರ್ಶಿ ಬಿಎಲ್ ಸಂತೋಷ್ ವಿಶ್ಲೇಷಿಸುತ್ತಿದ್ದಾರೆನ್ನಲಾಗಿದೆ. ರಾಜ್ಯದಲ್ಲಿ ಪಾಟಿದಾರ್ ಸಮುದಾಯ ದೊಡ್ಡ ಸಂಖ್ಯೆಯಲ್ಲಿದ್ದು, ರೂಪಾನಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುವುದು ಹೈಕಮಾಂಡ್ ಗೆ ಒಲವಿಲ್ಲ. ಗುಜರಾತ್ ನಗರ ಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿಲ್ಲ ಎಂಬ ಆರೋಪ ರೂಪಾನಿ ಅವರ ಮೇಲಿದೆ. ಪ್ರಧಾನಿ ಮೋದಿ ಅವರ ಆಪ್ತ ವಲಯದಲ್ಲಿರುವ ಸಿಆರ್ ಪಾಟೀಲ್ ಅವರನ್ನು ಕಳೆದ ವರ್ಷ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಹೊಸ ನಾಯಕತ್ವದ ಮೂಲಕ ಮುಂಬರುವ 15 ತಿಂಗಳ ಕಾಲದಲ್ಲಿ ಚುನಾವಣೆಯನ್ನು ಎದುರಿಸುವ ಲೆಕ್ಕಾಚಾರ ಬಿಜೆಪಿ ಹೈಕಮಾಂಡ್ ನದ್ದಾಗಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.