ಗುಜರಾತ್: ರೂಪಾನಿ ರಾಜೀನಾಮೆ ಹಿಂದೆ ಹೈಕಮಾಂಡ್ ಲೆಕ್ಕಾಚಾರವೇನು? ಮೋದಿ ಹೆಸರಲ್ಲಿ ಮತಯಾಚನೆ

ಹಾಲಿ ಸಂಪುಟದಲ್ಲಿರುವ ಕೆಲವು ಸಚಿವರುಗಳಿಗೂ ಕೊಖ್ ನೀಡಿ, ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

Team Udayavani, Sep 11, 2021, 4:38 PM IST

ಗುಜರಾತ್: ರೂಪಾನಿ ರಾಜೀನಾಮೆ ಹಿಂದೆ ಹೈಕಮಾಂಡ್ ಲೆಕ್ಕಾಚಾರವೇನು? ಮೋದಿ ಹೆಸರಲ್ಲಿ ಮತಯಾಚನೆ

ಗುಜರಾತ್ ವಿಧಾನಸಭಾ ಚುನಾವಣೆಗೆ 15 ತಿಂಗಳು ಬಾಕಿ ಇರುವಾಗಲೇ ವಿಜಯ್ ರೂಪಾನಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಶನಿವಾರ (ಸೆಪ್ಟೆಂಬರ್ 11) ದಿಢೀರ್ ಅಂತ ರಾಜೀನಾಮೆ ನೀಡಿದ್ದಾರೆ. ಏತನ್ಮಧ್ಯೆ ಗುಜರಾತ್ ನಲ್ಲಿನ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ವಿವಿಧ ಲೆಕ್ಕಾಚಾರದ ಊಹಾಪೋಹ ಹರಿದಾಡುತ್ತಿದೆ.

ಈಗಾಗಲೇ ಕರ್ನಾಟಕದಲ್ಲಿಯೂ ಮುಂಬರುವ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಕಳೆದ ಜುಲೈ ತಿಂಗಳಿನಲ್ಲಿ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿದ್ದರು. ನಂತರ ಬಸವರಾಜ್ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಇದೀಗ ಗುಜರಾತ್ ನಲ್ಲಿಯೂ ಮುಂಬರುವ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಬಿಜೆಪಿ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ.

ಭಾರತೀಯ ಜನತಾ ಪಕ್ಷದಲ್ಲಿ ಬದಲಾವಣೆ ಸಹಜ ಎಂದು ರೂಪಾನಿ ಅವರು ಅಭಿಪ್ರಾಯವ್ಯಕ್ತಪಡಿಸಿದ್ದು. ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತ ಯಾಚಿಸುವುದಾಗಿ ತಿಳಿಸಿದ್ದಾರೆ.

ಇಂದು ರಾತ್ರಿ ಶಾಸಕಾಂಗ ಪಕ್ಷದ ಸಭೆ:

ಇಂದು ರಾತ್ರಿಯೇ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಎಲ್ಲಾ ಶಾಸಕರಿಗೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆಯಂತೆ. ಅಷ್ಟೇ ಅಲ್ಲ ಹಾಲಿ ಸಂಪುಟದಲ್ಲಿರುವ ಕೆಲವು ಸಚಿವರುಗಳಿಗೂ ಕೊಖ್ ನೀಡಿ, ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಬಹುಸಂಖ್ಯಾತ ಪಾಟೀದಾರ್ ಸಮುದಾಯದ ಮೇಲೆ ಬಿಜೆಪಿ ಕಣ್ಣು:

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ 112 ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸ್ 65 ಸ್ಥಾನ, ಭಾರತೀಯ ಬುಡಕಟ್ಟು ಪಕ್ಷ 02, ಎಸ್ ಸಿಪಿ 01 ಹಾಗೂ ಪಕ್ಷೇತರ 01 ಸ್ಥಾನ ಇದೆ. ಮುಂಬರುವ ಚುನಾವಣೆಯನ್ನು ಎದುರಿಸಲು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ರಣತಂತ್ರ ರೂಪಿಸುತ್ತಿದೆ. ಈಗಾಗಲೇ ಕರ್ನಾಟಕ, ಉತ್ತರಾಖಂಡ್ ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದಾರೆ.

ರಾಜ್ಯದಲ್ಲಿರುವ ಪಾಟೀದಾರ್ ಸಮುದಾಯದ ಮೇಲೆ ಭಾರತೀಯ ಜನತಾ ಪಕ್ಷ ಒಂದು ಕಣ್ಣಿಟ್ಟಿದ್ದು, ಅದೇ ಸಮುದಯದ ವ್ಯಕ್ತಿಗೆ ಮುಖ್ಯಮಂತ್ರ ಹುದ್ದೆಗೆ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡುವ ಸಾಧ್ಯತೆ ಇದೆ.. ಸಿಎಂ ರೇಸ್ ನಲ್ಲಿ ಸದ್ಯದ ಮಾಹಿತಿ ಪ್ರಕಾರ, ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್, ಮಸ್ಸುಖ್ ಮಾಂಡವೀಯಾ ಹೆಸರು ಮುಂಚೂಣಿಯಲ್ಲಿದೆ. ಇಬ್ಬರೂ ಪಾಟೀದಾರ್ ಸಮುದಾಯಕ್ಕೆ ಸೇರಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತೊಂದು ವರದಿಯ ಪ್ರಕಾರ, ಬಿಜೆಪಿಯ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್, ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೆಸರು ಕೂಡಾ ಮುಖ್ಯಮಂತ್ರಿ ಹುದ್ದೆಯ ಪಟ್ಟಿಯಲ್ಲಿದೆ ಎಂದು ತಿಳಿಸಿದೆ. ಮೂಲಗಳ ಪ್ರಕಾರ, ಮುಂದಿನ ಚುನಾವಣೆ ವಿಜಯ್ ರೂಪಾನಿ ಅವರ ನಾಯಕತ್ವದಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ.

ಕಳೆದ ಬಾರಿಯ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷದ ಕೈ ಹಿಡಿದದ್ದು ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ. ಗುಜರಾತ್ ನಲ್ಲಿ ಭಾರತೀಯ ಜನತಾ ಪಕ್ಷ ಸುಮಾರು ಎರಡು ದಶಕಗಳ ಕಾಲ ಅಧಿಕಾರದ ಗದ್ದುಗೆಯಲ್ಲಿದ್ದರೂ ಕೂಡಾ ವಿಜಯ್ ರೂಪಾನಿ ಹೆಚ್ಚು ಜನಪ್ರಿಯತೆ ಗಳಿಸಿಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಹಾಲಿ ಶಾಸಕರಿಗೂ ಕೂಡಾ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಲಿದೆ ಎಂದು ಮೂಲಗಳು ಹೇಳಿವೆ.

ಗುಜರಾತ್ ನಲ್ಲಿ ಭಾರತೀಯ ಜನತಾ ಪಕ್ಷದ ಸ್ಥಿತಿಗತಿ ಕುರಿತು ಬಿಜೆಪಿ ಹಿರಿಯ ಮುಖಂಡ, ಗುಜರಾತ್ ನ ಉಸ್ತುವಾರಿ ಹೊಣೆ ಹೊತ್ತಿರುವ ಭೂಪೇಂದ್ರ ಯಾದವ್ ಹಾಗೂ ಪಕ್ಷದ ಪ್ರಧಾನ (ಸಂಘಟನಾ) ಕಾರ್ಯದರ್ಶಿ ಬಿಎಲ್ ಸಂತೋಷ್ ವಿಶ್ಲೇಷಿಸುತ್ತಿದ್ದಾರೆನ್ನಲಾಗಿದೆ. ರಾಜ್ಯದಲ್ಲಿ ಪಾಟಿದಾರ್ ಸಮುದಾಯ ದೊಡ್ಡ ಸಂಖ್ಯೆಯಲ್ಲಿದ್ದು, ರೂಪಾನಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುವುದು ಹೈಕಮಾಂಡ್ ಗೆ ಒಲವಿಲ್ಲ. ಗುಜರಾತ್ ನಗರ ಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿಲ್ಲ ಎಂಬ ಆರೋಪ ರೂಪಾನಿ ಅವರ ಮೇಲಿದೆ. ಪ್ರಧಾನಿ ಮೋದಿ ಅವರ ಆಪ್ತ ವಲಯದಲ್ಲಿರುವ ಸಿಆರ್ ಪಾಟೀಲ್ ಅವರನ್ನು ಕಳೆದ ವರ್ಷ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಹೊಸ ನಾಯಕತ್ವದ ಮೂಲಕ ಮುಂಬರುವ 15 ತಿಂಗಳ ಕಾಲದಲ್ಲಿ ಚುನಾವಣೆಯನ್ನು ಎದುರಿಸುವ ಲೆಕ್ಕಾಚಾರ ಬಿಜೆಪಿ ಹೈಕಮಾಂಡ್ ನದ್ದಾಗಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.