ಸದಾ ಒಂದೇ ಮಾಸ್ಕ್ ಬಳಸಿದ್ರೆ ಬರುತ್ತಂತೆ ಬ್ಲಾಕ್ ಫಂಗಸ್ : ತಜ್ಞರು ಹೇಳುವುದೇನು ಗೊತ್ತಾ?


Team Udayavani, Jun 1, 2021, 3:16 PM IST

cvbvcdffcdfvcdsd

ಸದ್ಯ ಕೋವಿಡ್ ಸೋಂಕು ಎಲ್ಲೆ ಮೀರಿ ಹರಡುತ್ತಿದೆ. ಈ ನಡುವೆ ಜನರಿಗೆ ಮತ್ತೊಂದು ಆತಂಕ ಶುರುವಾಗಿದೆ. ಅದೇನೆಂದರೆ ಬ್ಲಾಕ್ ಫಂಗಸ್. ಈ ಸೋಂಕಿನಿಂದಲೂ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ  ಕೋವಿಡ್ ತಡೆಯಲು ಬಳಸುವ ಮಾಸ್ಕ್ ನಿಂದಲೇ ಬ್ಲಾಕ್ ಫಂಗಸ್ ಹರುಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.  ಎರಡರಿಂದ ಮೂರು ವಾರಗಳ ಕಾಲ ಒಂದೇ ಮಾಸ್ಕ್ ಅನ್ನು ನಿರಂತರವಾಗಿ ಧರಿಸಿದರೆ ‘ಬ್ಲ್ಯಾಕ್ ಫಂಗಸ್’  ತಗುಲುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಭಯಂಕರ ಕೋವಿಡ್  ಜೋರಾಗಿರುವಂತೆಯೇ ಬ್ಲಾಕ್ ಫಂಗಸ್ ಸೋಂಕಿನ ಭೀತಿ ಕೂಡ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಇದರ ನಡುವೆಯೇ ಈ ಬ್ಲಾಕ್ ಫಂಗಸ್ ನ ಮೂಲಗಳ ಕುರಿತು ಒಂದೊಂದೇ ಸ್ಫೋಟಕ ಮಾಹಿತಿಗಳನ್ನು ತಜ್ಞರು ನೀಡುತ್ತಿದ್ದು, ಇದೀಗ ಒಂದೇ ಮಾಸ್ಕ್ ಅನ್ನು ಸತತವಾಗಿ ಬಳಕೆ ಮಾಡುವುದರಿಂದಲೂ ಬ್ಲಾಕ್ ಫಂಗಸ್ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇದೀಗ ಕೋವಿಡ್ ನಡುವೆ ಬ್ಲಾಕ್ ಫಂಗಸ್ ಎಂಬ ಮತ್ತೊಂದು ಮಹಾಮಾರಿ ಜನರನ್ನು ಬೆಚ್ಚಿ ಬೀಳಿಸಿದೆ. ಕೋವಿಡ್ ಸೋಂಕಿನಿಂದ ಗುಣಮುಖರಾದವರಲ್ಲಿ ಹೆಚ್ಚಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೀಡು ಮಾಡಿದೆ. ಈ ಬಗ್ಗೆ ಏಮ್ಸ್​​​ನ ನ್ಯೂರೋ ಸರ್ಜನ್​​​ ವೈದ್ಯ ಡಾ. ಸರತ್​​​ ಚಂದ್ರ, ಸತತ 2ರಿಂದ 3 ವಾರಗಳ ಕಾಲ ಒಂದೇ ಮಾಸ್ಕನ್ನು ಧರಿಸುವುದರಿಂದಲೂ ಬ್ಲ್ಯಾಕ್​​ ಫಂಗಸ್​​ ಬರುತ್ತದೆ ಎಂದು ಹೇಳಿದ್ದಾರೆ.

ಕೆಲವರು ಮಾಸ್ಕ್ ಸ್ವಚ್ಚಗೊಳಿಸದೇ ಅದನ್ನೇ ನಿರಂತರವಾಗಿ ಬಳಕೆ ಮಾಡುತ್ತಾರೆ.  ಸತತವಾಗಿ ಒಂದೇ ಮಾಸ್ಕ್​​ ಧರಿಸುವುದರಿಂದ ಫಂಗಸ್​​ ಸುಲಭವಾಗಿ ಬೆಳೆಯುತ್ತದೆ. ಆದ್ದರಿಂದ ಸೋಂಕಿತರಲ್ಲಿ ಬ್ಲ್ಯಾಕ್​ ಫಂಗಸ್​ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದಲ್ಲದೆ ಅನಿಯಂತ್ರಿತ ಮಧುಮೇಹ, ಅತಿಯಾದ ಸ್ಟಿರಾಯಿಡ್​​ ಬಳಕೆ, ಮೆಡಿಕಲ್​ ಆಕ್ಸಿಜನ್​​ ಪಡೆದವರು ಸೋಂಕಿತರಾದ 6 ತಿಂಗಳುಗಳ ಒಳಗೆ ಬ್ಲ್ಯಾಕ್​​ ಫಂಗಸ್​ಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿರುವ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯ ಇಎನ್ ಟಿ ವೈದ್ಯ ಡಾ. ಸುರೇಶ್ ನಾರುಕಾ ಅವರು, ಬ್ಲಾಕ್ ಫಂಗಸ್ ಗೆ ಮೊದಲ ಕಾರಣ ಅವೈಜ್ಞಾನಿಕವಾಗಿ ವೈದ್ಯರ ಸಲಹೆ ಇಲ್ಲದೇ ಸ್ಟಿರಾಯ್ಡ್ ಗಳನ್ನು ತೆಗೆದುಕೊಳ್ಳುವುದು. 2ನೇಯದು ಶುಚಿತ್ವವಿಲ್ಲದ ಜೀವನ. ಅಂದರೆ ಮಾಸ್ಕ್ ಗಳನ್ನು ಸುದೀರ್ಘವಾಗಿ ಸ್ವಚ್ಥಗೊಳಿಸದೇ ಮಾಸ್ಕ್ ಗಳನ್ನು ಧರಿಸುವುದು. ಗಾಳಿ ಬೆಳಕು ಇಲ್ಲದೇ ಇರುವ ರೂಮ್ ಅಥವಾ ಜಾಗಗಳಲ್ಲಿ ಸುಧೀರ್ಘವಾಗಿ ಇರುವುದು ಇದೂ ಕೂಡ ಬ್ಲಾಕ್ ಫಂಗಸ್ ಸೋಂಕಿಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಅಂತೆಯೇ ಈ ಬ್ಲಾಕ್ ಫಂಗಸ್ ಸೋಂಕು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಹಿಂದೆಲ್ಲ ವರ್ಷಕ್ಕೆ 7 ಅಥವಾ 8 ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಇಂದು ನಿತ್ಯ ಹತ್ತಾರು ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ಪ್ರಮುಖವಾಗಿ ರೋಗನಿರೋಧಕ ಶಕ್ತಿ ಇರುವವರಲ್ಲಿ ಸೋಂಕು ಹೆಚ್ಚಾಗಿ ಬಾಧಿಸುತ್ತಿದೆ. ಮಧುಮೇಹ, ಬಿಪಿ, ಕಿಡ್ನಿ ಸಮಸ್ಯೆ, ಹೃದ್ರೋಗ ಸಮಸ್ಯೆಯಂತಹ ಅನಾರೋಗ್ಯದಿಂದ ಬಳಲುತ್ತಿರುವವರು ವೈದ್ಯರ ಸಲಹೆ ಇಲ್ಲದೇ ಸ್ಟಿರಾಯ್ಡ್ ಗಳನ್ನು ತೆಗೆದುಕೊಳ್ಳುತ್ತಿದ್ದರೆ ಅವರಲ್ಲಿ ಬ್ಲಾಕ್ ಫಂಗಸ್ ಸೋಂಕು ಬೇಗ ಹರಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ರೋಗ ನಿರೋಧಕ ಶಕ್ತಿ ಕಡಿಮೆ ಇರುವ ವ್ಯಕ್ತಿಗಳಿಗೆ ಬ್ಲಾಕ್ ಫಂಗಸ್ ಸೋಂಕು ತಗುಲಿದರೆ ಅದರ ಪರಿಣಾಮ ಮೂರುಪಟ್ಟು ಹೆಚ್ಚಿರುತ್ತದೆ. ಇದಕ್ಕೆ ಸ್ಟಿರಾಯ್ಡ್ ಗಳ ಅತಿಯಾದ ಬಳಕೆ ಕೂಡ ಕಾರಣವಾಗಿ ಅಂತಹ ಸೋಂಕಿತರಲ್ಲಿ ಕಡಿಮೆ ಸಮಯದಲ್ಲಿ ಸೋಂಕು ಉಲ್ಬಣವಾಗುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.