CBSE 10th Result ಆಸಿಡ್ ದಾಳಿಯಲ್ಲಿ ದೃಷ್ಟಿ ಕಳೆದುಕೊಂಡವಳಿಗೆ 95.20% ಅಂಕ !


Team Udayavani, May 12, 2023, 8:44 PM IST

1-sddsad

ಚಂಡೀಗಢ: ಇನ್‌ಸ್ಟಿಟ್ಯೂಟ್ ಆಫ್ ಬ್ಲೈಂಡ್‌ನ 15 ವರ್ಷದ ವಿದ್ಯಾರ್ಥಿ ಕಾಫಿ ಎಂಬಾಕೆ ಸಿಬಿಎಸ್ ಸಿ 10 ನೇ ತರಗತಿ ಫಲಿತಾಂಶದ ಲ್ಲಿ 95.20% ರಷ್ಟು ಅಂಕಗಳೊಂದಿಗೆ ತನ್ನ ಶಾಲೆಯ ಟಾಪರ್ ಆಗಿ ಹೊರ ಹೊಮ್ಮಿದ್ದಾಳೆ. ಈ ದೊಡ್ಡ ಮೈಲಿಗಲ್ಲನ್ನು ತಲುಪುವಲ್ಲಿ ಆಕೆಯ ಪಯಣ ಅಷ್ಟು ಸುಲಭವಾಗಿರಲಿಲ್ಲ. ಕಾಫಿ ಕೇವಲ ಮೂರು ವರ್ಷದವಳಿದ್ದಾಗ ಹಿಸಾರ್‌ನ ಬುಧಾನಾ ಗ್ರಾಮದಲ್ಲಿ ವಾಸಿಸುತ್ತಿದ್ದ ನೆರೆಹೊರೆಯವರು ಅಸೂಯೆಯಿಂದ ದಾಳಿ ನಡೆಸಿದ್ದರು.

ದಾಳಿಯಿಂದ ಕಾಫಿಯ ಮುಖ ಮತ್ತು ತೋಳುಗಳ ಮೇಲೆ ತೀವ್ರ ಸುಟ್ಟ ಗಾಯಗಳಾಗಿದ್ದವು, ಆಕೆ ದೃಷ್ಟಿ ಕಳೆದುಕೊಂಡಿದ್ದಳು. ಇಷ್ಟಾದರೂ ಕಾಫಿ ಛಲ ಬಿಡದೆ ತನ್ನ ಕನಸುಗಳನ್ನು ನನಸಾಗಿಸಿಕೊಳ್ಳಲು ಹೋರಾಡುತ್ತಲೇ ಇದ್ದಳು. ಆಜ್ ತಕ್ ಜೊತೆಗಿನ ವಿಶೇಷ ಸಂವಾದದಲ್ಲಿ, ಕಾಫಿ ತನ್ನ ಕಷ್ಟಗಳನ್ನು ಮತ್ತು ಅವುಗಳನ್ನು ಹೇಗೆ ಜಯಿಸಿದೆ ಎಂದು ಹಂಚಿಕೊಂಡಿದ್ದಾಳೆ.

ಕಾಫಿಯ ತಂದೆ ಅವಳನ್ನು ಚಿಕಿತ್ಸೆಗಾಗಿ ದೆಹಲಿ ಏಮ್ಸ್‌ಗೆ ಸೇರಿಸಿದ್ದರು, ಅಲ್ಲಿ ವೈದ್ಯರು ಕಾಫಿ ತನ್ನ ಜೀವನದುದ್ದಕ್ಕೂ ಕುರುಡನಾಗಿರುತ್ತಾಳೆ ಎಂದು ಕುಟುಂಬಕ್ಕೆ ತಿಳಿಸಿದರು. ಆಕೆಯ ಸಂಪೂರ್ಣ ಬಾಯಿ ಮತ್ತು ಕೈಗಳು ತೀವ್ರವಾಗಿ ಸುಟ್ಟುಹೋಗಿದ್ದವು ವೈದ್ಯರು ಆಕೆಯ ಜೀವವನ್ನು ಉಳಿಸಿದರಾದರೂ ಆಕೆಯ ದೃಷ್ಟಿಯನ್ನು ಉಳಿಸಲು ಸಾಧ್ಯವಾಗಲಿಲ್ಲ.

ಕಾಫಿಯ ತಂದೆ ನ್ಯಾಯಕ್ಕಾಗಿ ಹೋರಾಡಿದರು ಮತ್ತು ದಾಳಿಕೋರರಿಗೆ ಹಿಸಾರ್ ಜಿಲ್ಲಾ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತು. ಆದರೆ, ಶಿಕ್ಷೆಯ ಅವಧಿ ಮುಗಿದ ಬಳಿಕ ದಾಳಿಕೋರರು ಈಗ ಮುಕ್ತರಾಗಿರುವುದು ಕಾಫಿ ಕುಟುಂಬವನ್ನು ಚಿಂತೆಗೀಡು ಮಾಡಿದೆ.

ಕಾಫಿ ಅವರು ಎಂಟು ವರ್ಷದವಳಿದ್ದಾಗ ಹಿಸಾರ್‌ನ ಅಂಧರ ಶಾಲೆಯಲ್ಲಿ ಓದಲು ಪ್ರಾರಂಭಿಸಿದರು. ಅಲ್ಲಿ ತನ್ನ ಮೊದಲ ಮತ್ತು ಎರಡನೆಯ ತರಗತಿಗಳನ್ನು ಪೂರ್ಣಗೊಳಿಸಿದಳು, ಆದರೆ ಸೌಕರ್ಯಗಳ ಕೊರತೆಯಿಂದಾಗಿ, ಅವಳ ಕುಟುಂಬ ಚಂಡೀಗಢಕ್ಕೆ ಸ್ಥಳಾಂತರಗೊಂಡಿತು. ಕಾಫಿಯ ತಂದೆ ಚಂಡೀಗಢದ ಸೆಕ್ರೆಟರಿಯೇಟ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸವಾಲುಗಳು ಮತ್ತು ಸಂಪನ್ಮೂಲಗಳ ಕೊರತೆಯ ಹೊರತಾಗಿಯೂ, ಕಾಫಿಯ ಅಧ್ಯಯನದ ಉತ್ಸಾಹವು ಎಂದಿಗೂ ಕಡಿಮೆಯಾಗಲಿಲ್ಲ. ಯಾವಾಗಲೂ ಶಿಕ್ಷಣದಲ್ಲಿ ಉತ್ತಮವಾಗಿದ್ದಳು ಮತ್ತು ಚಂಡೀಗಢದ ಇನ್‌ಸ್ಟಿಟ್ಯೂಟ್ ಆಫ್ ಬ್ಲೈಂಡ್‌ನಲ್ಲಿ ಸೆಕ್ಟರ್ 26 ರಲ್ಲಿ 6 ನೇ ತರಗತಿಗೆ ನೇರ ಪ್ರವೇಶವನ್ನು ಪಡೆದಳು.

ಕಾಫಿ ತಾನು ಐಎಎಸ್ ಅಧಿಕಾರಿಯಾಗಿ ತನ್ನ ಕುಟುಂಬವನ್ನು ಹೆಮ್ಮೆಪಡುವಂತೆ ಮಾಡಬೇಕು ಎನ್ನುವ ಗುರಿ ಹೊಂದಿದ್ದಾಳೆ ಆಕೆಯ ತಂದೆ ಪವನ್, ಆಕೆಯ ಸಾಧನೆಗಳ ಬಗ್ಗೆ ಹೆಮ್ಮೆಪಡುತ್ತಾರೆ ಮತ್ತು ಹೆಚ್ಚಿನ ಭರವಸೆಯನ್ನು ತುಂಬಿ ಕೊಂಡಿದ್ದಾರೆ.

ಕಾಫಿ ಎದುರಿಸಿದ ಸವಾಲುಗಳು ಮತ್ತು ತನ್ನ ದಾಳಿಕೋರರ ವಿರುದ್ಧ ಬಾಕಿ ಉಳಿದಿರುವ ಮೇಲ್ಮನವಿಗಳ ಹೊರತಾಗಿಯೂ ಅನೇಕರಿಗೆ ಸ್ಫೂರ್ತಿಯಾಗಿದ್ದಾಳೆ. ಯಾವುದೇ ಅಡೆತಡೆಗಳು ಜಯಿಸಲು ತುಂಬಾ ದೊಡ್ಡ ತಡೆಯಲ್ಲ. ಕಠಿಣ ಪರಿಶ್ರಮ ಮತ್ತು ಎಂದಿಗೂ ಬಿಟ್ಟುಕೊಡದ ಮನೋಭಾವದಿಂದ ಎಲ್ಲವೂ ಸಾಧ್ಯ ಎಂದು ಅವಳ ದೃಢತೆ ತೋರಿಸಿದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.