ಸಿಡಿಎಸ್ ರಾವತ್ ಹೆಲಿಕಾಪ್ಟರ್ ಪತನ; Black Box ಪತ್ತೆ, ಬಯಲಾಗಲಿದೆಯೇ ಪತನದ ನಿಗೂಢ ಕಾರಣ…

ಹವಾಮಾನ, ಗಾಳಿ, ಎಂಜಿನ್ ಸೇರಿದಂತೆ ಎಲ್ಲಾ ಮಾಹಿತಿಯೂ ಬ್ಲ್ಯಾಕ್ ಬಾಕ್ಸ್ ನಲ್ಲಿ ದಾಖಲಾಗಿರುತ್ತದೆ.

Team Udayavani, Dec 9, 2021, 1:40 PM IST

ಸಿಡಿಎಸ್ ರಾವತ್ ಹೆಲಿಕಾಪ್ಟರ್ ಪತನ; Black Box ಪತ್ತೆ, ಬಯಲಾಗಲಿಯೇದೆ ಪತನದ ನಿಗೂಢ ಕಾರಣ…

ತಮಿಳುನಾಡಿನ ಕೂನೂರಿನಲ್ಲಿ ಅತ್ಯಾಧುನಿಕ ಎಂಐ 17ವಿ5 ಹೆಲಿಕಾಪ್ಟರ್ ಪತನದಲ್ಲಿ ದೇಶದ ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಹಾಗೂ 11 ಮಂದಿ ಸಾವನ್ನಪ್ಪಿದ್ದು, ಈ ಅಫಘಾತ ರಕ್ಷಣಾ ವಲಯ ಸೇರಿದಂತೆ ದೇಶದ ಜನರಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ:ಮೊದಲ ಡೋಸ್ ವ್ಯಾಕ್ಸಿನೇಷನ್ ನಲ್ಲಿ ಕರ್ನಾಟಕ ನಂ. 1 ಸ್ಥಾನಕ್ಕೆ: ಸಚಿವ ಸುಧಾಕರ್

ಗುರುವಾರ(ಡಿಸೆಂಬರ್ 09) ತನಿಖಾಧಿಕಾರಿಗಳಿಗೆ ಹೆಲಿಕಾಪ್ಟರ್ ಪತನಗೊಂಡ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ (ಕಪ್ಪುಪೆಟ್ಟಿಗೆ) ಪತ್ತೆಯಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ದುರಂತ ನಡೆದ ಸ್ಥಳದಿಂದ ಒಂದು ಕಿಲೋ ಮೀಟರ್ ದೂರದಲ್ಲಿ ಬ್ಯ್ಲಾಕ್ ಬಾಕ್ಸ್ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.

ಏನಿದು ಬ್ಲ್ಯಾಕ್ ಬಾಕ್ಸ್:

ಹವಾಮಾನ ವೈಪರೀತ್ಯ, ತಾಂತ್ರಿಕ ದೋಷ ಸೇರಿದಂತೆ ಇತರ ಕಾರಣಗಳಿಂದ ಕೆಲವೊಮ್ಮೆ ಸಂಭವಿಸುವ ವಿಮಾನ, ಹೆಲಿಕಾಪ್ಟರ್ ದುರಂತದ ನಂತರ ಯಾವ ಕಾರಣದಿಂದ ದುರಂತ ಸಂಭವಿಸಿದೆ ಎಂಬುದನ್ನು ಪತ್ತೆ ಹಚ್ಚಲು ಬ್ಲ್ಯಾಕ್ ಬಾಕ್ಸ್ ತನಿಖಾಧಿಕಾರಿಗಳಿಗೆ ಹೆಚ್ಚಿನ ರೀತಿಯಲ್ಲಿ ನೆರವಾಗಲಿದೆ.

ಬ್ಲ್ಯಾಕ್ ಬಾಕ್ಸ್ ನಲ್ಲಿ ಎರಡು ಭಾಗಗಳಿದ್ದು, ಒಂದು ಡಿಜಿಟಲ್ ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ಹಾಗೂ ಫ್ಲೈಟ್ ಡಾಟಾ ರೆಕಾರ್ಡರ್(ಎಫ್ ಡಿಆರ್). ಇದೊಂದು ಹಾರ್ಡ್ ಡಿಸ್ಕ್ ನಂತಿರುವ ಉಪಕರಣವಾಗಿದೆ. ಅಷ್ಟೇ ಅಲ್ಲ ಬ್ಲ್ಯಾಕ್ ಬಾಕ್ಸ್ ಅತ್ಯಂತ ರಕ್ಷಣಾತ್ಮಕ ಯಂತ್ರವಾಗಿದೆ. ಕಪ್ಪುಪೆಟ್ಟಿಗೆಯಲ್ಲಿರುವ ವಾಯ್ಸ್ ರೆಕಾರ್ಡರ್ ನಲ್ಲಿ ಕಾಕ್ ಪಿಟ್ ನಲ್ಲಿ ನಡೆದ ಎಲ್ಲಾ ಸಂಭಾಷಣೆಯೂ ದಾಖಲಾಗಿರುತ್ತದೆ. ಪೈಲಟ್ ಪ್ರಯಾಣಿಕರಿಗೆ ನೀಡುವ ಹವಾಮಾನದ ಮುನ್ಸೂಚನೆ, ರೆಡಿಯೋ ಟ್ರಾಫಿಕ್, ಸಿಬಂದಿಗಳ ಜತೆಗಿನ ಸಂಭಾಷಣೆ ಎಲ್ಲವೂ ವಾಯ್ಸ್ ರೆಕಾರ್ಡ್ ನಲ್ಲಿ ದಾಖಲಾಗಿರುತ್ತದೆ.

ಫ್ಲೈಟ್ ಡಾಟಾದಲ್ಲಿ ವಿಮಾನ ಹಾರಾಟ ನಡೆಸುತ್ತಿದ್ದ ಎತ್ತರ, ಹವಾಮಾನ, ಗಾಳಿ, ಎಂಜಿನ್ ಸೇರಿದಂತೆ ಎಲ್ಲಾ ಮಾಹಿತಿಯೂ ಬ್ಲ್ಯಾಕ್ ಬಾಕ್ಸ್ ನಲ್ಲಿ ದಾಖಲಾಗಿರುತ್ತದೆ. ಈ ಮಾಹಿತಿಗಳ ಮೂಲಕ ವಿಮಾನ ದುರಂತಕ್ಕೆ ಪ್ರಮುಖ ಕಾರಣ ಏನೆಂಬುದನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚುತ್ತಾರೆ ಎಂದು ವರದಿ ವಿವರಿಸಿದೆ.

ಬ್ಲ್ಯಾಕ್ ಬಾಕ್ಸ್ ಬೆಂಕಿ ತಗುಲಿದರೂ ಹಾನಿಗೊಳಗಾಗುವುದಿಲ್ಲ, ನೀರಿನಲ್ಲಿ ಮುಳುಗಿದರೂ ಯಾವುದೇ ಮಾಹಿತಿ ನಷ್ಟವಾಗುವುದಿಲ್ಲ. ಬ್ಲ್ಯಾಕ್ ಬಾಕ್ಸ್ ಅನ್ನು ವಿಮಾನ ಬಾಲದ ಸಮೀಪ ಅತ್ಯಂತ ಭದ್ರವಾಗಿ ಅಳವಡಿಸಲಾಗಿರುತ್ತದೆ. ಒಂದು ವೇಳೆ ಅಪಘಾತ ಸಂಭವಿಸುವ ಮೊದಲು ವಿಮಾನದಲ್ಲಿ ವಿದ್ಯುತ್ ಸೌಲಭ್ಯ ನಿಂತು ಹೋಗಿದ್ದರೆ, ಆ ಸಮಯದಲ್ಲಿನ ರೆಕಾರ್ಡಿಂಗ್ ಲಭ್ಯವಾಗುವುದಿಲ್ಲ.

ಒಂದು ವೇಳೆ ಸಮುದ್ರ ಪ್ರದೇಶದಲ್ಲಿ ಅಪಘಾತ ಸಂಭವಿಸಿ, ವಿಮಾನ ಪತನಗೊಂಡಿದ್ದರೂ ಕೂಡಾ ಬ್ಲ್ಯಾಕ್ ಬಾಕ್ಸ್ ಅನ್ನು ಪತ್ತೆ ಹಚ್ಚಬಹುದಾಗಿದೆ. ಸಮುದ್ರದ ಆಳದಲ್ಲಿ ಮುಳುಗಿದ್ದರೂ ಕೂಡಾ ಬ್ಲ್ಯಾಕ್ ಬಾಕ್ಸ್ ಸುಮಾರು ಎರಡು ಕಿಲೋ ಮೀಟರ್ ಸುತ್ತಳತೆವರೆಗೆ ರೇಡಿಯಸ್ ಸಿಗ್ನಲ್ ಮೂಲಕ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ. ಸಮುದ್ರದಲ್ಲಿ ಸುಮಾರು 6,000 ಮೀಟರ್ ಆಳದಲ್ಲಿ ಹುದುಗಿದ್ದರೂ ಕೂಡಾ ಬ್ಲ್ಯಾಕ್ ಬಾಕ್ಸ್ ನೀರಿನ ಒತ್ತಡವನ್ನು ತಡೆದುಕೊಳ್ಳಬಲ್ಲದು.

ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಎಂ17 ವಿ5 ಹೆಲಿಕಾಪ್ಟರ್ ಪತನಗೊಂಡಿರುವ ಕಾರಣ ಇನ್ನೂ ನಿಗೂಢವಾಗಿದೆ. ಇದೀಗ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿರುವುದರಿಂದ ಯಾವ ಕಾರಣದಿಂದ ಹೆಲಿಕಾಪ್ಟರ್ ಪತನಗೊಂಡಿದೆ ಎಂಬ ನಿಖರ ಕಾರಣ ತಿಳಿಯಬಹುದಾಗಿದೆ.

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suhan-Final-copy

12 ಕೋಟಿಯಿಂದ 2000 ಕೋಟಿ:ರಾಜಮೌಳಿ ಸಿನಿಮಾ ಕಲೆಕ್ಷನ್ ಎಷ್ಟು?ಇವರು ಬಾಕ್ಸ್ ಆಫೀಸ್ ‘ಬಾಹುಬಲಿ’

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

MOSSAD 4

ಪುಟ್ಟ ದೇಶದ ಈ ಇಂಟೆಲಿಜೆನ್ಸ್‌ ಏಜೆನ್ಸಿ ಭಾರತದ ʻರಾʼ ಗಿಂತಲೂ ಪವರ್‌ಫುಲ್‌..!

14–black-pepper

Black Pepper; ಮನೆಮದ್ದು … ಹಲವು ಆರೋಗ್ಯ ಸಮಸ್ಯೆಗಳಿಗೆ ಕಾಳುಮೆಣಸು ರಾಮಬಾಣ

those-2-runs-africas-unforgettable-world-cup-hero-lance-klusener

Cricket Stories; ಆ 2 ರನ್…ದ.ಆಫ್ರಿಕಾ ಮರೆಯಲಾಗದ ವಿಶ್ವಕಪ್ ಹೀರೋ ಲ್ಯಾನ್ಸ್ ಕ್ಲೂಸನರ್

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.