ಬಾಲ್ಯದ ನೆನಪೇ ಅತೀ ಮಧುರ


Team Udayavani, Jul 19, 2021, 11:30 AM IST

ಬಾಲ್ಯದ ನೆನಪೇ ಅತೀ ಮಧುರ

ಬಾಲ್ಯದ ನೆನಪೆಂದರೆ ಶಾಲೆಯಲ್ಲಿ ನಡೆದ ಘಟನೆಗಳೇ ಮನಸ್ಸಿನಲ್ಲಿ ಚಿರವಾಗಿರುವುದು. ನಾನು ಕಲಿತದ್ದು ಸರಕಾರಿ ಶಾಲೆಯಲ್ಲಿ. ಆದ್ದರಿಂದ ಸಣ್ಣ ಪುಟ್ಟ ಕ್ಷಣಗಳೂ ನೆನಪುಗಳೇ. ಖಾಸಗಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗಿಂತ ಹೆಚ್ಚು ಮಧುರ ಕ್ಷಣಗಳು ಸರಕಾರಿ ಶಾಲೆಗಳಲ್ಲಿ ಓದಿರುವ ವಿದ್ಯಾರ್ಥಿಗಳಿಗಿರುತ್ತವೆ ಎನ್ನುವುದು ತಪ್ಪಲ್ಲ. ಹೇಳಿ ಕೇಳಿ ಸರಕಾರಿ ಶಾಲೆಯಲ್ಲಿ ಓದಿರುವ ವಿದ್ಯಾರ್ಥಿಗಳಲ್ಲವೇ. ಶಿಕ್ಷಕರು ಎಷ್ಟೇ ಬೈದರೂ ಹೊಡೆದರೂ ಅದು ನಮಗೆ ಅವಮಾನವೆಂದು ಎಂದೂ ಅಂದುಕೊಂಡಿದ್ದಿಲ್ಲ. ಆ ಪೆಟ್ಟು ದೇಹದಿಂದ ಎಷ್ಟು ಬೇಗ ದೂರವಾಗುತ್ತಿತ್ತೋ ಅಷ್ಟೇ ಬೇಗ ಮನಸ್ಸಿನಿಂದಲೂ ದೂರವಾಗಿ ಬಿಡುತ್ತಿತ್ತು.

ಆಗಿನ ಬಾಲ್ಯದ ನೆನಪು ಬಹುಶಃ ಈಗಿನ ಮಕ್ಕಳಿಗೆ ಸಿಗುವುದಿಲ್ಲ. ತರಗತಿಯಲ್ಲಿ ಪಾಠ ನಡೆಯುತ್ತಿರುವಾಗಲೇ ನಮ್ಮ ಬಾಯಿಗೆ, ಹೊಟ್ಟೆಗೆ ಕೆಲಸವಿರುತ್ತಿತ್ತು. ಮಾವಿನಕಾಯಿ, ಹುಣಸೆಹಣ್ಣು ಇವೆಲ್ಲವನ್ನೂ ಬಾಯಿ ಚಪ್ಪರಿಸಿ ತಿನ್ನುತ್ತಿದ್ದೆವು. ಮಾತು ಬಿಡುವುದು, ಜಗಳವಾಡುವುದು ಇವೆಲ್ಲವನ್ನೂ ಈಗ ನೆನಪಿಸಿಕೊಂಡರೆ ಎಷ್ಟು ಚಿಕ್ಕ ವಿಷಯಕ್ಕೆ ಜಗಳವಾಡುತ್ತಿದ್ದೆವೆಂದು ನಗುಬರುತ್ತದೆ. ಸಾಯಂಕಾಲ ಘಂಟೆಯ ಸದ್ದು ಮೊಳಗುವ ಐದು ನಿಮಿಷ ಮೊದಲೇ ನಮ್ಮ ಬ್ಯಾಗ್‌ ಮನೆಗೆ ಓಡಲು ತಯಾರಾಗಿ ನಿಂತಿರುತ್ತಿತ್ತು.  ಶಾಲೆಯ ಗೇಟಿನಿಂದ ಹೊರಬೀಳುತ್ತಿದ್ದಂತೆ ಅಂಗಡಿಯಿಂದ ಬರುವ ಕರಿದ ತಿಂಡಿಗಳ ಘಮ ಘಮ ಪರಿಮಳ ನಮ್ಮನ್ನು ಕರೆಯುತ್ತಿತ್ತು. ಆ ಸಮಯದಲ್ಲಿ ಒಂದೆರಡು ರೂ. ಸಿಕ್ಕರೂ ಅದೇ ಖುಷಿ. ಚಿಕ್ಕವರಿದ್ದಾಗ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಹುರುಪು, ಉತ್ಸಾಹ ಈಗ ಮರೆಯಾಗಿದೆ. ಯಾರಾದರೂ ಬಾಲ್ಯ ಸ್ನೇಹಿತರು ಅಪರೂಪಕ್ಕೆ ಸಿಕ್ಕಾಗ, ಆ ದಿನಗಳು ಮತ್ತೆ ಮರುಕಳಿಸಬಾರದೇ ಎಂದೆನಿಸುತ್ತದೆ. ಸಮಯ ಎನ್ನುವುದು ಎಷ್ಟು ಬೇಗ ಕಳೆಯಿತೆಂದು ಅನಿಸುತ್ತದೆ.

ಬಾಲ್ಯದ ಆಟ, ಪಾಠ ಎಲ್ಲ ಕ್ಷಣವೂ ಒಮ್ಮೊಮ್ಮೆ ನೆನಪಾದಾಗಲೆಲ್ಲ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡುತ್ತದೆ. ಮೊಬೈಲ್‌ನಲ್ಲಿ ಬರುವ ಆನ್‌ಲೈನ್‌ ಆಟಗಳು ಕಣ್ಣಾಮುಚ್ಚಾಲೆ, ಲಗೋರಿ ಇಂತಹ ಆಟಗಳಿಗೆ ಎಂದೂ ಸರಿಸಾಟಿ ಅಲ್ಲ.  ಆಗ ಕಲಿತಿದ್ದು ಈಗಲೂ ಹಚ್ಚೆಯಂತೆ ಅಳಿಸದೇ ಮನಸ್ಸಿನಲ್ಲಿದೆ. ಎಲ್ಲ ಸ್ನೇಹಿತರೂ ಬೇರೆ ಬೇರೆ ಉನ್ನತ ವ್ಯಾಸಂಗ, ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೆಲವರನ್ನು ಅಪರೂಪಕ್ಕೆ ನೋಡಿದಾಗ ಅವರು ಯಾರೆಂದು ಗುರುತು ಹಿಡಿಯುವುದೇ ಕಷ್ಟವಾಗಿ ಬಿಡುತ್ತದೆ.

 

ಸುವರ್ಣಾ ಹೆಗಡೆ

ಎಸ್‌.ಡಿ.ಎಂ. ಕಾಲೇಜು, ಉಜಿರೆ

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.