ಮಳೆಗಾಲದ ಸ್ಪೆಷಲ್‌ ತಿಂಡಿ ಪತ್ರೊಡೆ ಮಾಡುವ ವಿಧಾನ ಹೀಗೆ..

ದೊಡ್ಡ ಎಲೆ ತಳದಲ್ಲಿಟ್ಟು ಮಧ್ಯದಲ್ಲಿ ಸಣ್ಣ ಎಲೆಗಳನ್ನಿಟ್ಟರೆ ರೋಲ್‌ ಮಾಡಲು ಸುಲಭ

Team Udayavani, Jun 26, 2022, 9:36 AM IST

ಮಳೆಗಾಲದ ಸ್ಪೆಷಲ್‌ ತಿಂಡಿ ಪತ್ರೊಡೆ ಮಾಡುವ ವಿಧಾನ ಹೀಗೆ..

ಕರಾವಳಿಯ ವಿಶಿಷ್ಟ ತಿಂಡಿಗಳಲ್ಲಿ ಪತ್ರೊಡೆಗೆ ವಿಶೇಷವಾದ ಸ್ಥಾನವಿದೆ.ಪರಿಸರಕ್ಕೆ ಪೂರಕವಾಗಿರುವ ಆಹಾರ ಪದ್ಧತಿ ಕರಾವಳಿಗರ ವಿಶೇಷ.ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಹಲಸು,ಅಣಬೆ,ಕೆಸು ಮುಂತಾದ ಪರಿಸರದಲ್ಲಿ ಸಿಗುವ ವಸ್ತುಗಳನ್ನೇ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಂಡಿರುವುದು ನಮ್ಮ ಕರಾವಳಿಗರ ಹೆಗ್ಗಳಿಕೆ.ಮಳೆಗಾಲ ಬಂತೆಂದರೆ ಊರ ಕೆಸು ಮತ್ತು ಮರ ಕೆಸುವಿನ ಎಲೆಗಳನ್ನು ಬಳಸಿ ತಯಾರಿಸುವ ಪತ್ರೊಡೆಯ ರುಚಿಯನ್ನು ಬಲ್ಲವರೇ ಬಲ್ಲರು..ಹಾಗಾದ್ರೆ  ಮರ ಕೆಸುವಿನ ಪತ್ರೊಡೆ ತಯಾರಿಸುವ ವಿಧಾನವನ್ನು ನಾವಿಂದು ತಿಳಿದುಕೊಳ್ಳೊಣ…

ಬೇಕಾಗುವ ಸಾಮಗ್ರಿಗಳು:
ಮರಕೆಸು 30-35
ಹೆಸರು ಕಾಳು 1 1/2 ಕಪ್‌
ಬೆಳ್ತಿಗೆ ಅಕ್ಕಿ 1 1/2  ಕಪ್‌
ತೆಂಗಿನ ತುರಿ 1 ಕಪ್‌
ಒಣಮೆಣಸಿಕಾಯಿ 20-25
ಸಣ್ಣ ನಿಂಬೇ ಗಾತ್ರದ ಹಣೆಸೇ ಹುಳಿ
ಸಣ್ಣ ನಿಂಬೇ ಗಾತ್ರದ ಇಂಗು
ಸ್ವಲ್ಪ ಬೆಲ್ಲ, ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ:
ಬೆಳ್ತಿಗೆ ಅಕ್ಕಿ ಮತ್ತು ಹೆಸ್ರು ಕಾಳನ್ನು ಒಂದೇ ಪಾತ್ರೆಯಲ್ಲಿ ಕನಿಷ್ಠ 3 ಗಂಟೆ ಕಾಲ ನೀರಿನಲ್ಲಿ ನೆನೆಹಾಕಿರಿ.ನೆನೆ ಹಾಕಿದ ಅಕ್ಕಿ ಮತ್ತು ಹೆಸ್ರು ಕಾಳನ್ನು ಮಿಕ್ಸಿಗೆ ಹಾಕಿ.ತೆಂಗಿನ ತುರಿ,ಒಣಮೆಣಸಿನ ಕಾಯಿ, ಹಣೆಸೇ ಹುಳಿ,ಇಂಗು,ಬೆಲ್ಲ ಮತ್ತು ಉಪ್ಪು ಹಾಕಿ,ಜಾಸ್ತಿ ನೀರು ಸೇರಿಸದೆ ಗಟ್ಟಿ ಮಸಾಲೆ ರುಬ್ಬಿರಿ. ಮಸಾಲೆ ಜಾಸ್ತಿ ತೆಳುವಾಗಬಾರದು ಎಲೆಗೆ ಸವರಲು ಸಾಕಷ್ಟು ಗಟ್ಟಯಾದರೆ ಸರಿ.

ಇದೀಗ ಸಿದ್ಧ ಮಾಡಿಟ್ಟುಕೊಂಡ ಮಸಾಲೆಯನ್ನು ಕೆಸುವಿನ ಎಲೆಗಳಿಗೆ ಹಚ್ಚಬೇಕು ಹೀಗೆ ಹಚ್ಚುವ ಸಂದರ್ಭದಲ್ಲಿ ತೊಳೆದು ಒರೆಸಿಟ್ಟಕೊಂಡ ಎಲೆಗಳನ್ನು ಸ್ವತ್ಛ ವಾದ ಜಾಗದಲ್ಲಿ ಇರಿಸಿ,ಎಲೆಗಳ ಹಿಂಭಾಗಕ್ಕೆ ಮಸಾಲೆಯನ್ನು ಕೈಗಳಿಂದ ನಿಧಾನವಾಗಿ ಸವರುತ್ತ ಬರಬೇಕು.ಮಸಾಲೆ ಸವರಿದ ಎಲೆಗಳ ಮೇಲೆ ಮತ್ತು ಎಲೆಗಳನ್ನು ಜೋಡಿಸುತ್ತ ಸುಮಾರು 7 ರಿಂದ 8 ಎಲೆಗಳಿಗೆ ಮಸಾಲೆ ಸವರಿ ಒಂದು ರೋಲ್‌ ಸಿದ್ಧಪಡಿಸಿಕೊಳ್ಳಬೇಕು.(ಎಲೆಗಳಿಗೆ ರೋಲ್‌ ಮಾಡುವ ಸಂದರ್ಭದಲ್ಲಿ ಒಳಭಾಗಕ್ಕೆ ಮತ್ತು ಹೊರಭಾಗಕ್ಕೆ ಮಸಾಲೆಯನ್ನು ಸವರಬೇಕು)ದೊಡ್ಡ ಎಲೆ ತಳದಲ್ಲಿಟ್ಟು ಮಧ್ಯದಲ್ಲಿ ಸಣ್ಣ ಎಲೆಗಳನ್ನಿಟ್ಟರೆ ರೋಲ್‌ ಮಾಡಲು ಸುಲಭ.ಈಗ ಪತ್ರೊಡೆ ರೋಲ್‌ ರೆಡಿ.ಇಂಥ 4-5 ರೋಲ್‌ಗ‌ಳನ್ನು ತಯಾರಿಸಿ.

ಇಡ್ಲಿ ಪಾತ್ರೆಯಲ್ಲಿ ಕಾಲು ಭಾಗದಷ್ಟು ನೀರನ್ನು ಹಾಕಿ ಒಲೆಯ ಮೇಲೆ ಇಡಿ. ಒಲೆಯ ಮೇಲಿಟ್ಟ ಇಡ್ಲಿ ಪಾತ್ರೆಯೊಳಗಡೆ ಪತ್ರೊಡೆ ರೋಲ್‌ನ್ನು ಇಟ್ಟು ಪಾತ್ರೆ ಮುಚ್ಚಿ.45 ನಿಮಿಷಗಳ ಕಾಲ ಬೇಯಿಸಿರಿ. ಆ ಮೇಲೆ ಹೊರತೆಗೆದ ಪತ್ರೊಡೆ ರೋಲ್‌ನ್ನು ಅಡ್ಡಕ್ಕೆ ಕೊಯ್ದು ಬೇಕಾದಷ್ಟು ದಪ್ಪ ತುಂಡು(ಪೋಡಿ)ಗಳನ್ನು ಮಾಡಿರಿ.

ಹುರಿದ ಪತ್ರೊಡೆ ಪೋಡಿ: 
ಒಂದೆರೆಡು ಪತ್ರೊಡೆ ರೋಲ್‌ಗ‌ಳನ್ನು ಅಡ್ಡಕ್ಕೆ ಕೊಯ್ದು ಪೋಡಿ ಮಾಡಿರಿ. ದೋಸೆಕಾವಲಿಗೆ ಎಣ್ಣೆ ಸವರಿ,ಒಲೆಯ ಮೇಲಿಟ್ಟು ಕಾದ ನಂತರ ಅದರ ಮೇಲೆ ಪತ್ರೊಡೆ ಪೋಡಿಗಳನ್ನಿಟ್ಟು ಸ್ವಲ್ಪ ಹೊತ್ತಿನಲ್ಲಿ ಮುಗುಚಿ ಹಾಕಿ ಎರಡೂ ಬದಿಗಳನ್ನು ಎಣ್ಣೆಯಲ್ಲಿ ಕೆಂಪಗೆ ಹುರಿದು ತೆಗೆಯಿರಿ.

ವಿ.ಸೂ: ಹೆಸ್ರುಕಾಳು ಬದಲು ಕಡ್ಲೆಬೇಳೆ ಹಾಕಿಯೂ ಪತ್ರೊಡೆ ಮಾಡಬಹುದು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.