ಜಾಗೃತ ಭಾರತ, ಸಮೃದ್ಧ ಭಾರತ
Team Udayavani, Oct 17, 2021, 12:58 PM IST
“ಅರಿವೆ ಗುರು ಗುರುವೇ ದೇವರು” ಅನ್ನುತ್ತಾರೆ. ದೈವತ್ವದ ಆ ಸ್ಥಿತಿಯೇ ಜಾಗೃತ ಸ್ಥಿತಿ. ಜಾಗೃತ ಮನಸ್ಸಿನ ಮೂಲವೇ ಸಕಾರಾತ್ಮಕ ಅರಿವು. ಈ ಅರಿವೇ ಜ್ಞಾನದಿಂದ ಉಂಟಾಗುವುದು. ಇಂತಹ ವೈಯಕ್ತಿಕ ಜಾಗೃತಿಯ ನಿಸ್ವಾರ್ಥ ರೂಪವೇ ಸಾಮಾಜಿಕ ಮತ್ತು ರಾಷ್ಟ್ರ ಜಾಗೃತಿಗೆ ಮೂಲ. ಈ ರಾಷ್ಟ್ರ ಜಾಗೃತಿಯೇ ಸಮೃದ್ಧ ಭಾರತದ ಪ್ರೇರಣಾ ಶಕ್ತಿ.
“ಈ ಜ್ಞಾನವೆಂಬುದು ಮನುಷ್ಯನಲ್ಲಿಯೇ ಅಡಗಿರುವುದು. ಹೊರಗಿನಿಂದ ಯಾವ ಜ್ಞಾನವೂ ಬರುವುದಿಲ್ಲ. ನ್ಯೂಟಮ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದನೆಂದು ನಾವು ಹೇಳುತ್ತೇವೆ. ಆದರೆ ಎಲ್ಲಿಯೋ ಒಂದು ಮೂಲೆಯಲ್ಲಿ ಕುಳಿತು ನ್ಯೂಟನ್ ತನ್ನನ್ನು ಕಂಡುಹಿಡಿಯಲು ಬರುವನು ಎಂದು ಅದು ಕಾಯುತ್ತಿತ್ತೇನು? ಅದು ಆತನ ಮನಸ್ಸಿನಲ್ಲಿಯೇ ಇದ್ದದ್ದು, ಸಮಯ ಬಂದಾಗ ಆ ಜ್ಞಾನ ಪ್ರಕಟಗೊಂಡಿತು. ಜಗತ್ತು ಗಳಿಸಿರುವ ಜ್ಞಾನವೆಲ್ಲ ಮನಸ್ಸಿನಿಂದ ಬಂದುದೇ ಆಗಿವೆ.
ಜಗತ್ತಿನ ಅನಂತ ಪುಸ್ತಕ ಭಂಡಾರವೆಲ್ಲ ನಿಮ್ಮ ಮನಸ್ಸಿನಲ್ಲಿಯೇ ಇದೆ. ಬಾಹ್ಯ ಪ್ರಪಂಚವೆಂಬುದು ಸೂಚನೆ ಮಾತ್ರ, ಅದು ನಿಮ್ಮ ಮನಸ್ಸು ವಿಚಾರ ಮಾಡುವಂತೆ ಪ್ರೇರೇಪಿಸುವುದು”. ಎನ್ನುತ್ತಾರೆ ಸ್ವಾಮಿ ವಿವೇಕಾನಂದರು. ಈ ವಿಚಾರ ಮಾಡುವಂತೆ ಮಾಡುವ ಪ್ರೇರಣೆಯೇ ಜಾಗೃತ ಪ್ರಜ್ಞೆ ಮತ್ತು ಇದು ಸದಾ ನಿಸ್ವಾರ್ಥ ಮತ್ತು ವಿವೇಕದಿಂದ ಕೂಡಿದ್ದಾಗ ಅದರಲ್ಲಿ ದೇಶ ಮತ್ತು ವ್ಯಕ್ತಿಯ ಸಮೃದ್ಧಿ ಅಡಗಿದೆ. “ಹಸಿವೆ ಇಲ್ಲದಿದ್ದರೆ ಊಟ ವ್ಯರ್ಥ, ಉಪಯೋಗಿಸದಿದ್ದರೆ ಹಣ ವ್ಯರ್ಥ” ಇದರ ಜೊತೆಗೆ ಆ ಹಣ ಸಂಪಾಧನೆಯ ಮಾರ್ಗ ಮತ್ತು ಉಪಯೋಗಿಸುವ ಉದ್ದೇಶ ಮಾನವೀಯತೆ ಮತ್ತು ನೈತಿಕತೆಯನ್ನು ಒಳಗೊಂಡಿರಬೇಕು.
ಪ್ರಾಮಾಣಿಕ ಶ್ರಮದಿಂದ ಪಡೆದ ಹತ್ತು ರೂಪಾಯಿಯ ತೃಪ್ತಿ ಕಳ್ಳ ಮಾರ್ಗದಿಂದ ಸಂಪಾದಿಸಿದ ಕೋಟಿ ರೂಪಾಯಿ ಕೊಟ್ಟರೂ ದೊರೆಯದು. ಕೇವಲ ಹಣ ಆಸ್ತಿ ಸಂಪಾದನೆ ಸಮೃದ್ಧಿಯಲ್ಲ, ಜ್ಞಾನ ಸಂಪಾದನೆ ಮತ್ತು ನ್ಯಾಯಯುತ ಹಣ- ಆಸ್ತಿ ಸಂಪಾದನೆ ಸಮೃದ್ಧಿ ಎನಿಸಿಕೊಳ್ಳುತ್ತದೆ. ಒಬ್ಬನ ವೈಯಕ್ತಿಕ ಸಮೃದ್ಧಿ ಅವನ ಶಿಷ್ಟಾಚಾರ, ಸಂಸ್ಕೃತಿ, ಸತ್-ಸಂಪ್ರದಾಯ ಮತ್ತು ನೈತಿಕತೆಗಳಾಗಿವೆ. ವ್ಯಕ್ತಿಯಿಂದ ರಾಷ್ಟ್ರ -ರಾಷ್ಟ್ರೀಯತೆ.
ಐತಿಹಾಸಿಕವಾಗಿ ನಮ್ಮ ಭವ್ಯ ಭಾರತ ಅಗೆದಷ್ಟು ಅಮೃತದಂತಹ ಫಲ ನೀಡಿದ ಭೂಮಿ. ಚಿನ್ನ- ಬೆಳ್ಳಿ- ಮುತ್ತು- ರತ್ನಗಳ ಆಗರ ಈ ಭರತ ಭೂಮಿ. ಭರತ ಭೂಮಿಯ ಅದೆಷ್ಟೋ ಆದರ್ಶ ರಾಜರ ಮಧ್ಯೆ ಬಂದ ಕೆಲವು ಸ್ವಾರ್ಥ ಮತ್ತು ನೀಚ ಬುದ್ಧಿಯ ಅರಸರು ಅನ್ಯ ದೇಶೀಯರ ಒಡೆದು ಆಳುವ ಕುಟಿಲತೆಗೆ ಬಲಿಯಾದದ್ದು ಮತ್ತು ಈಗಲೂ ಮುಂದುವರಿಯುತ್ತಿರುವುದು ವಿಪರ್ಯಾಸ. ಇದು ಅವರ ಆಂತರಿಕ ಸಮೃದ್ಧಿಯ ಕೊರತೆಯನ್ನು ತೋರಿಸುತ್ತದೆ. ರಾಷ್ಟç ಪ್ರೇಮ ಮತ್ತು ಭಕ್ತಿ ವೈಯಕ್ತಿಕ ಜೀವನವನ್ನೂ ಕೂಡ ಸಮೃದ್ಧಗೊಳಿಸುತ್ತದೆ. ಜೊತೆಗೆ ನೈತಿಕ ಜ್ಞಾನ ನೀಡುತ್ತದೆ, ಇದು ಜಾಗೃತ ಭಾರತ ಕಟ್ಟಲು ಪ್ರೇರಣಿಯಾಗುತ್ತದೆ.
ಇದನ್ನೂ ಓದಿ:- ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಶಾಸಕ ಎಲ್.ಎನ್.ನಾರಾಯಣಸ್ವಾಮಿ
ಇಂತಹ ವೃತ್ತಿ ನಿಷ್ಠೆ ಹಾಗು ದೇಶಪ್ರೇಮ ಇರುವ ಭಾರತೀಯ ಎಂದೂ ತನ್ನ ಅಧಿಕಾರ, ಪ್ರಭಾವಗಳಿಂದ ಬೇರೆಯವರಿಂದ ಕೆಟ್ಟ ಕೆಲಸ ಮಾಡಿಸುವುದಿಲ್ಲ ಮತ್ತು ಆತ ಯಾರ ಮುಂದೆಯೂ ಭಷ್ಟನಾಗುವುದಿಲ್ಲ. ಆತನ ಕರ್ತವ್ಯಕ್ಕಾಗಿ ಇನ್ನೊಬ್ಬರನ್ನು ಪೀಡಿಸುವುದಿಲ್ಲ. ಯಾರ ಜೊತೆಯೂ ನ್ಯಾಯಯುತವಲ್ಲದ ರೀತಿಯಲ್ಲಿ ಹಣ, ಸಂಪತ್ತು, ಹೆಂಡ, ಹೆಣ್ಣು ಇವುಗಳನ್ನು ಬಯಸುವುದಿಲ್ಲ. ಇದು ನಿಜವಾದ ವೈಯಕ್ತಿಕ ಮತ್ತು ರಾಷ್ಟçಜಾಗೃತಿ. ಇದರಿಂದ ನ್ಯಾಯಯುತವಾಗಿ, ಇತರರ ಶಾಪವಿಲ್ಲದೆ ಸಂಪಾದಿಸಿದ ಒಂದು ತುತ್ತು ಅನ್ನವು ಅದು ಸಮೃದ್ಧಿಯೇ ಆಗಿದೆ. ಬಿತ್ತಿದ್ದನ್ನೆ ಬೆಳೆಯಲು ಸಾಧ್ಯ, ಬಯಸಲೂ ಸಾಧ್ಯ. ಬೇವಿನ ಮರದಿಂದ ಮಾವು ಬಯಸಲು ಹೇಗೆ ತಾನೆ ಸಾಧ್ಯ?
ಸಾರ್ವಜನಿಕ ನಂಬಿಕೆ ಮೌಲ್ಯಗಳನ್ನು ಗಾಳಿಗೆ ತೂರುವ ಭ್ರಷ್ಟಾಚಾರ, ಭಾರತದಲ್ಲಿ ಯೋಜನೆ ಹಾಗು ಅಭಿವೃದ್ಧಿ ಪ್ರಕ್ರೀಯೆಗಳನ್ನು ಹಳಿ ತಪ್ಪಿಸಿದೆ. ಭಾರತ ಸಾಧು- ಸಂತರು, ಜ್ಞಾನಿಗಳು, ವಿಜ್ಞಾನಿಗಳೂ ಹಾಗು ಸಂಸ್ಕೃತಿ, ಸಂಸ್ಕಾರ ಮತ್ತು ನೈತಿಕ ಮೌಲ್ಯಗಳಿಂದ ಸಮೃದ್ಧವಾದ ದೇಶವಿದು. ಆದರೂ ದುರಾಸೆಗಳು, ಭ್ರಷ್ಟಾಚಾರ, ಅನಾಚಾರಗಳು ತಾಂಡವವಾಡುತ್ತಿವೆ. ‘ಆಸೆಯೇ ದುಃಖಕ್ಕೆ ಮೂಲ’ ಎಂದ ಬುದ್ಧನ ಮೂಲ ಸ್ಥಾನವಿದು.
ಆದರೆ ಇತ್ತೀಚೆಗೆ ಭಾರತೀಯ ಮೌಲ್ಯ, ಸಂಸ್ಕೃತಿಗಳ ಮೇಲಿನ ಅಪನಂಬಿಕೆ, ಅನ್ಯ ದೇಶಿಯ ಸಂಸ್ಕೃತಿಗಳ ಅವಲಂಬನೆ, ಆಕರ್ಷಣೆಗಳು ನಮ್ಮ ದೇಶೀಯ ಸಂಸ್ಕಾರ ಸಮೃದ್ಧಿಯನ್ನು ಮಂಕುಗೊಳಿಸಿವೆ. ಜಾಗೃತ ಮತ್ತು ಪ್ರಜ್ಞಾವಂತ ನಾಗರಿಕತೆ ಜಾಗೃತ ಭಾರತವನ್ನು ಮರು ಸ್ಥಾಪಸಬಹುದು. ಈ ಜಾಗೃತಿ ಅನಾಗರಿಕತೆಯನ್ನು ಕೊನೆಗಾಣಿಸಿ ಭಾರತದ ಸಮೃದ್ಧತೆಗೆ ಕೊಡುಗೆ ನೀಡಬಹುದು. ಭ್ರಷ್ಟಾಚಾರವೆಂಬ ಹುಳು ಭಾರತವೆಂಬ ಕಲ್ಪವೃಕ್ಷವನ್ನು ಒಳ-ಒಳಗೆ ಕೊರೆಯುತ್ತಿದೆ. ಭಾರತದ ಸಮೃದ್ಧಿಯ ತಿರುಳು ನಶಿಸುತ್ತದೆ. ಇದನ್ನು ಕೇವಲ ಕಾನೂನು, ಶಿಕ್ಷೆಗಳಿಂದ ಕಡಿಮೆಗೊಳಿಸಲು, ನಿರ್ಮೂಲನೆ ಮಾಡಲು ಸಾಧ್ಯವಿಲ್ಲ.
ಭಾರತ ಜಾಗೃತವಾಗಬೇಕಿದೆ, ತನ್ನ ಒಡಲ ಅಮೋಘ ಸಮೃದ್ಧ ಜ್ಞಾನ ಸಂಪತ್ತು, ಮೌಲ್ಯಗಳಿಂದ ತುಂಬಿಕೊಳ್ಳಬೇಕಿದೆ. ಭ್ರಷ್ಟಾಚಾರದಂತಹ ಅನಾಚಾರಗಳನ್ನು ತಡೆಯಲು ‘ಭ್ರಷ್ಟಾಚಾರ ನಿಯಂತ್ರಣ ದಳ’ಗಳ ದಾಳಿಯಿಂದ ಸಾಧ್ಯವಿಲ್ಲ. ಅದು ಕೇವಲ ಆ ವಿಷದ ಮುಳ್ಳಿನ ರೆಂಬೆ ಕೊಂಬೆಗಳನ್ನು ಕಡಿದಂತೆ ಆಗುತ್ತದೆ ಹೊರತು ಬುಡ ಸಮೇತ ನಾಶವಾಗದು. ಅವು ಆಮಿಷಗಳ ನೀರು ಬಿದ್ದಾಗ ಮತ್ತೆ ಚಿಗುರಿಕೊಳ್ಳುತ್ತವೆ. ಭಾರತೀಯ ಸಮೃದ್ಧಿಯ ಸಂಪತ್ತೆAಬ ಅಂತರ್ಜಾಲವನ್ನು ಹೀರುತ್ತದೆ.
ಇದರ ನಿರ್ಮೂಲನೆಗೆ ಉತ್ತಮ ನೈತಿಕ ಶಿಕ್ಷಣವೆಂಬ ಸಮೃದ್ಧಿ, ಸಾಮಾಜಿಕ ಕಳಕಳಿ ಮತ್ತು ಸ್ವಂತ ಹೊಣೆಗಾರಿಕೆಯಿಂದ ಮೂಡುವ ಪ್ರಜ್ಞಾ ಪೂರ್ವಕ ಜಾಗೃತಿಯಿಂದ ಸಾಧ್ಯ. ಇಂತಹ ಜಾಗೃತಿ ಮೂಡಲು ವಿಶ್ವ ಗುರು ಭಾರತದಲ್ಲಿ ನೈಸರ್ಗಿಕ ಸಂಪತ್ತಿನ ಜೊತೆಗೆ ನೈತಿಕ ಮತ್ತು ಜ್ಞಾನ ಸಂಪತ್ತಿಗೇನು ಕಡಿಮೆಯಿಲ್ಲ. ಭಾರತೀಯ ಸಮೃದ್ಧತೆ ಕೊಳ್ಳೆ ಹೊಡೆಯುವುದನ್ನು ಮತ್ಸö್ಯದ ಹೆಜ್ಜೆಯಂತೆ ಅದರ ಜಾಡು ಹಿಡಿಯುವುದು ಕಠಿಣ, ಆದರೆ ಮತ್ಸö್ಯ ಯಂತ್ರ ಭೇದಿಸಿದ ಚರಿತ್ರೆಯುಳ್ಳ ದೇಶ ನಮ್ಮದು, ಜಾಗೃತ ಮನಸ್ಸು ಅಸಾಧ್ಯವನ್ನೂ ಸಾಧಿಸಬಲ್ಲದು ಎಂಬುದನ್ನು ಮರೆಯುವಂತಿಲ್ಲ. ಜಾಗೃತ ಭಾರತ ಸಮೃದ್ಧ ಭಾರತವನ್ನು ಕಟ್ಟಬಲ್ಲದು.
– ದಿನೇಶ ಎಂ. ಹಳೆನೇರೆಂಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?