ಯಶೋಗಾಥೆ: ಏಲಕ್ಕಿ ತೋಟದ ದಿನಗೂಲಿ ಕೆಲಸಗಾರ್ತಿ ಈಗ ಪ್ರೌಢಶಾಲಾ ಶಿಕ್ಷಕಿ…

ಕೇರಳ ಪೊಲೀಸ್ ಅಧಿಕಾರಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಆಕೆ ಆ ಬಗ್ಗೆ ಹೆಚ್ಚು ಒಲವು ತೋರಿಸಿರಿಲಿಲ್ಲ.

Team Udayavani, Jul 27, 2021, 2:52 PM IST

ಯಶೋಗಾಥೆ: ಏಲಕ್ಕಿ ತೋಟದ ದಿನಗೂಲಿ ಕೆಲಸಗಾರ್ತಿ ಈಗ ಪ್ರೌಢಶಾಲಾ ಶಿಕ್ಷಕಿ…

ಕಮಿಲೈ(ತಿರುವನಂತಪುರಂ): ವಿದ್ಯಾಭ್ಯಾಸ ಮೊಟಕುಗೊಳಿಸಿ, ಮದುವೆಯಾಗುವಂತೆ ಎಷ್ಟೇ ಒತ್ತಾಯಿಸಿದರು ಸೆಲ್ವಮಾರಿ ಕೊನೆಗೂ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಲು ಒಪ್ಪಲೇ ಇಲ್ಲ. ಜೀವನದಲ್ಲಿ ಬಹಳಷ್ಟು ಕಷ್ಟ ಕಡ ಸೆಲ್ವಮಾರಿ ರಜೆಯ ದಿನಗಳಲ್ಲಿ ಏಲಕ್ಕೆ ತೋಟದಲ್ಲಿ ದುಡಿಯುತ್ತಿದ್ದಳು. ರಾತ್ರಿಯೆಲ್ಲಾ ಓದುತ್ತಿದ್ದಳು. ಈ ಕಠಿಣ ಪರಿಶ್ರಮದ ಪರಿಣಾಮ 28ವರ್ಷದ ಸೆಲ್ವಮಾರಿ ಈಗ ಇಡುಕ್ಕಿ ಜಿಲ್ಲೆಯ ವಾಂಚಿವಾಯಲ್ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ನೇಮಕಗೊಂಡಿದ್ದಾಳೆ.

ಛಲಬಿಡದ ಸಾಧನೆ:

ಸೆಲ್ವಮಾರಿ ಚಿಕ್ಕವಳಿರುವಾಗಲೇ ಆಕೆಯ ತಂದೆ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ತ್ಯಜಿಸಿ ನಾಪತ್ತೆಯಾಗಿದ್ದರು. ಇದರಿಂದ ಪುಟ್ಟ ಎರಡು ಕೋಣೆಯಲ್ಲಿ ವಾಸವಾಗಿದ್ದ ಈ ಕುಟುಂಬಕ್ಕೆ ಜೀವನ ನಿರ್ವಹಣೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿತ್ತು. ಈಕೆಯ ತಾಯಿ ಸೆಲ್ವಂ ಮಕ್ಕಳಿಗಾಗಿ ಏಲಕ್ಕಿ ತೋಟಗಳಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ತನ್ನ ತಾಯಿಯೊಬ್ಬರೇ ಕುಟುಂಬ ನಿರ್ವಹಣೆಗಾಗಿ ದುಡಿಯುತ್ತಿರುವುದನ್ನು ಕಂಡು, ನಂತರ ತಾನೂ ಕೂಡಾ ರಜಾ ದಿನಗಳಲ್ಲಿ ಏಲಕ್ಕಿ ತೋಟದಲ್ಲಿ ದುಡಿಯತೊಡಗಿದ್ದಳು. ತಾನು ವಿದ್ಯಾಭ್ಯಾಸ ಪೂರ್ಣಗೊಳಿಸಬೇಕೆಂಬ ಛಲ ಸೆಲ್ವಮಾರಿಯದ್ದಾಗಿತ್ತು.

ಮುರಿಕ್ಕಾಡಿ ಮತ್ತು ಚೊಟ್ಟುಪಾರಾದಲ್ಲಿ ಪ್ರಾಥಮಿಕ ಮತ್ತು ಪ್ರೌಶಶಾಲೆ ಶಿಕ್ಷಣ ಪಡೆದ ಬಳಿಕ ಸೆಲ್ವಮಾರಿ ತಮಿಳುನಾಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಪಡೆದಿದ್ದಳು. ಆ ನಂತರ ಪದವಿಗಾಗಿ ತಿರುವನಂತಪುರಂನ ಸರ್ಕಾರಿ ಮಹಿಳಾ ಕಾಲೇಜಿಗೆ ಸೇರ್ಪಡಿಗೊಂಡಿದ್ದಳು. ಗಣಿತ ಈಕೆಯ ಮುಖ್ಯ ವಿಷಯಗಳಲ್ಲಿ ಒಂದಾಗಿತ್ತು. ಆಕೆಯ ಕಾಲೇಜು ದಿನಗಳಲ್ಲಿ ಮಲಯಾಳಂ ಭಾಷೆಯಿಂದ ಕಷ್ಟ ಎದುರಿಸುವಂತಾಗಿತ್ತು. ಈ ಸಂದರ್ಭದಲ್ಲಿ ನಾನು ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸುವ ಯೋಚನೆ ಮಾಡಿದ್ದೆ. ಆದರೆ ನನ್ನ ತಾಯಿ ಒಬ್ಬಂಟಿಯಾಗಿ ದುಡಿಯುತ್ತಿರುವ ದೃಶ್ಯ ನನ್ನ ಕಣ್ಣ ಮುಂದೆ ಬಂದಾಗ..ಏನೇ ಕಷ್ಟವಾಗಲಿ ವಿದ್ಯಾಭ್ಯಾಸ ಮುಂದುವರಿಸುವ ಗಟ್ಟಿ ನಿರ್ಧಾರ ಮಾಡಿದ್ದೆ ಎಂಬುದು ಸೆಲ್ವಮಾರಿಯ ನುಡಿಯಾಗಿದೆ.

ಹೀಗೆ ಪದವಿ ಪಡೆದ ನಂತರ ಎಂಎಸ್ಸಿ ಪೂರ್ಣಗೊಳಿಸಿದ್ದಳು. ನಂತರ ಕುಮಿಲೈನ ಎಂಜಿ ಯೂನಿರ್ವಸಿಟಿಯಲ್ಲಿ ಬಿಎಡ್ ಪದವಿ ಪಡೆದಿದ್ದಳು. ಬಳಿಕ ಎಂಎಡ್..ಥೈಕಾಡ್ ನಲ್ಲಿ ಎಂ ಫಿಲ್ ನಲ್ಲಿ ಮೊದಲ ರಾಂಕ್ ಗಳಿಸಿದ ಕೀರ್ತಿ ಸೆಲ್ವಮಾರಿಯದ್ದಾಗಿದೆ. ಪ್ರಸ್ತುತ ಗಣಿತದಲ್ಲಿ ಪಿಎಚ್ ಡಿ ಮಾಡುತ್ತಿದ್ದಾಳೆ. ಯುಜಿಸಿ ನೆಟ್ ಪರೀಕ್ಷೆಯಲ್ಲಿಯೂ ತೇರ್ಗಡೆ ಹೊಂದಿರುವ ಸೆಲ್ವಮಾರಿ ಪ್ರೌಢಶಾಲಾ ಶಿಕ್ಷಕಿಯಾಗಿದ್ದಾರೆ. ಕೇರಳ ಪೊಲೀಸ್ ಅಧಿಕಾರಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಆಕೆ ಆ ಬಗ್ಗೆ ಹೆಚ್ಚು ಒಲವು ತೋರಿಸಿರಿಲಿಲ್ಲ. ಶಿಕ್ಷಕಿಯಾದರೂ ಕೂಡಾ ತಾನು ನಾಗರಿಕ ಸೇವೆಯಲ್ಲಿ (ಸಿವಿಲ್ ಸರ್ವೀಸ್) ತೊಡಗಿಸಿಕೊಳ್ಳಬೇಕೆಂಬ ಕನಸು ಸೆಲ್ವಮಾರಿಯದ್ದಾಗಿದೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.