ರಾತ್ರಿ ಗ್ರೀನ್‌ ಟೀ ಕುಡಿಯುತ್ತೀರಾ?: ಆರೋಗ್ಯದ ಮೇಲೆ ಅಡ್ಡಪರಿಣಾಮ ಖಚಿತ!

ದಿನದಲ್ಲಿ ಎಷ್ಟು ಬಾರಿ ಗ್ರೀನ್‌ ಟೀ ಕುಡಿದರೆ ಉತ್ತಮ

Team Udayavani, Sep 6, 2022, 5:45 PM IST

green tea – news web exclusive

ಇತ್ತೀಚಿನ ದಿನಗಳಲ್ಲಿ ಗ್ರೀನ್ ಟೀ ಬಹಳ ಜನಪ್ರಿಯವಾಗಿದೆ. ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಗ್ರೀನ್ ಟೀ ಕುಡಿಯುತ್ತಾರೆ. ತೂಕ ಇಳಿಸುವುದರಿಂದ ಹಿಡಿದು ಒತ್ತಡದಲ್ಲಿದ್ದಾಗ ನಮ್ಮ ದೇಹದ ನರಗಳಿಗೆ ವಿಶ್ರಾಂತಿ ನೀಡುವವರೆಗೆ ಗ್ರೀನ್ ಟೀಯಿಂದ ಹಲವು ಉಪಯೋಗಗಳಿವೆ. ಇದೇ ಕಾರಣಕ್ಕೆ ತಜ್ಞರು ಗ್ರೀನ್ ಟೀಯನ್ನು ಸಹ ಶಿಫಾರಸು ಮಾಡುತ್ತಾರೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಕುಡಿದರೆ ಇನ್ನು ಕೆಲವರು ಮಲಗುವ ಮುನ್ನ ಒಂದು ಕಪ್ ಗ್ರೀನ್ ಟೀ ಕುಡಿಯಲು ಬಯಸುತ್ತಾರೆ. ಆದರೆ ಮಲಗುವ ಮುನ್ನ ಪ್ರತಿದಿನ ಗ್ರೀನ್ ಟೀ ಕುಡಿಯುವುದು ಸುರಕ್ಷಿತವೇ? ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಗ್ರೀನ್‌ ಟೀ ಆಕ್ಸಿಡೀಕರಿಸದ ಎಲೆಗಳನ್ನು ಬಳಸಿ ತಯಾರಿಸಿದ ಕಡಿಮೆ ಸಂಸ್ಕರಿಸಿದ ಚಹಾಗಳಲ್ಲಿ ಇದು ಒಂದು. ಇದು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ನಮ್ಮನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅನೇಕ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಕುಡಿಯುತ್ತಾರೆ. ಇನ್ನೂ ಕೆಲವರು ರಾತ್ರಿ ಮಲಗುವ ವೇಳೆ  ಹವ್ಯಾಸವಾಗಿ ಕುಡಿಯುತ್ತಾರೆ. ಇದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಬೀಳಬಹುದು.

ಏನಿದು ಗ್ರೀನ್‌ ಟೀ?

ಹಸಿರು ಚಹಾ ಅಥವಾ ಗ್ರೀನ್ ಟೀ ಎಲೆಗಳನ್ನು ಕ್ಯಾಮೆಲಿಯಾ ಸಿನೆನ್ಸಿಸ್ ಸಸ್ಯದಿಂದ ಹೊರತೆಗೆಯಲಾಗುತ್ತದೆ. ಒಂದು ಕಪ್ ಹಸಿರು ಚಹಾವು ನರಗಳನ್ನು ಸಡಿಲಗೊಳಿಸುವುದಲ್ಲದೆ, ಮೆದುಳಿನ ಕಾರ್ಯ ನಿರ್ವಹಣೆಯನ್ನು ಹೆಚ್ಚಿಸುತ್ತದೆ. ಹಾಗೇ, ಇದು ನಿಮ್ಮ ಜೀವಕೋಶದ ಹಾನಿಯನ್ನು ಕಡಿಮೆ ಮಾಡುತ್ತದೆ.

ಗ್ರೀನ್ ಟೀಯನ್ನು ಕುಡಿಯಲು ಸರಿಯಾದ ಸಮಯ ಯಾವುದು? ಹಸಿರು ಚಹಾವನ್ನು ಕುಡಿಯಲು ಸರಿಯಾದ ಸಮಯದ ಬಗ್ಗೆ ನಿಖರವಾಗಿ ಹೇಳಲಾಗದಿದ್ದರೂ ಕೆಫೀನ್ ಇರುವ ಈ ಗ್ರೀನ್ ಟೀಯನ್ನು ಮಲಗುವ ವೇಳೆಗೆ ಕುಡಿಯುವುದು ಒಳ್ಳೆಯದಲ್ಲ. ಕೆಫೀನ್ ವ್ಯಕ್ತಿಯ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಮತ್ತು ನಿದ್ರಾಹೀನತೆಯನ್ನು ಉಂಟು ಮಾಡಬಹುದು. ಏಕೆಂದರೆ ಇದು ಮೆದುಳಿನ ಜಾಗರೂಕತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ, ವ್ಯಕ್ತಿಗಳು ಮಲಗುವ ಮುನ್ನ ಹಸಿರು ಚಹಾ ಕುಡಿಯುವುದನ್ನು ನಿಲ್ಲಿಸುವುದು ಉತ್ತಮ. ನೀವೇನಾದರೂ ರಾತ್ರಿ ಗ್ರೀನ್ ಟೀ ಕುಡಿಯುವುದಾದರೆ ಮಲಗುವ ಮುನ್ನ ಕನಿಷ್ಠ 2ರಿಂದ 3 ಗಂಟೆಗಳ ಮೊದಲು ಕುಡಿಯಬಹುದು.

ದಿನವಿಡೀ 2ರಿಂದ 3 ಕಪ್ ಹಸಿರು ಚಹಾವನ್ನು ಸೇವಿಸಿದರೆ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಆದರೆ, 3 ಕಪ್​ಗಿಂತ ಹೆಚ್ಚು ಗ್ರೀನ್ ಟೀ ಕುಡಿದರೆ ಅಡ್ಡ ಪರಿಣಾಮಗಳು ಉಂಟಾಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಇದರಿಂದ ರಕ್ತಹೀನತೆ, ವಾಕರಿಕೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳು ಎದುರಾಗಬಹುದು.

ತೂಕ ಇಳಿಕೆಗೆ ಗ್ರೀನ್ ಟೀ ಅತ್ಯುತ್ತಮ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದು ನಮ್ಮನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಗ್ರೀನ್ ಟೀಯಲ್ಲಿ ಪಾಲಿಫಿನಾಲ್‌ಗಳು ಮತ್ತು ಕೆಫೀನ್ ಇರುತ್ತದೆ. ದಿನದಲ್ಲಿ 3 ಕಪ್ ಗಿಂತ ಹೆಚ್ಚು ಕಪ್ ಗ್ರೀನ್ ಟೀ ಕುಡಿಯಬೇಡಿ. ಇದು ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಅತಿಯಾದ ಕೆಫೀನ್ ವಾಂತಿ, ಅತಿಸಾರ, ಹೊಟ್ಟೆ ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಊಟಕ್ಕೆ ಮುಂಚೆ ಗ್ರೀನ್ ಟೀಯನ್ನು ಸೇವಿಸುವುದರಿಂದ ಮಲಬದ್ಧತೆ, ಹೊಟ್ಟೆ ನೋವು ಅಥವಾ ವಾಕರಿಕೆ ಉಂಟಾಗಬಹುದು. ಮಲಗುವ ಮುನ್ನ ಗ್ರೀನ್ ಟೀ ಕುಡಿಯುವುದರಿಂದ ನಿದ್ದೆ ಕೂಡ ಬರುವುದಿಲ್ಲ. ಆದ್ದರಿಂದ, ದಿನಕ್ಕೆ ಒಂದು ಅಥವಾ ಎರಡು ಕಪ್ ಗ್ರೀನ್ ಟೀ ಮಾತ್ರ ಕುಡಿಯುವುದು ಒಳ್ಳೆಯದು.

ಗ್ರೀನ್ ಟೀ ಕುಡಿಯಲು ಉತ್ತಮ ಸಮಯ ಯಾವುದು?

ನೀವು ದಿನನಿತ್ಯ ವ್ಯಾಯಾಮ ಮಾಡುವುದಾದರೆ ಆ ವ್ಯಾಯಾಮ ಮಾಡುವುದಕ್ಕೂ ಮುಂಚೆ ಗ್ರೀನ್ ಟೀಯನ್ನು ಸೇವಿಸಿ. ಗ್ರೀನ್ ಟೀಯನ್ನು ರಾತ್ರಿ ಮಲಗುವ ಎರಡು ಗಂಟೆಗಳ ಮುನ್ನ ಸೇವಿಸಿ. ಗ್ರೀನ್ ಟೀಯನ್ನು ಖಾಲಿ ಹೊಟ್ಟೆಯಲ್ಲಿ ಅಥವಾ ಬೆಳಗ್ಗೆ ಎದ್ದ ಕೂಡಲೇ ಸೇವಿಸಬಾರದು. ಇದರಲ್ಲಿರುವ ಹೆಚ್ಚಿನ ಕೆಫೇನ್ ಯಕೃತ್ ಗೆ ಅಪಾಯಕಾರಿ.

-ಶ್ವೇತಾ ಮುಂಡ್ರುಪ್ಪಾಡಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.