ನಕಲಿ ಖಾತೆಗಳ ವಿರುದ್ಧ ಟ್ವಿಟರ್ ಸಮರ : ಸೆಲೆಬ್ರಿಟಿಗಳಿಗೆ ಶುರುವಾದ ಆತಂಕ


Team Udayavani, Jun 16, 2021, 2:33 PM IST

9

ಅತೀ ದೊಡ್ಡ ಹಾಗೂ ಪರಿಣಾಮಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಟ್ವಿಟ್ಟರ್ ದಿನದಿಂದ ದಿನಕ್ಕೆ ಕೆಲವೊಂದು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುತ್ತಿದೆ.

ಟ್ವಿಟರ್ ನಲ್ಲಿ ಫೇಕ್ ಅಕೌಂಟ್ ಗಳ ಹಾವಳಿ ಜಾಸ್ತಿ. ಇದು ಅನೇಕ ಆವಾಂತರಗಳಿಗೆ ಎಡೆ ಮಾಡಿಕೊಡುತ್ತವೆ. ಇವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟ್ವಿಟರ್ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ನಕಲಿ ಖಾತೆಗಳನ್ನು ಮುಲಾಜಿಲ್ಲದೆ ಕಿತ್ತು ಬೀಸಾಕುತ್ತಿದೆ.

ನಕಲಿ ಖಾತೆಗಳನ್ನು ಒಕ್ಕಲೆಬ್ಬಿಸುತ್ತಿರುವ ಟ್ವಿಟರ್ ಕಟ್ಟು ನಿಟ್ಟಿನ ಕ್ರಮದಿಂದಾಗಿ ರಾಜಕಾರಣಿಗಳು ಸೇರಿದಂತೆ  ಸೆಲೆಬ್ರಿಟಿಗಳ ಬೆಂಬಲಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ.

ಜನಪ್ರಿಯ ತಾಣಗಳಲ್ಲಿ ಟ್ವಿಟ್ಟರ್​ ಕೂಡ ಒಂದು.ಅನೇಕ ಬಳಕೆದಾರರನ್ನು ಹೊಂದಿರುವ ಮತ್ತು ಸೆಲೆಬ್ರಿಟಿ, ಸಿನಿಮಾ ತಾರೆಯರು, ರಾಜಕಾರಣಿ ಹೀಗೆ ನಾನಾ ದೇಶದ ಜನಸಾಮಾನ್ಯರು ಟ್ವಿಟ್ಟರ್​ ಅನ್ನು ಬಳಸುತ್ತಾರೆ.

ಕೆಲವು ದಿನಗಳಿಂದ ಟ್ವಿಟ್ಟರ್​ನಲ್ಲಿರುವ ಕೆಲವು ಖಾತೆಗಳ ಅನುಯಾಯಿ ಸಂಖ್ಯೆಯಲ್ಲಿ ಏರಿಳಿತ ಕಂಡುಬಂದಿದೆ. ಇತ್ತೀಚೆಗೆ ಟ್ವಿಟ್ಟರ್​ನಲ್ಲಿ ಸ್ಪಾಮ್​ ಪ್ರೊಫೈಲ್​ಗಳು ಹೆಚ್ಚಾಗಿ ಕಂಡುಬಂದವು. ಅದನ್ನು ಗಮನಿಸಿದ ಟ್ವಿಟ್ಟರ್​ ತೆಗೆದುಹಾಕಿದೆ. ಇದರಿಂದಾಗಿ ಕೆಲವು ಖಾತೆ ಅನುಯಾಯಿಗಳ ಸಂಖ್ಯೆಯಲ್ಲಿ ಏರಿಳಿತ ಕಾಣಲು ಪ್ರಮುಖ ಕಾರಣವಾಗಿದೆ. ಇತ್ತೀಚೆಗೆ ಬಾಲಿವುಡ್​ ನಟರನ್ನು ಒಳಗೊಂಡು, ಅನುಪಮ್​ ಖೇರ್​ ಮತ್ತು ಟಿವಿ ಪತ್ರಕರ್ತ ರಿಚರ್​ ಖೇರ್​ ಅವರು ಒಂದು ದಿನದಲ್ಲಿ ನೂರಾರು ಅನುಯಾಯಿಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ದೂರು ನೀಡಿದ್ದಾರೆ.

ಟ್ವಿಟ್ಟರ್ ತನ್ನ​​ ಖಾತೆದಾರರ ಪಾಸ್​ವರ್ಡ್​ ಪರಿಶೀಲನೆ ಮತ್ತು ಫೋನ್​ ನಂಬರ್ ಪರಿಶೀಲಿಸುತ್ತಿದೆ. ಸ್ಪಾಮ್​ ಅನ್ನು ತಡೆಗಟ್ಟಲು ಮತ್ತು ಖಾತೆದಾರರನ್ನು ಸುರಕ್ಷಿತವಾಗಿಡಲು ನಿಯಮಿತವನ್ನಾಗಿ ಮಾಡುತ್ತೇವೆ ಎಂದು ಹೇಳಿದೆ.

ಕೆಲವು ಖಾತೆಗಳು ತಾತ್ಕಾಲಿಕ ಐಡಿಗಳೊಂದಿಗೆ ಮತ್ತು ಟ್ರೋಲ್​ ಖಾತೆಗಳಿಗಾಗಿ ನಿರ್ವಹಿಸುತ್ತಾರೆ. ಇದನ್ನರಿತು ಟ್ವಿಟ್ಟರ್​ ಪರಿಶೀಲಿಸುತ್ತಿದೆ. ಜೊತೆಗೆ ಸ್ಪಾಮ್ ಖಾತೆಗಳನ್ನು ಕಿತ್ತೆಸೆಯುತ್ತಿದೆ.
ಕಂಪನಿ ಬಳಕೆದಾರರಿಗೆ ತಮ್ಮ ವೈಯ್ಯಕ್ತಿಕ ವಿವರವನ್ನು ಸರಿಯಾಗಿ ನಮೂದಿಸಲು ಸವಾಲು ಹಾಕಿದೆ. ಸ್ಪಂದಿಸದ ಖಾತೆಗಳಿನ್ನು ಲಾಕ್​ ಮಾಡುತ್ತದೆ. ಈ ಸಮಯದಲ್ಲಿ ಪ್ರಪಫೈಲ್​ ಒಳಗೊಂಡ ಫಾಲೋವರ್ಸ್​ಗ ಳ ಬಗ್ಗೆ ಟ್ವಿಟ್ಟರ್​ ಚಿಂತಿಸುವುದಿಲ್ಲ.

ಒಟ್ಟಿನಲ್ಲಿ ಟ್ವಿಟರ್ ಕ್ರಮದಿಂದ ಸಾಕಷ್ಟು ಫೇಕ್ ಅಕೌಂಟ್ ಗಳಿಗೆ ಬೀಗ ಬಿದ್ದಿದೆ. ಇದರಿಂದ ಸೆಲೆಬ್ರಿಟಿಗಳ ಫಾಲೋವರ್ಸ ಸಂಖ್ಯೆಗಳು ಕಡಿಮೆ ಯಾಗುತ್ತಿವೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.