ಉತ್ತರ ಕರ್ನಾಟಕ ಮಂಡಕ್ಕಿ ಗಿರ್ಮಿಟ್ ಈ ತರ ಮಾಡಿ ನೋಡಿ… ಏನಂತೀರಿ…
ಈ ಪಾಕವಿಧಾನವು ಅತ್ಯಂತ ಸರಳ ಹಾಗೂ ಸುಲಭ ರೀತಿಯಲ್ಲಿ ತಯಾರಿಸಬಹುದು.
ಶ್ರೀರಾಮ್ ನಾಯಕ್, Feb 17, 2023, 5:47 PM IST
ಉತ್ತರ ಕರ್ನಾಟಕದ ಅತ್ಯಂತ ಜನಪ್ರಿಯ ಖಾದ್ಯಗಳಲ್ಲಿ ಒಂದು ಮಂಡಕ್ಕಿ ಗಿರ್ಮಿಟ್. ಇದನ್ನು ಮುಂಜಾನೆಯ ಉಪಹಾರವಾಗಿ ಅಥವಾ ಸಾಯಂಕಾಲದ ತಿಂಡಿಯನ್ನಾಗಿಯೂ ಸವಿಯಬಹುದು.
ಈ ಪಾಕವಿಧಾನವು ಅತ್ಯಂತ ಸರಳ ಹಾಗೂ ಸುಲಭ ರೀತಿಯಲ್ಲಿ ತಯಾರಿಸಬಹುದು.
ಸಂಜೆ ಸಮಯದಲ್ಲಿ ಟೀ, ಕಾಫಿ ಜೊತೆ ಏನಾದ್ರೂ ತಿನ್ನಬೇಕು ಅನಿಸ್ತಿದಿಯಾ? ಹಾಗಾದ್ರೆ ಇದು ಅತ್ಯುತ್ತಮವಾದ ಆಯ್ಕೆ. ನೀವು ಒಮ್ಮೆ ಮನೆಯಲ್ಲಿ ಪ್ರಯತ್ನಿಸಿ, ನಿಮ್ಮವರಿಗೆ ಸವಿಯಲು ನೀಡಿ.
ಬೇಕಾಗುವ ಸಾಮಗ್ರಿಗಳು
ಮಂಡಕ್ಕಿ 2 ಕಪ್, ಈರುಳ್ಳಿ – 2, ಟೊಮೇಟೊ – 1, ಹುರಿಗಡಲೆ ಪುಡಿ – 2 ಚಮಚ, ಜೀರಿಗೆ – 2 ಚಮಚ, ಬೆಲ್ಲ 2 ಚಮಚ, ಸಾಸಿವೆ – 1 ಚಮಚ, ಹುಣಸೆ ರಸ –4 ಚಮಚ, ಹಸಿ ಮೆಣಸಿನಕಾಯಿ – 3, ಅರಿಶಿನ ಪುಡಿ – 1/4 ಚಮಚ, ಎಣ್ಣೆ – 2 ಚಮಚ, ಕೊತ್ತಂಬರಿ ಸೊಪ್ಪು – ಸ್ವಲ್ಪ, ಕರಿಬೇವು-ಸ್ವಲ್ಪ, ತುರಿದ ಕ್ಯಾರೆಟ್- ಸ್ವಲ್ಪ, ಸೇವ್- ಸ್ವಲ್ಪ, ಉಪ್ಪು ರುಚಿಗೆ ತಕ್ಕಷ್ಟು.
ತಯಾರಿಸುವ ವಿಧಾನ:
-ಒಂದು ಬಾಣಲೆಗೆ ಎಣ್ಣೆ ಹಾಕಿ. ಎಣ್ಣೆ ಬಿಸಿಯಾದ ಮೇಲೆ ಒಗ್ಗರಣೆಗೆ ಸಾಸಿವೆ, ಜೀರಿಗೆ ಹಾಕಿ.
-ನಂತರ ಸಣ್ಣಗೆ ಹಚ್ಚಿದ ಹಸಿ ಮೆಣಸಿನಕಾಯಿ, ಕರಿಬೇವು ಹಾಕಿ ಸ್ವಲ್ಪ ಫ್ರೈ ಮಾಡಿ.
– ತದನಂತರ ಅರಿಶಿನ ಪುಡಿ ಮತ್ತು ಸಣ್ಣಗೆ ಹೆಚ್ಚಿದ ಈರುಳ್ಳಿಯನ್ನು ಹಾಕಿ 2 ನಿಮಿಷ ಫ್ರೈ ಮಾಡಿ.
– ಸ್ವಲ್ಪ ಹುಣಸೆ ರಸ ಮತ್ತು ಬೆಲ್ಲ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ .
-ಮತ್ತೊಂದು ಪಾತ್ರೆಯಲ್ಲಿ ಮಂಡಕ್ಕಿ ಹಾಕಿ ಅದಕ್ಕೆ ಮಾಡಿಟ್ಟ ಗಿರ್ಮಿಟ್ ಮಸಾಲ, ಸಣ್ಣಗೆ ಕತ್ತರಿಸಿದ ಟೊಮೆಟೊ, ಈರುಳ್ಳಿ, 2 ಚಮಚ ಹುರಿಗಡಲೆ ಪುಡಿ ಹಾಕಿ ಮಿಕ್ಸ್ ಮಾಡಿ.
-ಕೊನೆಯದಾಗಿ ಮೇಲ್ಗಡೆ ಸ್ವಲ್ಪ ಕೊತ್ತಂಬರಿ ಸೊಪ್ಪು, ತುರಿದ ಕ್ಯಾರೆಟ್, ಸೇವ್ ಉದುರಿಸಿ ಮೆಣಸಿನಕಾಯಿ ಬಜ್ಜಿ ಜೊತೆಗೆ ಸವಿಯಿರಿ.
-ಶ್ರೀರಾಮ್ ಜಿ . ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್