ಪ್ರವಾಸಿಗರ ನೆಚ್ಚಿನ ತಾಣ ಗೊಡಚಿನ ಮಲ್ಕಿ ಜಲಪಾತ


Team Udayavani, Jul 4, 2021, 8:32 AM IST

3265

ಸಿಹಿ ತಿಂಡಿ ‘ಕರದಂಟಿ’ಗೆ ಫೇಮಸ್ ಆಗಿರುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕು ಪ್ರವಾಸಿ ತಾಣವಾಗಿಯೂ ಖ್ಯಾತಿ ಪಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 51ಕಿ,ಮೀ ದೂರದಲ್ಲಿರುವ ಗೋಕಾಕ್ ಹಲವು ಧಾರ್ಮಿಕ ಸ್ಥಳಗಳು ಹಾಗೂ ಜಲಪಾತಗಳನ್ನು ತನ್ನ  ಒಡಲಿನಲ್ಲಿ ತುಂಬಿಕೊಂಡಿದೆ.

ಸಪ್ತ ನದಿಗಳ ನಾಡು ಗೋಕಾಕ್ ಎಂದಾಕ್ಷಣ ಎಲ್ಲರ ಕಣ್ಮುಂದೆ ಬರುವುದು ಅಲ್ಲಿರುವ ಜಲಪಾತ. ಪ್ರವಾಸಿಗರ ನೆಚ್ಚಿನ ತಾಣ ಗೋಕಾಕ್ ಜಲಪಾತದ ಜೊತೆಗೆ ಇನ್ನೂ ಸಾಕಷ್ಟು ಜಲಧಾರೆಗಳು ಇಲ್ಲಿವೆ. ಅವುಗಳಲ್ಲಿ ಗೊಡಚಿನ ಮಲ್ಕಿ ಜಲಪಾತ ಕೂಡ ಒಂದು.

ಬೆಳಗಾವಿ ಜಿಲ್ಲೆಯ ಗೋಕಾಕ್ ಬಳಿಯ ಗೊಡಚಿನಮಲ್ಕಿ ಗ್ರಾಮದಿಂದ ಸುಮಾರು 2.5 ಕಿ.ಮೀ ದೂರದಲ್ಲಿರುವ ಕಣಿವೆಯೊಂದರಲ್ಲಿ  ಮಾರ್ಕಂಡೇಯ ನದಿ ಪುಟಿದೇಳುವಾಗ ಗೊಡಚಿನಮಲ್ಕಿ ಜಲಪಾತ ರೂಪುಗೊಳ್ಳುತ್ತದೆ.

ಗೊಡಚಿನಮಲ್ಕಿ ಜಲಪಾತದಲ್ಲಿ ಎರಡು ಹಂತಗಳಿವೆ. ಮೊದಲನೆಯದು 25 ಮೀಟರ್ ಎತ್ತರ ಮತ್ತು ಎರಡನೆಯದು 18 ಮೀಟರ್ ಎತ್ತರವಿದೆ. ಗೊಡಚಿನಮಲ್ಕಿ ಜಲಪಾತವನ್ನು ಮಾರ್ಕಂಡೇಯ ಜಲಪಾತ ಎಂದೂ ಕರೆಯುತ್ತಾರೆ.

ಮಳೆಗಾಲದಲ್ಲಿ ಮಾರ್ಕಂಡೇಯ ನದಿ ರಭಸದಿಂದ ಹರಿಯುತ್ತದೆ. ಕರಿ ಬಂಡೆಗಳು, ನಡುವೆ ಹರಿವ ನದಿ, ಎತ್ತರಕ್ಕಿಂತಲೂ ವಿಶಾಲತೆಗೆ ಹೆಸರಾದ ಜಲಪಾತ … ನೋಡುಗರ ಮನ ತಣಿಸುತ್ತವೆ.

ಇಲ್ಲಿನ ಬಂಡೆಗಲ್ಲುಗಳ ಮೇಲೆ ಎಚ್ಚರದಿಂದ ಹೆಜ್ಜೆ ಇಡಬೇಕು. ಆಯ ತಪ್ಪಿದರೆ ಅಪಾಯ. ಮಕ್ಕಳು ಜತೆಗಿದ್ದರೆ ಹೆಚ್ಚು ಕಾಳಜಿ ಇರಲಿ. ನದಿಯಲ್ಲೇ ಒಂದೂವರೆ ಕಿ. ಮೀ. ದೂರದ ವರೆಗೆ ನಡೆದು ಹೋಗಬಹುದು. ಅಲ್ಲಿನ ಸೌಂದರ್ಯ ನಿಮ್ಮ ನಡಿಗೆಯ ಆಯಾಸವನ್ನೆಲ್ಲ ಮರೆಸಿಬಿಡುತ್ತದೆ. ನೀರು ಧುಮುಕುವ ದೃಶ್ಯ ರೋಮಾಂಚನಕಾರಿ. ಮಳೆಗಾಲದಲ್ಲಿ ಇಂಥ ಜಲಪಾತಗಳನ್ನು ಕಷ್ಟಪಟ್ಟಾದರೂ ನೋಡಬೇಕು.

ದೊಡ್ಡ ತೆರೆದ ಕಣಿವೆಯ  ನಡುವೆ  ಭೋರ್ಗರಿಸುವ ಜಲಪಾತದ ದೃಶ್ಯ ವೈಭವ ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. ರಸ್ತೆಯ ಮೂಲಕ ಪ್ರವೇಶಿಸಬಹುದಾದರೂ, ಗೊಡಚಿನಮಲ್ಕಿ ಹಳ್ಳಿಯಿಂದ ಜಲಪಾತದವರೆಗೆ ಕೆಲವು ಕಿಲೋಮೀಟರ್ ಚಾರಣ ಕೈಗೊಳ್ಳುವುದು ಜನಪ್ರಿಯ ಚಟುವಟಿಕೆಯಾಗಿದೆ.

ಜುಲೈ ನಿಂದ ಅಕ್ಟೋಬರ್ ಗೊಡಚಿನಮಲ್ಕಿ ಜಲಪಾತವನ್ನು ಭೇಟಿ ಮಾಡಲು ಉತ್ತಮ ಸಮಯವಾಗಿದೆ. ಏಕೆಂದರೆ ಈ ಅವಧಿಯಲ್ಲಿ ನೀರಿನ ಮಟ್ಟ ಹೆಚ್ಚಿರುತ್ತದೆ ಮತ್ತು ದೃಶ್ಯ ವೈಭವ ಗರಿಷ್ಟ ಮಟ್ಟದಲ್ಲಿರುತ್ತದೆ.

ಇನ್ನು ಈ ಜಲಪಾತದ ಹತ್ತಿರ ಗೋಕಾಕ ಜಲಪಾತ (14 ಕಿ.ಮೀ) ಮತ್ತು ಹಿಡ್ಕಲ್ ಜಲಾಶಯ (22 ಕಿ.ಮೀ) ಭೇಟಿಕೊಡಬಹುದಾದ ಹತ್ತಿರದ ಪ್ರವಾಸಿ ಸ್ಥಳಗಳಾಗಿವೆ.

ತಲುಪುವುದು ಹೇಗೆ:

ಗೊಡಚಿನಮಲ್ಕಿ ಜಲಪಾತ ಬೆಂಗಳೂರಿನಿಂದ 538 ಕಿ.ಮೀ ಮತ್ತು ಜಿಲ್ಲಾ ಕೇಂದ್ರ ಬೆಳಗಾವಿಯಿಂದ 51 ಕಿ.ಮೀ. ದೂರದಲ್ಲಿದೆ. ಬೆಳಗಾವಿ ಹತ್ತಿರದ ವಿಮಾನ ನಿಲ್ದಾಣ ಮತ್ತು ಪಚಾಪುರ (9 ಕಿ.ಮೀ ದೂರದಲ್ಲಿ) ಹತ್ತಿರದ ರೈಲು ನಿಲ್ದಾಣವಾಗಿದೆ. ಗೊಡಚಿನಮಲ್ಕಿ ಜಲಪಾತವನ್ನು ತಲುಪಲು ಬೆಳಗಾವಿ ಅಥವಾ ಪಚಾಪುರದಿಂದ ಟ್ಯಾಕ್ಸಿ ಬಾಡಿಗೆಗೆ ಪಡೆಯಬಹುದಾಗಿದೆ.

ವಸತಿ: ಗೋಕಾಕ್ (18 ಕಿ.ಮೀ) ನಲ್ಲಿ ಹೋಟೆಲ್‌ಗಳು ಮತ್ತು ಹೋಂ-ಸ್ಟೇಗಳು ಲಭ್ಯವಿದೆ. ಬೆಳಗಾವಿ ನಗರ (51 ಕಿ.ಮೀ) ಹೆಚ್ಚಿನ ಆಯ್ಕೆಗಳನ್ನು ಹೊಂದಿದೆ.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.