ಸಮರ ಕಲೆಯನ್ನುಜೀವಂತವಾಗಿರಿಸಿದ ಕೇರಳದ 78ರ ವೃದ್ಧೆ!

2017 ರಲ್ಲಿ ಮೀನಾಕ್ಷಿ ಅಮ್ಮ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Team Udayavani, Oct 1, 2021, 11:59 AM IST

vatakar

ವಟಕರ : 78ರ ಹರೆಯದ ಈ ವೃದ್ಧೆಯ ಜೀವನೋತ್ಸಾಹ ನೋಡಿದರೆ ಎಂತಹವರೂ ವಿಸ್ಮಯಗೊಳ್ಳಬೇಕು. ದೇಶದ ಅತ್ಯಂತ ಪುರಾತನ ಸಮರಕಲೆಗಲ್ಲಿ ಒಂದಾಗಿರುವ ಕೇರಳದ ಕಳರಿ ಪಯಟ್ಟುವಿನಲ್ಲಿ ಪಳಗಿ ಇಳಿ ವಯಸ್ಸಿನಲ್ಲಿ ಯುವಕರೂ ನಾಚುವಂತೆ ಹೋರಾಟ ನೀಡುತ್ತಿದ್ದಾರೆ.

ಇನ್ನೂ 4೦ ರ ಹರೆಯದ ಮಹಿಳೆಯಂತೆ ಕಾಣುವ ಮೀನಾಕ್ಷಿ ಅಮ್ಮ ಅವರು ಬಿದಿರಿನ ಗಳ ಹಿಡಿದು ಪುತ್ರನೊಂದಿಗೆ ಸಮದಂಡಿನ ಹೋರಾಟ ನೀಡಿ ಬೆರಗು ಮೂಡಿಸುತ್ತಾರೆ.

ಕೇರಳದ ಅತ್ಯಂತ ಪುರಾತನ ಕಲೆಯಾಗಿರುವ ಕಳರಿ ಪಯಟ್ಟುವಿನ ಪುನರುತ್ಥಾನಕ್ಕೆ ಸಂಕಲ್ಪ ಮಾಡಿರುವ ಮೀನಾಕ್ಷಿ ಅಮ್ಮ ಮುಂದಿನ ತಲೆಮಾರಿಗೆ ಈ ಸಮರಾ ಕಲೆ ತಲುಪಬೇಕು ಎನ್ನುವ ಮಹದಾಸೆ ಹೊತ್ತಿದ್ದಾರೆ.

‘ನಾನು 7 ವರ್ಷದ ಬಾಲಕಿ ಇರುವಾಗ ಕಳರಿ ಪಯಟ್ಟು ಅಭ್ಯಾಸ ಆರಂಭಿಸಿದೆ. ನನಗೀಗ 78 ವರ್ಷ ಪ್ರಾಯ, ನನ್ನ ದಿವಂಗತ ಪತಿ ಅವರು 1949ರಲ್ಲಿ ಪ್ರಾರಂಭಿಸಿದ ಕಡತನಾಡ್ ಸಂಗಮ್ ಕಳರಿ ಶಾಲೆಯಲ್ಲಿ ಈಗಲೂ ನಾನು ಕಲಿಯುತ್ತಿದ್ದೇನೆ, ಉತ್ಸಾಹಿಗಳಿಗೆ ಕಲಿಸುತ್ತಿದ್ದೇನೆ’ ಎಂದರು.

‘ಈಗ ಪತ್ರಿಕೆಗಳನ್ನು ತೆರೆದರೆ ಕೇವಲ ಮಹಿಳೆಯರ ಮೇಲಿನ ದೌರ್ಜನ್ಯವನ್ನೇ ಕಾಣಬೇಕಾಗಿದೆ. ಹೆಣ್ಮಕ್ಕಳು ಸಮರ ಕಲೆಯನ್ನು ಅಭ್ಯಾಸ ಮಾಡಿದರೆ ದೈಹಿಕ ಮತ್ತು ಮಾನಸಿಕವಾಗಿ ಶಕ್ತರಾಗುತ್ತಾರೆ ಮಾತ್ರವಲ್ಲದೆ ಒಂಟಿಯಾಗಿ ತೆರಳಲು ಮತ್ತು ಕೆಲಸ ಮಾಡಲು ವಿಶ್ವಾಸ ಮೂಡಿಸುತ್ತದೆ’ ಎಂದರು.

3,000 ವರ್ಷಗಳ ಇತಿಹಾಸ ಹೊಂದಿರುವ ಕಳರಿ ಸಮರ ಕಲೆಯಲ್ಲಿ ಯೋಗ ಮತ್ತು ನೃತ್ಯ ಅಡಕವಾಗಿದ್ದು, ಕತ್ತಿಯೊಂದಿಗೆ ಗುರಾಣಿ ಮತ್ತು ಬಿದಿರಿನ ಗಳಗಳನ್ನು ಹಿಡಿದು ರೋಮಾಂಚನಕಾರಿಯಾಗಿ ಹೋರಾಟ ನಡೆಸುವುದು ವಿಶೇಷ.

ಈ ಕಲೆಯಿಂದ ತಮಗೆ ಅಪಾಯವಾಗುವ ಸಾಧ್ಯತೆಯನ್ನು ಅರಿತ ಬ್ರಿಟಿಷರು 1804ರಲ್ಲಿ ನಿಷೇಧ ಹೇರಿದ್ದರು. ಗುಪ್ತವಾಗಿದ್ದ ಕಳರಿ ಕಲೆ ಸ್ವಾತಂತ್ರ್ಯದ ಬಳಿಕವೇ ಮತ್ತೆ ಮುನ್ನೆಲೆಗೆ ಬಂದಿತ್ತು .

ಕಳರಿಯನ್ನು ಈಗ ಕ್ರೀಡೆಯಾಗಿ ದೇಶದಲ್ಲಿ ಅಭ್ಯಾಸ ನಡೆಸಲಾಗುತ್ತಿದ್ದು ಪ್ರೋತ್ಸಾಹವೂ ನೀಡಲಾಗುತ್ತಿದೆ.

ಮೀನಾಕ್ಷಿ ಅಮ್ಮನವರ ಕಳರಿ ಶಾಲೆಯ ಒಳಗೆ ಪುತ್ರ ಸಂಜೀವ್ ಅವರು ಕಚ್ಚೆಯನ್ನು ಉಟ್ಟುಕೊಂಡು ಎದೆಗಾರಿಕೆ ತೋರುತ್ತಾ,ಬಾಲಕರು ಮತ್ತು ಬಾಲಕಿಯರಿಗೆ ಸಮರ ಕಲೆಯನ್ನು ಕಲಿಸುವ ವೇಳೆ ಮಾತನಾಡಿದರು.

‘ಕಲರಿಯಲಿ ಎರಡು ವಿಧಗಳಿದ್ದು ಒಂದು ಶಾಂತಿಯುತ ಇನ್ನೊಂದು ಸಮರಕ್ಕಾಗಿ’ ಎಂದು ಸಂಜೀವ್ ತಿಳಿಸಿದರು.

‘ನಾನು ನನ್ನ ಸಹೋದರನೊಂದಿಗೆ ಕಳರಿಯನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದೇನೆ. ಇಲ್ಲವಾದಲ್ಲಿ ಪುರಾತನ ಕಲೆ ನಶಿಸಿ ಹೋಗುತ್ತದೆ. ನಾವು ಮಾನಸಿಕವಾಗಿ ಮತ್ತು ದೈಹಿಕವಾಗಿ ಸಂಪೂರ್ಣವಾಗಿ ಕಳರಿಯಲ್ಲಿ ತೊಡಗಿಸಿಕೊಂಡರೆ ವಿರೋಧಿಗಳು ಮರೆಯಾಗುತ್ತಾರೆ. ದೇಹವೇ ಕಣ್ಣಾಗುತ್ತದೆ.ಇದು ಮನಸ್ಸನ್ನು, ದೇಹ ಮತ್ತು ಆತ್ಮವನ್ನು ಶುದ್ಧೀಕರಿಸಿ ಏಕಾಗ್ರತೆಯನ್ನು ಜಾಗ್ರತಿ ಮಾಡಿಸುತ್ತದೆ. ವೇಗ ಮತ್ತು ತಾಳ್ಮೆ ಬರಿಸುತ್ತದೆ. ದೈಹಿಕ ಮತ್ತು ಮಾನಸಿಕ ಶಕ್ತಿ ನೀಡುತ್ತದೆ’ ಎಂದು ಮೀನಾಕ್ಷಿ ಅಮ್ಮ ಅವರ ಮೊಮ್ಮಗಳು ಸಿವಿಲ್ ಇಂಜಿನಿಯರ್ ಆಗಿರುವ ಅಲಕಾ ಅವರು ಕವಿತೆಯ ರೂಪದಲ್ಲಿ ಕಲೆಯ ಮಹತ್ವವನ್ನು ಹೇಳಿದರು.

2017 ರಲ್ಲಿ ಮೀನಾಕ್ಷಿ ಅಮ್ಮ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.