Health Tips: ಆರೋಗ್ಯಕ್ಕೂ ಸೈ, ಸೌಂದರ್ಯಕ್ಕೂ ಸೈ…ಬೀಟ್‌ರೂಟ್


Team Udayavani, Sep 8, 2023, 5:20 PM IST

13–web

ನಾವು ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆರೋಗ್ಯವಂತ ತರಕಾರಿಗಳಲ್ಲಿ ಬೀಟ್‌ರೂಟ್ ಕೂಡಾ ಒಂದು. ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ನಮ್ಮ ಅಡುಗೆ ಪದಾರ್ಥದಲ್ಲಿ ನಿಯಮಿತವಾಗಿ ಬಳಸಿಕೊಂಡರೆ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶ ನಿಯಂತ್ರಣದಲ್ಲಿಡಲು ಬೀಟ್‌ರೂಟ್ ಉಪಕಾರಿಯಾಗಿದೆ. ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್‌ರೂಟ್ ಸಹಾಯಕ. ಬೀಟ್‌ರೂಟ್ ನಲ್ಲಿ ಹಲವಾರು ವಿಧದ ವಿಟಮಿನ್ ಗಳು ಖನಿಜಾಂಶಗಳು ಇವೆ. ಬೀಟ್ ರೂಟ್ ತಿಂದರೆ ಅಥವಾ ಅದರ ಜ್ಯೂಸ್ ಕುಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಳ:
ಬೀಟ್‌ರೂಟ್ ನಲ್ಲಿ ಕಬ್ಬಿಣದ ಅಂಶ ಅತಿ ಹೆಚ್ಚಿರುವ ಕಾರಣ ರಕ್ತಹೀನತೆ ಹೋಗಲಾಡಿಸಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಹೀಮೋಗ್ಲೋಬಿನ್ ಕೊರತೆ ಇರುವವರು ವಾರಕ್ಕೊಮ್ಮೆಯಾದರೂ ಬೀಟ್‌ರೂಟ್ ಪಲ್ಯ ಸೇವನೆ ಮಾಡುವುದು ಒಳ್ಳೆಯದು.

ಕ್ಯಾನ್ಸರ್ ತಡೆಗಟ್ಟಲು:
ಬೀಟ್‌ರೂಟ್‌ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ಸಹಾಯಕ ಎನ್ನಲಾಗುತ್ತದೆ. ಬೀಟ್‌ರೂಟ್ ನಿಯಮಿತ ಸೇವನೆಯಿಂದ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು. ಬೀಟ್‌ರೂಟ್ ಸೇವಿಸುವುದರಿಂದ ದೇಹದಲ್ಲಿ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ.

ರಕ್ತ ಶುದ್ದೀಕರಿಸಲು:
ಬೀಟ್‌ರೂಟ್ ನಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್, ಫೈಬರ್ ಮತ್ತು ರೋಗನಿರೋಧಕ ಶಕ್ತಿ ಸಮೃದ್ಧವಾಗಿದೆ. ಇದು ರಕ್ತ ಶುದ್ದೀಕರಿಸಲು ಸಹಾಯ ಮಾಡುತ್ತದೆ.

ಬೀಟ್‌ರೂಟ್ ಜ್ಯೂಸ್:
ಬೀಟ್‌ರೂಟ್ ಜ್ಯೂಸ್ ಕುಡಿಯುವುದರಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಹೃದಯ ಆರೋಗ್ಯಕರವಾಗಿರುತ್ತದೆ. ಅಧಿಕ ರಕ್ತದೊತ್ತಡ ಇರುವವರಿಗೆ ಬೀಟ್‌ರೂಟ್ ಜ್ಯೂಸ್ ಉತ್ತಮ ಔಷದಿ ಎಂದು ಹೇಳಬಹುದು.

ಮುಖ/ ಚರ್ಮದ ಕಾಂತಿ:
ಬೀಟ್‌ರೂಟ್ ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಬಿಸಾಡುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕ ಎಂದು ಹೇಳಬಹುದು. ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಆ ಮಿಶ್ರಣವನ್ನು ಮುಖಕ್ಕೆ ಹಚ್ಚಿ ಸ್ವಲ್ಪ ಹೊತ್ತಿನ ಬಳಿಕ ತೊಳೆದುಕೊಳ್ಳಬೇಕು. ಆದ್ದರಿಂದ ನಯವಾದ, ಕಲೆಯಿಲ್ಲದ, ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯ. ಬೀಟ್ ರೂಟ್ ಜ್ಯೂಸ್ ಚರ್ಮವನ್ನು ನಿರ್ವಿಷಗೊಳಿಸುವ ಕೆಲಸ ಮಾಡುತ್ತದೆ. ಮುಖದಲ್ಲಿನ ರಂಧ್ರಗಳನ್ನು ತೆರವುಗೊಳಿಸುತ್ತದೆ. ಚರ್ಮ ಹೊಳೆಯುವಂತೆ ಮಾಡುತ್ತದೆ.

ವಯಸ್ಸಾದಂತೆ ಕಾಣುವುದರಿಮದ ತಪ್ಪಿಸಿಕೊಳ್ಳಲು:
ಬೀಟ್‌ರೂಟ್ ಜ್ಯೂಸ್ ನಿತ್ಯ ಕುಡಿದರೆ ಅದರಿಂದ ವಯಸ್ಸಾಗುವ ಲಕ್ಷಣಗಳನ್ನು ತಡೆಯಬಹುದಾಗಿದೆ. ಬೀಟ್‌ರೂಟ್‌ನಲ್ಲಿ ಇರುವಂತಹ ಫಾಲಟೆ ಅಂಶ ಈ ಕಾರ್ಯಕ್ಕೆ ಕಾರಣ. ಇದು ಚರ್ಮದ ಸಮಸ್ಯೆ ಮತ್ತು ನೆರಿಗೆ ವಿರುದ್ಧ ಹೋರಾಡುವುದು ಮಾತ್ರವಲ್ಲದೆ ಚರ್ಮಕ್ಕೆ ಪುನಶ್ಚೇತನ ನೀಡುತ್ತದೆ. ನಿಯಮಿತವಾಗಿ ಬೀಟ್ ರೂಟ್ ಜ್ಯೂಸ್ ಕುಡಿದರೆ ಅದರಿಂದ ಆರೋಗ್ಯಕಾರಿ ಮತ್ತು ಕಾಂತಿಯುತ ಚರ್ಮ ಪಡೆಯಬಹುದು.

ಕೂದಲು ಆರೈಕೆಗೆ ಸಹಕಾರಿ:
ಕೂದಲಿನ ಆರೈಕೆಗೆ ಬೀಟ್‌ರೂಟ್ ಸಹಕಾರಿಯಗಿದೆ. ಕೂದಲು ಉದುರುವಿಕೆಯಿಂದ ಬಳಲುತ್ತಿರುವವರು ಬೀಟ್‌ರೂಟ್ ತಮ್ಮ ದೈನಂದಿನ ಆಹಾರದಲ್ಲಿ ಬಳಸಿಕೊಳ್ಳಬೇಕು. ಬೀಟ್‌ರೂಟ್ ರಸ ಕೂದಲು ಉದುರುವುದನ್ನು ತಡೆಯುತ್ತದೆ. ಬೀಟ್‌ರೂಟ್ ನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿರುವುದರಿಂದ ಕೂದಲಿನ ಬೆಳವಣಿಗೆಗೆ ಉತ್ತಮ. ಬೀಟ್‌ರೂಟ್ ಜ್ಯೂಸ್ ಕೂದಲಿನ ಕಾಂತಿ ಮತ್ತು ಹೊಳಪವನ್ನು ಕಾಪಾಡಿಕೊಂಡು ಕೂದಲಿನ ಸಂಪೂರ್ಣ ಆರೋಗ್ಯ ಕಾಪಾಡುತ್ತದೆ. ನೈಸರ್ಗಿಕವಾಗಿ ಸೌಂದರ್ಯ ಪಡೆಯಲು ಕೂದಲಿಗೆ ಕೂಡ ಬೀಟ್‌ರೂಟ್ ಬಳಸಬಹುದು. ಬೀಟ್ ರೂಟ್ ಕೂದಲಿನ ಗುಣಮಟ್ಟವನ್ನು ಚೆನ್ನಾಗಿ ಕಾಪಾಡಿಕೊಳ್ಳುತ್ತದೆ ಎನ್ನಲಾಗುತ್ತದೆ. ಬೋಳು ತಲೆ, ಕೂದಲು ಉದುರುವಿಕೆ ಮತ್ತು ಕಾಂತಿಯುತ ಕೂದಲು ಪಡೆಯಲು ಬೀಟ್ ರೂಟ್ ಜ್ಯೂಸ್ ನಿಯಮಿತವಾಗಿ ಬಳಸಿಕೊಳ್ಳಬಹುದು. ಬೀಟ್ ರೂಟ್ ಜ್ಯೂಸ್ ಗೆ ಸ್ವಲ್ಪ ಶುಂಠಿ ಹಾಕಿ ಕುಡಿದರೆ ಆಗ ಕೂದಲು ಉದುರುವಿಕೆ ಸಮಸ್ಯೆ ನಿವಾರಣೆ ಮಾಡಬಹುದು. ಬೀಟ್ ರೂಟ್ ಜ್ಯೂಸ್ ಗೆ ವಿನೇಗರ್ ಹಾಕಿದರೆ ಆಗ ಕೂದಲು ಉದುರುವಿಕೆ ಸಮಸ್ಯೆ ನಿವಾರಣೆ ಆಗುವುದು.

ಕಣ್ಣಿನ ಡಾರ್ಕ್ ಸರ್ಕಲ್:
ಡಾರ್ಕ್ ಸರ್ಕಲ್ ಹೆಚ್ಚಿನವರಿಗೆ ಸಾಮಾನ್ಯವಾಗಿ ಕಾಡುವ ಸಮಸ್ಯೆಯಾಗಿದೆ. ಇದಕ್ಕೆ ಬೀಟ್‌ರೂಟ್ ಜ್ಯೂಸ್ ತುಂಬಾ ಒಳ್ಳೆಯದು. ಬೀಟ್‌ರೂಟ್ ರಸವನ್ನು ಪ್ರತಿದಿನ ಕಣ್ಣಿನ ಕೆಳಗೆ ಹಚ್ಚುವುದರಿಂದ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತವೆ.

ಕೂದಲಿನ ಆರೈಕೆಗೆ ಸಹಕಾರಿ:
ಕೂದಲು ಉದುರುವಿಕೆ ಮತ್ತು ಕಾಂತಿಯುತ ಕೂದಲು ಪಡೆಯಲು ಬೀಟ್‌ರೂಟ್ ಜ್ಯೂಸ್ ಬಳಸುವುದು ಉತ್ತಮ ಪರಿಹಾರ. ಬೀಟ್‌ರೂಟ್ ಜ್ಯೂಸ್ ಗೆ ಸ್ವಲ್ಪ ಶುಂಠಿ ಹಾಕಿ ಕುಡಿಯುವುದರಿಂದ ಕೂದಲು ಉದುರುವಿಕೆ ಸಮಸ್ಯೆ ನಿವಾರಣೆಯಾಗುತ್ತದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.