ಚಿನ್ನಾಭರಣ ಧರಿಸುವುದು ಸೌಂದರ್ಯಕ್ಕೆ ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಸಹಕಾರಿ..!

24 ಕ್ಯಾರೆಟ್ ಚಿನ್ನವು ಚರ್ಮದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಾವ್ಯಶ್ರೀ, Sep 12, 2022, 5:45 PM IST

THUMB WEB EXCLUSIVE GOLD

ಭಾರತೀಯ ಸಂಸ್ಕೃತಿಯಲ್ಲಿ ಚಿನ್ನಾಭರಣಗಳಿಗೆ ವಿಶೇಷವಾದ ಮಹತ್ವವಿದೆ. ಪೂಜೆ, ಮದುವೆ ಸಮಾರಂಭಗಳಲ್ಲಿ ಚಿನ್ನಾಭರಣಗಳನ್ನು ಹೆಚ್ಚು ಬಳಸಲಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಚಿನ್ನದ ಆಭರಣಗಳ ಬಗ್ಗೆ ವಿಶೇಷ ಆಸಕ್ತಿ ಇರುತ್ತದೆ. ಭಾರತೀಯ ಮಹಿಳೆಯರು ತಮ್ಮ ಆಭರಣಗಳೊಂದಿಗೆ ವಿಶೇಷವಾದ ಬಾಂಧವ್ಯವನ್ನು ಹೊಂದಿರುತ್ತಾರೆ. ಚಿನ್ನದ ಕಿವಿಯೋಲೆಗಳು, ನೆಕ್ಲೆಸ್ ಗಳು, ಚಿನ್ನದ ಸರ ಅಥವಾ ಬಳೆಗಳು… ಹೀಗೆ ವಿವಿಧ ವಿನ್ಯಾಸಗಳಲ್ಲಿ ಮಾಡಿದ ಚಿನ್ನದ ಆಭರಣಗಳನ್ನು ಧರಿಸುವುದೆಂದರೆ ಮಹಿಳೆಯರಿಗೆ ಅಚ್ಚುಮೆಚ್ಚು.

ಚಿನ್ನ ಸಂಪತ್ತು ಮತ್ತು ಸಮೃದ್ಧಿಯ ಸಂಕೇತವಾಗಿದ್ದರೂ, ಚಿನ್ನವು ಅಂತರರಾಷ್ಟ್ರೀಯ ಹಣದ ಮಾರುಕಟ್ಟೆಯಲ್ಲಿ ವಿದೇಶಿ ವಿನಿಮಯಕ್ಕಾಗಿ ಬಳಸಬಹುದಾದ ಲೋಹ. ಬೆಳ್ಳಿ, ಪ್ಲಾಟಿನಂ, ವಜ್ರ ಹೀಗೆ ಮೊದಲಾದ ಆಭರಣಗಳನ್ನು ತಯಾರಿಸಬಹುದಾದರೂ ಚಿನ್ನಕ್ಕೆ ಅನಾದಿ ಕಾಲದಿಂದ ಇಂದಿನವರೆಗೂ ಅದರದ್ದೇ ಆದ ಪ್ರಾಶಸ್ತ್ಯವಿದೆ.

ಚಿನ್ನಾಭರಣವನ್ನು ಪುರಾತನ ಕಾಲದಿಂದಲೂ ಮಹಿಳೆಯರು ಹೆಚ್ಚಾಗಿ ಬಳಸಿಕೊಂಡು ಬರುತ್ತಿದ್ದಾರೆ. ತಮ್ಮ ಪ್ರತಿಯೊಂದು ಆಭರಣದೊಂದಿಗೆ ಮಹಿಳೆಯರು ಭಾವನಾತ್ಮಕವಾಗಿ ಬೆಸೆದಿರುತ್ತಾರೆ. ಚಿನ್ನಾಭರಣ ಧರಿಸಿದರೆ ಮಹಿಳೆಯರ ಸೌಂದರ್ಯ ಕೂಡಾ ವೃದ್ದಿಯಾಗುತ್ತದೆ. ಆದರೆ ಚಿನ್ನಾಭರಣ ಮಹಿಳೆಯರ ಅಂದವನ್ನು ಹೆಚ್ಚಿಸುವುದು ಮಾತ್ರವಲ್ಲದೇ ಆರೋಗ್ಯವನ್ನು ಕೂಡಾ ಕಾಪಾಡುತ್ತದೆ.

ಚಿನ್ನದ ಆಭರಣಗಳನ್ನು ಧರಿಸುವುದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂಬ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಚಿನ್ನದ ಆಭರಣಗಳನ್ನು ಧರಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು ಏನು ಎಂಬುದನ್ನು ತಿಳಿಯೋಣ.

ರೋಗ ನಿರೋಧಕ ಶಕ್ತಿ ಹೆಚ್ಚಳ: ಶುದ್ಧವಾದ ಚಿನ್ನದ ಆಭರಣಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹದಲ್ಲಿನ ಗಾಯಗಳಿಗೆ ಚಿಕಿತ್ಸೆ ನೀಡಲು ಚಿನ್ನವನ್ನು ಸಹ ಬಳಸಲಾಗುತ್ತದೆ. ಗಾಯಕ್ಕೆ ಚಿನ್ನವನ್ನು ಹಚ್ಚಿದಾಗ, ಅದು ಸೋಂಕನ್ನು ತಡೆಯುತ್ತದೆ ಮತ್ತು ಸರಿಯಾಗಿ ಚಿಕಿತ್ಸೆ ನೀಡುತ್ತದೆ.

ತ್ವಚೆಗೆ ತುಂಬಾ ಪ್ರಯೋಜನಕಾರಿ: ದೇಹದ ಉಷ್ಣತೆಯನ್ನು ನಿಯಂತ್ರಿಸಲು ಕೂಡಾ ಚಿನ್ನ ಸಹಾಯ ಮಾಡುತ್ತದೆ. ಇದು ತಾಪಮಾನದ ಕಾರಣದಿಂದಾಗಿ ತುಂಬಾ ಶೀತವನ್ನು ಅನುಭವಿಸುವುದು ಅಥವಾ ಹಠಾತ್ ಜ್ವರದ ಶಾಖವನ್ನು ಅನುಭವಿಸುವುದು ಮುಂತಾದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

24 ಕ್ಯಾರೆಟ್ ಚಿನ್ನವು ಚರ್ಮದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಚಿನ್ನವು ದೇಹದ ಜೀವಕೋಶಗಳನ್ನು ಪುನರುತ್ಪಾದಿಸುವಲ್ಲಿಯೂ ಸಹಾಯ ಮಾಡುತ್ತದೆ. ಅಲ್ಲದೆ, ಚಿನ್ನವನ್ನು ಅನೇಕ ತ್ವಚೆ ಮತ್ತು ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ಎಸ್ಜಿಮಾ, ಶಿಲೀಂಧ್ರ ಸೋಂಕುಗಳು, ದದ್ದು, ಗಾಯಗಳು, ಕಿರಿಕಿರಿ ಮುಂತಾದ ಚರ್ಮದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಚಿನ್ನವನ್ನು ಬಳಸಲಾಗುತ್ತದೆ.

ದೌರ್ಬಲ್ಯ ಸಮಸ್ಯೆ: ಯಾರಿಗೆ ಆಯಾಸ, ದೌರ್ಬಲ್ಯ ಮತ್ತು ರಕ್ತಹೀನತೆಯ ಸಮಸ್ಯೆಗಳಿರುತ್ತವೆಯೋ, ಅವರು ಚಿನ್ನದ ಆಭರಣಗಳನ್ನು ಧರಿಸಬಹುದು. ಚಿನ್ನದ ಆಭರಣಗಳನ್ನು ಧರಿಸುವ ಮೂಲಕ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಚಿನ್ನದ ಆಭರಣಗಳನ್ನು ಧರಿಸುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ ಮತ್ತು ತೂಕ ಹೆಚ್ಚಾಗಲು ಸಹಾಯ ಮಾಡುತ್ತದೆ.

ಕಿವಿಯೋಲೆ: ಚಿನ್ನದ ಕಿವಿಯೋಲೆ ಧರಿಸುವುದರಿಂದ ಮಹಿಳೆಯರಿಗೆ ಸ್ತ್ರೀ ರೋಗಗಳಿಗೆ ಪರಿಹಾರ ಸಿಗುತ್ತದೆ. ಪುರುಷರು ಕೂಡಾ ಸಣ್ಣ ಕಿವಿಯೋಲೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಕಿವಿಯಲ್ಲಿ ಆಭರಣಗಳನ್ನು ಧರಿಸುವುದರಿಂದ ಕಿವಿಯ ಸೋಂಕುಗಳ ಅಪಾಯ ಕಡಿಮೆಯಾಗುತ್ತದೆ. ಕಿವಿ ಚುಚ್ಚಿದರೆ ಪುಟ್ಟ ಮಕ್ಕಳ ಹಠ ಕಡಿಮೆಯಾಗುತ್ತದೆ ಎಂಬ ನಂಬಿಕೆ ಇದೆ. ಕಿವಿಗೆ ಆಭರಣ ಧರಿಸುವುದರಿಂದ ಕಿವಿ ರೋಗಗಳು, ಖಿನ್ನತೆ ಮತ್ತು ಒತ್ತಡದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. ಮಾನಸಿಕ ಆರೋಗ್ಯವನ್ನು ಕೂಡಾ ಸುಧಾರಿಸುತ್ತದೆ.

ತೋರು ಬೆರಳಿಗೆ ಚಿನ್ನ ಧರಿಸುವುದರಿಂದ ಮನಸ್ಸಿನ ಏಕಾಗ್ರತೆಯೂ ಹೆಚ್ಚುತ್ತದೆ. ಚಿನ್ನದ ಬಳಕೆಯು ಮಾದಕ ವ್ಯಸನವನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಮಾದಕ ವ್ಯಸನವನ್ನು ಕಡಿಮೆ ಮಾಡಲು ಚಿನ್ನವನ್ನು ಔಷಧಿಗಳಲ್ಲಿ ಬಳಸಲಾಗುತ್ತದೆ.

ಋತುಬಂಧಕ್ಕೆ ಒಳಗಾಗುವ ಮಹಿಳೆಯರಿಗೆ ಚಿನ್ನದ ಆಭರಣಗಳನ್ನು ಧರಿಸುವುದು ತುಂಬಾ ಪ್ರಯೋಜನಕಾರಿ. ಆ  ದಿನಗಳಲ್ಲಿ ಸಂಭವಿಸುವ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ.

ಶುದ್ಧ ಚಿನ್ನದಲ್ಲಿ ಉರಿಯೂತ ಶಮನಕಾರಿ ಗುಣಗಳಿವೆ ಎಂದು ಕೆಲವು ಅಧ್ಯಯನಗಳು ಧೃಡಪಡಿಸಿದೆ. ಅಕ್ಯುಪಂಕ್ಚರ್ ತಜ್ಞರು ನೋವನ್ನು ಕಡಿಮೆ ಮಾಡಲು ಚಿನ್ನದ ತುದಿಯ ಸೂಜಿಗಳನ್ನು ಸಹ ಬಳಸುತ್ತಾರೆ. ಇದಕ್ಕಾಗಿ ಸಾಕಷ್ಟು ಆಭರಣಗಳನ್ನು ಧರಿಸಬೇಕು ಎಂದಲ್ಲ, ನಿತ್ಯ ಜೀವನದಲ್ಲಿ ಕಿವಿಯೋಲೆಗಳು, ಉಂಗುರಗಳು ಇತ್ಯಾದಿ ಆಭರಣಗಳನ್ನು ಧರಿಸುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದಾಗಿದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.