ಹೀರೆ ಬಗ್ಗೆ ನಿಮಗೆಷ್ಟು ಗೂತ್ತು…ರುಚಿಗೂ, ಆರೋಗ್ಯಕ್ಕೂ ಹೀರೇಕಾಯಿ !


Team Udayavani, Jun 9, 2020, 2:41 PM IST

ರುಚಿಗೂ ಆರೋಗ್ಯಕ್ಕೂ ಹೀರೇಕಾಯಿ !

ಸಾಂದರ್ಭಿಕ ಚಿತ್ರ

ಆಹಾರ ತುಂಬಾ ರುಚಿಯಾಗಿದ್ದು ನಾಲಿಗೆ ಚಪಲ ತೀರಿದರೆ ಅಷ್ಟೇ ಸಾಕು ಎನ್ನುವುದು ಸಾಮಾನ್ಯ ಯೋಚನೆಯಾಗಿದೆ. ಆದರೆ ನಾವು ತಿನ್ನುವ ಎಷ್ಟೋ ಆಹಾರದಲ್ಲಿ ಅಗತ್ಯ ಪೋಷಕಾಂಶ ಇದೆಯೇ ಇಲ್ಲವೇ ಎನ್ನುವುದನ್ನು ಕೂಡ ಅರಿಯುವುದಿಲ್ಲ. ರುಚಿಗೂ ಆರೋಗ್ಯಕ್ಕೂ ಆದ್ಯತೆ ನೀಡುವ ನೆಲೆಯಲ್ಲಿ ಹೀರೇಕಾಯಿ ತರಕಾರಿ ಪ್ರಧಾನ ಪಾತ್ರವಹಿಸುತ್ತದೆ.

ದೇಹದ ತೂಕ ಇಳಿಕೆಗೆ
ಹೀರೇಕಾಯಿಯಲ್ಲಿ ಅಧಿಕ ಐರನ್‌, ಮ್ಯಾಗ್ನಿ ಷಿಯಂ, ವಿಟಮಿನ್‌ ಸಿ ಅಂಶವು ಹೇರಳವಾಗಿದ್ದು ಹಲವು ರೋಗಗಳಿಗೆ ಇದು ಮನೆಮದ್ದಾಗಿದೆ. ಇದರ ನಿಯಮಿತ ಸೇವನೆಯೂ ದೇಹದ ಅನಗತ್ಯ ಕೊಬ್ಬಿನಾಂಶವನ್ನು ಹೊರಹಾಕಿ ನಮ್ಮ ಫಿಟ್‌ನೆಸ್‌ ಕಾಪಾಡುತ್ತದೆ. ದೇಹದ ತೂಕ ಇಳಿಕೆಗೆ ಇದರ ಸೇವನೆ ಮಾಡುವುದು ಉತ್ತಮವಾಗಿದೆ. ಇದನ್ನು ಉಪ್ಪಿನಲ್ಲಿ ಬೇಯಿಸಿ ಇಲ್ಲವೇ ಜ್ಯೂಸ್‌ ರೂಪದಲ್ಲೂ ಸೇವಿಸಬಹುದು. ಆದರೆ ಪಲ್ಯ ಇನ್ನಿತರ ಖಾದ್ಯ ಮಾಡುವಾಗ ಎಣ್ಣೆಯ ಅಂಶವನ್ನು ಕಡಿಮೆ ಬಳಸುವುದನ್ನು ರೂಢಿಸಿಕೊಳ್ಳಬೇಕು.

ಲಿವರ್ ನ ಆರೋಗ್ಯ ಕಾಪಾಡುವುದು
ಲಿವರ್ ನ ಆರೋಗ್ಯ ಕಾಪಾಡುವುದಲ್ಲದೆ, ಮದ್ಯಪಾನದಿಂದ ಲಿವರ್ ಮೇಲಾಗುವ ಕೆಟ್ಟ ಪರಿಣಾಮಗಳನ್ನು ದೂರ ಮಾಡುವ ಗುಣ ಹೊಂದಿದೆ. ಅಲ್ಲದೆ ಲಿವರ್ ಗೆ ಸಂಬಂಧಿಸಿದಂತೆ ಬರುವ ಹಳದಿ ಪಿತ್ತ ಅಥವಾ ಜಾಂಡೀಸ್ ಖಾಯಿಲೆ ಇರುವವರು ಇದರ ಜ್ಯೂಸ್ ಮಾಡಿ ರಸ ಸೇವಿಸಬೇಕು.

ಉರಿ ಮೂತ್ರ ಸಮಸ್ಯೆ ನಿವಾರಿಸಲು
ದೇಹದಲ್ಲಿ ಕಡಿಮೆನೀರಿನಂಶ ಉರಿಮೂತ್ರ ಸಮಸ್ಯೆಗೆ ಕಾರಣವಾಗಿದ್ದು ಅಂತಹ ಸಂದರ್ಭದಲ್ಲಿ ಹೀರೇಕಾಯಿ ಸೇವನೆ ಒಳ್ಳೆಯದು. ಇದರಲ್ಲಿರುವ ವಿಟಮಿನ್‌, ನೀರಿನಂಶ ಉರಿಮೂತ್ರದ ನೋವಿನ ಬಾಧೆ ಕಡಿಮೆ ಮಾಡುತ್ತದೆ. ಇದನ್ನು ಜೀರಿಗೆ, ಕಲ್ಲು ಸಕ್ಕರೆ, ಗಸಗಸೆಯೊಂದಿಗೆ ಬೆರೆಸಿ ಅರೆದು ಸೇವಿಸುವುದರಿಂದ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗಿದೆ.

ಮೂಲವ್ಯಾಧಿ ಸಮಸ್ಯೆ ನಿವಾರಣೆಗೆ
ಹೀರೇಕಾಯಿಯಲ್ಲಿ ಕೆರೋಟಿನ್‌ ಅಂಶವಿದ್ದು ಇದು ನಿಮ್ಮ ರಕ್ತ ಶುದ್ಧೀಕರಿಸಲು ನೆರವಾಗುತ್ತದೆ. ಮಾತ್ರವಲ್ಲದೆ ಇದರಲ್ಲಿರುವ ಅಧಿಕ ನೀರಿನಂಶ ವು ಮೂಲವ್ಯಾಧಿ ಸಮಸ್ಯೆಯನ್ನು ನಿವಾರಿಸುವ ಸಾಮರ್ಥ್ಯ ಹೊಂದಿದೆ. ಇದನ್ನು ವಾರಕ್ಕೆ 3ರಿಂದ ನಾಲ್ಕು ಬಾರಿ ಕಡಿಮೆ ಮಸಾಲ ಅಂಶವನ್ನು ಉಪಯೋಗಿಸಿ ಅಡುಗೆ ಮಾಡಿದರೆ ಸಮಸ್ಯೆಗೆ ಪರಿಹಾರ ಕಂಡುಕೊಂಡಂತಾಗುತ್ತದೆ.

ಸಿಬ್ಬಿನ ನಿವಾರಣೆಗೆ
ಸಿಬ್ಬಿನ ಸಮಸ್ಯೆಗೆ ಇದೊಂದು ಉತ್ತಮ ಮದ್ದಿನಂತೆ ಕಾರ್ಯ ನಿರ್ವಹಿಸುತ್ತದೆ. ಹೀರೇಕಾಯಿ ಸಿಪ್ಪೆ ಅಧಿಕ ಪೋಷಕಾಂಶವನ್ನು ಹೊಂದಿದ್ದು ಅದನ್ನು ಬೆಳ್ಳುಳ್ಳಿ ಮತ್ತು ಚಿಟಿಕೆ ಉಪ್ಪಿನೊಂದಿಗೆ ಪೇಸ್ಟ್‌ ಮಾಡಿ ವಾರಕ್ಕೆ ನಾಲ್ಕು ಬಾರಿ ಲೇಪಿಸುವುದರಿಂದ ಸಿಬ್ಬಿನ ಒಣಾಂಶವು ಕಡಿಮೆಯಾಗಿ ತ್ವಚೆಯ ಹೊಳಪು ಹೆಚ್ಚಲು ಸಹಕಾರಿಯಾಗಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.