ಯೋಗಕ್ಕೆ ತಾರತಮ್ಯ ತಿಳಿದಿಲ್ಲ: ಯೋಗದಿಂದ ಆರೋಗ್ಯ


Team Udayavani, Jun 22, 2020, 9:02 PM IST

Yoga

ಯೋಗದಿಂದ ಅರೋಗ್ಯ ಯೋಗವು ಏಕತೆಯ ಶಕ್ತಿಯಾಗಿ ಹೊರಹೊಮ್ಮಿದೆ. ಕೋವಿಡ್ ನ ಸಂಕಷ್ಟದಲ್ಲಿರುವ ಜಗತ್ತು ಯೋಗಕ್ಕೆ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ಪ್ರಾಚೀನ ಭಾರತದ ಈ ಅಭ್ಯಾಸದಿಂದ ಜಗತ್ತಿನ ಸಹಸ್ರಾರು ರೋಗಿಗಳು ಕೋವಿಡ್ ಸೋಂಕನ್ನು ಸೋಲಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್. 6ನೇ ಅಂತಾರಾಷ್ಟ್ರೀಯ ಯೋಗ ದಿನ ಪ್ರಯುಕ್ತ ಪ್ರಧಾನಿ “ಯೋಗವು ಜಗತ್ತಿನ ಮಾನವೀಯ ಬಂಧಗಳನ್ನು ಗಾಢವಾಗಿಸುತ್ತಿದೆ. ಯೋಗಕ್ಕೆ ತಾರತಮ್ಯ ತಿಳಿದಿಲ್ಲ. ಯಾವುದೇ ಜನಾಂಗ, ಬಣ್ಣ, ಲಿಂಗ, ನಂಬಿಕೆ ಮತ್ತು ರಾಷ್ಟ್ರದ ಗಡಿಗಳಿಗೆ ಇದು ಸೀಮಿತವಾಗಿಲ್ಲ. ಯಾರೂ ಬೇಕಾದರೂ ಯೋಗವನ್ನು ಸ್ವೀಕರಿಸಬಹುದು’ ಎಂದು ತಿಳಿಸಿದರು.

ಕಾಯಿಲೆ ಹತ್ತಿರ ಸುಳಿಯದಂತೆ ಚೈತನ್ಯ ತುಂಬುವ, ಮನಸ್ಸು ಸದೃಢಗೊಳಿಸಬಲ್ಲ ಶಕ್ತಿ ಯೋಗಕ್ಕಿದೆ. ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಯೋಗ ಉತ್ತಮ ಉಪಾಯ. ಯೋಗ ಮಾಡುವುದರಿಂದ ಮನಸ್ಸು ಮತ್ತು ದೇಹ ಎರಡನ್ನೂ ಆರೋಗ್ಯವಾಗಿ ಇಟ್ಟುಕೊಳ್ಳಬಹುದು. ದೈನಂದಿನ ಜೀವನದಲ್ಲಿ ಪುರುಷರು ಮತ್ತು ಮಹಿಳೆಯರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲಿಕ್ಕೆ, ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಯೋಗ ಸೂಕ್ತ ಮಾರ್ಗದರ್ಶಕವಾಗಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯದಲ್ಲಿ ಆಗಬಹುದಾದ ಬದಲಾವಣೆ ಅಥವಾ ಉಪಯೋಗಗಳನ್ನು ತಿಳಿದುಕೊಳ್ಳೋಣ.

ಒತ್ತಡ ಕಡಿಮೆ ಮಾಡುತ್ತದೆ
ಜೀವನದಲ್ಲಿ ಸಾಮಾನ್ಯವಾಗಿ ಬರುವಂತಹ ಅನೇಕ ಒತ್ತಡಗಳನ್ನು ಎದುರಿಸಲು ಮಾನಸಿಕ ಬಲ ಅಗತ್ಯ, ಇದನ್ನು ಯೋಗ ತಂದು ಕೊಡುವುದು, ಸಾರ್ಥಕ ಬದುಕಿಗಾಗಿ, ಶಿಸ್ತನ್ನು ಅಳವಡಿಸಿಕೊಳ್ಳಲು ಯೋಗ ಸೂಕ್ತ ಮಾರ್ಗವಾಗಿದೆ.

ಮಾನಸಿಕ ಶಾಂತಿ
ಯೋಗಾಸನಗಳ ಜೊತೆಗೆ ಸೂರ್ಯ ನಮಸ್ಕಾರ, ಪ್ರಾಣಾಯಾಮ, ಧ್ಯಾನ ಕೂಡ ಉತ್ತಮ ಪೂರಕ ಮಾರ್ಗ ಹೌದು. ಇದರಿಂದ ಚಂಚಲತೆ ದೂರವಾಗಿ, ಮಾನಸಿಕವಾಗಿ ಶಾಂತಿ ಲಭಿಸುವದು, ಮನಸ್ಸನ್ನು ನಿಗ್ರಹಿಸುವ ಶಕ್ತಿ ವೃದ್ಧಿಯಾಗುವದು.

ಆರೋಗ್ಯ ಬಲದ ವೃದ್ಧಿಗಾಗಿ
ಒಳ್ಳೆಯ ಆರೋಗ್ಯ ಎಂದರೆ ಕೇವಲ ರೋಗದಿಂದ ದೂರವಿರುವುದು ಮಾತ್ರವಲ್ಲ ಮನಸ್ಸು ಮತ್ತು ಭಾವನೆಗಳನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ಮುಖ್ಯ. ಯೋಗ ಮಾಡುವುದರಿಂದ ದೃಢವಾಗಿ ಇರಲು ಜೊತೆಗೆ ಹಲವಾರು ರೋಗಗಳಿಂದ ದೂರವಾಗಿ ಸಂತೋಷ ಉಲ್ಲಾಸದಿಂದ ಇರಲು ಸಹಾಯವಾಗುತ್ತದೆ.

ಉತ್ತಮ ರಕ್ತ ಸಂಚಲನಕ್ಕಾಗಿ
ಉಸಿರಾಟದ ಮತ್ತು ಇತರ ಆಸನಗಳಿಂದ ದೇಹದ ರಕ್ತ ಸಂಚಲನವನ್ನು ಸರಾಗವಾಗಿಸುವಲ್ಲಿ ಯೋಗ ಸಹಕರಿಸುತ್ತದೆ. ಈ ಸರಾಗ ರಕ್ತಸಂಚಲನದಿಂದ ಆಮ್ಲಜನಕ ಮತ್ತು ಜೀವಸತ್ವಗಳು ದೇಹದ ಎಲ್ಲ ಭಾಗಗಳಿಗೂ ಸರಿಯಾಗಿ ಸಂಚಲನವಾಗುವುದರಿಂದ ಆರೋಗ್ಯಯುತ ಅಂಗಗಳು ಮತ್ತು ಕಾಂತಿಯುತವಾದ ಚರ್ಮವನ್ನು ಪಡೆಯಬಹುದು.

ಆರೋಗ್ಯಯುತವಾದ ಹೃದಯಕ್ಕಾಗಿ
ಸ್ವಲ್ಪ ಕಾಲ ಉಸಿರನ್ನು ಬಿಗಿ ಹಿಡಿದು ಮಾಡುವ ಮತ್ತು ಇನ್ನಿತರ ಆಸನಗಳು ಹೃದಯ ಮತ್ತು ಅಪದಮನಿಯ ಆರೋಗ್ಯವನ್ನು ಕಾಪಾಡುತ್ತವೆ. ಯೋಗ ರಕ್ತಸಂಚಲನವನ್ನು ಸರಾಗವಾಗಿಸುವುದರಿಂದ ರಕ್ತ ಹೆಪ್ಪುಗಟ್ಟುವಿಕೆಯಂತಹ ಕ್ರಿಯೆಯಿಂದ ರಕ್ಷಿಸಿ ಹೃದಯವನ್ನು ಆರೋಗ್ಯಯುತವಾಗಿರಿಸಿತ್ತದೆ.

ನೋವುಗಳನ್ನು ತಡೆಯುತ್ತದೆ
ಮನುಷ್ಯರಿಗೆ ಸಾಮಾನ್ಯವಾಗಿ ಕಾಡುವ ಸ್ಥೂಲತ್ವ, ಸೊಂಟ ನೋವು, ಬೆನ್ನು ನೋವು, ಹೊಟ್ಟೆ ನೋವು, ಕೀಲು ನೋವು, ಮುಟ್ಟಿನ ಸಮಸ್ಯೆ, ಮಲಬದ್ಧತೆ, ಉಸಿರಾಟದ ತೊಂದರೆ ಇನ್ನೂ ಹಲವಾರು ಸಮಸ್ಯೆಗಳಿಗೆ ಹಲವು ನಿರ್ಧಿಷ್ಟವಾದ ಆಸನಗಳನ್ನು ಕ್ರಮಬದ್ಧವಾಗಿ, ನಿಯಮಿತ ಆಹಾರ ಸೇವನೆಯಿಂದ ಅಳವಡಿಸಿಕೊಂಡರೆ ಸಮಸ್ಯೆಗಳನ್ನು ನಿವಾರಿಸಿಕೊಂಡು ಪರಿಹಾರ ಕಾಣಲು ಸಾಧ್ಯ.


ಉತ್ತಮ ಉಸಿರಾಟ ಕ್ರಿಯೆ
ಯೋಗದಲ್ಲಿ ಬರುವ ಧೀರ್ಘ ಉಸಿರಾಟ ಮತ್ತು ನಿಧಾನ ಉಸಿರಾಟದ ಆಸನಗಳಿಂದ ಶ್ವಾಸಕೋಶ ಮತ್ತು ಹೊಟ್ಟೆಯ ಸಾಮರ್ಥ್ಯವನ್ನು ಹೆಚ್ಚಿಸಬಹುದು .

ಸಮತೋಲನವನ್ನು ಹೆಚ್ಚಿಸುತ್ತದೆ
ದಿನನಿತ್ಯದ ಜಂಜಾಟದಲ್ಲಿ ಕುಳಿತುಕೊಳ್ಳುವ ಬೇರೆಬೇರೆ ಭಂಗಿಯಿಂದಾಗಿ ವಯಸ್ಸಾಗುತ್ತಿದ್ದಂತೆ ನಾವು ನಮ್ಮ ಸಮತೋಲನವನ್ನು ಕಳೆದುಕೊಳ್ಳುತ್ತೇವೆ.ಈ ಕಾರಣದಿಂದಾಗಿ ಬೆನ್ನು ನೋವು, ಮೂಳೆಯ ಒಡೆತ, ಸೆಳೆತ ಇವುಗಳೆಲ್ಲ ಕಾಣಿಸಿಕೊಳ್ಳುತ್ತವೆ. ಯೋಗ ಮಾಡುವುದರಿಂದ ಈ ನೋವನ್ನು ನಿವಾರಿಸಿ ಸಮತೋಲನವನ್ನು ಕಾಪಾಡಿಕೊಂಡು ಹಿಡಿತದಲ್ಲಿರಬಹುದು.

ಯೋಗಾಸನದ ಸಮಗ್ರ ಅನುಭವವಿರುವ ಗುರುವಿನ ಮೂಲಕ ಕಲಿತರೆ, ಸಂಪೂರ್ಣ ಯಶಸ್ಸು ನಮ್ಮದಾಗುವದು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.