ಸಣ್ಣ ಮಕ್ಕಳಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು

ಸಣ್ಣ ಮಕ್ಕಳ ಆರೋಗ್ಯ ಬಗೆಗೆ ಹೆಚ್ಚಿನ ಗಮನ ವಹಿಸಿ

ಕಾವ್ಯಶ್ರೀ, Oct 3, 2022, 5:45 PM IST

Web–Kavya

ಆರೋಗ್ಯ ಎನ್ನುವುದು ಎಲ್ಲರಿಗೂ ಮುಖ್ಯ. ದೇಹ ಆರೋಗ್ಯವಂತ ಸ್ಥಿತಿಯಲ್ಲಿದ್ದರೆ ಮಾತ್ರ ದಿನನಿತ್ಯದ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಸಾಧ್ಯ. ಅದು ಮಕ್ಕಳ ವಿಷಯದಲ್ಲಿಯೂ ಅನ್ವಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಅಂತೂ ಒಂದಲ್ಲ ಒಂದು ರೋಗಗಳನ್ನು ಎಲ್ಲಾ ಜೀವಿಗಳಿಗೂ ಭಾಧಿಸುತ್ತಲೇ ಇರುತ್ತವೆ. ಸಾಂಕ್ರಾಮಿಕ ಕಾಯಿಲೆಗಳಿಂದ ಆರೋಗ್ಯವನ್ನು ರಕ್ಷಿಸಿಕೊಳ್ಳುವುದು ಸ್ವಲ್ಪ ಕಷ್ಟದ ಕೆಲಸ. ವ್ಯಾಕ್ಸಿನೇಷನ್ ಬಂದ ಬಳಿಕ ಇತ್ತೀಚೆಗೆ ಕೊರೋನಾ ಅಬ್ಬರ ಕಡಿಮೆಯಾಗುತ್ತಿದೆ. ಆದರೂ ಆತಂಕ ಮಾತ್ರ ಕಡಿಮೆಯಾಗಿಲ್ಲ. ಇಲ್ಲಿ ಹೇಳಲು ಹೊರಟಿರುವುದು ಮಕ್ಕಳ ಆರೋಗ್ಯದ ಕುರಿತು.

ಮಕ್ಕಳ ಆರೋಗ್ಯ ಬಹಳ ಸೂಕ್ಷ್ಮವಾಗಿರುತ್ತದೆ. ಅವರಿಗೆ ಸ್ವಲ್ಪ ವ್ಯತ್ಯಾಸವಾದರೂ ಸಾಕು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅಲ್ಲದೇ, ತಮಗೆ ಏನಾಗುತ್ತಿದೆ ಎಂಬುದನ್ನ ಹೇಳಲು ಅವರಿಗೆ ತಿಳಿಯುವುದಿಲ್ಲ. ಹಾಗಾಗಿ ನಿಮ್ಮ ಮಕ್ಕಳಲ್ಲಿ ಆರೋಗ್ಯದ ವ್ಯತ್ಯಾಸದ ಬಗ್ಗೆ ಗಮನಿಸಿ.

ಚಿಕ್ಕ ಮಕ್ಕಳು ಪದೇ ಪದೇ ಅನಾರೋಗ್ಯ ಪೀಡಿತರಾಗುತ್ತಿರುತ್ತಾರೆ. ಆಟವಾಡುತ್ತಾ, ಕೈ-ಕಾಲುಗಳಿಗೆ ಗಾಯ ಮಾಡಿಕೊಳ್ಳವುದು.. ವಾಟರ್ ಇನ್ ಫೆಕ್ಷನ್, ಫುಡ್ ಇನ್ ಫೆಕ್ಷನ್,  ಮುಂತಾದ ರೋಗಗಳು ಬರುತ್ತವೆ.

ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ಹಲವು ಕಾರಣಗಳಿವೆ. ಆಹಾರ, ಜೀವನ ಶೈಲಿ ಒಂದು ರೀತಿಯಲ್ಲಿ ಕಾರಣವಾದರೆ ಮಕ್ಕಳು ಇರುವ ವಾತಾವರಣ ಕೂಡ ಆರೋಗ್ಯ ಹಾಳಾಗಲು ಕಾರಣವಾಗುತ್ತದೆ. ಇದನ್ನು ಹೊರತುಪಡಿಸಿ ಇನ್ನೂಂದಿಷ್ಟು ಕಾರಣಗಳಿಂದ ಮಕ್ಕಳು ಆಗಾಗ ಹುಷಾರಿಲ್ಲದಂತೆ ಆಗುತ್ತಾರೆ. ಆ ಬಗೆಗಿನ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.

ಪೌಷ್ಟಿಕಾಂಶಗಳ ಕೊರತೆ:

ಶಾಲೆಗೆ ಹೋಗುವ ಅವಸರದಲ್ಲಿ ಆಹಾರವನ್ನು ಸರಿಯಾಗಿ ಸೇವಿಸದೆ ಇರುವುದು. ಇದರಿಂದಾಗಿ ಪೌಷ್ಟಿಕಾಂಶಗಳ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರ ಪರಿಣಾಮವಾಗಿ ಆಗಾಗ ಶೀತ, ಕೆಮ್ಮು, ಜ್ವರದಂತಹ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಹವಾಮಾನ ಬದಲಾವಣೆ ಸಂದರ್ಭದಲ್ಲಿ ಕೂಡ ಮಕ್ಕಳು ಅನಾರೋಗ್ಯ ಪೀಡಿತರಾಗುತ್ತಾರೆ. ಕಲುಷಿತ ನೀರು ಕುಡಿಯುವುದು, ಸ್ವಚ್ಛತೆಯ ಕೊರತೆಯಿಂದಾಗಿ ದೇಹದಲ್ಲಿ ಪ್ರತಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದನ್ನು ತಪ್ಪಿಸಲು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ಸ್ವಚ್ಛತೆ ಕಡೆಗೆ ಮಕ್ಕಳು ಹೆಚ್ಚು ಗಮಹರಿಸುವಂತೆ ನೋಡಿಕೊಳ್ಳಬೇಕು.   ಮಕ್ಕಳು ಸದಾ ಚಟುವಟಿಕೆಯಿಂದ ಇದ್ದರೆ ಹೆಚ್ಚು ಆರೋಗ್ಯವಂತರಾಗಿರುತ್ತಾರೆ. ಚಟುವಟಿಕೆ ಇಲ್ಲದಿದ್ದರೆ ಜಡತ್ವದಿಂದ ಅವರ ದೇಹಕ್ಕೂ ಅನೇಕ ಅನಾರೋಗ್ಯ ಸಮಸ್ಯೆಗಳು ಕಾಡುತ್ತದೆ.

ಸರಿಯಾದ ನಿದ್ರೆ:

ನಿರ್ಧಿಷ್ಟ ಸಮಯ ಸರಿಯಾಗಿ ನಿದ್ರಿಸುವುದು ಮುಖ್ಯ. ಇಂದಿನ ದಿನಗಳಲ್ಲಿ ಚಿಕ್ಕ ಮಕ್ಕಳೂ ಕೂಡ ಮೊಬೈಲ್‌, ಟಿವಿಗೆ ಅವಲಂಭಿತರಾಗಿರುತ್ತಾರೆ. ಮಧ್ಯರಾತ್ರಿ ಕಳೆದರೂ ಮೊಬೈಲ್‌ ನೋಡುವುದು ಹವ್ಯಾಸವಾಗಿಬಿಟ್ಟಿರುತ್ತದೆ. ಇದರಿಂದ ಸರಿಯಾಗಿ ನಿದ್ದೆ ಆಗುವುದಿಲ್ಲ. ಮಕ್ಕಳ ಆರೋಗ್ಯ ಸರಿಯಾಗಿರಬೇಕೆಂದರೆ ದಿನದ 9 ಗಂಟೆಗಳ ಕಾಲ ನಿದ್ದೆ ಅಗತ್ಯವಾಗಿರುತ್ತದೆ. ನಿದ್ದೆ ಕಡಿಮೆಯಾದಂತೆ ಅನಾರೋಗ್ಯ ಸಂಭವಿಸುತ್ತದೆ. ಕಣ್ಣಿನ ಸಮಸ್ಯೆ, ತಲೆನೋವು, ಓದಿನಲ್ಲಿ ಆಸಕ್ತಿ ಕಳೆದುಕೊಳ್ಳುವುದು, ಖಿನ್ನತೆ ಹೀಗೆ ಹಲವು ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದೇ ಕಾರಣದಿಂದ ದೇಹದಲ್ಲಿ ಶಕ್ತಿ ಇಲ್ಲದಂತಾಗಿ ಸುಸ್ತು, ಬಳಲಿಕೆ ಕಾಡುತ್ತದೆ.

ಸೇವಿಸುವ ಆಹಾರ:

ಇಂದಿನ ಯುವ ಪೀಳಿಗೆಯ ಮಕ್ಕಳಿಗೆ ಹಣ್ಣು ತರಕಾರಿಗಳಿಗಿಂತ ಪಿಜ್ಜಾ, ಬರ್ಗರ್‌ಗಳಂತಹ ಜಂಕ್‌ಫುಡ್‌ಗಳೇ ಇಷ್ಟವಾಗುತ್ತವೆ. ಇದರ ಪರಿಣಾಮ ಅನಾರೋಗ್ಯ ಕಾಡುತ್ತದೆ. ಶಾಲೆಗೆ ತೆರಳುವಾಗಲೂ ಸರಿಯಾದ ಆಹಾರ ಪದ್ಧತಿ ಪಾಲಿಸದಿದ್ದರೆ ಹುಷಾರಿಲ್ಲದಂತೆ ಆಗುವುದು ಸಾಮಾನ್ಯ. ಮಧ್ಯಾಹ್ನ ಹೊತ್ತಲ್ಲಿ ಶಾಲೆಗೆ ಬಾಕ್ಸ್ ತೆಗೆದುಕೊಂಡು ಹೋಗುವಾಗ ಕರಿದ ಪದಾರ್ಥಗಳನ್ನು ಕೊಡಬಾರದು.  ಮಧ್ಯಾಹ್ನ ಸಮಯ ಕರಿದ ಪದಾರ್ಥಗಳು ತಿನ್ನುವುದು ಹಸಿದ ಹೊಟ್ಟೆಗೆ ವಿಷ ನೀಡಿದಂತೆ ಎನ್ನುತ್ತಾರೆ ಆಹಾರ ತಜ್ಞರು. ಅದಕ್ಕಾಗಿ ಆಹಾರದಲ್ಲಿ ತರಕಾರಿಗಳನ್ನು ಹೆಚ್ಚಾಗಿ ಬಳಸಬೇಕು. ಶುಚಿ, ರುಚಿಯಾದ ಆಹಾರ ಮಾಡಿಕೊಟ್ಟರೆ ಮಕ್ಕಳಿಗೆ ರುಚಿಗೂ ಆರೋಗ್ಯಕ್ಕೂ ಒಳ್ಳೆಯದು.

ಮಕ್ಕಳ ಆರೋಗ್ಯವನ್ನು ಕಾಪಾಡುವಲ್ಲಿ ಪೋಷಕರ ಪಾತ್ರ ಮಹತ್ವದ್ದು. ಮಕ್ಕಳಿಗೆ ಶುಚಿತ್ವ, ಆರೋಗ್ಯದ ಬಗೆಗಿನ ಸೂಕ್ಷ್ಮ ವಿಚಾರಗಳನ್ನು ಮಕ್ಕಳಿಗೆ ತಿಳಿಸಿ ಕೊಡುವುದು ಮುಖ್ಯ. ಸಾಮಾನ್ಯವಾಗಿ ಶಾಲೆಗೆ ಹೋಗುವ ಚಿಕ್ಕ ಮಕ್ಕಳು ವರ್ಷದಲ್ಲಿ ಹಲವಾರು ಬಾರಿ ಶೀತಕ್ಕೆ ಒಳಗಾಗುತ್ತಾರೆ. ಅದಕ್ಕೆ ಹೆದರುವ ಅಗತ್ಯವಿಲ್ಲ. ಸರಿಯಾದ ಚಿಕಿತ್ಸೆ ಮತ್ತು ಆರೈಕೆ ಮೊದಲ ಆದ್ಯತೆಯಾಗಿರಲಿ. ಹವಾಮಾನ ಬದಲಾವಣೆಗಳಿಂದಾಗಿ ಮಕ್ಕಳು ಕೆಲವೊಮ್ಮೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಇಂತಹ ಸಂದರ್ಭಗಳಲ್ಲಿ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.

– ಕಾವ್ಯಶ್ರೀ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.