ಬಾಯಿಯ ಆರೋಗ್ಯಕ್ಕೆ ಇಲ್ಲಿದೆ ಸರಳ ಮಾರ್ಗ


ಆದರ್ಶ ಕೊಡಚಾದ್ರಿ, Jun 28, 2021, 2:02 PM IST

health tips

ಆರೋಗ್ಯಕರವಾದ ಜೀವನ ಪ್ರತಿಯೊಬ್ಬ ವ್ಯಕ್ತಿಯ ಬಹುದೊಡ್ಡ ಗುರಿಯಾಗಿರುತ್ತದೆ. ಈ ಕಾರಣದಿಂದ ಜನರು ತಮ್ಮ ಆರೋಗ್ಯವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಪ್ರಯತ್ನ ನಡೆಸುತ್ತಾರೆ. ಆದರೆ ಹಲವರು ತಮ್ಮ ದೇಹದ ಆರೋಗ್ಯವನ್ನು  ಉತ್ತಮಗೊಳಿಸಿಕೊಳ್ಳಲು ವ್ಯಾಯಾಮ, ಯೋಗದಂತಹ ಹಲವಾರು ಅಭ್ಯಾಸಗಳನ್ನು ರೂಢಿಸಿಕೊಂಡಿದ್ದರೂ ಕೂಡಾ ದೇಹದ ಕೆಲವು ಭಾಗಗಳ ಆರೋಗ್ಯದ ಕುರಿತಾಗಿ ಅಷ್ಟು ಗಮನವನ್ನು ನೀಡುವುದಿಲ್ಲ. ಈ ಕಾರಣದಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗೆ ಗಮನಹರಿಸದಿರುವ ದೇಹದ ಭಾಗಗಳಲ್ಲಿ ಬಾಯಿಯ ಆರೋಗ್ಯವೂ ಕೂಡಾ ಒಂದು.

ದೇಹದ ಆರೋಗ್ಯದಲ್ಲಿ ಬಾಯಿಯ ಆರೋಗ್ಯ  ಅತ್ಯಂತ ಮುಖ್ಯವಾದದ್ದು. ನಮ್ಮ ಲಾಲಾರಸದ ಹೊರತಾಗಿ ಹಲವಾರು ಸೂಕ್ಷ್ಮಜೀವಿಗಳಿವೆ. ಯಾವಾಗ ಬಾಯಿಯಲ್ಲಿ ಸಂಗ್ರಹವಾದ ಆಹಾರ ಕಣ ಕೊಳೆದು ಈ ಸೂಕ್ಷ್ಮಜೀವಿಗಳ ಸಂಖ್ಯೆ ಹೆಚ್ಚಾಗುವುದೋ ಆಗ ದುರ್ವಾಸನೆ ಪ್ರಾರಂಭವಾಗುತ್ತದೆ. ಇಲ್ಲಿಂದ ಸೋಂಕು ನರವ್ಯೂಹದ ಮೂಲಕ ದೇಹದ ಹಲವಾರು ಅಂಗಗಳಿಗೆ ದಾಟಿಕೊಳ್ಳಬಹುದು. ಇದೇ ಕಾರಣಕ್ಕೆ, ಬಾಯಿಯ ಸ್ವಚ್ಛತೆ ಕುರಿತಾಗಿ ಆಯುರ್ವೇದ ಸದಾ ಮಹತ್ವವನ್ನು ನೀಡುತ್ತಾ ಬಂದಿದೆ.

ಮುಂಜಾನೆಯ ಹಲ್ಲುಜ್ಜುವಿಕೆಯಿಂದ, ಊಟದ ಬಳಿಕ ಬಾಯಿ ಮುಕ್ಕಳಿಸುವುದು, ರಾತ್ರಿ ಮಲಗುವ ಮುನ್ನ ನೀರು ಕುಡಿಯುವುದು ಮೊದಲಾದ ಕ್ರಮಗಳನ್ನು ನಿತ್ಯವೂ ಅನುಸರಿಸುವುದು ಮುಖ್ಯ. ಬಾಯಿಯಲ್ಲಿ ಕೆಟ್ಟ ಸೂಕ್ಷ್ಮಜೀವಿಗಳ ಸಂಖ್ಯೆ ಹೆಚ್ಚಿದರೆ ದುರ್ವಾಸನೆಯ ಜೊತೆಗೆ ಒಸಡುಗಳು ಸಡಿಲವಾಗಿ ಹಲ್ಲುಗಳು ಅಲ್ಲಾಡುವುದು, ಹಲ್ಲು ಮತ್ತು ಒಸಡುಗಳ ಸಂಧುಗಳಲ್ಲಿ ಕೂಳೆ ತುಂಬಿಕೊಳ್ಳುವುದು, ಹಲ್ಲುಗಳು ಕೊಳೆಯುವುದು , ಒಸಡುಗಳು ಬಿರಿದು ರಕ್ತ ಹರಿಯುವುದು, ಹಲ್ಲುಗಳಲ್ಲಿ ಕುಳಿ ಮತ್ತು ಹಲ್ಲುಗಳು ಅತಿಯಾದ ಸೂಕ್ಷ್ಮ ಸಂವೇದನೆಯನ್ನು ಪಡೆದು ತಣ್ಣಗಿನ ಅಥವಾ ಬಿಸಿ ಅಥವಾ ಖಾರದ ಏನನ್ನೂ ಬಾಯಿಗೆ ಹಾಕಿಕೊಳ್ಳದಂತೆ ಆಗುವುದು ಮೊದಲಾದ ತೊಂದರೆಗಳು ಎದುರಾಗುತ್ತವೆ. ಬಾಯಿಯ ಆರೋಗ್ಯ ಕಾಪಾಡದ ವ್ಯಕ್ತಿಗಳಿಗೆ ಈ ತೊಂದರೆಗಳು ಅಪಾರವಾಗಿ ಬಾಧಿಸುತ್ತವೆ.

ಈ ಎಲ್ಲಾ ವಿಧವಾದ ಸಮಸ್ಯೆಯಿಂದ ಪರಿಹಾರವನ್ನು ನಾವು ನಮ್ಮ ಸುತ್ತಮುತ್ತಲಿನ ಹಲವಾರು ನೈಸರ್ಗಿಕ ಅಂಶಗಳಿಂದ ಪಡೆದುಕೊಳ್ಳಬಹುದಾಗಿದೆ.

ನೀರಿನ ಬಳಕೆ

ದೇಹದ ಇತರೆ ಅಂಗಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರು ಎಷ್ಟು ಮುಖ್ಯವಾದ ಪಾತ್ರವನ್ನು ವಹಿಸುತ್ತದೆಯೋ ಅದೇ ರೀತಿ ಬಾಯಿಯ ಆರೋಗ್ಯಕ್ಕೂ ಇದು ತುಂಬಾ ಮುಖ್ಯ. ಪ್ರತಿನಿತ್ಯ ಬೆಳಿಗ್ಗೆ ಹಾಗೂ ರಾತ್ರಿಯ ವೇಳೆ ಹಲ್ಲುಗಳನ್ನು ಉಜ್ಜುವುದರ ಜೊತೆ ಜೊತೆಗೆ ಆಗಾಗ ಶುದ್ಧವಾದ ನೀರಿನಲ್ಲಿ ಬಾಯನ್ನು ಮುಕ್ಕಳಿಸುವುದರಿಂದ ಹಲ್ಲುಗಳು ಹುಳುಕಾಗುವುದನ್ನು ತಡೆಯುವ ಜೊತೆ ಜೊತೆಗೆ ಬಾಯಿಯಿಂದ ದುರ್ವಾಸನೆ ಬರುವುದನ್ನು ತಡೆಯಬಹುದಾಗಿದೆ. ಯಾವುದೇ ಆಹಾರ ಪದಾರ್ಥವನ್ನು ತಿಂದ ಬಳಿಕ ನೀರಿನಿಂದ ಬಾಯನ್ನು ತೊಳೆಯುವುದರಿಂದಾಗಿ ತಿಂದ ಆಹಾರ ಪದಾರ್ಥಗಳು ಬಾಯಿಯಲ್ಲಿಯೇ ಉಳಿಯುವುದನ್ನು ತಡೆಯಬಹುದಾಗಿದೆ. ಅಲ್ಲದೆ ದಿನದಲ್ಲಿ ಎರಡರಿಂದ ಮೂರು ಬಾರಿ ಉಪ್ಪುನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಬಾಯಿಯ ಆರೋಗ್ಯವನ್ನು ಉತ್ತಮಗೊಳಿಸಿಕೊಳ್ಳಬಹುದಾಗಿದೆ.

ಲೋಳೆರಸ ಬಳಕೆ

ಸಾಮಾನ್ಯವಾಗಿ ಲೋಳೆ ರಸದಲ್ಲಿ ದೇಹದ ಹಲವು ವಿಧವಾದ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ಇದ್ದು, ಒಂದು ವೇಳೆ ಹಲ್ಲುಗಳಲ್ಲಿ ಹುಳುಕು ಕಾಣಿಸಿಕೊಳ್ಳತೊಡಗಿದರೆ ಆಲೋವೆರಾ ಅಥವಾ ಲೋಳೆಸರ ಇದಕ್ಕೆ ಅತ್ಯುತ್ತಮ ಪರಿಹಾರವಾಗಿದೆ. ಒಸಡುಗಳ ಸಂಧುಗಳಲ್ಲಿರುವ ಕೂಳೆ, ದಂತಕುಳಿ ಮೊದಲಾದವನ್ನು ತಡೆಯಲೂ ಇವು ಸೂಕ್ತವಾಗಿವೆ. ಇದಕ್ಕಾಗಿ, ತಾಜಾ ಲೋಳೆಸರದ ಕೋಡೊಂದನ್ನು ಮುರಿದು ಒಳಗಿನ ತಿರುಳನ್ನು ಸಂಗ್ರಹಿಸಿ ಸಮಪ್ರಮಾಣದಲ್ಲಿ ಅಡುಗೆ ಸೋಡಾ ಮತ್ತು ಚಿಟಿಕೆಯಷ್ಟು ಅರಿಶಿನಯ ಪುಡಿಯನ್ನು ಬೆರೆಸಿ ನಯವಾದ ಲೇಪ ತಯಾರಿಸಿ.ಈ ಲೇಪವನ್ನು ಹಲ್ಲು ಮತ್ತು ಒಸಡುಗಳ ಸಂಧುಗಳಲ್ಲಿ ಆವರಿಸುವಂತೆ ದಪ್ಪನಾಗಿ ಹಚ್ಚಿ. ಕೊಂಚ ಹೊತ್ತು ಬಿಟ್ಟು ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಳ್ಳಿ. ಈ ವಿಧಾನದಿಂದ ಕೊಳೆಗಳು ಬುಡಸಹಿತ ಇಲ್ಲವಾಗುತ್ತವೆ ಹಾಗೂ ಹಲ್ಲುಗಳು ಮತ್ತು ಒಸಡುಗಳು ಇನ್ನಷ್ಟು ದೃಢಗೊಳ್ಳುತ್ತವೆ.

ಲವಂಗ

ಲವಂಗದಲ್ಲಿ ಹಲವಾರು ಆರೋಗ್ಯಕರ ಅಂಶಗಳಿದ್ದು, ಇದು ಬಾಯಿಯ ಆರೋಗ್ಯಕ್ಕೂ ಅತ್ಯಂತ ಮುಖ್ಯವಾದದ್ದು. ಹಲ್ಲು ನೋವಿನ ಸಮಸ್ಯೆಯಿಂದ ಬಳಲುತ್ತಿರುವವರು ನೋವಿರುವ ಜಾಗಕ್ಕೆ ಲವಂಗವನ್ನು ಇಟ್ಟುಕೊಳ್ಳುವುದರಿಂದಾಗಿ ಸಮಸ್ಯೆಯಿಂದ ಬಹುಬೇಗ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಅಲ್ಲದೆ ಬಾಯಿಯಲ್ಲಿ ದುರ್ವಾಸನೆ ಇದ್ದರೆ ಪ್ರತಿನಿತ್ಯ ರಾತ್ರಿ ಮಲಗುವ ಮುನ್ನ ಲವಂಗವನ್ನು ಅಗಿದು ಮಲಗುವುದರಿಂದಾಗಿ ಬಾಯಿಯಿಂದ ಬರುವ ವಾಸನೆಯನ್ನು ನಿವಾರಿಸಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.