ಆರೋಗ್ಯಕರ ಬದುಕಿಗೆ ಕಾಳುಮೆಣಸಿನ ಸೂತ್ರ


ಆದರ್ಶ ಕೊಡಚಾದ್ರಿ, Jul 12, 2021, 12:32 PM IST

health tips

ಕರಿಮೆಣಸು ಒಂದು ಸಾಂಬಾರ ಬೆಳೆಯಾಗಿದ್ದು, ಪ್ರಾಚೀನ ಕಾಲದಿಂದಲೂ ಆಹಾರ ಪದಾರ್ಥಗಳನ್ನು ತಯಾರಿಸುವುದು ಮಾತ್ರವಲ್ಲದೆ  ಆಯುರ್ವೇದ ಔಷಧಗಳಲ್ಲೂ ಉಪಯೋಗಿಸುತ್ತಾರೆ.

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಅಧಿಕವಾಗಿ ಬೆಳೆಯಲಾಗುವ ಈ  ಕರಿಮೆಣಸಿನ ಬಳ್ಳಿಯ ಹಣ್ಣನ್ನು ಒಣಗಿಸಿ ಕರಿಮೆಣಸಿನ ಕಾಳುಗಳನ್ನು ಪಡೆಯುವರು. ಭಾರತದಲ್ಲಿ ಮಾತ್ರವಲ್ಲದೆ ವಿದೇಶಿ ಆರೋಗ್ಯ ಪದ್ದತಿಯಲ್ಲಿಯೂ ಬಹಳಷ್ಟು ಹೆಚ್ಚಾಗಿ ಬಳಕೆ ಮಾಡುವ ಈ ಕಾಳುಮೆಣಸು, ತಿನ್ನುವ ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುವುದರೊಂದಿಗೆ ಹಲವು ರೀತಿಯ ಆರೋಗ್ಯದ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಕಾಳು ಮೆಣಸಿನ ಉಪಯೋಗಗಳು

– ಕಾಳುಮೆಣಸನ್ನು ಹಾಲಿನೊಂದಿಗೆ ಚೆನ್ನಾಗಿ ತೇದು ಈ ಮಿಶ್ರಣವನ್ನು ಹಚ್ಚುವುದರಿಂದಾಗಿ ಉಳುಕಿನ ಕಾರಣದಿಂದ ಉಂಟಾಗುವ ನೋವನ್ನು ಇದು ಕಡಿಮೆ ಮಾಡುತ್ತದೆ.

– ಒಂದು ಚಮಚ ಕಾದ ತುಪ್ಪಕ್ಕೆ ಕಾಳುಮೆಣಸಿನ ಪುಡಿ ಮತ್ತು ಉಪ್ಪು ಸೇರಿಸಿ ಅನ್ನದಲ್ಲಿ ಹಾಕಿಕೊಂಡು ತಿಂದರೆ ಅಜೀರ್ಣ ಹೊಟ್ಟೆ, ಉಬ್ಬರ ದೂರವಾಗುತ್ತದೆ.

-ಕಾಳುಮೆಣಸನ್ನು ಜಜ್ಜಿ ಬಾಯಲ್ಲಿ ಹಾಕಿಕೊಂಡು ರಸವನ್ನು ನುಂಗುತ್ತಿದ್ದರೆ ನೆಗಡಿ ನಿವಾರಣೆಯಾಗುತ್ತದೆ.

-ಕಾಳುಮೆಣಸಿನ ಪುಡಿ ಮತ್ತು ಬೆಲ್ಲವನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುತ್ತದೆ.

-ಒಂದು ಲೋಟ ಬಿಸಿ ಹಾಲಿಗೆ ಅರ್ಧ ಚಮಚ ಅರಶಿನದ ಪುಡಿಯನ್ನು ಹಾಗೂ ಅರ್ಧ ಚಮಚ ಕಾಳು ಮೆಣಸಿನ ಪುಡಿಯನ್ನು ಸೇರಿಸಿ ಕುಡಿಯೂದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

-ಕಾಳುಮೆಣಸು ಮತ್ತು ಚಿಟಿಕೆ ಉಪ್ಪನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಗಂಟಲು ನೋವು ವಾಸಿಯಾಗುತ್ತದೆ.

-ಮೊಸರು ಅನ್ನಕ್ಕೆ ಕಾಳುಮೆಣಸಿನ ಪುಡಿ ಮತ್ತು ಬೆಲ್ಲವನ್ನು ಹಾಕಿಕೊಂಡು ಊಟ ಮಾಡಿದರೆ ಮೂತ್ರದ್ವಾರ ಮತ್ತು ಗುದದ್ವಾರದಲ್ಲಿ ಉಂಟಾಗುವ ಉರಿ ಕಡಿಮೆಯಾಗುತ್ತದೆ.

-ಒಂದು ಬಟ್ಟಲು ಹಾಲಿಗೆ ಒಂದು ಚಿಟಿಕೆ ಅರಿಶಿಣದ ಪುಡಿ, ಎರಡು ಚಿಟಿಕೆ ಕಾಳುಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಿ ರಾತ್ರಿ ಊಟ ಮಾಡಿದ ಮೇಲೆ ಕುಡಿದರೆ ನೆಗಡಿ, ಕೆಮ್ಮು ಗುಣವಾಗುತ್ತದೆ.

-ನುಗ್ಗೆ ಸೊಪ್ಪಿನ ರಸಕ್ಕೆ ಕಾಳುಮೆಣಸನ್ನು ಅರೆದು ಹಾಕಿ ಕಲಸಿ ಹಣೆಗೆ ಹಚ್ಚಿದರೆ ತಲೆನೋವು ನಿವಾರಣೆಯಾಗುತ್ತದೆ.

-ಚೆನ್ನಾಗಿ ಮಾಗಿದ ರಸ ಬಾಳೆಹಣ್ಣಿನೊಂದಿಗೆ ಅರ್ಧ ಟೀ ಚಮಚ ಕಾಳು ಮೆಣಸಿನಪುಡಿ ಸೇರಿಸಿ ದಿನದಲ್ಲಿ ಮೂರು ಬಾರಿ ಸೇವಿಸಿದರೆ ನೆಗಡಿ ಕೆಮ್ಮು ಗುಣವಾಗುತ್ತದೆ.

-ಕಾಳು ಮೆಣಸಿನ ಪುಡಿಗೆ ,ಸ್ಪಲ್ಪ ಶುಂಠಿ, ಒಂದು ಈರುಳ್ಳಿ, ಜೀರಿಗೆ, ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಸರಿಯಾಗಿ ಕುದಿಸಿ. ಚೆನ್ನಾಗಿ ಕುದ್ದ ಈ ಕಷಾಯವನ್ನು ಸೇವನೆ ಮಾಡುವುದರಿಂದ ಮಳೆಗಾಲದಲ್ಲಿ ಕಂಡುಬರುವ ಶೀತ, ಕೆಮ್ಮು ಹಾಗೂ ಜ್ವರದ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

– ಹುಣಿಸೆ ಹಣ್ಣು, ಪುದಿನಾ, ಕಾಳುಮೆಣಸು, ಏಲಕ್ಕಿಯನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನುಣ್ಣಗೆ ಅರೆದು ಉಪ್ಪು ಹಾಕಿ ತಿಂದರೆ ಹೊಟ್ಟೆನೋವು ಕಡಿಮೆಯಾಗುತ್ತದೆ.

-ಮೆಣಸಿನ ಕಾಳನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚಿಕೊಂಡರೆ ಹಲ್ಲುನೋವು ದೂರವಾಗುತ್ತದೆ.

-ಒಂದು ವೀಳ್ಯದೆಲೆಗೆ 4 ಕಾಳುಮೆಣಸು ಮತ್ತು ಎರಡು ಹರಳು ಉಪ್ಪು ಹಾಕಿಕೊಂಡು ಚೆನ್ನಾಗಿ ಅಗಿದು ತಿಂದರೆ ಕಫ ಹೋಗುತ್ತದೆ.

-ಮೆಣಸಿನ ಕಾಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚಿದರೆ ಮೊಡವೆ ನಿವಾರಣೆಯಾಗುವುದು.

-ಮೆಣಸಿನ ಕಾಳನ್ನು ತುಪ್ಪದಲ್ಲಿ ಹುರಿದು ನುಣ್ಣಗೆ ಪುಡಿಮಾಡಿ ಜೇನುತುಪ್ಪದಲ್ಲಿ ಬೆರೆಸಿ ದಿನಕ್ಕೆ ಎರಡು ಮೂರು ಬಾರಿ ಸೇವಿಸಿದರೆ ನೆಗಡಿ ಕೆಮ್ಮು ಮತ್ತು ರೋಗಗಳು ಕಡಿಮೆಯಾಗುತ್ತದೆ.

 

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.