ತಿನ್ನಲು ಕಹಿ, ಆರೋಗ್ಯಕ್ಕೆ ಸಿಹಿ ಈ ಹಾಗಲಕಾಯಿ


ಆದರ್ಶ ಕೊಡಚಾದ್ರಿ, Jun 21, 2021, 12:54 PM IST

health-tips-for-healthy-life

ಉತ್ತಮ ಆರೋಗ್ಯವು ಮನುಷ್ಯ ತನ್ನ  ಬದುಕಿನಲ್ಲಿ ಮಾಡಬಹುದಾದ ಎಲ್ಲಾ ವಿಧವಾದ ಸಾಧನೆಗಳಿಗೆ ಬಹುದೊಡ್ಡ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ಯಾವ ವ್ಯಕ್ತಿ ಆರೋಗ್ಯಕರವಾದ ದೇಹ ಹಾಗೂ ಮನಸ್ಸನ್ನು ಹೊಂದಿರುತ್ತಾನೋ ಆತ ಅತ್ಯಂತ ಸುಲಭವಾಗಿ ತನ್ನ ಸಾಧನೆಯ ಗುರಿಯನ್ನು ತಲುಪಲು ಸಾಧ‍್ಯ.ಈ ಕಾರಣದಿಂದಾಗಿ ಜನರು ತಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ಸದಾ ಪ್ರಯತ್ನ ಪಡುತ್ತಾರೆ.

ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಗುವ ನೈಸರ್ಗಿಕ ಪದಾರ್ಥಗಳು ನಮ್ಮ ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತವೆ. ನಾವು ದಿನನಿತ್ಯ ಸೇವಿಸುವ ಆಹಾರ ಪದಾರ್ಥಗಳಲ್ಲಿ ಈ ರೀತಿಯ ಸೊಪ್ಪು ತರಕಾರಿಗಳನ್ನು ಸೇವನೆ ಮಾಡುವುದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದಾಗಿದ್ದು ಅಂತಹ ಒಂದು ಅತ್ಯುತ್ತಮ ಆಹಾರ ಪದಾರ್ಥವೆಂದರೆ ಅದು ಹಾಗಲಕಾಯಿ.

ಹಾಗಲಕಾಯಿ ಕಹಿಗೆ ಹೆಸರುವಾಸಿಯಾಗಿದೆ. ಅದರ ಸೇವನೆ ಹಲವು ರೀತಿಯಲ್ಲಿ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಪ್ರಾಚೀನ ಕಾಲದಿಂದಲೂ ಔಷಧಿಗಳಲ್ಲಿ ಮತ್ತು ಆಹಾರ ತರಕಾರಿಗಳಲ್ಲಿ ಹಾಗಲಕಾಯಿಯನ್ನು ಬಳಸಿಕೊಂಡು ಬಂದಿದ್ದಾರೆ. ಇದು ತನ್ನಲ್ಲಿ  ಸಾಕಷ್ಟು ಪ್ರಮಾಣದಲ್ಲಿ ಕಬ್ಬಿಣ, ಮೆಗ್ನೀಷಿಯಂ, ಮತ್ತು ಪೊಟ್ಯಾಷಿಯಂ ಜೀವಸತ್ವ – ಸಿ ಹಾಗೂ ಅಧಿಕ ಪ್ರಮಾಣದಲ್ಲಿ ನಾರಿನಾಂಶವನ್ನು ಒಳಗೊಂಡಿದ್ದು ದೇಹದಲ್ಲಿ ರೋಗನಿರೋಧ ಶಕ್ತಿಯನ್ನು ಹೆಚ್ಚಿಸುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.

ಹಾಗಲಕಾಯಿಯನ್ನು ಏಕೆ ಸೇವನೆ ಮಾಡಬೇಕು?

ಇಷ್ಟೊಂದು ಕಹಿ ಇರುವ ಹಾಗಲಕಾಯಿಯನ್ನು ಏಕೆ ಸೇವಿಸಬೇಕು? ಇದರಿಂದ ಯಾವ ಪ್ರಯೋಜನವಿದೆ ಎಂಬ ಪ್ರಶ್ನೆ ಹಲವರಲ್ಲಿ ಸಾಮಾನ್ಯವಾಗಿ ಇರುತ್ತದೆ. ಆದರೆ ಸೇವನೆಗೆ ಅಷ್ಟು ಹಿತಕರವೆನಿಸದಿದ್ದರೂ ಆರೋಗ್ಯದ ದೃಷ್ಟಿಯಿಂದ ಇದು ಸಂಜೀವಿನಿಯಾಗಿ ಕಾರ್ಯನಿರ್ವಹಿಸುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಹಾಗಲಕಾಯಿ ವೈರಸ್  ಮತ್ತು ಬ್ಯಾಕ್ಟೀರಿಯಾಗಳ ವಿರುದ್ದ ಹೋರಾಡುವ ಸಾಮರ್ಥ್ಯವನ್ನು ಹೊಂದಿರುವುದರಿಂದ  ಇದು ವಿವಿಧ ರೀತಿಯ ಅಲರ್ಜಿಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮಗೊಳ್ಳುತ್ತದೆ.

ಅತಿಸಾರ ಮೂಲವ್ಯಾಧಿ ನಿವಾರಕ

ನಾವು ಸೇವಿಸುವ ಆಹಾರದಲ್ಲಿ ಏರುಪೇರುಗಳಾಗಿ ಅತಿಸಾರದಂತಹ ಸಮಸ್ಯೆಗಳು ಕಂಡುಬಂದರೆ ಹಾಗಲಕಾಯಿಯನ್ನು ಸೇವನೆ ಮಾಡುವುದರಿಂದ ಅತಿಸಾರ ಬಹುಬೇಗ ಗುಣಮುಖವಾಗುತ್ತದೆ. ಮೂಲವ್ಯಾಧಿ ಸಮಸ್ಯೆಯಿಂದ ಬಳಲುತ್ತಿರುವವರು ಹಾಗಲಕಾಯಿಯನ್ನು ಹೆಚ್ಚು ಬಳಕೆ ಮಾಡುವುದರಿಂದ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ,

ಮಧುಮೇಹ ನಿವಾರಕ

ಸಾಮಾನ್ಯವಾಗಿ ಮಧುಮೇಹದ ಸಮಸ್ಯೆ ಇರುವವರು ಹಾಗಲಕಾಯಿಯನ್ನು ಸೇವಿಸುವುದು ಅತಿ ಉತ್ತಮ. ದೀರ್ಘ ಕಾಲದವರೆಗೆ ಮಧುಮೇಹಿಗಳು ಹಾಗಲಕಾಯಿಯನ್ನು ಹಸಿಯಾಗಿ ಹಾಗೂ ಬೇಯಿಸಿ ಸೇವನೆ ಮಾಡುವುದರಿಂದಾಗಿ ದೇಹದಲ್ಲಿ ಸಕ್ಕರೆಯ ಅಂಶ ಸ್ಥಿಮಿತದಲ್ಲಿರಲು ಸಾಧ್ಯವಾಗುತ್ತದೆ.

ಹಾಗಲಕಾಯಿಗಳನ್ನು ಸಣ್ಣ ಸಣ್ಣ ಹೋಳುಗಳನ್ನಾಗಿ ಮಾಡಿ ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿ 3 ರಿಂದ ನಾಲ್ಕು ತಿಂಗಳವರೆಗೆ ಪ್ರತಿನಿತ್ಯ ಸೇವನೆ ಮಾಡುವುದರಿಂದಾಗಿ ದೇಹದಲ್ಲಿನ ಸಕ್ಕರೆಯ ಪ್ರಮಾಣ ಸ್ಥಿಮಿತಕ್ಕೆ ಬರುತ್ತದೆ.

ಹೊಟ್ಟೆ ಸಮಸ್ಯೆಗೆ ಪರಿಹಾರ

ಹೊಟ್ಟೆಯಲ್ಲಿ ಹುಣ್ಣು ಅಥವಾ ಕರುಳಿನಲ್ಲಿ ಹುಣ್ಣುಗಳಿದ್ದು ಸಮಸ್ಯೆ ಅನುಭವಿಸುತ್ತಿದ್ದರೆ , ಅಂತವರು ಹಾಗಲಕಾಯಿಯನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದಾಗಿ ಹುಣ್ಣು ಗುಣಮುಖವಾಗುತ್ತದೆ. ದೇಹದಲ್ಲಿರುವ ನಂಜಿನ ಅಂಶವನ್ನು ಹೊರಹಾಕುವಲ್ಲಿಯೂ ಕೂಡಾ ಇದು ಅತ್ಯಂತ ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತದೆ.

ರಕ್ತಶುದ್ಧಿ ಮಾಡುತ್ತದೆ

ಒಂದು ಲೋಟ ಹಾಗಲಕಾಯಿ ರಸದೊಂದಿಗೆ ಒಂದು ಚಮಚ ಲಿಂಬೆ ಹಣ್ಣಿನ ರಸವನ್ನು ಸೇರಿಸಿ ಬೆಳಗಿನ ಹೊತ್ತಿನಲ್ಲಿ ಪ್ರತಿನಿತ್ಯ ಸೇವನೆ ಮಾಡುವುದರಿಂದಾಗಿ  ರಕ್ತಶುದ್ಧಿಯಾಗುತ್ತದೆ ಹಾಗೂ ಹಲವಾರು ರೀತಿಯ ಚರ್ಮರೋಗಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುವ ಮೂಲಕ ಕಾಯಿಲೆಗಳನ್ನು ಬಹುಬೇಗ ಗುಣಪಡಿಸುತ್ತದೆ.

ಕಿವಿಡುತನ ನಿವಾರಣೆ

ಹಾಗಲಕಾಯಿಯ ಬೀಜವನ್ನು ಹಾಗೂ ಕರಿ ಜೀರಿಗೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಅರೆದು ಅದರ ರಸದ ಎರಡು ಮೂರು ಹನಿಗಳನ್ನು ಪ್ರತಿನಿತ್ಯ ಎರಡು ಬಾರಿ ಕಿವಿಯಲ್ಲಿ ಹಾಕಿದರೆ ಕಿವುಡುತನದ ಸಮಸ್ಯೆಯ ಮೇಲೆ ಉತ್ತಮ ಪರಿಣಾಮವನ್ನು ಬೀರುತ್ತದೆ.

ಪಿತ್ತನಾಶಕ

ಹಾಗಲಕಾಯಿಯ ಎಲೆಗಳ ರಸವನ್ನು ಸೇವನೆ  ಮಾಡುವುದರಿಂದ ಪಿತ್ತನಾಶವಾಗುವುದು. ಪಿತ್ತದ ಕಾರಣದಿಂದ  ವಾಂತಿಯ  ಅನುಭವವಾದಾಗ ಇದರ ಎಲೆಗಳನ್ನು ಉಪ್ಪಿನೊಂದಿಗೆ ಬೆರೆಸಿ ಸೇವನೆ ಮಾಡುವುದರಿಂದಾಗಿ ಸಮಸ್ಯೆ ಪರಿಹಾರವಾಗುತ್ತದೆ.

ಜೀರ್ಣಕ್ರಿಯೆಗೆ ಸಹಾಯಕ

ಹಾಗಲಕಾಯಿಯನ್ನು ಊಟಕ್ಕಿಂತ ಮೊದಲು ಸೇವನೆ ಮಾಡಿ ನಂತರ ಆಹಾರ ಸೇವಿಸುವುದರಿಂದಾಗಿ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಹಾಗೂ ಹೊಟ್ಟೆಯಲ್ಲಿ  ಜಂತುಹುಳುಗಳಿದ್ದರೆ ಹಾಗಲಕಾಯಿಯನ್ನು ಸೇವನೆ ಮಾಡುವುದರಿಂದ ಅವುಗಳು ನಾಶವಾಗುತ್ತದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

13

ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಡ್‌ವೈಡ್‌ ?

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಲ್ಡ್‌ವೈಡ್‌ ?

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.