ರುದ್ರಪ್ರಯಾಗದಲ್ಲಿ IFS ಅಧಿಕಾರಿಯ ಯಶೋಗಾಥೆ; 2 ವರ್ಷದಲ್ಲಿ 800 ಕೊಳ ನಿರ್ಮಾಣ!
2019ರಲ್ಲಿ ರುದ್ರಪ್ರಯಾಗ್ ಅಧಿಕಾರಿಯಾಗಿ ಬಂದ ಇವರು ಅಲ್ಲಿ ಸಾಕಷ್ಟು ಬದಲಾವಣೆ ತರಲು ಮುಂದಾಗುತ್ತಾರೆ.
Team Udayavani, Jan 19, 2022, 2:25 PM IST
ಪ್ರಕೃತಿ ಸುಲಭವಾಗಿ, ಯಾವುದೇ ಪ್ರತಿಫಲಾಪೇಕ್ಷೆಯಿಂದ ನೀಡುವ ಗಾಳಿ, ಬೆಳಕು, ನೀರಿನ ಕುರಿತು ಮನುಷ್ಯನಿಗೆ ತಾತ್ಸಾರ. ಉಚಿತವಾಗಿ ಸಿಗುತ್ತದೆ ಎಂದರೆ ಹಾಗೇ ಅಲ್ಲವೇ?…ಎಷ್ಟು ಬೇಕಾದರೂ, ಹೇಗೆ ಬೇಕಾದರೂ ಬಳಸಬಹುದು. ಯಾರೂ ನಿರ್ಬಂಧಿಸುವವರಿಲ್ಲ ಎಂದು ಬೇಕಾಬಿಟ್ಟಿ ಬಳಸುತ್ತೇವೆ. ಅಷ್ಟೇ ಅಲ್ಲದೆ ಅದನ್ನು ಎಷ್ಟು ಹಾಳಗೆಡುಹಬಹುದು ಅಷ್ಟು ಹಾಳು ಮಾಡುತ್ತೇವೆ.
ಗಾಳಿಯ ಹಾಗೆ ನೀರು ಅಷ್ಟೇ ಅಮೂಲ್ಯವಾದುದು. ನೀರಿಗಾಗಿಯೂ ಎಷ್ಟೋ ಕಡೆ ಹಾಹಾಕಾರವಿದೆ. ಬೇಸಗೆ ಕಾಲದಲ್ಲಿ ನೀರಿಲ್ಲದೆ ಕಷ್ಟ ಪಡುವ ಊರುಗಳೂ ಇವೆ. ನೀರಿನ್ನು ಮಿತ ಬಳಕೆ ಮಾಡಲು ಆರಂಭಿಸಿದರೆ ಮುಂದೆ ಆಗುವ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಬಹುದು. ಅದರೊಂದಿಗೆ ಮಳೆಕೊಯ್ಲು, ಇಂಗುಗುಂಡಿ ಮುಂತಾದವುಗಳನ್ನು ನಾವು ಮಾಡಲು ಆರಂಭಿಸಿದರೆ ನಮ್ಮಲ್ಲಿ ನೀರಿನ ಸಮಸ್ಯೆ ಕಾಡಲಿಕ್ಕಿಲ್ಲ.
ಪ್ರಯತ್ನ ಪಟ್ಟರೆ ಏನನ್ನೂ ಸಾಧಿಸಬಹುದು, ಬರಡು ಭೂಮಿಯಲ್ಲೂ ಬೆಳೆ ಬೆಳೆಯಬಹುದು ಎನ್ನುತ್ತಾರೆ. ಅಂತಹುದೇ ಸಾಧನೆ ಮಾಡಿದವರು ಉತ್ತರಖಂಡದ ವೈಭವ್ ಸಿಂಗ್.
ಉತ್ತರಖಂಡದ ರುದ್ರಪ್ರಯಾಗವು ಸಮುದ್ರಮಟ್ಟದಿಂದ ಸುಮಾರು 3,000 ಮೀ. ಎತ್ತರದಲ್ಲಿದೆ. ಇದು ಅತಿವೃಷ್ಟಿ, ಕಾಡ್ಗಿಚ್ಚಿಗೆ ಹೆಚ್ಚು ಒಳಗಾಗುವ ಪ್ರದೇಶ. ಅಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ. ಬೇಸಗೆ ಕಾಲದಲ್ಲಿ ಮಣ್ಣಿನಲ್ಲಿ ತೇವಾಂಶವಿಲ್ಲದೆ ಬೆಂಕಿ ಹತ್ತಿಕೊಳ್ಳುತ್ತದೆ, ಮಳೆಗಾಲದಲ್ಲಿ ಭೂ ಕುಸಿತ ಉಂಟಾಗುವ ಭೀತಿಯಿರುತ್ತದೆ. ಇಲ್ಲಿನ ಕಾಡುಗಳಲ್ಲಿ ಪೈನ್ ಟ್ರೀಗಳೇ ತುಂಬಿರುವುದರಿಂದ ಮಣ್ಣಿನ ಸವೆತ ಹೆಚ್ಚಾಗಿತ್ತು. ಅಂತಹ ಊರಿನಲ್ಲಿ ನೀರಿನ ಸಮಸ್ಯೆಗೆ ಮುಕ್ತಿ ನೀಡಿದವರು ವೈಭವ್ ಸಿಂಗ್. ಇವರು ರುದ್ರಪ್ರಯಾಗ್ ಜಿಲ್ಲೆಯಲ್ಲಿ ಭಾರತೀಯ ಅರಣ್ಯ ಸೇವಾ ಅಧಿಕಾರಿಯಾಗಿ ಮತ್ತು ವಿಭಾಗೀಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
2019ರಲ್ಲಿ ರುದ್ರಪ್ರಯಾಗ್ ಅಧಿಕಾರಿಯಾಗಿ ಬಂದ ಇವರು ಅಲ್ಲಿ ಸಾಕಷ್ಟು ಬದಲಾವಣೆ ತರಲು ಮುಂದಾಗುತ್ತಾರೆ. ಅವರಿಗೆ ಸರಕಾರ ಬೆಂಬಲ ನೀಡುತ್ತದೆ. ವೈಭವ್ ಮಣ್ಣಿನ ತೇವಾಂಶ ಸಂರಕ್ಷಣೆ ಮಾಡಲು ಒತ್ತು ನೀಡಿದರು, ಜತೆಗೆ ಗರ್ವಾಲಿಯಲ್ಲಿ ಕೊಳಗಳನ್ನು ನಿರ್ಮಿಸಿದರು. ವೈಭವ್ ಮತ್ತು ಅವರ ಸಿಬಂದಿ ಇಲ್ಲಿ ಒಟ್ಟು 612 ಕೊಳಗಳನ್ನು ನಿರ್ಮಿಸಿದರು. ಒಟ್ಟು 10 ಮಿಲಿಯನ್ ಲೀಟರ್ಗಳಷ್ಟು ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಇದು ಹೊಂದಿದೆ. ಜತೆಗೆ ಸುಮಾರು 400 ಎಕರೆ ಜಾಗದಲ್ಲಿ ಅವನತಿ ಹೊಂದಿದ್ದ ಅರಣ್ಯವನ್ನು ಮತ್ತೆ ಹಸುರಾಗಿಸಿದ್ದಾರೆ.
ಇವರು ತಮ್ಮ ಎರಡು ವರ್ಷಗಳ ಅವಧಿಯಲ್ಲಿ 887 ಕೊಳಗಳನ್ನು ನಿರ್ಮಿಸಿದ್ದಾರೆ. ಪ್ರತೀ ಕೊಳವು 10 ಸಾವಿರದಿಂದ 2,50,000 ಲೀ. ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ. ಮಳೆಗಾಲದಲ್ಲಿ ಮಳೆ ನೀರು ಇದರಲ್ಲಿ ಶೇಖರಣೆಯಾಗಿ ನೀರಿನ ಸಮಸ್ಯೆ ನೀಗುವುದರ ಜತೆಗೆ ಮಣ್ಣಿನ ತೇವಾಂಶವನ್ನು ಹೆಚ್ಚಿಸುತ್ತದೆ. ಕೊಳ ನಿರ್ಮಿಸುವುದಕ್ಕೆ ಜಾಗ ಆಯ್ದುಕೊಳ್ಳವುದೇ ಇವರಿಗೆ ಬಹುದೊಡ್ಡ ಸಮಸ್ಯೆಯಾಗಿತ್ತು. ಇಳಿಜಾರು ಪ್ರದೇಶದ ತಳಭಾಗದಲ್ಲಿ ಈ ಕೊಳಗಳನ್ನು ನಿರ್ಮಿಸಲು ಹೆಚ್ಚು ಆದ್ಯತೆ ನೀಡಿದರು. ಇವುಗಳ ನಿರ್ಮಾಣದಿಂದಾಗಿ ನೀರಿನ ಸಮಸ್ಯೆ, ಕಾಡ್ಗಿಚ್ಚು ಸಮಸ್ಯೆಗಳು ಕಡಿಮೆಯಾಗುವುದರ ಜತೆಗೆ ಅಂತರ್ಜಲ ಮಟ್ಟ ಹೆಚ್ಚಾಗಲು ಕಾರಣವಾಯಿತು. ಸದ್ಯ ಇಲ್ಲಿ 70 ನೀರು ಸರಬರಾಜು ಯೋಜನೆಗಳಿವೆ. ಕೆಲವೇ ವರ್ಷಗಳಲ್ಲಿ ರುದ್ರಪ್ರಯಾಗ್ ನೀರಿನ ಸಮಸ್ಯೆಯೇ ಕಾಡದಷ್ಟು ಬದಲಾಗಿದೆ. ಹಚ್ಚಹಸುರಿನಿಂದ ಕಂಗೊಳಿಸುತ್ತಿದೆ.
ಅಂತಹ ಬರಡು ಭೂಮಿಯಲ್ಲೇ ಸಮೃದ್ಧ ನೀರು ಹರಿದಾಡುವಂತೆ, ಮಣ್ಣಿನಲ್ಲಿ ತೇವಾಂಶ ಹೆಚ್ಚಾಗುವಂತೆ ಮಾಡಲು ಸಾಧ್ಯವಾದರೆ ನಮಗೂ ಸಾಧ್ಯವಲ್ಲವೇ? ನಾವು ಪ್ರಯತ್ನ ಪಟ್ಟರೆ ನಮ್ಮ ಊರು ಕೂಡ ನೀರಿನ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು. ಇದರಿಂದಾಗಿ ಪ್ರಕೃತಿಯ ಒಳಿತೂ ಸಾಧ್ಯ. ಪ್ರಕೃತಿಯಿಂದಲೇ ಎಲ್ಲ ಪಡೆಯುವ ನಾವು ಪ್ರಕೃತಿಗೂ ಒಂದಿಷ್ಟು ಕೊಡುಗೆ ನೀಡೋಣ…
ರಂಜಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ