ಬಿಜೆಪಿಗೆ ಬಿಸಿ ತುಪ್ಪವಾದ ಕರಾವಳಿ ಹಿಂದುತ್ವ: ತನ್ನದೇ ಅಸ್ತ್ರ ತಿರುಮಂತ್ರ ಆಗಿದ್ದು ಹೇಗೆ?


Team Udayavani, Jul 28, 2022, 9:59 AM IST

thumb dk

ಮಣಿಪಾಲ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಅಕ್ಷರಶಃ ನಡುಗಿಸಿದೆ. ಬೆಳ್ಳಾರೆ ಪ್ರಕರಣ ಎಷ್ಟು ಬಿಸಿ ಮುಟ್ಟಿಸಿದೆ ಎಂದರೆ ಸಿಎಂ ಮಧ್ಯರಾತ್ರಿ ಸುದ್ದಿಗೋಷ್ಠಿ ಕರೆದು ತಮ್ಮ ಸಾಧನಾ ಸಮಾವೇಶ ಜನೋತ್ಸವ ಕಾರ್ಯಕ್ರಮವನ್ನೇ ರದ್ದು ಮಾಡಿದ್ದಾರೆ. ಹಾಗಾದರೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲೆಯೊಂದರಲ್ಲಿ ನಡೆದ ಕೊಲೆ ಪ್ರಕರಣ ಬಿಜೆಪಿಗೆ ಮಗ್ಗುಲ ಮುಳ್ಳಾಗಿದ್ದು ಹೇಗೆ? ಹಿಂದುತ್ವದ ಬಲದಿಂದಲೇ ಕಳೆದ ಚುನಾವಣೆಯಲ್ಲಿ ಕರಾವಳಿಯನ್ನು ಸ್ವೀಪ್ ಮಾಡಿದ್ದ ಬಿಜೆಪಿಗೆ ಮತ್ತೊಂದು ಚುನಾವಣಾ ವರ್ಷದಲ್ಲಿ ಅದೇ ಕರಾವಳಿ ಹಿಂದುತ್ವ ಬಿಸಿತುಪ್ಪ ಆಗಿದ್ದು ಹೇಗೆ?

ಕರ್ನಾಟಕ ಬಿಜೆಪಿಯ ಪ್ರಯೋಗ ಶಾಲೆ ಎಂಬಂತ್ತಿದ್ದ ಕರಾವಳಿ ಇದೀಗ ಕೆರಳಿದೆ. ಓರ್ವ ಕಾರ್ಯಕರ್ತನ ಕೊಲೆ ಪಕ್ಷದ ವಿರುದ್ಧವೇ ದೊಡ್ಡ ಅಲೆ ಎಬ್ಬಿಸಿದೆ. ಗಮನಿಸಬೇಕಾದ ಪ್ರಮುಖ ಅಂಶವೆಂದರೆ ಇಲ್ಲಿ ಆಕ್ರೋಶ ಇರುವುದು ಬಿಜೆಪಿ ಪಕ್ಷದ ವಿರುದ್ಧವೇ ಹೊರತು ಸಂಘಟನೆ ಮೇಲಲ್ಲ. ಇದಕ್ಕೆ ಪ್ರಮುಖ ಕಾರಣ ಪಕ್ಷದ ಕಾರ್ಯಕರ್ತರ ಅವಗಣನೆ ಮತ್ತು ಪ್ರತಿ ಬಾರಿ ಹಿಂದೂ ಯುವಕರ ಕೊಲೆಯಾದಾಗ ಅದು ತನಗೆ ಲಾಭವಾಗುತ್ತದೆ ಎಂಬ ಶುದ್ಧ ರಾಜಕೀಯ ಲೆಕ್ಕಾಚಾರ ಹಾಗೂ ಅದರಿಂದ ಹುಟ್ಟಿಕೊಂಡ ಒಂದು ರೀತಿಯ ಉಡಾಫೆ.

2018ರ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ವರವಾಗಿದ್ದು ಆಗಿನ ಸಿಎಂ ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಇಮೇಜ್. ಎಲೆಕ್ಷನ್ ಗೆ ಮೊದಲು ಕೆಲವು ತಿಂಗಳ ಅಂತರದಲ್ಲಿ ನಡೆದ ಕೆಲವು ಹಿಂದೂ ಯುವಕರ ಕೊಲೆ (ಶರತ್ ಮಡಿವಾಳ, ಪ್ರಶಾಂತ್ ಪೂಜಾರಿ, ದೀಪಕ್ ಕಾಟಿಪಳ್ಳ) ಕಾಂಗ್ರೆಸ್ ವಿರೋಧಿ ಅಲೆಗೆ ಮತ್ತಷ್ಟು ಬೂಸ್ಟ್ ನೀಡಿದ್ದು ಸುಳ್ಳಲ್ಲ. ಇದು ನೆಲಮಟ್ಟದಲ್ಲಿ ಹೇಗೆ ಕೆಲಸ ಮಾಡಿತ್ತು ಎಂದರೆ “ಸರ್ಕಾರ ಕೆಲಸವೇನೋ ಮಾಡಿದೆ, ಆದರೆ ಹಿಂದೂಗಳಿಗೆ ಬದುಕಲು ಬಿಡುತ್ತಿಲ್ಲ“ ಎಂಬ ಮಾತುಗಳು ಕೇಳಿಬರುತ್ತಿತ್ತು. ಇದನ್ನೇ ಬಳಸಿಕೊಂಡ ಬಿಜೆಪಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲ ಹೊರತು ಪಡಿಸಿ ಉಳಿದೆಲ್ಲಾ ಕಡೆ ಗೆಲುವು ಸಾಧಿಸಿತ್ತು. ಅದರಲ್ಲೂ ಆರು ಮಂದಿಗೆ ಮೊದಲ ಗೆಲುವು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಹಿಂದೂ ಕಾರ್ಯಕರ್ತರನ್ನು ಟಚ್ ಮಾಡಕ್ಕಾಗಲ್ಲ ಎಂದು ಬಿಜೆಪಿ ನಾಯಕರು ಭಾಷಣ ಬಿಗಿದಿದ್ದರು. ಆದರೆ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದಿದ್ದ ಹರ್ಷ ಕೊಲೆ ಮತ್ತು ಅದರ ಬಳಿಕ ಆಕೆಯ ಸಹೋದರಿಗೆ ಆದ ಪರಿಸ್ಥಿತಿ ಕಂಡು ಕಾರ್ಯಕರ್ತರು ಬೇಸರಗೊಂಡಿದ್ದರು. ನಾವು ಹೆಗಲು ಕೊಟ್ಟು ನಮ್ಮ ಸಹಾಯದಿಂದ ಅಧಿಕಾರಕ್ಕೆ ಬಂದ ಈ ನಾಯಕರು, ನಂತರ ನಮ್ಮನ್ನು ಕಾಲ ಕಸ ಮಾಡುತ್ತಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲೂ ಕೇಳಿ ಬರುತ್ತಿತ್ತು. ಪಕ್ಷ ಏನು ಮಾಡಿದರೂ ಸಮರ್ಥನೆ ಮಾಡುತ್ತಿದ್ದ ಕಟ್ಟರ್ ಅಭಿಮಾನಿಗಳು ಕೂಡಾ ಇತ್ತೀಚೆಗೆ ಅಂತರ ಕಾಯ್ದುಕೊಂಡಿದ್ದರು. ಬಿಜೆಪಿಯಲ್ಲಿ ಹಲವು ವರ್ಷಗಳಿಂದ ದುಡಿದಿದ್ದ ಪ್ರವೀಣ ನೆಟ್ಟಾರು ಕೊಲೆಯಿಂದಾಗಿ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ.

ಇದನ್ನೂ ಓದಿ:ದ.ಕ.: ಇತ್ತೀಚಿನ ವರ್ಷಗಳಲ್ಲಿ ನಡೆದ ಹತ್ಯೆಗಳು: ಪ್ರಶಾಂತ, ಶರತ್‌, ದೀಪಕ್‌, ಪ್ರವೀಣ್‌?

ರಾಜ್ಯದ್ಯಂತ ಬಿಜೆಪಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ಎಲ್ಲರ ರಾಜೀನಾಮೆ ಪತ್ರದ ಒಕ್ಕಣೆ ಒಂದೇ, ‘ಕಾರ್ಯಕರ್ತರ ಹಿತ ಕಾಯದ ಪಕ್ಷ’! ಇದೇ ಕಮಲ ನಾಯಕರ ತಲೆನೋವಿಗೆ ಕಾರಣವಾಗಿದ್ದು. ಕಾರ್ಯಕರ್ತರೆಲ್ಲರೂ ಒಂದಾಗಿ ಪಕ್ಷದ ಪರ ಕೆಲಸ ಮಾಡಬೇಕಾದ ಸಮಯದಲ್ಲಿ ಕಾರ್ಯಕರ್ತ ಸಮೂಹ ಪಕ್ಷದ ವಿರುದ್ಧ ಸಮರ ಸಾರಲು ನಿಂತಿರುವುದು ನಾಯಕರ ಕೈಕಾಲು ಕಟ್ಟಿ ಹಾಕಿದಂತಾಗಿಸಿದೆ.

ಪ್ರವೀಣ್ ಮನೆಗೆ ಬಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಕಾರನ್ನು ಹಿಡಿದು ಅಲುಗಾಡಿಸಿದ್ದು ಸಂಪೂರ್ಣ ಆಕ್ರೋಶದ ಒಂದು ಸಿಂಬಾಲಿಕ್ ಎಂಬಂತ್ತಿತ್ತು. ಸಂಪೂರ್ಣ ಬಿಜೆಪಿ ಕಾರ್ಯಕರ್ತರ ಸಾಗರದ ನಡುವೆ ಪಕ್ಷದ ರಾಜ್ಯಾಧಕ್ಷ ನಳಿನ್ ಕಟೀಲ್ ಒಂಟಿಯಾಗಿದ್ದರು. ಬಿಜೆಪಿ ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಇದೇ ಪರಿಸ್ಥಿತಿ ಚುನಾವಣೆ ಫಲಿತಾಂಶದಲ್ಲೂ ಬಂದರೆ ಅಚ್ಚರಿ ಏನಿಲ್ಲ.

ಹಿಂದುತ್ವ- ಹಿಂದೂ ಪರ ಸಂಘಟನೆಗಳ ರಾಜಕೀಯ ಮುಖವಾಣಿಯಾಗಿ ಬಂದ ಬಿಜೆಪಿಗೆ ಇದೀಗ ಅದೇ ಹಿಂದುತ್ವ ಬಿಸಿಯುಂಡೆಯಾಗಿದೆ. ಹಿಂದುತ್ವ ಬಿಟ್ಟು ಪಕ್ಷ ಮುಂದುವರಿಯುವಂತಿಲ್ಲ. ಆದರೆ ಇದೇ ಪರಿಸ್ಥಿತಿಯಲ್ಲಿ ಚುನಾವಣೆ ಕಡೆಗೆ ಹೋದರೆ ಭದ್ರ ಕೋಟೆಯಲ್ಲಿ ಬಿರುಕು ಬೀಳುವುದು ನಿಶ್ಚಿತ ಎಂಬ ವಿಚಾರ ಬುಧವಾರ ರಾಜ್ಯ ನಾಯಕರ ಅರಿವಿಗೆ ಬಂದಿರಬಹುದು.

ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.