![1-assam](https://www.udayavani.com/wp-content/uploads/2024/07/1-assam-415x233.jpg)
ಸತ್ಯ, ಸತ್ವ ಸಾರ : ವಿಶ್ವದ ಎಲ್ಲಾ ಮೊದಲುಗಳಿಗೆ ಭಾರತವೇ ನಾಯಕನಲ್ಲವೇ ?
ಖಗೋಳದಿಂದ ಲೋಹದಶಾಸ್ತ್ರದ ವರೆಗೆ ಭಾರತೀಯರಿಗೆ ಗೊತ್ತಿಲ್ಲದ ವಿಷಯಗಳಿರಲಿಲ್ಲ
ದಿನೇಶ ಎಂ, Aug 21, 2022, 5:50 PM IST
![thumb web exclusive Dinesha M](https://www.udayavani.com/wp-content/uploads/2022/08/thumb-web-exclusive-Dinesha-M-620x349.jpg)
ಬದುಕಿನ ಭಾರ ಹೊತ್ತು ಸಾರ – ಸತ್ವ ತಿಳಿಸುವ ಬಂಗಾರದ ಭವ್ಯ ರಥ ಭಾರತ. ಈ ಭವ್ಯ ರಥದ ನಾಲ್ಕು ಚಕ್ರಗಳು ಚತುರ್ವೇದಗಳು. ಇಡೀ ಜಗತ್ತು ಬಟ್ಟೆ ಹಾಕಿಕೊಳ್ಳುವುದರಿಂದ ಹಿಡಿದು ನಾಗರಿಕತೆಯ ಪ್ರತೀ ಹಂತವನ್ನು ಕಲಿಸಿದ್ದು ಭಾರತ. ವಿದ್ಯುತ್ ತಯಾರಿಕೆಯಿಂದ ಹಿಡಿದು ವಿಮಾನಶಾಸ್ತ್ರದ ವರೆಗೆ ಭಾರತೀಯರು ಬರೆಯದ ಪುಸ್ತಕಗಳಿರಲಿಲ್ಲ. ವೇದಗಳು, ಮಾನವ ಉಗಮ ರಹಸ್ಯಗಳು, ಖಗೋಳದಿಂದ ಲೋಹದಶಾಸ್ತ್ರದ ವರೆಗೆ ಭಾರತೀಯರಿಗೆ ಗೊತ್ತಿಲ್ಲದ ವಿಷಯಗಳಿರಲಿಲ್ಲ. ಪ್ರಾಣಿಶಾಸ್ತ್ರದಲ್ಲೂ ಭಾರತ ಎತ್ತಿದ ಕೈಯಾಗಿತ್ತು. ವೈದ್ಯಶಾಸ್ತ್ರ, ಕಲೆ – ಸಂಸ್ಕೃತಿಗಳ ತವರೂರು ಭಾರತ.
ಭೂಮಿ ಮತ್ತು ಸೂರ್ಯನ ಮಧ್ಯದ ದೂರವನ್ನು ಮೊದಲು ನಿಖರವಾಗಿ ಕಂಡುಹಿಡಿದು ಹೇಳಿದ್ದು ಯಾರು? ಜಗತ್ತಿಗೆ ಮೊಟ್ಟ ಮೊದಲ ಪ್ಲಾಸ್ಟಿಕ್ ಸರ್ಜರಿ ಕಲಿಸಿಕೊಟ್ಟದ್ದು ಯಾರು? ಸೂರ್ಯ ಭೂಮಿಯ ಸುತ್ತ ತಿರುಗುತ್ತಿಲ್ಲ, ಭೂಮಿ ಸೇರಿದಂತೆ ಎಲ್ಲಾ ಗ್ರಹಗಳೂ ಸೂರ್ಯನ ಸುತ್ತ ಸುತ್ತುತ್ತಿವೆ ಎಂಬುದನ್ನು ಮೊದಲು ಅರ್ಥ ಮಾಡಿಕೊಂಡವರು ಯಾರು? ಈ ಎಲ್ಲಾ ಪ್ರಶ್ನೆಗಳಿಗೂ ಪಠ್ಯ ಪುಸ್ತಕಗಳು ಯುರೋಪಿಯನ್ ವಿಜ್ಞಾನಿಗಳ ಹೆಸರು ಹೇಳುತ್ತವೆ.
ಆದರೆ, ಇವರಿಗಿಂತ ಸಹಸ್ರಾರು ವರ್ಷಗಳ ಹಿಂದೆ ಭಾರತೀಯರು ಇದನ್ನು ಕಂಡುಹಿಡಿದಿದ್ದರು. ವರಹಾವತಾರ ತನ್ನ ಕೋರೆ ಹಲ್ಲುಗಳಲ್ಲಿ ದುಂಡಗಿನ ಭೂಮಿಯನ್ನು ಎತ್ತಿ ಹಿಡಿದಿರುವ ಬಗ್ಗೆ ಉಲ್ಲೇಖಗಳಿವೆ. ಬೆಳಕಿನ ವೇಗದ ಬಗ್ಗೆ ಹೇಳಿದ್ದು ಡಚ್ಚ್ ವಿಜ್ಞಾನಿ ಕ್ರಿಸ್ಟಿಯಾನ್ ಹುಗೆನ್ಸ್ ಅಂತ ಪಠ್ಯಗಳು ಹೇಳುತ್ತವೆಯಾದರೂ, ಅದಕ್ಕೂ ಮೊದಲು ಇದನ್ನು ಹೇಳಿದವರು ನಮ್ಮ ಕರ್ನಾಟಕದ ವಿಜಯ ನಗರ ಸಾಮ್ರಾಜ್ಯದ ಪಂಡಿತ ಶಯನ ಅನ್ನೋ ಮೇಧಾವಿ. ಗುರುತ್ವಾಕರ್ಷಣೆ ಅನ್ನುವ ಶಕ್ತಿ ಭೂಮಿಗಿರುವ ಬಗ್ಗೆ ತಿಳಿಸಿದ್ದು ಮತ್ತು ಅದನ್ನು ಕಂಡುಹಿಡಿದದ್ದು ನ್ಯೂಟನ್ ಎಂದು ನಾವು ಓದಿದ್ದೇವೆ. ಆದರೆ ನ್ಯೂಟನ್ ಹೇಳಿದ್ದು 16ನೇ ಶತಮಾನದಲ್ಲಿ, ಇದಕ್ಕಿಂತ 4 ಶತಮಾನಗಳ ಮೊದಲೇ ಭಾರತೀಯ ಗಣಿತ ಶಾಸ್ತ್ರಜ್ಞ ಭಾಸ್ಕರಾಚಾರ್ಯರು ಇದನ್ನು ಹೇಳಿದ್ದರು. ಸೂರ್ಯ ಸಿದ್ಧಾಂತ ಮತ್ತು ಸಿದ್ಧಾಂತ ಶಿರೋಮಣಿ ಎಂಬ ಇವರ ಗ್ರಂಥಗಳಲ್ಲಿ ಇದರ ಉಲ್ಲೇಖಗಳಿವೆ. ಅಂದರೆ ಭಾರತ ನಿಜವಾಗಿಯೂ ವಿಶ್ವ ಗುರುವಾಗಿತ್ತು ಮತ್ತು ಆ ಸ್ಥಾನವನ್ನು ಮತ್ತು ಆ ಭವ್ಯತೆಯನ್ನು ಆಧುನಿಕ ಜಗತ್ತಿನಲ್ಲೂ ವಿಭಿನ್ನ ರೀತಿಯಲ್ಲಿ ಉಳಿಸಿಕೊಂಡಿದೆ ಎಂದರೆ ತಪ್ಪಲ್ಲ.
ಇದಕ್ಕೆ ಉತ್ತಮ ನಿದರ್ಶನಗಳೆಂದರೆ ಅದು ಕೋವಿಡ್-19 ಕಾಲ. ಉಳಿದೆಲ್ಲಾ ದೇಶಗಳು ಕಣ್ಣಿಗೆ ಕಾಣದ ಕರಿನೆರಳಾದ ಕೊರೋನಕ್ಕೆ ವಿಲವಿಲ ಒದ್ದಾಡುತ್ತಿದ್ದವು. ಕೆಲವು ಮುಂದುವರೆದ ರಾಷ್ಟ್ರಗಳೂ ಕೂಡ ಹೀನಾಯ ಸ್ಥಿತಿಗೆ ತಲುಪಿದ್ದವು. ಗಮನಾರ್ಹ ಅಂಶವೆಂದರೆ, ಅಲ್ಲಿನ ಜನ ಸಂಖ್ಯೆ ನಮ್ಮ ದೇಶದ ಅರ್ಧದಷ್ಟೂ ಇರಲಿಲ್ಲ. ಕೆಲವು ರಾಷ್ಟ್ರಗಳಲ್ಲಂತೂ ಕರ್ನಾಟಕದಷ್ಟೂ ಜನರಿಲ್ಲದಿದ್ದರೂ ಕೊರೋನ ದಾಳಿಗೆ ಕಂಗೆಟ್ಟಿದ್ದವು. ಪ್ರತಿಷ್ಠಿತ ರಾಷ್ಟ್ರಗಳ ಕೆಲ ಅಧ್ಯಕ್ಷರುಗಳು ಅಲ್ಲಿಯ ಸ್ಥಿತಿಗೆ ಮರುಗಿ ಅಸಹಾಯಕರಂತೆ ಅತ್ತದ್ದೂ ಇದೆ. ಆದರೆ ಭಾರತ ತನ್ನವರನ್ನು ಧೈರ್ಯದಿಂದ ತವರಿಗೆ ಕರೆತಂದು ಔದಾರ್ಯದ ಜೊತೆಗೆ ತನ್ನ ಹಿರಿಮೆಯನ್ನು ಸಾರಿತ್ತು.
ಅನಾಹುತಗಳು ನಡೆದರೂ ಮುಂದುವರೆದ ರಾಷ್ಟ್ರಗಳು ಭಾರತದ ಬಗ್ಗೆ ಊಹಿಸಿದ್ದು ಸುಳ್ಳಾಗಿತ್ತು. ಕೊನೆಗೆ ಆ ರಾಷ್ಟ್ರಗಳೇ ಪ್ರಶಂಸಿಸುವಂತೆ ವೈವಿಧ್ಯತೆಯಲ್ಲಿ ಏಕತೆಯ ಸತ್ಯ, ಸತ್ವ, ತತ್ವಗಳನ್ನು ಸಾರಿತ್ತು ಭಾರತ.
ಅಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ತಾಯಿಯಂತೆ, ಗುರುವಿನಂತೆ ಯಾವ ಭೇದ-ಭಾವ, ವೈರತ್ವಗಳನ್ನೂ ಪರಿಗಣಿಸದೆ ಜಾಗತಿಕ ಸಮುದಾಯದಲ್ಲಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಬದ್ಧತೆ ಪ್ರದರ್ಶಿಸಿದೆ. ಪಾಕಿಸ್ತಾನಕ್ಕೂ ಸೇರಿದಂತೆ ಅನೇಕ ರಾಷ್ಟ್ರಗಳಿಗೆ ಕೋವಿಡ್-19 ಲಸಿಕೆ ಭಾರತದಿಂದ ರಫ್ತಾಗಿದೆ. ಕೆಲವು ರಾಷ್ಟ್ರಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ಹಂಚಿ ತನ್ನ ವಿಶ್ವಮಾನವ ತತ್ವವನ್ನು ಸಾರಿದೆ.
ಇದಕ್ಕೆ ಪೂರಕ ಸಾಕ್ಷಿ ಎಂದರೆ ಬ್ರೆಜಿಲ್ಗೆ 20 ಲಕ್ಷ ಕೋವಿಡ್-19 ಡೋಸ್ ರವಾನಿಸಿದ್ದಕ್ಕೆ ಅಲ್ಲಿನ ಅಧ್ಯಕ್ಷ ಜೈರ್ ಬೋಲ್ಸೊನಾರೊ ಹನುಮಂತ ದೇವರು ಸಂಜೀವಿನಿ ಪರ್ವತವನ್ನು ಹೊತ್ತು ಭಾರತದಿಂದ ಬ್ರೆಜಿಲ್ಗೆ ಹಾರುವಂತೆ ಚಿತ್ರ ಹಾಕಿ ಭಾರತದ ಪ್ರಧಾನಿ ಮತ್ತು ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ. ಇದು ಭಾರತದ ಭವ್ಯ ಚರಿತ್ರೆ ಗಡಿಗಳ ಹಂಗನ್ನು ಮುರಿದಿದೆ ಎಂಬುದನ್ನು ನಿರೂಪಿಸಿದೆ. ತನ್ನ ವಿಶ್ವಗುರುವೆಂಬ ಸತ್ಯವನ್ನು ವಿಶ್ವವೇ ಒಪ್ಪುವಂತೆ ಮಾಡಿದೆ. ಇದು ಶಾಂತಿ ಬಯಸೋ ರಾಷ್ಟ್ರ ಯುದ್ಧ ಕಾಂಡಗಳನ್ನೇ ಚರಿತ್ರೆಯಾಗಿ ಹೊಂದಿದ ರಾಷ್ಟ್ರ. ಇದು ತನ್ನ ಮೌಲ್ಯಗಳಿಂದ ಜಾಗೃತಗೊಂಡ ರೀತಿ ಅದ್ಭುತ. ತನ್ನ ಸತ್ವ, ಸತ್ಯಗಳಿಂದ ವಿಶ್ವವೇ ಭಾರತದ ಭವ್ಯತೆ, ದಿವ್ಯತೆಗಳಿಗೆ ತಲೆ ಬಾಗುವಂತೆ ಮಾಡಿದೆ.
- ದಿನೇಶ ಎಂ
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು](https://www.udayavani.com/wp-content/uploads/2024/07/Kargil-150x84.jpg)
Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು
![ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?](https://www.udayavani.com/wp-content/uploads/2024/07/GT-main-150x83.jpg)
IPL 2025;ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?
![Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್” ಮೆಟ್ಟಿಲು ಬಾವಿಯ ಸ್ವರ್ಗ!](https://www.udayavani.com/wp-content/uploads/2024/07/Beauty01-150x72.jpg)
Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್” ಮೆಟ್ಟಿಲು ಬಾವಿಯ ಸ್ವರ್ಗ!
![6–bamboo-shoot](https://www.udayavani.com/wp-content/uploads/2024/07/6-bamboo-shoot-150x90.jpg)
Bamboo shoot: ಬಿದಿರಿನ ಚಿಗುರಿನ ಆರೋಗ್ಯ ಮಹತ್ವ-ಮಲೆನಾಡಿನ ನೆಚ್ಚಿನ ಖಾದ್ಯ!
![ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding, Birthday ಪಾರ್ಟಿ ಕೂಡ ಇಲ್ಲಿ ನಡೆಯುತ್ತೆ](https://www.udayavani.com/wp-content/uploads/2024/07/gujarath-150x84.jpg)
ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding Shoot, Birthday ಪಾರ್ಟಿ ಕೂಡ ನಡೆಯುತ್ತೆ
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.