ಹೇಗಿತ್ತು ಭಾರತದ ಮೊದಲ ಗಣರಾಜ್ಯೋತ್ಸವ ಸಂಭ್ರಮ


Team Udayavani, Jan 26, 2021, 7:15 AM IST

Untitled-1

ಜನವರಿ 26, 1950ರ ಮುಂಜಾವು 10:18 ನಿಮಿಷಕ್ಕೆ ಭಾರತ ಗಣರಾಜ್ಯವಾಗಿ ಬದಲಾಯಿತು. ಇದಾದ ಕೆಲವೇ ಸಮಯದಲ್ಲಿ, ಅಂದರೆ 10:24ಕ್ಕೆ ಡಾ. ರಾಜೇಂದ್ರ ಪ್ರಸಾದ್‌ ಅವರು ಭಾರತದ ಮೊದಲ ರಾಷ್ಟ್ರಪತಿಯಾಗಿ ಪದಗ್ರಹಣ ಮಾಡಿದರು.

ಜನವರಿ 26 1950ರಂದು ಭಾರತದ ಸಂವಿಧಾನ ಜಾರಿಗೆ ಬಂದ ದಿನ. ಭಾರತದ ಸ್ವಾತಂತ್ರÂ ಚಳವಳಿಯ ಸಂದರ್ಭದಲ್ಲಿ, ಅಂದರೆ ಜನವರಿ 26, 1929 ರಂದು ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಲಾಹೋರ್‌ನಲ್ಲಿ ನಡೆದ ಅಧಿವೇಶನದಲ್ಲಿ “ಪೂರ್ಣ ಸ್ವರಾಜ್ಯ’ದ ಧ್ಯೇಯವನ್ನು ಹಾಕಿಕೊಂಡು, ಆ ದಿನವನ್ನು ಪೂರ್ಣ ಸ್ವರಾಜ್ಯ ದಿನ ಎಂದು ಘೋಷಿಸಿತ್ತು. ಇದೇ ಕಾರಣಕ್ಕಾಗಿಯೇ ಸ್ವಾತಂತ್ರ್ಯಾನಂತರ ಭಾರತದ ಸಂವಿಧಾನವನ್ನು ಈ ದಿನದಂದೇ ಜಾರಿಗೆ ತರಲಾಯಿತು. ಅಂದಿನಿಂದಲೂ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುತ್ತಾ ಬರಲಾಗುತ್ತಿದೆ. ಆದರೆ ಅಂದಿನ ಆಚರಣೆಗಳಿಗೂ ಇಂದಿನ ಆಚರಣೆಗೂ ಅಜಗಜಾಂತರ ವ್ಯತ್ಯಾಸವಿದೆ. ಈ ವ್ಯತ್ಯಾಸದಲ್ಲಿ ಸಾಮರಿಕವಾಗಿ, ಆರ್ಥಿಕವಾಗಿ ಹಾಗೂ ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿರುವ ಭಾರತವೂ ಗೋಚರಿಸುತ್ತದೆ..

 

ಡಾ. ರಾಜೇಂದ್ರ ಪ್ರಸಾದ್‌ ಅವರು ರಾಷ್ಟ್ರಪತಿ ಹುದ್ದೆಗೇರುತ್ತಿದ್ದಂತೆಯೇ, 31 ಗನ್‌ ಸೆಲ್ಯೂಟ್‌ ಮಾಡಿ ಗೌರವ ಸೂಚಿಸಲಾಯಿತು.

ಬುಲೆಟ್‌ಪ್ರೂಫ್ ಕಾರಿನಲ್ಲಲ್ಲ, ರಾಷ್ಟ್ರಪತಿಗಳನ್ನು ತೆರೆದ ಸಾರೋಟಿನಲ್ಲೇ ಇರ್ವಿನ್‌ ಸ್ಟೇಡಿಯಂಗೆ ಕರೆದೊಯ್ಯಲಾಯಿತು. ನಂತರ ರಾಜೇಂದ್ರ ಪ್ರಸಾದ್‌ ಸೇನಾ ಜೀಪನ್ನೇರಿ ಭದ್ರತಾ ಪಡೆಗಳಿಂದ ವಂದನೆ ಸ್ವೀಕರಿಸಿ, ಧ್ವಜಾರೋಹಣ ಮಾಡಿದರು.

ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಸುಕಾರ್ನೋರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಈ ವಿದ್ಯಮಾನದ ನಂತರ ಇಂಡೊನೇಷ್ಯಾದೊಂದಿಗಿನ ಭಾರತದ ಮೈತ್ರಿ ಬಹಳ ಸುಧಾರಿಸುವಂತಾಯಿತು.

 

5ಗಣರಾಜ್ಯೋತ್ಸವ ಆಚರಣೆಯ ವಿರುದ್ಧ ದೇಶದ ಕೆಲ ಭಾಗಗಳಲ್ಲಿ ಪ್ರತಿರೋಧವೂ ಎದುರಾಗಿತ್ತು. ಕಲ್ಕತ್ತಾದಲ್ಲಿ ಕಮ್ಯುನಿಸ್ಟರು ಪೊಲೀಸರ ಮೇಲೆ ಬಾಂಬ್‌ ದಾಳಿ ನಡೆಸಿದ್ದರು. ಬಾಂಬೆಯಲ್ಲಿ ಇದೇ ಪಕ್ಷ ಸಂವಿಧಾನದಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡೆಗಣಿಸಲಾಗಿದೆ ಎಂದು ಪ್ರತಿಭಟಿಸಿತ್ತು. ಇನ್ನು ಅದೇ ದಿನ, ಅನ್ಯ ಕಾರಣಕ್ಕಾಗಿ, ಹೈದ್ರಾಬಾದ್‌ ನಿಜಾಮನ ಹತ್ಯೆ ಪ್ರಯತ್ನದ ಘಟನೆ ನಡೆದು ಸುದ್ದಿಯಾಗಿತ್ತು.

ನಿರ್ದಿಷ್ಟ ಜಾಗವಿರಲಿಲ್ಲ… :

1950ರಿಂದ 1954ರವರೆಗೆ, ಗಣರಾಜ್ಯೋತ್ಸವ ಆಚರಣೆಗೆ ನಿರ್ದಿಷ್ಟ ಜಾಗ ಎನ್ನುವುದಿರಲಿಲ್ಲ. ಮೊದಲು ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಯಾಗಿತ್ತು, ನಂತರ ನ್ಯಾಷನಲ್‌ ಸ್ಟೇಡಿಯಂನಲ್ಲಿ, ಆಮೇಲೆ ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿ, ನಂತರದ ವರ್ಷದಲ್ಲಿ ರಾಮಲೀಲಾ ಮೈದಾನದಲ್ಲಿ ನಡೆದಿತ್ತು. ಕೊನೆಗೆ 1955ರಿಂದ ರಾಜಪಥವೇ ಗಣರಾಜ್ಯೋತ್ಸವ ಪಥಸಂಚಲನದ ವೇದಿಕೆಯಾಯಿತು.

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.