Films: ಭಾರತೀಯ ಸಿನಿಮಾರಂಗದ ಆಗರ್ಭ ಶ್ರೀಮಂತ ದಂಪತಿ… ಇವರು ಮುಟ್ಟಿದ್ದೆಲ್ಲ ಬಂಗಾರ..


Team Udayavani, Sep 9, 2023, 12:35 PM IST

TDY-12

ಭಾರತೀಯ ಚಲನಚಿತ್ರೋದ್ಯಮದಲ್ಲಿ ಶ್ರೀಮಂತ ದಂಪತಿಗಳಿದ್ದಾರೆ. ಸಿನಿಮಾದಲ್ಲಿ ನಟಿಸುವ ಜೊತೆಗೆ ತಮ್ಮದೇ ಸಂಸ್ಥೆ ಮೂಲಕ ಸಿನಿಮಾಗಳನ್ನು ನಿರ್ಮಾಣ ಮಾಡುವ ಹಲವು ದಂಪತಿಗಳು ನಮ್ಮ ಸಿನಿಮಾರಂಗದಲ್ಲಿದ್ದಾರೆ.

ಮುಖ್ಯವಾಗಿ ಬಾಲಿವುಡ್‌ ನಲ್ಲಿ ಶಾರುಖ್ ಮತ್ತು ಗೌರಿ ಖಾನ್, ಆದಿತ್ಯ ಚೋಪ್ರಾ ಮತ್ತು ರಾಣಿ ಮುಖರ್ಜಿ, ಮತ್ತು ಅಜಯ್ ದೇವಗನ್ ಮತ್ತು ಕಾಜೋಲ್ ದಂಪತಿಗಳು ನಟಿಸುವ ಜೊತೆಗೆ ಸಿನಿಮಾವನ್ನು ನಿರ್ಮಾಣ ಮಾಡಿಯೂ ಸೈ ಎನ್ನಿಸಿಕೊಂಡಿದ್ದಾರೆ.

ಆದರೆ ದಕ್ಷಿಣ ಭಾರತದಲ್ಲಿ ಈ ಮೇಲಿನ ಎಲ್ಲಾ ದಂಪತಿಗಳಿಗಿಂತ ಅತೀ ಹೆಚ್ಚು ಸಂಪತ್ತನ್ನು ಹೊಂದಿರುವ ಶ್ರೀಮಂತ ಸಿನಿಮಾ ನಿರ್ಮಾಣ ಮಾಡುವ ದಂಪತಿಯೊಂದಿದೆ. ಈ ದಂಪತಿ ಕಳೆದ 10 ವರ್ಷಗಳಿಂದ ಸಿನಿಮಾ ನಿರ್ಮಾಣದ ಜೊತೆಗೆ ಇತರ ವ್ಯವಹಾರದಲ್ಲಿ ತೊಡಗಿದಕೊಂಡು ಭಾರತೀಯ ಕಾರ್ಪೊರೇಟ್ ವಲಯದಲ್ಲಿಯೂ ಅತಿ ಹೆಚ್ಚು ಲಾಭಾಂಶ ಪಡೆದ ದಂಪತಿಗಳಲ್ಲಿ ಒಂದಾಗಿದ್ದಾರೆ.

ಸನ್ ಟಿವಿ ಮತ್ತು ಸನ್ ಪಿಕ್ಚರ್ಸ್‌ನ ಮಾಲಕರಾಗಿರುವ  ಕಲಾನಿಧಿ ಮಾರನ್ ಮತ್ತು ಅವರ ಪತ್ನಿ ಕಾವೇರಿ ಅತಿ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ಉದ್ಯಮಶೀಲ ದಂಪತಿಗಳಾಗಿದ್ದಾರೆ ಎಂದು ಝೀ ನ್ಯೂಸ್‌ ವರದಿ ತಿಳಿಸಿದೆ.

ಸಿನಿಮಾ ನಿರ್ಮಾಣ, ಕ್ರಿಕೆಟ್‌ ಟೀಮ್‌, ಟವಿ ಚಾನೆಲ್…‌ ಆಸ್ತಿ ಎಷ್ಟು?: ಮಾರನ್‌ ದಂಪತಿ ಎಷ್ಟು ಶ್ರೀಮಂತರೆಂದರೆ ಕಳೆದ ಒಂದು ದಶಕದಲ್ಲಿ 1500 ಕೋಟಿ ರೂಪಾಯಿಯ ವ್ಯವಹಾರದ ಲಾಭವನ್ನು ಪಡೆದಿದ್ದಾರೆ. ಇದು ಅಂಬಾನಿ ದಂಪತಿಗಳಿಸಿದ್ದಕ್ಕಿಂತ ಹೆಚ್ಚು ಎನ್ನುವುದು ವಿಶೇಷ. ಸಿನಿಮಾರಂಗದಲ್ಲಿ ಇಷ್ಟು ದೊಡ್ಡಮಟ್ಟದ ಲಾಭವನ್ನು ಬೇರೆ ಯಾವ ದಂಪತಿಯೂ ಮಾಡಿಲ್ಲ. ಮಾರನ್ ಕುಟುಂಬವು ಸನ್ ಟಿವಿಯಲ್ಲಿ 75% ಪಾಲನ್ನು ಹೊಂದಿದೆ. ಸನ್‌ ಪಿಕ್ಚರ್ಸ್‌ 6 ಭಾಷೆಗಳಲ್ಲಿ ಒಟ್ಟು 33 ಚಾನೆಲ್‌ ಗಳನ್ನು ಹೊಂದಿದೆ. ಇದರಲ್ಲಿ ಸನ್ NXT OTT, ಐಪಿಎಲ್‌ ತಂಡವಾದ ಸನ್‌ರೈಸರ್ಸ್ ಹೈದರಾಬಾದ್ ಕೂಡ ಇದೆ. ಫೋರ್ಬ್ಸ್ ಪ್ರಕಾರ, ಕಲಾನಿಧಿ ಮಾರನ್ ಅವರ ಒಟ್ಟು ಆಸ್ತಿಯ ನಿವ್ವಳ ಮೌಲ್ಯ $3 ಬಿಲಿಯನ್ (ರೂ. 25000 ಕೋಟಿಗಿಂತ ಹೆಚ್ಚು) ಇದೆ. ಇವರು ಭಾರತದ ಶ್ರೀಮಂತ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರು.

ಸಿನಿಮಾಗಳಿಂದಲೇ ಕೋಟಿ ಕೋಟಿ ಗಳಿಕೆ..

ಸನ್‌ ಪಿಕ್ಚರ್ಸ್‌ ಇತ್ತೀಚೆಗೆ ʼಜೈಲರ್‌ʼ ಸಿನಿಮಾವನ್ನು ನಿರ್ಮಾಣ ಮಾಡಿದೆ. ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ 600 ಕೋಟಿಗೂ ಹೆಚ್ಚು ಅಧಿಕ ಕಲೆಕ್ಷನ್‌ ಮಾಡಿದೆ. ಇದೇ ಖುಷಿಯಲ್ಲಿ ಕಲಾನಿಧಿ ಮಾರನ್‌, ರಜಿನಿಕಾಂತ್‌ ಅವರಿಗೆ 100 ಕೋಟಿ ಚೆಕ್‌ ಹಾಗೂ ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಸಂಗೀತ ಸಂಯೋಜಕ ಅನಿರುದ್ಧ್‌ ರವಿಚಂದರ್‌, ನಿರ್ದೇಶಕ ನೆಲ್ಸನ್‌ ದಿಲೀಪ್‌ ಕುಮಾರ್‌ ಅವರಿಗೂ ಇದೇ ರೀತಿಯ ಉಡುಗೊರೆಯನ್ನು ಅವರು ನೀಡಿದ್ದಾರೆ.

ಸಿನಿಮಾರಂಗಕ್ಕೆ ಬಂದರೆ ಸನ್‌ ಪಿಕ್ಚರ್ಸ್‌ ಮೊದಲು ಸಿನಿಮಾ ನಿರ್ಮಾಣ ಮಾಡಿದ್ದು, 1999 ರಲ್ಲಿ ಬಂದ ʼ ಸಿರಗುಗಲ್ʼ ಸಿನಿಮಾವನ್ನು ಆ ಬಳಿಕ ಒಂದು ದಶಕ ಯಾವ ಸಿನಿಮಾವನ್ನು ನಿರ್ಮಾಣ ಮಾಡುವ ಸಾಹಸಕ್ಕೆ ಕೈ ಹಾಕಿಲ್ಲ. ಆ ಬಳಿಕ 2010 ರಲ್ಲಿ ರಜಿನಿಕಾಂತ್ ಅವರ ʼಎಂದಿರನ್ʼ (ರೋಬೋ) ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ಸಿನಿಮಾ ಕೋಟಿ ಕೋಟಿ ಲಾಭ ತಂದುಕೊಟ್ಟಿತ್ತು. ಇದಾದ ಬಳಿಕ ರಜಿನಿಕಾಂತ್‌ ಅವರೇ ಅಭಿನಯಿಸಿರುವ ʼ ಸರ್ಕಾರ್ʼ, ʼಪೆಟ್ಟಾʼದಂತಹ ಸಿನಿಮಾವನ್ನು ನಿರ್ಮಾಣ ಮಾಡಿ ಲಾಭದ ವಹಿವಾಟು ಮಾಡಿದ್ದರು.

ರಾಘವ ಲಾರೆನ್ಸ್ ಅವರ ʼಕಾಂಚನ 3ʼ, ದಳಪತಿ ವಿಜಯ್‌ ಅವರ ʼಬೀಸ್ಟ್‌ʼ ಧನುಷ್‌ ಅಭಿನಯದ ʼʼತಿರುಚಿತ್ರಂಬಲಂʼ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿ ಯಶಸ್ವಿ ನಿರ್ಮಾಣ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡದೆ.

 

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

tdy-2

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್‌ 1 ಫ್ರೀʼ ಟಿಕೆಟ್‌ ಆಫರ್ ಘೋಷಿಸಿದ ಶಾರುಖ್‌ ಖಾನ್

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.