ಕೊಡಗಿನ ಆಕರ್ಷಣೆ ಇರ್ಪು ಜಲಪಾತ : ಈ ಜಲಪಾತದ ಹಿಂದಿದೆ ರಾಮಾಯಣದ ಕಥೆ

ಇರ್ಪು ಜಲಪಾತವು ದಕ್ಷಿಣ ಕೊಡಗಿನ ಬ್ರಹ್ಮಗಿರಿ ಅಭಯಾರಣ್ಯದಲ್ಲಿದೆ.

Team Udayavani, Aug 13, 2022, 5:45 PM IST

web exclusive

ಮಳೆಗಾಲದಲ್ಲಿ ಕೊಡಗಿಗೆ ಪ್ರಯಾಣಿಸುವುದೆಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ, ಆ ಹಚ್ಚ ಹಸಿರು.. ಬೆಟ್ಟ ಗುಡ್ಡ , ಮಂಜು ಮುಸುಕಿದ ಮೋಡಗಳು, ಚುಮು ಚುಮು ಚಳಿ… ವಾವ್ ಸ್ವರ್ಗ ಸುಖ , ಅದಕ್ಕೆ ಹೇಳುವುದು  ಕೊಡಗು ಪ್ರವಾಸಿಗರ ಪಾಲಿನ ಸ್ವರ್ಗ ಎಂದು … ಈ ಮಾತು ಅಕ್ಷರಶ ನಿಜ ಕೂಡ. ಕೊಡಗಿನಲ್ಲಿ ಅದೆಷ್ಟು ಪ್ರವಾಸಿ ತಾಣಗಳು, ಜಲಪಾತಗಳು, ಹಸಿರನ್ನೇ ಮೈಮೇಲೆ ಹೊದ್ದು ನಿಂತ ಬೆಟ್ಟಗಳು ಒಂದಾ ಎರಡಾ.. ಅದಕ್ಕಾಗಿಯೇ ಹೆಚ್ಚಿನ ಜನರು ಪ್ರವಾಸಿ ತಾಣಗಳೆಂದರೆ ಮೊದಲು ಆಯ್ಕೆ ಮಾಡುವುದೇ ಕೊಡಗನ್ನು. ಅಂದ ಹಾಗೆ ನಾನಿವತ್ತು ಹೇಳಲು ಹೊರಟಿದ್ದು ಕೊಡಗಿನ ಪುರಾಣ ಪ್ರಸಿದ್ಧವಾದ ಪ್ರಕೃತಿಯ ಮಡಿಲಿನಲ್ಲಿ ಸ್ವಚ್ಛಂದವಾಗಿ ಧುಮ್ಮಿಕ್ಕುವ ಜಲಪಾತದ ಬಗ್ಗೆ ಅದುವೇ ಇರ್ಪು (ಲಕ್ಷ್ಮಣ ತೀರ್ಥ) ಜಲಪಾತ…

ಕೊಡಗಿನಲ್ಲಿ ಹತ್ತು ಹಲವು ಜಲಪಾತಗಳಿವೆ ಆದರೆ ಇರ್ಪು ಜಲಪಾತ ತನ್ನದೇ ಆದ ವಿಶೇಷತೆಯನ್ನು ಹೊಂದಿದೆ, ಜಿಲ್ಲೆಯಲ್ಲಿ ಇರುವ ಜಲಪಾತಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ ಎಂಬುದು ಇಲ್ಲಿನ ವಿಶೇಷ. ದಕ್ಷಿಣ ಕೊಡಗಿನ ಹಚ್ಚ ಹಸಿರಿನ ಕಾನನದ ನಡುವೆ ಬಂಡೆ ಕಲ್ಲುಗಳನ್ನು ಸೀಳಿಕೊಂಡು ಹಾಲ್ನೊರೆಯಂತೆ ಧುಮ್ಮಿಕ್ಕುವ ಈ ಜಲಪಾತದ ಸೌಂದರ್ಯವನ್ನು ಆಸ್ವಾಧಿಸಲು ಅದೆಷ್ಟೋ ಪ್ರವಾಸಿಗಳು ಬರುತ್ತಾರೆ , ಅಲ್ಲದೆ ಸುಮಾರು 60 ಅಡಿ ಎತ್ತರದಿಂದ ಧುಮ್ಮಿಕ್ಕುವ ಜಲಧಾರೆ ಪ್ರವಾಸಿಗರನ್ನು ಮಂತ್ರಮುಗ್ದರನ್ನಾಗಿಸುವುದರಲ್ಲಿ ಎರಡು ಮಾತಿಲ್ಲ .

ಜಲಪಾತದ ಹಿಂದಿದೆ ಪುರಾಣದ ಕಥೆ
ಅಂದಹಾಗೆ ಲಕ್ಷ್ಮಣ ತೀರ್ಥ ಜಲಪಾತದ ಹಿಂದೆ ಒಂದು ಪುರಾಣದ ಕಥೆಯೂ ಇದೆ. ಈ ಜಲಪಾತ ಸೃಷ್ಟಿಯಾಗಿರೋದೇ ಲಕ್ಷ್ಮಣನ ಬಾಣ ಪ್ರಯೋಗದಿಂದ ಎಂದು ಪುರಾಣಗಳಲ್ಲಿ ಹೇಳಲಾಗುತ್ತಿದೆ. ಸೀತಾ ದೇವಿಯ ಹುಡುಕಾಟದಲ್ಲಿದ್ದ ಶ್ರೀರಾಮ ಮತ್ತು ಲಕ್ಷ್ಮಣ ಇದೆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬಳಲಿದ್ದ ಅಣ್ಣ ಶ್ರೀರಾಮ ತಮ್ಮ ಲಕ್ಷ್ಮಣನಲ್ಲಿ ನೀರು ಕೇಳಿದಾಗ ಲಕ್ಷ್ಮಣ ತನ್ನ ಬತ್ತಳಿಕೆಯಲ್ಲಿದ್ದ ಬಾಣವನ್ನು ಬ್ರಹ್ಮಗಿರಿ ಬೆಟ್ಟಕ್ಕೆ ಪ್ರಯೋಗಿಸಿ ಈ ಜಲಪಾತ ಸೃಷ್ಟಿಯಾಗಿದೆ ಎಂಬುದು ಪ್ರತೀತಿ.

ಇರ್ಪು ಜಲಪಾತಕ್ಕೆ ಇನ್ನೊಂದು ಹೆಸರೇ ಲಕ್ಷ್ಮಣ ತೀರ್ಥ :
ಇರ್ಪು ಜಲಪಾತವು ದಕ್ಷಿಣ ಕೊಡಗಿನ ಬ್ರಹ್ಮಗಿರಿ ಅಭಯಾರಣ್ಯದಲ್ಲಿ ಕಾಣಸಿಗುತ್ತದೆ, ಇದನ್ನು ಲಕ್ಷ್ಮಣ ತೀರ್ಥ ಎಂದು ಕೂಡಾ ಕರೆಯಲಾಗುತ್ತದೆ. ಈ ಲಕ್ಷ್ಮಣ ತೀರ್ಥ ನದಿಯು ಕಾವೇರಿ ನದಿಯ ಮೂಲ ಎಂದು ಹೇಳಲಾಗುತ್ತದೆ.

ಜಲಪಾತಕ್ಕೆ ಹೊಂದಿಕೊಂಡಿದೆ ಶಿವನ ದೇವಾಲಯ :
ಇರ್ಪು ಜಲಪಾತಕ್ಕೆ ಹೊಂದಿಕೊಂಡು ರಾಮೇಶ್ವರ ದೇವಾಲಯವೊಂದು ಇದ್ದು, ಇದು ಕೂಡಾ ಶ್ರೀರಾಮನಿಂದಲೇ ಪ್ರತಿಷ್ಠಾಪಿಸಲ್ಪಟ್ಟಿದೆ ಎಂಬುದು ಪ್ರತೀತಿ ಹಾಗಾಗಿ ಶಿವರಾತ್ರಿಯ ಸಂದರ್ಭ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯು ಗಣನೀಯವಾಗಿರುತ್ತದೆ. ಅಲ್ಲದೆ ಭಕ್ತಾದಿಗಳು ಈ ಜಲಪಾತದ ಪವಿತ್ರ ನೀರಿನಲ್ಲಿ ಮಿಂದೆದ್ದರೆ ಅವರ ಇಷ್ಟಾರ್ಥಗಳು ಈಡೇರುತ್ತದೆಯಂತೆ.

ನೀವು ಬರುವುದಾದರೆ :
ನೀವೇನಾದರೂ ಈ ಜಲಪಾತಕ್ಕೆ ಭೇಟಿ ನೀಡುವುದಾದರೆ ವಿರಾಜಪೇಟೆಯಿಂದ ನಾಗರಹೊಳೆ ಮಾರ್ಗವಾಗಿ ಸುಮಾರು 48 ಕಿ.ಮೀ ದೂರದಲ್ಲಿದೆ ಮತ್ತು ಮಡಿಕೇರಿಯಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಈ ಇರ್ಪು ಜಲಪಾತ.

ಇರ್ಪು ರಾಮೇಶ್ವರ ದೇವಸ್ಥಾನದ ಬಳಿಯ ವರೆಗೆ ವಾಹನದಲ್ಲಿ ಬಂದರೆ ಅಲ್ಲಿ ವಾಹನ ನಿಲ್ಲಿಸಿ ಅಲ್ಲಿ ಅರಣ್ಯ ಇಲಾಖೆಯ ಟಿಕೆಟ್ ಕೌಂಟರ್ ಇದೆ ಅಲ್ಲಿ ಪ್ರವಾಸಿಗರು ಒಬ್ಬರಿಗೆ 50 ರೂ. ಪಾವತಿಸಿ ಸುಮಾರು ಒಂದು ಕಿಲೋ ಮೀಟರ್ ದೂರ ಪ್ರಕೃತಿಯ ಮಡಿಲಲ್ಲಿ ನಡೆದು ಸಾಗಿದರೆ ಇರ್ಪು ಜಲಪಾತ ಸಿಗುತ್ತದೆ. ಅಂದಹಾಗೆ ಸಂಜೆ ಐದು ಗಂಟೆಯವರೆಗೆ ಮಾತ್ರ ಜಲಪಾತ ವೀಕ್ಷಣೆಗೆ ಇಲ್ಲಿ ಅವಕಾಶವಿದೆ.

ಎಚ್ಚರ ವಹಿಸಿ : ಮಳೆಗಾಲದಲ್ಲಿ ಬಂಡೆಕಲ್ಲುಗಳು ಜಾರುವುದರಿಂದ ಪ್ರವಾಸಿಗರು ತುಂಬಾ ಎಚ್ಚರ ವಹಿಸುವುದು ಅವಶ್ಯಕ. ಜೊತೆಗೆ ಪರಿಸರದ ಕಾಳಜಿ ಕೂಡ ನಿಮ್ಮ ಮೇಲಿರಲಿ. ಪರಿಸರ ರಕ್ಷ ಣೆ ನಮ್ಮ ನಮ್ಮೆಲ್ಲರ ಹೊಣೆ…

– ಸುಧೀರ್ ಆಚಾರ್ಯ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.