Jackfruit; ಹಲಸಿನ ಹಣ್ಣಿನ ಹಲ್ವಾ ಮಾಡೋದು ಎಷ್ಟು ಸುಲಭ ಗೊತ್ತಾ…


ಶ್ರೀರಾಮ್ ನಾಯಕ್, Apr 28, 2023, 6:00 PM IST

Jackfruit; ಹಲಸಿನ ಹಣ್ಣಿನ ಹಲ್ವಾ ಮಾಡೋದು ಎಷ್ಟು ಸುಲಭ ಗೊತ್ತಾ…

ಈಗಾಗಲೇ ಹಲಸಿನ ಹಣ್ಣಿನ ಸೀಸನ್‌ ಆರಂಭವಾಗಿದೆ.ರಸ್ತೆ ಬದಿಯಲ್ಲಿ ಹಲಸಿನ ಹಣ್ಣುಗಳ ಮಾರಾಟ ಆರಂಭವಾಗಿದ್ದು,ಇದು ಬಡವರ ಹಣ್ಣು ಎಂದೇ ಜನಜನಿತವಾಗಿದೆ.

ಈ ಹಣ್ಣು ಗಾತ್ರದಲ್ಲಿ ಹೇಗೆ ದೊಡ್ಡ ಸ್ಥಾನ ಪಡೆದಿದೆಯೋ ಹಾಗೆಯೇ ಆರೋಗ್ಯದ ದೃಷ್ಟಿಯಲ್ಲೂ ಅಷ್ಟೇ ಬಹುಮಹತ್ತರದ ಪಾತ್ರವಹಿಸಿದೆ. ಈ ಹಣ್ಣಿನಲ್ಲಿ ವಿಟಮಿನ್‌ ಮತ್ತು ಖನಿಜಾಂಶಗಳು ಹೇರಳವಾಗಿ ಕಂಡು ಬರುತ್ತದೆ ಮಾತ್ರವಲ್ಲದೇ ಪೊಟಾಶಿಯಂ ಹಾಗೂ ಪ್ರೋಟೀನ್‌ ವಿರುವುದರಿಂದ ಆರೋಗ್ಯಕ್ಕೆ ಉತ್ತಮ.

ಹಲಸಿನ ಹಣ್ಣು ತಿನ್ನುವುದಕ್ಕೆ ಅಷ್ಟೇ ಅಲ್ಲ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ. ಉದಾಃ ಚಿಪ್ಸ್‌ , ಹಪ್ಪಳ, ದೋಸೆ, ಕಡುಬು, ಕೇಸರಿಬಾತ್‌,ಐಸ್‌ಕ್ರೀಮ್‌, ಪಾಯಸ,ಮುಳಕ,ಹಲ್ವಾ ಸೇರಿದಂತೆ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ.

ಅಂದಹಾಗೆ ನಾವಿಂದು ಹಲಸಿನ ಹಣ್ಣಿನ ಹಲ್ವಾ ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ.

ಹಾಗಾದರೆ ಮತ್ತೇಕೆ ತಡ “ಹಲಸಿನ ಹಣ್ಣಿನ ಹಲ್ವಾ” ಹೇಗೆ ಮಾಡುವುದು ಎಂದು ತಿಳಿದುಕೊಳ್ಳೋಣ ಬನ್ನಿ….

ಬೇಕಾಗುವ ಸಾಮಗ್ರಿಗಳು
ಹಲಸಿನ ಹಣ್ಣಿನ ತೊಳೆ-20,ತುಪ್ಪ-4 ಚಮಚ,ಒಣದ್ರಾಕ್ಷಿ, ಬಾದಾಮಿ, ಗೋಡಂಬಿ, ಬೆಲ್ಲ-1/4ಕಪ್‌, ಏಲಕ್ಕಿ ಪುಡಿ-ಸ್ವಲ್ಪ.

ತಯಾರಿಸುವ ವಿಧಾನ
ಮೊದಲಿಗೆ ಹಲಸಿನ ಹಣ್ಣನ್ನು ನೀರು ಸೇರಿಸದೆ ಮಿಕ್ಸಿಜಾರಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ರುಬ್ಬಿಕೊಂಡ ಮಿಶ್ರಣವನ್ನು ಒಂದು ಬಾಣಲೆಗೆ ಹಾಕಿ ಅದಕ್ಕೆ ಬೆಲ್ಲವನ್ನು ಸೇರಿಸಿ ಮಿಶ್ರಣವನ್ನು ಕುದಿಸುತ್ತಾ ಕೈಯಾಡಿಸುತ್ತಿರಿ. ಮಧ್ಯಮ ಉರಿಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಅಂದರೆ ಕಂದು ಬಣ್ಣ ಬದಲಾಗುತ್ತ ಬರುತ್ತದೆ. ಈ ಮಿಶ್ರಣ ಗಟ್ಟಿ ಹದಕ್ಕೆ ಬಂದ ನಂತರ ತುಪ್ಪವನ್ನು ಸೇರಿಸಿ ಒಮ್ಮೆಲೆ ಹಾಕಬೇಡಿ ಸ್ವಲ್ಪ-ಸ್ವಲ್ಪ ಹಾಕುತ್ತಾ ಕೈಯಾಡಿಸಿರಿ.ತದನಂತರ ಏಲಕ್ಕಿ ಪುಡಿ,ಬಾದಾಮಿ,ಒಣದ್ರಾಕ್ಷಿ ಹಾಗೂ ಗೋಡಂಬಿ ತುಂಡುಗಳನ್ನು ಸೇರಿಸಿ ಹಲ್ವಾ ಪಾತ್ರೆಯ ಬದಿಗಳನ್ನು ಬಿಡಲು ಪ್ರಾರಂಭಿಸಿದಾಗ ಅದನ್ನು ತೆಗೆಯಿರಿ. ಆ ಬಳಿಕ ಒಂದು ಬಟ್ಟಲಿಗೆ ತುಪ್ಪವನ್ನು ಸವರಿ ಮಾಡಿಟ್ಟ ಹಲ್ವಾವನ್ನು ವರ್ಗಾಯಿಸಿ ತಣಿಯಲು ಬಿಡಿ. ತದನಂತರ ನಿಮಗೆ ಬೇಕಾಗುವ ಆಕಾರದಲ್ಲಿ ತುಂಡು ಮಾಡಿದರೆ ರುಚಿಕರವಾದ ಹಲಸಿನ ಹಣ್ಣಿನ ಹಲ್ವಾ ಸವಿಯಲು ಸಿದ್ಧ.

-ಶ್ರೀರಾಮ್ ಜಿ . ನಾಯಕ್

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.