ಹಲಸಿನ ಹಣ್ಣಿನ ದೋಸೆ, ಮುಳಕ ಮತ್ತು ಹಪ್ಪಳ ಮಾಡುವುದು ಹೇಗೆ?


ಶ್ರೀರಾಮ್ ನಾಯಕ್, May 21, 2020, 7:52 PM IST

ಹಲಸಿನ ಹಣ್ಣಿನ ರೆಸಿಪಿ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಮೂಲೆ ಗುಂಪಾಗಿದ್ದ ಹಲಸು ಇಂದು ರಾಜನಂತೆ ತಲೆಯೆತ್ತಿ ನಿಂತಿದೆ. ಆರೋಗ್ಯಕ್ಕೆ ಪೂರಕವಾದ ಪೌಷ್ಠಿಕಾಂಶ ಹಲಸಿನಲ್ಲಿದೆ. ತುಳುನಾಡಿನಲ್ಲಿ ಆಚರಿಸುವ ಭೂತಾರಾಧನೆಯ ದಿನ ದೈವಗಳ ನೈವೇದ್ಯಕ್ಕೆ ಹಲಸು ಬಳಸಲಾಗುತ್ತಿತ್ತು.ಆದ್ದರಿಂದ ನಮ್ಮ ಸಂಸ್ಕೃತಿಯಲ್ಲಿ ಹಲಸಿಗೆ ಮಹತ್ವದ ಸ್ಥಾನವಿದೆ.

ಸಾಮಾನ್ಯವಾಗಿ ಹಲಸಿನ ಹಣ್ಣಿನಿಂದ ಕಡುಬು, ಮುಳಕ,ಶೀರಾ, ಪಾಯಸ, ದೋಸೆ, ಇಡ್ಲಿ, ಹೋಳಿಗೆ, ಹಪ್ಪಳ ಅಬ್ಬಬ್ಟಾ ಹೀಗೆ ಹೇಳುತ್ತಾ ಹೋದರೆ ಹಲಸಿನ ಹಣ್ಣಿನಿಂದ ಮಾಡಬಹುದಾದ ತಿನಿಸುಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ ಬಹಳಷ್ಟು ಮಂದಿಗೆ ಹಲಸು ಬರಿ ಹಣ್ಣಾಗಿ ಗೊತ್ತೇ ಹೊರತು ಆದರಿಂದ ಮಾಡಬಹುದಾದ ತಿನಿಸುಗಳ ಬಗ್ಗೆ  ಗೊತ್ತಿಲ್ಲ. ಅದೇನೇ ಇರಲಿ ,ಈಗ ನಾವು ಹಲಸಿನ ಹಣ್ಣಿನ ದೋಸೆ, ಮುಳಕ ಮತ್ತು ಹಪ್ಪಳ ಮಾಡುವುದು ಹೇಗೆ ಎಂಬುದು ತಿಳಿದುಕೊಳ್ಳೋಣ….


ಹಲಸಿನ ಹಣ್ಣಿನ ದೋಸೆ
ಬೇಕಾಗುವ ಸಾಮಗ್ರಿಗಳು
ಬೆಳ್ತಿಗೆ ಅಕ್ಕಿ 2ಕಪ್‌, ಹಲಸಿನ ಹಣ್ಣಿನ ಸೊಳೆ 15ರಿಂದ 20, ಬೆಲ್ಲ ಸ್ವಲ್ಪ, ತೆಂಗಿನ ತುರಿ 1/4 ಕಪ್‌, ಕರಿಮೆಣಸು 3, ಎಣ್ಣೆ/ತುಪ್ಪ ,ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಅಕ್ಕಿಯನ್ನು 3 ರಿಂದ 4 ಗಂಟೆ ನೀರಿನಲ್ಲಿ ನೆನೆಸಿಡಿ. ಹಲಸಿನ ಹಣ್ಣನ್ನು ಬಿಡಿಸಿ ಇಟ್ಟುಕೊಳ್ಳಿ. ಬಿಡಿಸಿದ ಹಣ್ಣನ್ನು ಪುನ: ಕತ್ತರಿಸಿದಲ್ಲಿ ಅರೆಯಲು ಸುಲಭವಾಗುವುದು. ಮಿಕ್ಸಿಯಲ್ಲಿ ನೆನೆಸಿದ ಅಕ್ಕಿ, ಹಲಸಿನ ಹಣ್ಣು ಮತ್ತು ತೆಂಗಿನ ತುರಿ,ಕರಿಮೆಣಸನ್ನು ಹಾಕಿ ಅಗತ್ಯವಿದ್ದಷ್ಟು ನೀರು ಸೇರಿಸಿ ರುಬ್ಬಿರಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಂತಿರಲಿ. ತದನಂತರ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕಲಸಿರಿ. ಒಲೆಯ ಮೇಲೆ ಕಾವಲಿ ಇಟ್ಟು ಹಿಟ್ಟಿನಿಂದ ದೋಸೆ ಹೊಯ್ದು ಎರಡೂ ಬದಿಯಲ್ಲೂ ತುಪ್ಪ ಅಥವಾ ಎಣ್ಣೆ ಹಾಕಿ ಕೆಂಪಗೆ ಬೇಯಿಸಿರಿ. ಬಿಸಿ-ಬಿಸಿಯಾದ ಹಲಸಿನ ಹಣ್ಣಿನ ದೋಸೆ ರೆಡಿ. ಇದು ತೆಂಗಿನ ಕಾಯಿ ಚಟ್ನಿಯೊಂದಿಗೆ ತಿನ್ನಲು ಬಹಳ ರುಚಿಕರವಾಗುತ್ತದೆ.


ಹಲಸಿನ ಹಣ್ಣಿನ ಮುಳಕ:
ಬೇಕಾಗುವ ಸಾಮಾಗ್ರಿಗಳು:
3 ಕಪ್‌ ಹಲಸಿನ ಹಣ್ಣಿನ ಕೊಚ್ಚಲು
1 ಕಪ್‌ ಬೆಳ್ತಿಗೆ ಅಕ್ಕಿ
3 ಚಮಚ ತೆಂಗಿನ ಕಾಯಿ ತುರಿ
2 ಚಮಚ ಎಳ್ಳು
1/2 ಲೋಟ ಬೆಲ್ಲ
ಕಾಳು ಮೆಣಸಿನ ಪುಡಿ 1 ಚಮಚ
ಕರಿಯಲಿಕ್ಕೆ ಎಣ್ಣೆ
ಏಲಕ್ಕಿ 4
ಉಪ್ಪು ರುಚಿಗೆ ತಕ್ಕಷ್ಟು

ಮಾಡುವ ವಿಧಾನ:
ಮೊದಲು ಅಕ್ಕಿಯನ್ನು ಒಂದೆರಡು ಗಂಟೆಗಳ ವರೆಗೆ ನೀರಿನಲ್ಲಿ ನೆನೆಸಿಡಬೇಕು ಬಳಿಕ ನೆನೆಸಿದ ಅಕ್ಕಿಯನ್ನು ಬಸಿದು ಹಲಸಿನ ಹಣ್ಣಿನ‌ ತೊಳೆಯ ಕೊಚ್ಚಲಿನೊಟ್ಟಿಗೆ ಅಕ್ಕಿ ಬೆರಸಿ ನೀರು ಮುಟ್ಟಿಸದೆ ನುಣ್ಣಗೆ ರುಬ್ಬಿರಿ, ತೆಗೆಯುವ ವೇಳೆ ತೆಂಗಿನ ತುರಿ, ಏಲಕ್ಕಿ ಹಾಕಿ 2 ಸುತ್ತು ರುಬ್ಬಿರಿ. ಒರಳಿನಿಂದ ತೆಗೆದ ಹಿಟ್ಟಿಗೆ ಎಳ್ಳು ,ಕಾಳು ಮೆಣಸಿನ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿಕೊಳ್ಳಬೇಕು ತದನಂತರ ಬಾಣಲೆಗೆ ಎಣ್ಣೆ ಹೊಯ್ದು ಒಲೆಯ ಮೇಲಿಟ್ಟು ಕಾದ ನಂತರ ಒದ್ದೆ ಕೈಯಿಂದ ಹಿಟ್ಟಿನ ಸಣ್ಣ-ಸಣ್ಣ ಉಂಡೆ ಮಾಡಿ ಎಣ್ಣೆಯಲ್ಲಿ ಬಿಡಿ ಒಂದು ಸಲಕ್ಕೆ 5ರಿಂದ 8 ಮುಳಕಗಳನ್ನು ಕರಿದು ತೆಗೆಯಿರಿ. ಬಿಸಿ ಬಿಸಿ ಹಲಸಿನ ಹಣ್ಣಿನ ಮುಳಕ ತಿನ್ನಲು ರೆಡಿ…


ಹಲಸಿನ ಹಪ್ಪಳ
ಬೇಕಾಗುವ ಸಾಮಗ್ರಿಗಳು
ಬೆಳೆದ ಹಲಸಿನ ಕಾಯಿ,ಜೀರಿಗೆ ಸ್ವಲ್ಪ,ಮೆಣಸಿನ ಪುಡಿ ಸ್ವಲ್ಪ,ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಚೆನ್ನಾಗಿ ಬೆಳೆದ ಹಲಸಿನಕಾಯಿಯನ್ನು ಕೊಯ್ದು ತಂದು ಸೊಳೆಗಳನ್ನು ಬೀಜದಿಂದ ಬೇರ್ಪಡಿಸಿ ಬಳಿಕ ಸೊಳೆಗಳನ್ನು ಚೆನ್ನಾಗಿ ಬೇಯಿಸಿ ರುಚಿಗೆ ತಕ್ಕಷ್ಟು ಉಪ್ಪು ,ಜೀರಿಗೆ ಮತ್ತು ಮೆಣಸಿನ ಪುಡಿ ಸೇರಿಸಿ ರುಬ್ಬಿ.ರುಬ್ಬಿದ ಹಿಟ್ಟನ್ನು ಉಂಡೆ ಮಾಡಿ ಮಣೆಯ ಮೇಲಿಟ್ಟು ಒತ್ತಿ ಹಪ್ಪಳ ತಯಾರಿಸಿ ಚಾಪೆಯ ಮೇಲೆ ಒಣಗಿಸಿರಿ. ಸುಮಾರು 6ರಿಂದ 7 ದಿನ ಬಿಸಿಲಿಗೆ ಒಣಗಿದರೆ ಹಪ್ಪಳ ಗರಿಗರಿಯಾಗುತ್ತದೆ. ಗಾಳಿಯಾಡದ ಡಬ್ಬದಲ್ಲಿ ತುಂಬಿಸಿಡಿ.ಮಳೆಗಾಲದ ದಿನಗಳಲ್ಲಿ ಎಣ್ಣೆ ಯಲ್ಲಿ ಕರಿದರೆ ಚಾ,ಕಾಫಿಯ ಜೊತೆ ತಿನ್ನಬಹುದು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.