ಒಬ್ಬ ಫೀಲ್ಡರ್ ಕೂಡಾ ಒಂದು ಪಂದ್ಯದ ಚಿತ್ರಣ ಬದಲಾಯಿಸಬಲ್ಲ ಎಂದು ತೋರಿಸಿಕೊಟ್ಟಿದ್ದ ರೋಡ್ಸ್!

ಆಗಷ್ಟೇ ವಿಶ್ವ ಕ್ರಿಕೆಟ್ ನ ಅತ್ಯುತ್ತಮ ಫೀಲ್ಡರ್ ಅಲ್ಲಿ ಎದ್ದು ನಿಂತಿದ್ದ .

ಕೀರ್ತನ್ ಶೆಟ್ಟಿ ಬೋಳ, Aug 11, 2021, 1:27 PM IST

ಅಪಸ್ಮಾರದಿಂದ ರಗ್ಬಿ ಆಟ ಬಿಟ್ಟು ಕ್ರಿಕೆಟ್ ಲೋಕದಲ್ಲಿ ಮನೆಮಾತಾದ ಜೋನಾಥನ್ ನೈಲ್ ರೋಡ್ಸ್!

ಅದು 1992ರ ವಿಶ್ವಕಪ್‌. ಆಗ ತಾನೆ ನಿಷೇಧ ಮುಗಿಸಿ ಬಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಎದುರಾಳಿ ಹಲವು ಅಚ್ಚರಿಗಳಿಗೆ ಕಾರಣವಾಗಿದ್ದ ಪಾಕಿಸ್ತಾನ. ಹರಿಣಗಳು ನೀಡಿದ್ದು 211 ರನ್ ಗಳ ಸುಲಭ ಗುರಿ. ಗೆಲುವಿನತ್ತ ಹೊರಟಿದ್ದ ಪಾಕ್ ತಂಡಕ್ಕೆ ಯುವ ಆಟಗಾರರ ಇಂಜಮಮ್ ಉಲ್ ಹಕ್ ಸಾಥ್‌ ನೀಡಿದ್ದರು. 135 ರನ್ ಗೆ ಪಾಕಿಸ್ತಾನ ಎರಡು ವಿಕೆಟ್ ಕಳೆದುಕೊಂಡಿತ್ತಷ್ಟೇ. ಸ್ಟ್ರೈಕ್ ನಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದ ಹಕ್ ಬ್ಯಾಕ್ ವರ್ಡ್ ಪಾಯಿಂಟ್ ಕಡೆಗೆ ಚೆಂಡನ್ನು ಹೊಡೆದು ಒಂಟಿ ರನ್ ಕಸಿಯಲು ಓಡುತ್ತಾರೆ.

ಆದರೆ ಮತ್ತೊಂದು ತುದಿಯಲ್ಲಿದ್ದ ನಾಯಕ ಇಮ್ರಾನ್ ಖಾನ್ ರನ್ ಓಡಲು ನಿರಾಕರಿಸುತ್ತಾರೆ. ಅಷ್ಟೇ ಸಾಕಿತ್ತು ಬ್ಯಾಕ್ ವರ್ಡ್ ಪಾಯಿಂಟ್ ನಲ್ಲಿದ್ದ ಆ ಫೀಲ್ಡರ್ ಗೆ. ಓಡಿ ಬಂದು ಚೆಂಡನ್ನು ಹಿಡಿದ ಆತ ಅಷ್ಟೇ ವೇಗದಲ್ಲಿ ಚಿಗರೆಯ ಮರಿಯಂತೆ ಹಾರಿ ವಿಕೆಟ್ ಮೇಲೆ ಎಗರಿಯಾಗಿತ್ತು. ಮೂರು ವಿಕೆಟ್ ಗಳು ನೆಲದ ಮೇಲೆ; ಇಂಜಮಮ್ ಉಲ್ ಹಕ್ ರನ್ ಔಟ್ ! ಆಗಷ್ಟೇ ವಿಶ್ವ ಕ್ರಿಕೆಟ್ ನ ಅತ್ಯುತ್ತಮ ಫೀಲ್ಡರ್ ಅಲ್ಲಿ ಎದ್ದು ನಿಂತಿದ್ದ .ಆತನೇ ಜೋನಾಥನ್ ನೈಲ್ ರೋಡ್ಸ್ ಅಥವಾ ಜಾಂಟಿ ರೋಡ್ಸ್.

1969ರ ಜುಲೈ 27ರಂದು ದಕ್ಷಿಣ ಆಫ್ರಿಕಾದ ಪೀಟರ್‌ ಮರಿಟ್ಜ್ ಬರ್ಗ್ ನಲ್ಲಿ ಜಾಂಟಿಯ ಜನನ. ಬಾಲ್ಯದಿಂದಲೇ ಜಾಂಟಿ ಆಟೋಟದಲ್ಲಿ ಉತ್ಸಾಹಿ. ಓಟದಲ್ಲಿ ಬಲು ಮುಂದು. ರಗ್ಬಿ ಆಡುತ್ತಿದ್ದವಗೆ ಅಪಸ್ಮಾರದಿಂದ ( ಪಿಟ್ಸ್ ) ರಗ್ಬಿ ಆಡುವುದನ್ನು ಬಿಡಬೇಕಾಯಿತು. ಮುಂದೆ ಹಾಕಿಯಲ್ಲಿ ಆಸಕ್ತಿ ಬೆಳೆಸಿಕೊಂಡ ಜಾಂಟಿ ರಾಷ್ಟ್ರೀಯ ತಂಡದ ಸದಸ್ಯನಾಗಿದ್ದ. ಒಲಿಂಪಿಕ್ಸ್ ತಂಡಕ್ಕೂ ಆಯ್ಕೆಯಾಗಿದ್ದ. ಆದರೆ ನಂತರ ಕ್ರಿಕೆಟ್ ಕಡೆಗೆ ಹೊರಳಿದ ಜಾಂಟಿ ವಿಶ್ವದ ಮನೆಮಾತಾದ.

ಆ ವಿಶ್ವಕಪ್ ಪಂದ್ಯದ ಇಂಜಮಮ್ ಉಲ್ ಹಕ್ ರನ್ ಔಟ್ ಕೇವಲ ಜಾಂಟಿ ರೋಡ್ಸ್ ನನ್ನು ಜನಪ್ರಿಯಗೊಳಿಸಿದ್ದಲ್ಲ. ಕ್ರಿಕೆಟ್ ನಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್ ನಂತೆ ಫೀಲ್ಡಿಂಗ್ ಕೂಡಾ ಮುಖ್ಯ ಎಂದು ಅರಿವಾಗಿತ್ತು. ಒಬ್ಬ ಫೀಲ್ಡರ್ ಕೂಡಾ ಒಂದು ಪಂದ್ಯದ ಚಿತ್ರಣವನ್ನೇ ಬದಲಾಯಿಸಬಲ್ಲ ಎಂದು ಕ್ರಿಕೆಟ್ ವಿಶ್ವಕ್ಕೆ ತೋರಿಸಿಕೊಟ್ಟಿದ್ದೇ ಇದೇ ಜಾಂಟಿ ರೋಡ್ಸ್.

ಇಂಜಮಮ್ ಉಲ್ ಹಕ್ ರನ್ ಔಟ್ ಜಾಂಟಿ ರೋಡ್ಸ್ ರನ್ನು ಪ್ರಸಿದ್ದಿಗೊಳಿಸಿದ್ದು ನಿಜ. ಆದರೆ ಅದೊಂದೇ ಅಲ್ಲ. ನಂತರದ ದಿನಗಳಲ್ಲಿ ಕೇವಲ ತನ್ನ ಫೀಲ್ಡಿಂಗ್ ನಿಂದಾಗಿಯೇ ಜಾಂಟಿ ತಂಡದಲ್ಲಿ ಸ್ಥಾನ ಪಡೆಯುತ್ತಿದ್ದರು. ಕೆಲವು ಅದ್ಭುತ ಕ್ಯಾಚ್ ಗಳು, ನಂಬಲಸಾಧ್ಯ ವೇಗದ ರನ್ ಔಟ್ ಗಳು, ಓರ್ವ ಅತ್ಯದ್ಭುತ ಕ್ಷೇತ್ರರಕ್ಷಕನಾಗಿ ಜಾಂಟಿ ಮಿಂಚತೊಡಗಿದರು.ಅಂದಮಾತ್ರಕ್ಕೆ ಜಾಂಟಿ ಕೇವಲ ಫೀಲ್ಡಿಂಗ್ ಮಾತ್ರವಲ್ಲ ಬ್ಯಾಟಿಂಗ್ ನಲ್ಲೂ ಮಿಂಚುತ್ತಿದ್ದರು. ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಗಳೆರಡರಲ್ಲೂ 35ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. 2003ರಲ್ಲಿ ಕ್ರಿಕೆಟ್ ಗೆ ವಿದಾಯ ಹೇಳಿದ ಜ್ಯಾಂಟಿ ಸದ್ಯ ಫೀಲ್ಡಿಂಗ್ ಕೋಚ್ ಆಗಿ, ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಭಾರತದಲ್ಲಿ ಐಪಿಎಲ್ ಆರಂಭವಾದ ದಿನಗಳಿಂದಲೂ ಮುಂಬೈ ಇಂಡಿಯನ್ಸ್ ತಂಡದ ಫೀಲ್ಡಿಂಗ್ ಕೋಚ್ ಆಗಿರುವ ಜಾಂಟಿಗೆ ಭಾರತವೆಂದರೆ ಅಚ್ಚುಮೆಚ್ಚು. ಅದೇ ಕಾರಣಕ್ಕೆ ತನ್ನ ಮಗಳಿಗೆ ‘ಇಂಡಿಯಾ’ ಎಂದು ಹೆಸರಿಟ್ಟಿದ್ದಾರೆ ಜಾಂಟಿ ದಂಪತಿ. ವಿಶ್ವ ಕ್ರಿಕೆಟ್ ನ ಇತಿಹಾಸದಲ್ಲಿ ಜಾಂಟಿ ರೋಡ್ಸ್ ನಂತಹ ಮತ್ತೊಬ್ಬ ಫೀಲ್ಡರ್ ಇದುವರೆಗೆ ಬಂದಿಲ್ಲ. ಎಷ್ಟು ದೂರದವರೆಗೂ ಡೈವ್ ಹೊಡೆಯಲೂ ಹಿಂಜರಿಯದ ಜಾಂಟಿ, ಕೇವಲ ಫೀಲ್ಡರ್ ಆಗಿ ಅದೆಷ್ಟೋ ಜನರ ಫೇವರೇಟ್ ಆದವರು. ಅದಕ್ಕೆ ಇರಬೇಕು ಈಗಲೂ ಕ್ಷೇತ್ರರಕ್ಷಣೆ ಎಂದು ಬಂದಾಗ ಮೊದಲು ನೆನಪಿಗೆ ಬರುವ ಹೆಸರು ಜಾಂಟಿ ರೋಡ್ಸ್.

*ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.