Easy Recipes; ಈ ತರ ಕಾಜು ಮಸಾಲ ಮಾಡೋದು ಕಲಿತರೆ ನೀವು ಹೋಟೆಲ್ ಮರೆತೆ ಬಿಡ್ತೀರಾ…


ಶ್ರೀರಾಮ್ ನಾಯಕ್, Nov 25, 2023, 5:29 PM IST

Easy Recipes; ಈ ತರ ಕಾಜು ಮಸಾಲ ಮಾಡೋದು ಕಲಿತರೆ ನೀವು ಹೋಟೆಲ್ ಮರೆತೆ ಬಿಡ್ತೀರಾ…

ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಚಪಾತಿ, ಪೂರಿ ಅಥವಾ ರೋಟಿ ಮಾಡುತ್ತಾರೆ ಆದರೆ ಅದಕ್ಕೆ ಸರಿ ಹೊಂದುವ ಗ್ರೇವಿಯನ್ನು ಮಾಡುವುದು ಸ್ವಲ್ಪ ಕಷ್ಟ. ರುಚಿಕರವಾದ ಗ್ರೇವಿ ಮಾಡುವ ಯೋಚನೆಯಲ್ಲಿ ಇದ್ದರೆ ಇಲ್ಲೊಂದು ಟೇಸ್ಟಿಯಾಗಿರುವ ರೆಸಿಪಿ ಇದೆ ಅದುವೇ “ಕಾಜು ಮಸಾಲ(ಗೋಡಂಬಿ ಮಸಾಲ)”.

ಗೋಡಂಬಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ,ಈ ಕಾಜುಯಿಂದ ಮಾಡುವ ಯಾವುದೇ ಆಹಾರ ಪದಾರ್ಥವನ್ನು ತಯಾರಿಸಿದರೂ ಅದರ ರುಚಿಯೇ ಬೇರೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ ಅಷ್ಟೇ ಅಲ್ಲ ಆರೋಗ್ಯಕ್ಕೂ ಇದು ಒಳ್ಳೆಯ ರೆಸಿಪಿ.

ಹಾಗಾದ್ರೆ ಇಂದು ನಾವು ನಿಮಗೆ ಕಾಜು ಮಸಾಲವನ್ನು ಹೇಗೆ ಮಾಡುವುದು ಎಂಬುವುದರ ಬಗ್ಗೆ ಹೇಳಿಕೊಡುತ್ತೇವೆ ಇದನ್ನು ನೀವು ಮನೆಯಲ್ಲಿಯೇ ಸುಲಭವಾಗಿ ಮಾಡಿ ಸವಿಯಬಹುದು.

ಕಾಜು ಮಸಾಲ
ಬೇಕಾಗುವ ಸಾಮಗ್ರಿಗಳು
ಗೋಡಂಬಿ -1ಕಪ್‌, ಸಣ್ಣಗೆ ಹೆಚ್ಚಿದ ಈರುಳ್ಳಿ-3,ಟೊಮೆಟೋ-2,ಎಣ್ಣೆ, ತುಪ್ಪ/ಬೆಣ್ಣೆ-3ಚಮಚ, ಗರಂ ಮಸಾಲ -1ಚಮಚ, ಕಸೂರಿ ಮೇಥಿ-1ಟೀಸ್ಪೂನ್‌, ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು-ಸ್ವಲ್ಪ, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-2 ಚಮಚ, ಚಕ್ಕೆ, ಲವಂಗ-ಎರಡೆರಡು, ಜೀರಿಗೆ-ಅರ್ಧ ಚಮಚ, ಧನಿಯಾ ಪುಡಿ (ಕೊತ್ತಂಬರಿ ಪುಡಿ)-1ಚಮಚ, ಅರಿಶಿನ ಪುಡಿ-ಅರ್ಧ ಟೀಸ್ಪೂನ್‌, ಮೆಣಸಿನ ಪುಡಿ-3ಚಮಚ, ಉಪ್ಪು-ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
-ಮೊದಲಿಗೆ ಒಂದು ಬಾಣಲೆಗೆ ತುಪ್ಪ ಅಥವಾ ಬೆಣ್ಣೆಯನ್ನು ಹಾಕಿ ಅದಕ್ಕೆ ಗೋಡಂಬಿಯನ್ನು ಸೇರಿಸಿ ಕಂದು ಬಣ್ಣ ಬರುವವರೆಗೆ ಹುರಿದು ಒಂದು ಪ್ಲೇಟ್‌ ಗೆ ಹಾಕಿ ಇಟ್ಟುಕೊಳ್ಳಿ.
-ನಂತರ ಅದೇ ಬಾಣಲೆಗೆ 3ಚಮಚ ಎಣ್ಣೆ ಹಾಕಿ ಚಕ್ಕೆ, ಲವಂಗ,ಜೀರಿಗೆ,ಸಣ್ಣಗೆ ಹೆಚ್ಚಿದ ಈರುಳ್ಳಿ,ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ ಮತ್ತು ಟೊಮೆಟೋ ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ.
-ತದನಂತರ ಮಿಕ್ಸಿಜಾರಿಗೆ ಫ್ರೈ ಮಾಡಿಟ್ಟ ಮಸಾಲವನ್ನು ಹಾಕಿ ಅದಕ್ಕೆ 6ರಿಂದ 8ಹುರಿದ ಗೋಡಂಬಿಯನ್ನು ಸೇರಿಸಿ ಸ್ವಲ್ಪ ನೀರನ್ನು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.
-ಈಗ ಒಂದು ಕಡಾಯಿಗೆ 2ಚಮಚ ಎಣ್ಣೆಯನ್ನು ಹಾಕಿ ಅದಕ್ಕೆ ಮೆಣಸಿನ ಪುಡಿ,ಅರಿಶಿನ ಪುಡಿ ಮತ್ತು ಧನಿಯಾ ಪುಡಿ (ಕೊತ್ತಂಬರಿ ಪುಡಿ) ಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ಅದಕ್ಕೆ ರುಬ್ಬಿಟ್ಟ ಮಸಾಲೆಯನ್ನು ಹಾಕಿ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ 3ರಿಂದ 5 ನಿಮಿಷಗಳವರೆಗೆ ಬೇಯಿಸಿರಿ.
-ಆಮೇಲೆ ಹುರಿದಿಟ್ಟ ಗೋಡಂಬಿ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿ. ನಂತರ ಅದಕ್ಕೆ ಗರಂ ಮಸಾಲ,ಕಸ್ತೂರಿ ಮೇಥಿ ಮತ್ತು ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಸೇರಿಸಿ 5 ನಿಮಿಷಗಳ ಕಾಲ ಗ್ರೇವಿಯನ್ನು ಕುದಿಸಿದರೆ ಕಾಜು ಮಸಾಲ ಸವಿಯಲು ಸಿದ್ಧ.ಇದು ಚಪಾತಿ, ಪೂರಿ ಹಾಗೂ ರೋಟಿಗೆ ಹೇಳಿ ಮಾಡಿಸಿದ ಗ್ರೇವಿಯಾಗಿದೆ.

-ಶ್ರೀರಾಮ್ ಜಿ ನಾಯಕ್ 

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು

Kargil War’s@25: ಹಿಮ ಪರ್ವತಗಳಲ್ಲಿ ಪಾಕ್ ಅನ್ನು ತಣ್ಣಗಾಗಿಸಿದ ಬೋಫೋರ್ಸ್ ಹವಿಟ್ಜರ್ ನೆನಪು

ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?

IPL 2025;ಕುಸಿದು ಬಿತ್ತಾ ಗುಜರಾತ್ ಟೈಟಾನ್ಸ್ ಸಾಮ್ರಾಜ್ಯ; ಅದಾನಿ ಪಾಲಾಗುತ್ತಾ ಐಪಿಎಲ್ ತಂಡ?

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

Rani Ki Vav: ನೂರಾರು ವರ್ಷ ಭೂಗತವಾಗಿದ್ದ “ರಾಣಿ ಕೀ ವಾವ್”‌ ಮೆಟ್ಟಿಲು ಬಾವಿಯ ಸ್ವರ್ಗ!

6–bamboo-shoot

Bamboo shoot: ಬಿದಿರಿನ ಚಿಗುರಿನ ಆರೋಗ್ಯ ಮಹತ್ವ-ಮಲೆನಾಡಿನ ನೆಚ್ಚಿನ ಖಾದ್ಯ!

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding, Birthday ಪಾರ್ಟಿ ಕೂಡ ಇಲ್ಲಿ ನಡೆಯುತ್ತೆ

ಪ್ರವಾಸಿ ತಾಣವಾದ ಸ್ಮಶಾನ… ಇಲ್ಲಿ Pre-Wedding Shoot, Birthday ಪಾರ್ಟಿ ಕೂಡ ನಡೆಯುತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.