ಕರ್ನಾಟಕ ಕಾಂಗ್ರೆಸ್ ಗೆಲುವಿನ ಹೋರಾಟದಲ್ಲಿ ಸಸಿಕಾಂತ್ ಸೆಂಥಿಲ್ ಪಾತ್ರವೇನು?
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ವೇಳೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದರು...
Team Udayavani, May 15, 2023, 7:47 PM IST
ಕರ್ನಾಟಕದ ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶಗಳು ರಾಜಕೀಯದ ಪ್ರಸ್ತುತತೆ, ಧ್ರುವೀಕರಣ ಅನೇಕ ನಿರೂಪಣೆಗಳು ಮತ್ತು ತೀರ್ಮಾನಗಳನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಪಾತ್ರವೂ ಗಮನಾರ್ಹವಾಗಿದೆ.
ಕಾಂಗ್ರೆಸ್ ವಾರ್ ರೂಮ್ ಮುಖ್ಯಸ್ಥರಾಗಿ ಸಸಿಕಾಂತ್ ಸೆಂಥಿಲ್ ಅವರು ತನ್ನದೇ ಆದ ದೊಡ್ಡ ಕೊಡುಗೆಯನ್ನು ಕಾಂಗ್ರೆಸ್ ಗೆಲುವಿನಲ್ಲಿ ಕೊಟ್ಟು ಯಶಸ್ಸನ್ನು ಸಂಭ್ರಮಿಸಿದ್ದಾರೆ. ಸೆಂಥಿಲ್ ಮತ್ತು ಅನುಭವಿ ಯುವ ತಂಡ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ ಯಶಸ್ಸು ‘ಕೈ’ಗೆ ತಂದು ಕೊಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ತಮಿಳುನಾಡು ಮೂಲದ ಮಾಜಿ ಐಎಎಸ್ ಅಧಿಕಾರಿ (ಕರ್ನಾಟಕ ಕೇಡರ್) ಸಸಿಕಾಂತ್ ಸೆಂಥಿಲ್ ಅವರು ನಾಗರಿಕ ಸೇವೆಯನ್ನು ತೊರೆದು 2019 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಈ ದೊಡ್ಡ ಗೆಲುವಿನ ಮೂಲಕ ಮೀರಿ ನಿಂತಿದ್ದಾರೆ ಎಂದು ಹಲವರು ಅಭಿಪ್ರಾಯ ಹೊರ ಹಾಕಿದ್ದಾರೆ.
ಜನಾಭಿಪ್ರಾಯದ ಕುರಿತು ಪ್ರತಿಕ್ರಿಯಿಸಿದ ಸೆಂಥಿಲ್ “ನಾವೆಲ್ಲರೂ ದೊಡ್ಡ ವ್ಯವಸ್ಥೆಯ ಒಂದು ಭಾಗವಾಗಿದ್ದೇವೆ. ಸರಕಾರವನ್ನು ಬದಲಾಯಿಸಲು ಜನರೇ ನಿರ್ಧರಿಸಿದ್ದಾರೆ. ನಾನು ಮತ್ತು ಅಣ್ಣಾಮಲೈ ನಮಗೆ ಸರಿ ಎನಿಸಿದ್ದನ್ನು ಮಾಡುತ್ತಿದ್ದೇವೆ. ನಾನು ಹಿಂದೆಂದೂ ಈ ರೀತಿ ಸಾರ್ವಜನಿಕ ಗಮನವನ್ನು ಕೇಂದ್ರೀಕರಿಸಿ ಇರಲಿಲ್ಲ, ”ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
“ನಾನು ವೈಯಕ್ತಿಕವಾಗಿ ತಮಿಳುನಾಡಿನಲ್ಲಿ ಕೆಲಸ ಮಾಡಲು ಬಯಸುತ್ತೇನೆ. ತಮಿಳುನಾಡು ನನ್ನ ನೆಲೆಯಾಗಲಿದೆ. ನಾನು ಐಎಎಸ್ನಲ್ಲಿದ್ದಾಗ ಸುಮಾರು 11 ವರ್ಷಗಳ ಕಾಲ ತಮಿಳುನಾಡಿ ನಲ್ಲಿ ಇರಲಿಲ್ಲ. ನಾನು ಮತ್ತೆ ರಾಜ್ಯವನ್ನು ಅರಿಯಬೇಕು. ಮೊದಲ ತಿಂಗಳಲ್ಲಿ ನಾನು ಸಾಕಷ್ಟು ಪ್ರಯಾಣ ಮಾಡುತ್ತೇನೆ. ಆದರೆ ನಾವು ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಸಂಪರ್ಕ ಕೇಂದ್ರಗಳನ್ನು ಸ್ಥಾಪಿಸುತ್ತೇವೆ” ಎಂದು ಹೇಳಿದ್ದಾರೆ.
“ನಾನು ಸೇವೆಯಿಂದ ಹೊರಬಂದಾಗ, ನಾನು ಕಾರ್ಯತಂತ್ರದಲ್ಲಿ ಕೆಲಸ ಮಾಡುತ್ತೇನೆ ಎಂದು ಭಾವಿಸಿದೆ. ನಾನು ತಮಿಳುನಾಡು ವಾರ್ ರೂಮ್ನ ನೇತೃತ್ವ ವಹಿಸಿದ್ದೆ ಮತ್ತು ‘ವಾಂಗ ಒರು ಕೈ ಪಾಪಂ’ ಅಭಿಯಾನವನ್ನು ನಡೆಸಿದೆ. ಭಾರತ್ ಜೋಡೋ ಯಾತ್ರೆಯ ನಂತರ, ನಾವು ಎದುರಿಸುತ್ತಿರುವ ಎರಡನೇ ಪ್ರಮುಖ ಚುನಾವಣೆ ಕರ್ನಾಟಕದ್ದಾಗಿತ್ತು. ನಾನು 11 ವರ್ಷಗಳ ಕಾಲ ಕರ್ನಾಟಕದಲ್ಲಿ ಕೆಲಸ ಮಾಡಿದ್ದರಿಂದ ಇಲ್ಲಿ ಕೆಲಸ ಮಾಡಬೇಕಾಯಿತು ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ವೇಳೆ ಸಸಿಕಾಂತ್ ಅವರು ತಮ್ಮ ಹುದ್ದೆಗೆ ರ ದಿಢೀರ್ ರಾಜೀನಾಮೆ ಸಲ್ಲಿಸಿದ್ದರು. 2009 ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದ ಅವರು 2009 ಮತ್ತು 2012ರ ಅವಧಿಯಲ್ಲಿ ಬಳ್ಳಾರಿಯಲ್ಲಿ ಸಹಾಯಕ ಆಯುಕ್ತರಾಗಿ ಕೆಲಸ ಮಾಡಿದ್ದರು. ಬಳಿಕ ಎರಡು ಅವಧಿಗೆ ಶಿವಮೊಗ್ಗ ಜಿ. ಪಂ. ಸಿಇಓ ಆಗಿದ್ದರು. ಅನಂತರದ ವರ್ಷಗಳಲ್ಲಿ ಚಿತ್ರದುರ್ಗ ಮತ್ತು ರಾಯಾಚೂರು ಜಿಲ್ಲಾಧಿಕಾರಿಯಾಗಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ 2016ರ ತನಕ ಸೇವೆ ಸಲ್ಲಿಸಿದ್ದರು.
ದ. ಕ ಜಿಲ್ಲೆಯಲ್ಲಿ 23 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ಅಕ್ರಮ ಮರಳುಗಾರಿಕೆ ಮತ್ತು ಗೋ ಕಳ್ಳಸಾಗಟ ತಡೆಯಲು ಅ್ಯಪ್ ಆಧಾರಿತ ಸೇವೆಯನ್ನು ಪರಿಚಯಿಸಿದ್ದರು. ಬೆಳ್ತಂಗಡಿ ತಾಲೂಕು ಪ್ರವಾಹ ಪೀಡಿತವಾದಾಗ ಪರಿಹಾರ ಕಾರ್ಯಕ್ಕಾಗಿ ಶ್ರಮಿಸಿದ್ದರು. ದಕ್ಷ ಅಧಿಕಾರಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್
Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
ಸಲ್ಮಾನ್ ಖಾನ್ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು
Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು