ಶಾಸ್ತ್ರೀಜಿ.. ವಜ್ರಾದಪಿ ಕಠೊರಾಣಿ ಮೃದೂನಿ ಕುಸುಮಾದಪಿ

ವಿಶ್ವಸಂಸ್ಥೆ ಯಲ್ಲಿ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಗಟ್ಟಿದನಿಯಲ್ಲಿ ಹೇಳಿದರು.

Team Udayavani, Oct 2, 2021, 9:32 AM IST

ಶಾಸ್ತ್ರೀಜಿ.. ವಜ್ರಾದಪಿ ಕಠೊರಾಣಿ ಮೃದೂನಿ ಕುಸುಮಾದಪಿ

ಕುಳ್ಳಗಿನ ದೇಹ, ಶಾಂತ ಮುಖಭಾವ, ಮಗುವಿನಂತಹ ನಗು, ಸರಳ, ಸಜ್ಜನಿಕೆಯ ವ್ಯಕ್ತಿತ್ವ. ದೇಶಕಂಡ ಪ್ರಾಮಾಣಿಕ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ. ಅವರ ಮೂಲ ಹೆಸರು ಲಾಲ್‌ ಬಹದ್ದೂರ್‌ ಶ್ರೀವಾತ್ಸವ. ಆದರೆ ಶ್ರೀವಾತ್ಸವ ಎನ್ನುವುದು ಜಾತಿ ಸೂಚಕ ಎಂದವರು ಅದನ್ನು ತಮ್ಮ ಹೆಸರಿನಿಂದ ತೆಗೆದುಬಿಟ್ಟರು.

ಅದು ಸ್ವಾತಂತ್ರ್ಯ ಹೋರಾಟದ ಸಮಯ. ಗೋಪಾಲಕೃಷ್ಣ ಗೋಖಲೆ ಅವರು “ದಿ ಸರ್ವೆಂಟ್‌ ಆಫ್ ಇಂಡಿಯಾ ಸೊಸೈಟಿ’ಯನ್ನು ಸ್ಥಾಪಿಸಿದ್ದರು. ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಹೋರಾಟಗಾರರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಆ ಸೊಸೈಟಿಯ ಸ್ಥಾಪನೆಯಾಗಿತ್ತು. ಶಾಸ್ತ್ರೀಜಿಯವರೂ ಆಗ ಜೈಲಿನಲ್ಲಿದ್ದುದರಿಂದ ಅವರ ಕುಟುಂಬವೂ ಆ ನೆರವನ್ನು ಪಡೆದುಕೊಳ್ಳುತ್ತಿತ್ತು. ಅವರ ಕುಟುಂಬಕ್ಕೆ ತಿಂಗಳಿಗೆ 50 ರೂ.ನೀಡಲಾಗುತ್ತಿತ್ತು. ಆಗ ಶಾಸ್ತ್ರೀಜಿಯವರು ಜೈಲಿನಿಂದ ಅವರ ಪತ್ನಿಗೆ ಪತ್ರವೊಂದನ್ನು ಬರೆದಿದ್ದರು. ಅದರಲ್ಲಿ “ಸೊಸೈಟಿ ಯಿಂದ ಪ್ರತೀ ತಿಂಗಳೂ ಸರಿಯಾಗಿ ಹಣ ಬರುತ್ತಿದೆಯೇ? ಆ ಹಣ ಸಂಸಾರವನ್ನು ಸರಿದೂಗಿಸಲು ಸಾಕಾಗುತ್ತಿದೆಯೇ?’ ಎಂಬ ಪ್ರಶ್ನೆ ಕೇಳಿದ್ದರು. ಅದಕ್ಕೆ ಲಲಿತಾ ಶಾಸ್ತ್ರಿಯವರು ಮರುಪತ್ರವನ್ನು ಬರೆದು ಸೊಸೈಟಿ ಕಳುಹಿಸುತ್ತಿರುವ ಹಣ ಪ್ರತೀ ತಿಂಗಳೂ ತಪ್ಪದೇ ಬರುತ್ತಿದೆ. ಇನ್ನೂ ಹೆಚ್ಚು ಹೇಳಬೇಕೆಂದರೆ ಅವರು ಕಳುಹಿಸುತ್ತಿರುವ 50 ರೂ. ಗಳಲ್ಲಿ ನಾನು 40 ರೂ.ಗಳನ್ನು ಮಾತ್ರ ಖರ್ಚು ಮಾಡಿ, ಹತ್ತು ರೂ.ಗಳನ್ನು ಉಳಿಸಿ ಕೂಡಿಡುತ್ತಿದ್ದೇನೆ’ ಎಂದು ತಿಳಿಸಿದ್ದರು. ಕೂಡಲೇ ಶಾಸ್ತ್ರೀಜಿಯವರು ಸೊಸೈಟಿಗೆ ಪತ್ರ ಬರೆದು ತಮ್ಮ ಕುಟುಂಬದ ನಿರ್ವಹಣೆಗೆ 40ರೂ. ಸಾಕೆಂದೂ ಉಳಿದ 10 ರೂ.ಗಳನ್ನು ಕಷ್ಟದಲ್ಲಿರುವ ಇತರ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಬೇಕೆಂದು ಮನವಿ ಮಾಡಿದ್ದರು!

ಕುಳ್ಳಗಿನ ದೇಹ, ಶಾಂತ ಮುಖಭಾವ, ಮಗುವಿನಂತಹ ನಗು, ಸರಳ, ಸಜ್ಜನಿಕೆಯ ವ್ಯಕ್ತಿತ್ವ. ಈ ದೇಶದ ಮಹಾನ್‌ ನೇತಾರ. ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ. ಶಾಸ್ತ್ರೀಜಿ ಅವರ ಮೂಲ ಹೆಸರು ಲಾಲ್‌ ಬಹದ್ದೂರ್‌ ಶ್ರೀವಾತ್ಸವ. ಆದರೆ ಶ್ರೀವಾತ್ಸವ ಎನ್ನುವುದು ಜಾತಿ ಸೂಚಕ ಎಂದವರು ಅದನ್ನು ತಮ್ಮ ಹೆಸರಿನಿಂದ ತೆಗೆದು ಬಿಟ್ಟರು. ಅವರು ಪದವಿ ಮುಗಿ ಸಿದಾಗ ಕಾಶಿ ವಿದ್ಯಾಪೀಠ ಅವರಿಗೆ ನೀಡಿದ ಬಿರುದು “ಶಾಸ್ತ್ರಿ ಮುಂದೆ ಅವರ ಹೆಸರಿನಲ್ಲೇ ಸೇರಿಕೊಂಡಿತು.

ಪ್ರಧಾನಿಯಾಗಿದ್ದಾಗಲೂ ಶಾಸ್ತ್ರಿ ಅವರ ಬಳಿ ಓಡಾಡಲು ಸ್ವಂತ ಕಾರು ಇರಲಿಲ್ಲ. ಮನೆಯ ಸದಸ್ಯರ ಒತ್ತಾಯ ಹೆಚ್ಚಾದಾಗ, ಫಿಯೆಟ್‌ ಕಾರೊಂದನ್ನು ಖರೀದಿಸಲು ನಿರ್ಧರಿಸಿದರು. ಆದರೆ ಅದರ ಬೆಲೆಯೋ 12,000 ರೂ.ಗಳು. ಪ್ರಧಾನಿಯವರ ಬಳಿ ಇದ್ದಿದ್ದು 7,000 ರೂ.ಗಳು ಮಾತ್ರ. ಉಳಿದ ಹಣಕ್ಕಾಗಿ ಅವರು ಬ್ಯಾಂಕ್‌ ಒಂದಕ್ಕೆ ವಾಹನ ಸಾಲಕ್ಕಾಗಿ ಅರ್ಜಿ ಹಾಕಿದರು. ತತ್‌ಕ್ಷಣ ಸಾಲವೇನೂ ಸಿಕ್ಕಿತು. ಆದರೆ ಶಾಸ್ತ್ರೀಜಿ ಬ್ಯಾಂಕ್‌ ಅಧಿಕಾರಿಯನ್ನು ಕರೆದು ಇಷ್ಟೇ ಶೀಘ್ರದಲ್ಲಿ ಜನಸಾಮಾನ್ಯರಿಗೂ ಎಲ್ಲ ಸಾಲ ಸೌಲಭ್ಯದ ವ್ಯವಸ್ಥೆ ಆಗುತ್ತದೆಯೋ? ಎಂದು ವಿಚಾರಿಸಿದ್ದರಂತೆ!

1962ರ ಯುದ್ಧದ ಸೋಲು ಭಾರತಕ್ಕೆ ಮರೆಯಲಾರದ ಪಾಠ ಕಲಿಸಿತ್ತು. ಆ ಸಮಯದಲ್ಲಿ ಭಾರತ ತನ್ನ ರಕ್ಷಣ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳಬೇಕಾಗಿತ್ತು. ಎಲ್ಲಕ್ಕಿಂತ ಹೆಚ್ಚಾಗಿ ಮಾನಸಿಕವಾಗಿ ಕುಗ್ಗಿಹೋಗಿದ್ದ ಭಾರತೀಯ ಸೈನ್ಯಕ್ಕೆ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬುವ ಕೆಲಸ ಆಗಬೇಕಾಗಿತ್ತು. ಹಾಗಾಗಿ 1965ರ ಎ. 5ರಂದು ಶಾಸ್ತ್ರೀಜಿ ಭಾರತದ ವಿಜ್ಞಾನಿ ಗಳಿಗೆ ಪರಮಾಣು ಸ್ಫೋಟಕಗಳನ್ನು ತಯಾರಿಸುವುದಕ್ಕೆ ಅನುಮತಿ ನೀಡಿದರು. ಕೂಡಲೇ ಡಾ| ಹೋಮಿ ಜಹಾಂ ಗೀರ್‌ ಬಾಬಾ ಅವರ ನೇತೃತ್ವದಲ್ಲಿ ಪರಮಾಣು ವಿನ್ಯಾಸಗಾರರ ಒಂದು ತಂಡ ಶಾಂತಿಯುತ ಉದ್ದೇಶಕ್ಕಾಗಿ ಪರಮಾಣು ಸ್ಫೋಟಕಗಳ ಅಧ್ಯಯನಕ್ಕೆ ಮುಂದಾಯಿತು. ಅನಂತರದ ವರ್ಷಗಳಲ್ಲಿ ಭಾರತ ಪರಮಾಣು ಶಕ್ತಿ ಹೊಂದಿದ ರಾಷ್ಟ್ರವಾಗಲು ಇದು ಸಹಕಾರಿಯಾಯಿತು.

ಇದನ್ನೂ ಓದಿ:ರಾಜಸ್ಥಾನ ಸಿಎಂ ಗೆಹ್ಲೋಟ್ ನನ್ನ ಸ್ನೇಹಿತ; ಪ್ರಧಾನಿ ಶ್ಲಾಘನೆ

ಅದು 1965ರ ಆ. 31. ಅಂದು ರಾತ್ರಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿ ಅವರು ಊಟಕ್ಕೆ ಕುಳಿತಿದ್ದರು. ಭಾರತೀಯ ಸೈನ್ಯದ ಮೂರು ಪಡೆಯ ಮುಖ್ಯಸ್ಥರು ಪ್ರಧಾನಿ ನಿವಾಸಕ್ಕೆ ದೌಡಾಯಿಸಿದರು. ಸಭೆ ಪ್ರಾರಂಭವಾಯಿತು. ಆಶ್ಚರ್ಯವೆಂಬಂತೆ ಕೇವಲ ಏಳೇ ನಿಮಿಷಗಳಲ್ಲಿ ಪ್ರಧಾನಿ ಸಭೆ ಮುಗಿಸಿ ಹೊರಬಂದರು. ವಾಸ್ತವದಲ್ಲಿ ಸೇನಾಪಡೆಯ ಮುಖ್ಯಸ್ಥರು “ಪಾಕಿಸ್ಥಾನಿ ಸೈನ್ಯ ಛಾಂಬ್‌ ಸೆಕ್ಟರ್‌ನಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಬರುತ್ತಿದೆ. ಈಗ ನಾವು ಅವರನ್ನು ತಡೆಯದಿದ್ದರೆ ಜಮ್ಮು-ಕಾಶ್ಮೀರ ಭಾರತದಿಂದ ಬೇರ್ಪಡುವ ಎಲ್ಲ ಸಾಧ್ಯತೆಗಳೂ ಇವೆ’ ಎಂದು ಪ್ರಧಾನಿ ಯವರ ಮುಂದೆ ತಮ್ಮ ಚಿಂತೆಯನ್ನು ತೋಡಿಕೊಂಡಿದ್ದರು. ಗಂಭೀರರಾದ ಶಾಸ್ತ್ರೀಜಿ ಕೂಡಲೇ ಸೇನಾ ದಾಳಿ ಮಾಡಿ. ವಾಯು ಪಡೆಯ ವಿಮಾನಗಳಿಂದಲೂ ದಾಳಿ ನಡೆಸಿ. ಒಮ್ಮೆ ಆಕ್ರಮಣ ಪ್ರಾರಂಭಗೊಂಡರೆ ಲಾಹೋರ್‌ವರೆಗೂ ಮುನ್ನುಗ್ಗಿ. ಛಾಂಬ್‌ ಕೈಜಾರುವ ಮೊದಲು ಲಾಹೋರನ್ನು ವಶಪಡಿಸಿಕೊಳ್ಳಿ. ಜಗತ್ತಿಗೆ ಉತ್ತರ ಕೊಡುವ ಜವಾಬ್ದಾರಿ ನನ್ನದು. ಹೋರಾಟ ನಿಮ್ಮದು ಎಂಬ ಖಡಕ್‌ ಆದೇಶ ನೀಡಿದ್ದರು. ಯುದ್ಧದ ಸಮಯದಲ್ಲಿ ಶಾಸ್ತ್ರೀಜಿ ಅವರು ಸೈನಿಕರನ್ನು ಹುರಿದುಂಬಿಸಿ ಆಡುತ್ತಿದ್ದ ಮಾತುಗಳು, ಭಾಷಣಗಳು, ತೆಗೆದು ಕೊಳ್ಳುತ್ತಿದ್ದ ನಿರ್ಧಾರಗಳು ಸೈನ್ಯಕ್ಕೆ ಭೀಮಬಲವನ್ನು ತಂದು ಕೊಟ್ಟಿದ್ದವು.

ಭಾರತ ಪಾಕಿಸ್ಥಾನವನ್ನು ಬಗ್ಗು ಬಡಿದಿತ್ತು. ಭಾರತೀಯ ಸೈನ್ಯ ಲಾಹೋರ್‌ನ ಹೆಬ್ಟಾಗಿಲಿಗೆ ಬಂದು ನಿಂತಿತ್ತು. ಮುಂದಿನ ಕೆಲವೇ ಗಂಟೆಗಳಲ್ಲಿ ಪಾಕಿಸ್ಥಾನದ ಪ್ರಮುಖ ನಗರಗಳು ಭಾರತದ ಕೈವಶವಾಗು ವುದರಲ್ಲಿತ್ತು. ಅಷ್ಟರಲ್ಲಿ ಪಾಕಿಸ್ಥಾನ ಲಜ್ಜೆಬಿಟ್ಟು ಅಮೆರಿಕ, ರಷ್ಯಾ ಮತ್ತು ವಿಶ್ವ ಸಂಸ್ಥೆಯ ಮುಂದೆ ಮಂಡಿಯೂರಿ ಕುಳಿತು ಯುದ್ಧ ನಿಲ್ಲಿಸಲು ಭಾರತದ ಮನವೊಲಿಸಲು ಗೋಗರೆಯಲಾ ರಂಭಿಸಿತು. ಹಾಗಾಗಿ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಶಾಸ್ತ್ರೀಜಿ ಶಾಂತಿ ಮಾತು ಕತೆಗೆ ತಾಷ್ಕೆಂಟ್ ಗೆ ಹೊರಟರು. ತಾಷ್ಕೆಂಟ್ ನಲ್ಲಿ ಸತತ ಏಳು ದಿನಗಳ ಕಾಲ ಶೃಂಗಸಭೆ ನಡೆಯಿತು. ಅಂತಿಮ ವಾಗಿ ಶೃಂಗಸಭೆಯಲ್ಲಿ ಶಾಂತಿ ಸಂಧಾನಕ್ಕೆ ಉಭಯ ನಾಯಕರಿಂದ ಸಹಿ ಬಿತ್ತು. ಆದರೆ ಆ ಸಹಿಯ ಶಾಯಿ ಆರುವ ಮುನ್ನವೇ ಶಾಸ್ತ್ರೀಜಿ ಸಾವಿನ ಸುದ್ದಿ ಬರಸಿಡಿಲಿನಂತೆ ಭಾರತಕ್ಕೆ ಬಡಿದಿತ್ತು.

ನಿಜಕ್ಕೂ ಅಂದು ರಾತ್ರಿ ಏನಾಯಿತು?, ಶಾಸ್ತ್ರೀಜಿ ಹಾಗೆ ಹಠಾತ್ತನೆ ಕುಸಿದು ಬೀಳಲು ಕಾರಣವೇನು? ಇವೆಲ್ಲವೂ ನಿಗೂಢ. ಶಾಸ್ತ್ರೀಜಿ ಅವರ ಸಾವಿನ ಬಗ್ಗೆ ಸಾಲು ಸಾಲು ಅನು ಮಾನಗಳು ಮತ್ತು ತರ್ಕಗಳು ಹುಟ್ಟಿಕೊಂಡವಾದರೂ ಸ್ಪಷ್ಟ ಉತ್ತರ ಸಿಗದೇ ಹೋದುದು ಮಾತ್ರ ವಿಪರ್ಯಾಸ.

ಅವರು ಆಡಳಿತ ನಡೆಸಿದ್ದು ಕೇವಲ 18 ತಿಂಗಳು ಮಾತ್ರ. ಅಷ್ಟು ಸಣ್ಣ ಅವಧಿಯಲ್ಲೇ ಪಾಕಿಸ್ಥಾನದೊಂದಿಗಿನ ಯುದ್ಧದಲ್ಲಿ ದೇಶವನ್ನೂ ಮುನ್ನಡೆಸಿದರು. ದೇಶದಲ್ಲಿನ ಆಹಾರ ಕೊರತೆ ಯನ್ನು ನೀಗಿಸಿದರು. ಹಿಂದಿ-ಇಂಗ್ಲಿಷ್‌ ಭಾಷಾ ಗೊಂದಲ ವನ್ನು ಬಗೆಹರಿಸಿದರು. ಕಾಶ್ಮೀರದ ಹಜರತಾಲ್‌ನಂತಹ ಸಮಸ್ಯೆಯನ್ನು ಹೂವೆತ್ತಿದಂತೆ ಪರಿಹರಿಸಿದರು. ವಿಶ್ವಸಂಸ್ಥೆ ಯಲ್ಲಿ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಗಟ್ಟಿದನಿಯಲ್ಲಿ ಹೇಳಿದರು. ಅವರೆಂದೂ ಅನ್ಯಾಯವನ್ನು ಸಹಿಸಿದವರಲ್ಲ, ತಾವು ನಂಬಿದ್ದ ತಣ್ತೀ ಮತ್ತು ಸಿದ್ಧಾಂತದಿಂದ ದೂರ ಸರಿದವರಲ್ಲ. ಅವರ ಬದುಕಿನ ಒಂದೊಂದು ಘಟನೆಗಳೂ ಅವರ ಉದಾತ್ತ ಚಿಂತನೆಗಳು ಮತ್ತು ಆದರ್ಶ ಗಳಿಗೆ ಹಿಡಿದ ಕನ್ನಡಿಯಂತೆ ನಮ್ಮ ಮುಂದಿವೆ.

– ಪ್ರಕಾಶ್‌ ಮಲ್ಪೆ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.