ಜೀವನ ಪಾಠ; ಮಹಾತ್ಮರ ಜಯಂತಿಯ ಮಹತ್ವ

ಸಾಧನೆ ಮಾಡಿದ ವ್ಯಕ್ತಿಗಳಾಗಲಿ ಬೇರೆ ಯಾವ ದೇಶದಲ್ಲಿಯೂ ಕಾಣ ಸಿಗುವುದಿಲ್ಲ.

Team Udayavani, Jan 15, 2022, 5:11 PM IST

ಜೀವನ ಪಾಠ; ಮಹಾತ್ಮರ ಜಯಂತಿಯ ಮಹತ್ವ

ನಮ್ಮ ಭಾರತ ದೇಶದಲ್ಲಿ ಬದುಕುತ್ತಿರುವ ನಾವೇ ಪುಣ್ಯವಂತರು ಎಂದು ಭಾವಿಸಬೇಕು. ಏಕೆಂದರೆ ನಮ್ಮ ದೇಶದಲ್ಲಿ ಇರುವ ಹಬ್ಬಗಳಾಗಲಿ, ಜೀವನ ಶೈಲಿಯಾಗಲಿ, ಆಹಾರ ಪದ್ದತಿಗಳಾಗಲಿ, ಸಾಧನೆ ಮಾಡಿದ ವ್ಯಕ್ತಿಗಳಾಗಲಿ ಬೇರೆ ಯಾವ ದೇಶದಲ್ಲಿಯೂ ಕಾಣ ಸಿಗುವುದಿಲ್ಲ. ನಮ್ಮ ದೇಶವು ವಿವಿಧತೆಯಿಂದ ಕೂಡಿರುವ ದೇಶವಾಗಿದೆ. ಇಲ್ಲಿ ಮಹತ್ತರ ಸಾಧನೆ ಮಾಡುವುದರ ಮೂಲಕ ಆದರ್ಶ ವ್ಯಕ್ತಿಯಾಗಿ ಹೊರಹಮ್ಮಿರುವ ಮಹಾಪುರುಷರಿಗಾಗಿಯೇ ಮಹಾತ್ಮರ ಜಯಂತಿಗಳನ್ನು ಆಚರಿಸಲಾಗುತ್ತದೆ. ಇಲ್ಲಿ ಅಂತವರ ಜೀವನವನ್ನೆ ಮಾರ್ಗದರ್ಶನವಾಗಿ ಇಟ್ಟುಕೊಂಡು ತಮ್ಮ ಜೀವನವನ್ನು ನಿರೂಪಿಸಿಕೊಂಡವರು ಎಷ್ಟೋ ಜನರಿದ್ದಾರೆ. ಈ ಮಹಾಪುಷರಿಗೆ ಗೌರವನ್ನು ಸಲ್ಲಿಸುವ ಸಲುವಾಗಿಯೆ ಈ ಆಚರಣೆಗಳನ್ನು ಆಚರಿಸಲಾಗುತ್ತದೆ.

ಇಂದು ನಾವು ಜೀವನ ನಡೆಸುತ್ತಿರುವ ಶೈಲಿಗೂ ಅಂದು ಅವರು ಜೀವನ ನಡೆಸುತ್ತಿರುವ ಶೈಲಿಗೂ ಅಜಗಜಾಂತರ ವ್ಯತ್ಯಾಸ ಕಂಡು ಬರುತ್ತದೆ. ಇಂದು ನಮಗೆ ಸ್ವಲ್ಪ ಅವಮಾನವಾದರೆ, ಬದುಕಲು ಕಷ್ಟವಾದರೆ, ಸವಾಲುಗಳು ಎದುರಾದರೆ, ಜೀವನದಲ್ಲಿ ಸೋಲು, ನಷ್ಟಗಳಾದರೆ ಅವನೆಲ್ಲವನ್ನು ಎದುರಿಸಿ ಜೀವನ ಮುಂದೆ ನಡೆಸಿಕೊಂಡು ಹೋಗುವ ಶಕ್ತಿ ಕಡಿಮೆ ಪ್ರಮಾಣದಲ್ಲಿ ಇದೆಯೆಂದೇ ಹೇಳಬಹುದು. ಪ್ರಯತ್ನವನ್ನು ಪಡದೆ ಸಾಯುವ ಯೋಚನೆಗಳು ತಲೆಯಲ್ಲಿ ಬರುತ್ತವೆ.

ಆದರೆ ಹಿಂದೆ ಹಾಗಲ್ಲ ಅವರು ಎಷ್ಟೇ ಕಷ್ಟ, ನೋವು ಸವಾಲು ಸೋಲುಗಳು ಎದುರಾದರೂ ಅದರ ವಿರುದ್ಧವಾಗಿ ಹೋರಾಟವನ್ನು ನೆಡೆಸುತ್ತಿದ್ದರು. ತಾವು ಜೀವಿಸುವುದರ ಜೊತೆ ತಮ್ಮವರು ಜೀವನ ನಡೆಸಬೇಕು ಎಂಬ ಉದಾರ ಮನೋಭಾವನೆಯಿತ್ತು. ತಾವು ಶಿಕ್ಷಣ ಪಡೆದು ಅನಕ್ಷರಸ್ಥರಿಗೆ ಮಾಹಿತಿ, ಶಿಕ್ಷಣ, ಪಾಠ ಪ್ರವಚನ ನೀಡುತ್ತಿದ್ದರು, ಆ ಮೂಲಕವಾಗಿ ಎಲ್ಲರಲ್ಲಿಯೂ ಜಾಗೃತಿ ಮೂಡಿಸುತ್ತಿದ್ದರು. ಅವರ ಮಾತುಗಳಿಂದ, ಭಾಷಣಗಳಿಂದ ಸಮಾಜದಲ್ಲಿ ಅಸ್ಪೃಶ್ಯತೆ, ಬಾಲ್ಯವಿವಾಹ, ಸತಿ ಪದ್ಧತಿ, ಜಾತಿ ಪದ್ಧತಿ ಇತ್ಯಾದಿಗಳ ಬಗ್ಗೆ ಹೋರಾಟ ತಿಳುವಳಿಕೆ ಜಾಗೃತಿ ಮೂಡಿತ್ತು.

ಭಾರತದಲ್ಲಿ ಮಹಾಪುರುಷರೆನಿಸಿಕೊಂಡ ಬುದ್ಧ, ವಾಲ್ಮೀಕಿ, ಕನಕದಾಸರು, ವಿವೇಕಾನಂದ, ಅಂಬೇಡ್ಕರ್, ಬಸವಣ್ಣ, ಮಹಾವೀರ, ಅಕ್ಕಮಹಾದೇವಿ, ಗಾಂಧಿ, ಅಲ್ಲಮ್ಮ ಪ್ರಭು ಹೀಗೆ ಮೊದಲಾದವರೂ ಸಮಾಜದ ಉದ್ದಾರಕ್ಕಾಗಿ ಶ್ರಮಿಸಿ ಯಶಸ್ಸನ್ನು ಪಡೆದಿದ್ದಾರೆ. ಹಾಗೆಯೇ ಇಂದಿನ ಜನರಿಗೂ ಆದರ್ಶಪ್ರಾಯರಾಗಿದ್ದಾರೆ, ಅವರ ಜೀವನ ಶೈಲಿ, ಅವರ ನುಡಿಗಳು ಇಂದಿಗೂ ಪ್ರಸ್ತುತವಾಗಿದೆ. ನಾವು ಧೃತಿಗೆಟ್ಟಾಗ, ಮನಸ್ಸು ಹಾಳಾದಾಗ, ಕಷ್ಟದಲ್ಲಿ ಇರುವಾಗ, ಸೋಲನ್ನು ಅನುಭವಿಸಿದಾಗ ಈ ಮಹಾಪುರುಷರ ನುಡಿಗಳೇ ನಮಗೆ ಧೈರ್ಯವನ್ನು ತುಂಬುತ್ತದೆ. ಒಂದು ಆದರ್ಶ ಜೀವನ ನೆಡೆಸಲು ಇಂತಹ ವ್ಯಕ್ತಿಗಳೇ ನಮಗೆ ಗುರು. ನಾವು ಹಾಕಿಕೊಂಡ ಯೋಜನೆಯನ್ನು ತಲುಪಲು ನಮಗೆ ಒಳ್ಳೆಯ ದಾರಿಯನ್ನು ತೋರಿಸಿದವರು ಇವರೇ. ಹಾಗಾಗಿ ಇಂತಹ ಮಹಾಪುರುಷರ ಜಯಂತಿ ಎಲ್ಲರಿಗೂ ಸ್ಫೂರ್ತಿದಾಯಕ ಎಂಬುದರಲ್ಲಿ ಎರಡು ಮಾತಿಲ್ಲ.
ಮಧುರ ಎಲ್ ಭಟ್ಟ,
ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರ ಉಜಿರೆ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.