ಐಶಾರಾಮಿ ಆಸ್ಪತ್ರೆ ಬದಲು ಬಡವರಿಗಾಗಿ ಗ್ರಾಮದಲ್ಲೇ 10 ರೂ.ಶುಲ್ಕದ ಕ್ಲಿನಿಕ್ ಸ್ಥಾಪಿಸಿದ ನೂರಿ


Team Udayavani, Mar 17, 2021, 7:20 PM IST

ಐಶಾರಾಮಿ ಆಸ್ಪತ್ರೆ ಬದಲು ಬಡವರಿಗಾಗಿ ಗ್ರಾಮದಲ್ಲೇ 10 ರೂ.ಶುಲ್ಕದ ಕ್ಲಿನಿಕ್ ಸ್ಥಾಪಿಸಿದ ನೂರಿ

ಸ್ವಾರ್ಥ. ಎಲ್ಲರೊಳಗೂ ಇರುವ ಬೇರು. ಇದ್ದಷ್ಟು ಬೇಕು, ಬೇಕೆನ್ನುವುದು ಸಿಕ್ಕಾಗ ಮತ್ತಷ್ಟು ಬೇಕೆನ್ನುವ ಸ್ವಾರ್ಥದ ಯುಗದಲ್ಲಿ ಇನ್ನೊಬ್ಬರ ಮುಖದಲ್ಲಿ, ಇನ್ನೊಬ್ಬರ ಬದುಕಿನಲ್ಲಿ ನೆಮ್ಮದಿಯ ನಗು ತರುವ ಕೆಲವೊಂದಿಷ್ಟು ವ್ಯಕ್ತಿಗಳ ವ್ಯಕ್ತಿತ್ವ ನಾಲ್ಕು ಜನಗಳ ನಡುವೆ ಇದ್ದರೂ ಬೆಳಕಿಗೆ ಬಾರದೆ ಇರುತ್ತದೆ.

ನೂರಿ ಪರ್ವಿನ್. ವಿಜಯವಾಡದಲ್ಲಿ ಹುಟ್ಟಿ, ಆಂಧ್ರಪ್ರದೇಶದ ಕಡಪದಲ್ಲಿ ಎಂ.ಬಿ.ಬಿ.ಎಸ್ ಕಲಿಕೆಯನ್ನು ಪೂರ್ತಿಗೊಳಿಸುತ್ತಾರೆ. ನೂರಿ, ಕಲಿಯುತ್ತಾ ತನ್ನ ಊರು ಕಡಪದಲ್ಲಿ ಅಲ್ಲಿಯ ಬಡವರ್ಗ ಆಸ್ಪತ್ರೆಯ ದುಬಾರಿ ಚಿಕಿತ್ಸೆಯನ್ನು ಪಡೆಯಲು ಕಷ್ಟ ಪಡುತ್ತಿರುವುದನ್ನು ನೋಡುತ್ತಾರೆ. ಇದು ನೂರಿಯಲ್ಲಿ ಮಾನವೀಯತೆಯ ಮೌಲ್ಯವನ್ನು ಹುಟ್ಟುವಂತೆ ಮಾಡುತ್ತದೆ.

ನೂರಿ ಇರುವ ಊರಿನಲ್ಲಿ ಬಡ ವರ್ಗದ ಜನತೆಗೆ ಆಸ್ಪತ್ರೆ ಚಿಕಿತ್ಸೆ ಕೈಗೆಟುಕುವ ದರದಲ್ಲಿ ಸಿಗಬೇಕು ಎನ್ನುವ ಉಮೇದು ನೂರಿಯಲ್ಲಿ ಇರುತ್ತದೆ. ಅದೇ ಕಾರಣಕ್ಕೆ ನೂರಿ ತಮ್ಮ ಊರು ಕಡಪದಲ್ಲೇ, ಗ್ರಾಮೀಣ ಜನರಿಗೆ ಹತ್ತಿರವಾಗುವಂತೆ ತಮ್ಮದೊಂದು ಪುಟ್ಟ ಕ್ಲಿನಿಕ್ ನ್ನು ತೆರೆಯುತ್ತಾರೆ. ದಿನ ಕಳೆದಂತೆ ನೂರಿಯ ಪುಟ್ಟ ಕ್ಲಿನಿಕ್ ಗೆ ಜನಸಾಮಾನ್ಯರು ಅಂದರೆ ಹೆಚ್ಚಾಗಿ ಬಡ ವರ್ಗದ ಜನ ಸಾಲು ಗಟ್ಟಿ ನಿಲ್ಲುತ್ತಾರೆ. ನೂರಿಯ ಕ್ಲಿನಿಕ್ ಕಡಪದಲ್ಲಿ ಮಾತ್ರವಲ್ಲ ಅಕ್ಕಪಕ್ಕದ ಊರಿಗೂ ವಿಶೇಷವಾಗಿ ಆಕರ್ಷಣೆ ಆಗುತ್ತದೆ. ಅದಕ್ಕೆ ಕಾರಣ ನೂರಿಯ ಮಾನವೀಯತೆಯ ಮನಸ್ಸು.

ರೋಗಿ ಪರೀಕ್ಷೆಗೆ 10 ರೂಪಾಯಿ ಶುಲ್ಕ.! :

ಡಾಕ್ಟರ್ ನೂರಿ ಕ್ಲಿನಿಕ್ ಗೆ ಬರುವ ರೋಗಿಯ ಪರೀಕ್ಷೆಗೆ ಅವರು ತೆಗೆದುಕೊಳ್ಳುವ ಶುಲ್ಕ ಕೇವಲ 10 ರೂಪಾಯಿ ಮಾತ್ರ. ಹೊರ ರೋಗಿಗಳಿಗೆ 10 ರೂಪಾಯಿ ಆದ್ರೆ, ಒಳರೋಗಿಗಳಿಗೆ ಒಂದು ಬೆಡ್ ಗೆ 40 ರೂಪಾಯಿಯಂತೆ ಶುಲ್ಕ ತೆಗೆದುಕೊಳ್ಳುತ್ತಾರೆ.

ನೂರಿ ಕ್ಲಿನಿಕ್ ಗೆ ಹೆಚ್ಚಾಗಿ ಬರುವವರು ಬಡ ಕುಟುಂಬದ ಜನರು. ನೂರಿಯ ಕ್ಲಿನಿಕ್ ಬಗ್ಗೆ ಹಾಗೂ ಅವಳ ಮಾನವೀಯತೆಯನ್ನು ನೋಡಿ  ಅಪ್ಪ ಅಮ್ಮನಿಗೆ ತುಂಬಾ ಖುಷಿ ಆಗುತ್ತದೆ. ನೂರಿಯ 10 ರೂಪಾಯಿ ಶುಲ್ಕದ ಯೋಜನೆ  ಗೆ ಹಾಗೂ ಮಾನವೀಯತೆಯ ಮೌಲ್ಯ  ಮೂಡಲು ಅಪ್ಪ ಅಮ್ಮನೇ ಪ್ರೇರಣೆ ಎನ್ನುತ್ತಾರೆ ನೂರಿ.

ಇದಲ್ಲದೆ ಬಡವರಿಗಾಗಿ ಸರ್ಕಾರದ ಮೆಡಿಕಲ್ ಯೋಜನೆಗಳನ್ನು ಮಾಡಿಕೊಡುತ್ತಾರೆ. ಸರ್ಕಾರದಿಂದ ಇರುವ ಎಲ್ಲಾ ಯೋಜನೆಗಳ ಕುರಿತು ನೂರಿ ಬಡ ಕುಟುಂಬಕ್ಕೆ ಮಾಹಿತಿ ನೀಡಿ ಯೋಜನೆಯನ್ನು ಪಡೆದುಕೊಳ್ಳಲು ನೆರವಾಗುತ್ತಾರೆ.

ನೂರಿ ಕ್ಲಿನಿಕ್ ಆರಂಭಿಸುವ‌ ಮೊದಲು ‘Healthy Inspiring Young India’, ‘Noor Charitable Trust’ ಎಂಬ ಎನ್.ಜಿ.ಓ ಸ್ಥಾಪಿಸಿ ಅದರಲ್ಲಿ ಆರೋಗ್ಯ ಹಾಗೂ ಶಿಕ್ಷಣದ ಕುರಿತು ಸಹಾಯವನ್ನು ಮಾಡುತ್ತಿದ್ದರು.

ನೂರಿ ಮುಂದೆ ಸೈಕಾಲಜಿಯಲ್ಲಿ ಪಿ.ಜಿ ಶಿಕ್ಷಣವನ್ನು ಮಾಡಿ, ಬಡ ಜನರಿಗೆ ಸೂಕ್ತ ಬೆಲೆಯಲ್ಲಿ ಲಭ್ಯವಾಗುವ ಆಸ್ಪತ್ರೆಯನ್ನು ನಿರ್ಮಿಸುವ ಉದ್ದೇಶವನ್ನು ಹೊಂದಿದ್ದಾರೆ.

ಸುಹಾನ್ ಶೇಕ್

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.