MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ


ಕೀರ್ತನ್ ಶೆಟ್ಟಿ ಬೋಳ, Mar 21, 2024, 5:44 PM IST

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ಚೆನ್ನೈ ಸೂಪರ್ ಕಿಂಗ್ಸ್ ಎಂದರೆ ಮೊದಲು ನೆನಪಾಗುವುದು ಮಹೇಂದ್ರ ಸಿಂಗ್ ಧೋನಿ ಎಂಬ ಚಾಣಾಕ್ಷ ನಾಯಕ. ಎಂತಹ ಸಂದರ್ಭದಲ್ಲಿಯೂ ವಿಚಲಿತರಾಗದೆ, ಪರಿಸ್ಥಿತಿಗೆ ಅನುಗುಣವಾಗಿ ತಂಡವನ್ನು ಮುನ್ನಡೆಸುವ ಧೋನಿಯ ನಾಯಕತ್ವ ಇನ್ನು ಕಾಣಲು ಸಿಗದು. ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಅತ್ಯಂತ ಯಶಸ್ವಿ ನಾಯಕ ‘ಥಲಾ’ ತನ್ನ ಕ್ಯಾಪ್ಟನ್ಸಿ ಬ್ಯಾಟನ್ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಗೆ ಹಸ್ತಾಂತರಿಸಿದ್ದಾರೆ.

2007ರಲ್ಲಿ ಆರಂಭವಾದ ಧೋನಿ ಎಂಬ ಮಾಸ್ಟರ್ ಮೈಂಡ್ ನಾಯಕನ ಜರ್ನಿ ಇದೀಗ ಅಧಿಕೃತವಾಗಿ ಅಂತ್ಯವಾಗಿದೆ. 2007ರಲ್ಲಿ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಚಾಂಪಿಯನ್ ಮಾಡಿದ್ದ ಎಂ.ಎಸ್ ಧೋನಿ ಇದೀಗ 2023ರ ಐಪಿಎಲ್ ನಲ್ಲಿ ಚೆನ್ನೈ ತಂಡವನ್ನು ಐದನೇ ಬಾರಿ ಕಪ್ ಗೆಲ್ಲಿಸಿ ನಾಯಕತ್ವವನ್ನು ನಾಜೂಕಾಗಿ ತೊರೆದಿದ್ದಾರೆ.

ಧೋನಿಯ ನಾಯಕತ್ವವು ಒತ್ತಡದಲ್ಲಿ ಶಾಂತತೆ, ಹೊಸ ಗೇಮ್ ಪ್ಲ್ಯಾನ್ ಗಳು ಮತ್ತು ತನ್ನ ಆಟಗಾರರಿಂದ ಅತ್ಯುತ್ತಮ ಪ್ರದರ್ಶನ ಹೊರತೆಗೆಯುವ ವಿಲಕ್ಷಣ ಸಾಮರ್ಥ್ಯದಿಂದ ನಿರೂಪಿತವಾಗಿದೆ. ಧೋನಿ ಕ್ಯಾಪ್ಟನ್ಸಿ ಕಿರೀಟ ಕೆಳಗಿಡುವ ನಿರ್ಧಾರವು ಐಪಿಎಲ್‌ ನ ವರ್ಣರಂಜಿತ ಅಧ್ಯಾಯವೊಂದರ ಅಂತ್ಯ ಎಂದೇ ಪರಿಗಣಿಸಲಾಗುತ್ತದೆ.

ಐಪಿಎಲ್‌ ನಲ್ಲಿ ಅತಿ ಹೆಚ್ಚು ಪಂದ್ಯಗಳ ನಾಯಕತ್ವದ ದಾಖಲೆಯನ್ನು ಧೋನಿ ಹೊಂದಿದ್ದಾರೆ. ಅವರು 226 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇದರಲ್ಲಿ 133 ಬಾರಿ ಗೆದ್ದಿದ್ದಾರೆ ಮತ್ತು 91 ಪಂದ್ಯಗಳಲ್ಲಿ ಸೋತಿದ್ದಾರೆ. ಎರಡು ಪಂದ್ಯಗಳಲ್ಲಿ ಫಲಿತಾಂಶ ಬಂದಿಲ್ಲ. 50ಕ್ಕೂ ಹೆಚ್ಚು ಪಂದ್ಯಗಳಲ್ಲಿ ನಾಯಕತ್ವ ವಹಿಸಿರುವ ನಾಯಕರ ಪೈಕಿ ಧೋನಿ 59.37 ಗೆಲುವಿನ ಪ್ರತಿಶತ ಹೊಂದಿದ್ದಾರೆ.

ಚೊಚ್ಚಲ ಐಪಿಎಲ್ ನಲ್ಲಿ ಅಂದರೆ 2008ರಲ್ಲಿ ಸಿಎಸ್ ಕೆ ನಾಯಕತ್ವ ಜವಾಬ್ದಾರಿ ವಹಿಸಿಕೊಂಡ ಧೋನಿ ಇದುವರೆಗೆ ಫ್ರಾಂಚೈಸಿಗಾಗಿ ಏಳು ಕಪ್ ಗೆದ್ದಿದ್ದಾರೆ. ಐದು ಬಾರಿ ಐಪಿಎಲ್ ಗೆದ್ದುಕೊಂಡಿರುವ ಧೋನಿ, ಎರಡು ಬಾರಿ ಚಾಂಪಿಯನ್ಸ್ ಲೀಗ್ ನಲ್ಲಿ ಚಾಂಪಿಯನ್ ಶಿಪ್ ಕಡೆಗೆ ಮುನ್ನಡೆಸಿದ್ದಾರೆ. (ಈ ಕೂಟ ಈಗ ರದ್ದಾಗಿದೆ) ಧೋನಿ ನಾಯಕತ್ವದಡಿಯಲ್ಲಿ ಚೆನ್ನೈ ತಂಡವು 11 ಬಾರಿ ಐಪಿಎಲ್ ಫೈನಲ್ ತಲುಪಿದೆ. ಐಪಿಎಲ್ ಇತಿಹಾಸದಲ್ಲಿ ಬೇರೆ ಯಾವುದೇ ನಾಯಕ ಈ ದಾಖಲೆ ಹೊಂದಿಲ್ಲ.

ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಧೋನಿ 200ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಕೊಹ್ಲಿ, ರೋಹಿತ್ ಮತ್ತು ಡೇವಿಡ್ ವಾರ್ನರ್ ಮಾತ್ರ 100ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

2016 ರಲ್ಲಿ ಈಗ ನಿಷ್ಕ್ರಿಯವಾಗಿರುವ ರೈಸಿಂಗ್ ಪುಣೆ ಸೂಪರ್‌ಜೈಂಟ್ (ಆರ್ ಪಿಎಸ್) ತಂಡವನ್ನು ಸ್ವಲ್ಪ ಸಮಯ ಧೋನಿ ಮುನ್ನಡೆಸಿದ್ದರು. ಆದರೆ 14 ಪಂದ್ಯಗಳಲ್ಲಿ ಕೇವಲ ಐದು ಪಂದ್ಯಗಳಲ್ಲಿ ಗೆಲುವು ಕಂಡ ಕಾರಣ ಆಸ್ಟ್ರೇಲಿಯನ್ ಕ್ರಿಕೆಟಿಗ ಸ್ಟೀವ್ ಸ್ಮಿತ್‌ ಗೆ ಮುಂದಿನ ವರ್ಷ ನಾಯಕತ್ವವನ್ನು ಹಸ್ತಾಂತರಿಸಲಾಗಿತ್ತು.

2022ರಲ್ಲಿ ಧೋನಿ ಮೊದಲ ಬಾರಿಗೆ ನಾಯಕತ್ವ ತೊರೆಯುವ ನಿರ್ಧಾರ ಪ್ರಕಟಿಸಿದ್ದರು. ಆಗಲೂ ಐಪಿಎಲ್ ಗೆ ಕೆಲವೇ ದಿನಗಳ ಮೊದಲು ರವೀಂದ್ರ ಜಡೇಜಾಗೆ ನಾಯಕತ್ವ ಹಸ್ತಾಂತರಿಸುವ ಕೆಲಸ ಮಾಡಿದ್ದರು. ಆರಂಭದಲ್ಲಿ, ಜಡೇಜಾ ಅವರನ್ನು ಧೋನಿಗೆ ಉತ್ತಮ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿತ್ತು, ಬಹುಮುಖ ಕೌಶಲ್ಯಗಳು, ಉನ್ನತ ಮಟ್ಟದ ಅನುಭವ ಮತ್ತು ಒತ್ತಡದ ಸಂದರ್ಭಗಳನ್ನು ನಿಭಾಯಿಸುವಲ್ಲಿ ನೈಪುಣ್ಯತೆಯನ್ನು ಹೊಂದಿದ್ದ ಜಡೇಜಾ ಅವರು ನಾಯಕತ್ವ ನಿಭಾಯಿಸುವಲ್ಲಿ ವಿಫಲರಾದರು. ಹೀಗಾಗಿ ಕೂಟದ ನಡುವೆ ಧೋನಿ ಮತ್ತೆ ನಾಯಕತ್ವ ವಹಿಸಿದರು.

2022ರಲ್ಲಿ 9ನೇ ಸ್ಥಾನದಲ್ಲಿ ಕೂಟವನ್ನು ಮುಗಿಸಿದರೂ ಮುಂದಿನ ವರ್ಷ ಮತ್ತೆ ಪುಟಿದೆದ್ದಿತು. 2023ರ ಕೂಟದಲ್ಲಿ ಅದ್ಭುತ ಪ್ರದರ್ಶನ ತೋರಿದ ಸಿಎಸ್ ಕೆ ಐದನೇ ಬಾರಿ ಚಾಂಪಿಯನ್ ಆಗಿತ್ತು.

ಧೋನಿ ನಾಯಕತ್ವ ತೊರೆಯುವ ನಿರ್ಧಾರ ಪ್ರಕಟಿಸುವ ಮೂಲಕ ಐಪಿಎಲ್ ನ ಯಶೋಗಾಥೆಯೊಂದು ಅಂತ್ಯವಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬಳಿಕ ಇದೀಗ ಮಹೇಂದ್ರ ಸಿಂಗ್ ಧೋನಿ ಕೂಡಾ ಕೇವಲ ಆಟಗಾರನಾಗಿ ಆಡಲಿದ್ದಾರೆ.

ಟಾಪ್ ನ್ಯೂಸ್

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.